Homeಮುಖಪುಟಆಲ್ಟ್‌ನ್ಯೂಸ್‌ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್

ಆಲ್ಟ್‌ನ್ಯೂಸ್‌ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ನಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಜುಬೇರ್‌ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದರು.

- Advertisement -
- Advertisement -

ಫ್ಯಾಕ್ಟ್‌ಚೆಕಿಂಗ್‌ ವೆಬ್‌ಸೈಟ್ ’ಆಲ್ಟ್‌ನ್ಯೂಸ್’ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ವಿರುದ್ದ ದೆಹಲಿ ಮತ್ತು ರಾಯ್‌ಪುರದಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಎರಡು ಎಫ್‌ಐಆರ್‌ ದಾಖಲಿಸಲಾಗಿದ್ದು, ದೆಹಲಿ ಹೈಕೋರ್ಟ್ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಯೋಗೇಶ್ ಖನ್ನಾ ಅವರ ಏಕ ನ್ಯಾಯಪೀಠವು ದೆಹಲಿ ಸರ್ಕಾರ ಮತ್ತು ಪೊಲೀಸ್ ಉಪ ಆಯುಕ್ತ ಸೈಬರ್ ಸೆಲ್‌ಗೆ 8 ವಾರಗಳಲ್ಲಿ ಈ ಪ್ರಕರಣದಲ್ಲಿ ನಡೆಸಿದ ತನಿಖೆಯ ಬಗ್ಗೆ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಇದನ್ನೂ ಓದಿ: ಆಲ್ಟ್‌ನ್ಯೂಸ್‌‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ದ FIR

ಟ್ವಿಟರ್ ಬಳಕೆದಾರ ಜಗದೀಶ್ ಸಿಂಗ್ ಅವರು ತಮ್ಮ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ಮೊಹಮ್ಮದ್ ಜುಬೈರ್ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರ ಜುಬೇರ್‌ ಪರವಾಗಿ ಹಾಜರಾದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್, “ಅರ್ಜಿದಾರರು ಸಮರ್ಪಿತ ಪ್ರಜೆಯಾಗಿದ್ದು, ಆಲ್ಟ್‌‌ನ್ಯೂಸ್‌ನ ಸಹಸಂಸ್ಥಾಪಕರಾಗಿದ್ದಾರೆ. ಅವರು ತಮ್ಮ ಸುದ್ದಿವಾಹಿನಿಯ ಮೂಲಕ ಯಾವುದೇ ವ್ಯಕ್ತಿ ಹಾಗೂ ರಾಜಕೀಯ ಪಕ್ಷಗಳ ಪಕ್ಷಪಾತವಿಲ್ಲದೆ ತಪ್ಪು ಮಾಹಿತಿಯನ್ನು ಬಹಿರಂಗಪಡಿಸುತ್ತಾರೆ. ಇದಕ್ಕಾಗಿ ಅವರ ಮೇಲೆ ರಾಜಕೀಯ ವ್ಯಕ್ತಿ ಹಾಗೂ ಪಕ್ಷಗಳ ಅಂಧ ಅಭಿಮಾನಿಗಳು ನಿಂದನೆ, ಬೆದರಿಕೆ ಹಾಗೂ ಅವರೊಂದಿಗೆ ಹೀನಾಯವಾಗಿ ವರ್ತಿಸುತ್ತದೆ” ಎಂದು ವಾದಿಸಿದರು.

“ಪ್ರಸ್ತುತ ದೂರು ಸಲ್ಲಿಸಿದವರು ಗಂಭೀರ ಕಿರುಕುಳ ನೀಡುವವರಾಗಿದ್ದು, ಅವರು ಉದಾರವಾದಿ, ಪ್ರಗತಿಪರ ದೃಷ್ಟಿಕೋನಗಳಿರುವ ಹಾಗೂ ಸರ್ಕಾರದ ಅಭಿಪ್ರಾಯಗಳನ್ನು ಯಾರು ಒಪ್ಪುವುದಿಲ್ಲವೊ ಅವರ ವಿರುದ್ದ ದಾಳಿ ಮಾಡುತ್ತಾರೆ” ಎಂದು ಗೊನ್ಸಾಲ್ವೆಸ್ ವಾದಿಸಿದರು.

ಇದನ್ನೂ ಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ: ಫ್ಯಾಕ್ಟ್‌ಚೆಕ್

ಆಗಸ್ಟ್ 6 ರಂದು ಟ್ವಿಟರ್ ಬಳಕೆದಾರ ಜಗದೀಶ್ ಸಿಂಗ್ ಎಂಬವರ ನಿಂದನೀಯ ಸಂದೇಶವೊಂದಕ್ಕೆ ಪ್ರತಿಕ್ರಿಯಿಸಿದ್ದ ಜುಬೇರ್, “ಹಲೋ ಜಗದೀಶ್ ಸಿಂಗ್, ನಿಮ್ಮ ಮುದ್ದಾದ ಮೊಮ್ಮಗಳಿಗೆ ನೀವು ಸಾಮಾಜಿಕ ಜಾಲತಾಣದಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಕೆಲಸದ ಬಗ್ಗೆ ತಿಳಿದಿದೆಯೆ? ನಾನು ನಿಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲು ಸಲಹೆ ನೀಡುತ್ತೇನೆ” ಎಂದು ಜಗದೀಶ್‌ ಸಿಂಗ್ ಜೊತೆಗೆ ಬಾಲಕಿಯೊಬ್ಬರು ನಿಂತಿರುವ ಫೋಟೋವನ್ನು ಹಾಕಿದ್ದರು. ಜೊತೆಗೆ ಪೋಟೋದಲ್ಲಿರುವ ಬಾಲಕಿಯ ಮುಖವನ್ನು ಜುಬೇರ್ ಬ್ಲರ್‌ ಮಾಡಿದ್ದಾರೆ.

ಈಶಾನ್ಯ ಭಾರತದ ಫೋರಂ ಫಾರ್‌ ಇಂಡಿಜೀನಿಯಸ್‌ ರೈಟ್ಸ್ ನೀಡಿದ ದೂರಿನ ಮೇರೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಆಗಸ್ಟ್ 8 ರಂದು ಈ ವಿಷಯವನ್ನು ಗಮನಿಸಿ ದೆಹಲಿಯ ಉಪ ಪೊಲೀಸ್ ಆಯುಕ್ತ ಮತ್ತು ನೋಡಲ್ ಸೈಬರ್ ಸೆಲ್ ಅಧಿಕಾರಿಗೆ ಪತ್ರ ಬರೆದಿದ್ದು, ಜುಬೈರ್ ವಿರುದ್ಧ “ಅಪ್ರಾಪ್ತ ಬಾಲಕಿಯನ್ನು ಟ್ವಿಟ್ಟರ್‌ನಲ್ಲಿ ಉಲ್ಲೇಖಿಸಿದ್ದಕ್ಕಾಗಿ” ಕ್ರಮ ಕೈಗೊಳ್ಳಬೇಕೆಂದು ಕೋರಿತ್ತು.

ಅಪ್ರಾಪ್ತ ಬಾಲಕಿಗೆ “ಆನ್‌ಲೈನ್ ಕಿರುಕುಳ ಮತ್ತು ಚಿತ್ರಹಿಂಸೆ” ಆರೋಪದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ನಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ರಾಣಾ
ಇದನ್ನೂ ಓದಿ: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...