Homeಮುಖಪುಟಆಲ್ಟ್‌ನ್ಯೂಸ್‌ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್

ಆಲ್ಟ್‌ನ್ಯೂಸ್‌ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ನಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಜುಬೇರ್‌ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದರು.

- Advertisement -
- Advertisement -

ಫ್ಯಾಕ್ಟ್‌ಚೆಕಿಂಗ್‌ ವೆಬ್‌ಸೈಟ್ ’ಆಲ್ಟ್‌ನ್ಯೂಸ್’ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ವಿರುದ್ದ ದೆಹಲಿ ಮತ್ತು ರಾಯ್‌ಪುರದಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಎರಡು ಎಫ್‌ಐಆರ್‌ ದಾಖಲಿಸಲಾಗಿದ್ದು, ದೆಹಲಿ ಹೈಕೋರ್ಟ್ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಯೋಗೇಶ್ ಖನ್ನಾ ಅವರ ಏಕ ನ್ಯಾಯಪೀಠವು ದೆಹಲಿ ಸರ್ಕಾರ ಮತ್ತು ಪೊಲೀಸ್ ಉಪ ಆಯುಕ್ತ ಸೈಬರ್ ಸೆಲ್‌ಗೆ 8 ವಾರಗಳಲ್ಲಿ ಈ ಪ್ರಕರಣದಲ್ಲಿ ನಡೆಸಿದ ತನಿಖೆಯ ಬಗ್ಗೆ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಇದನ್ನೂ ಓದಿ: ಆಲ್ಟ್‌ನ್ಯೂಸ್‌‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ದ FIR

ಟ್ವಿಟರ್ ಬಳಕೆದಾರ ಜಗದೀಶ್ ಸಿಂಗ್ ಅವರು ತಮ್ಮ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ಮೊಹಮ್ಮದ್ ಜುಬೈರ್ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರ ಜುಬೇರ್‌ ಪರವಾಗಿ ಹಾಜರಾದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್, “ಅರ್ಜಿದಾರರು ಸಮರ್ಪಿತ ಪ್ರಜೆಯಾಗಿದ್ದು, ಆಲ್ಟ್‌‌ನ್ಯೂಸ್‌ನ ಸಹಸಂಸ್ಥಾಪಕರಾಗಿದ್ದಾರೆ. ಅವರು ತಮ್ಮ ಸುದ್ದಿವಾಹಿನಿಯ ಮೂಲಕ ಯಾವುದೇ ವ್ಯಕ್ತಿ ಹಾಗೂ ರಾಜಕೀಯ ಪಕ್ಷಗಳ ಪಕ್ಷಪಾತವಿಲ್ಲದೆ ತಪ್ಪು ಮಾಹಿತಿಯನ್ನು ಬಹಿರಂಗಪಡಿಸುತ್ತಾರೆ. ಇದಕ್ಕಾಗಿ ಅವರ ಮೇಲೆ ರಾಜಕೀಯ ವ್ಯಕ್ತಿ ಹಾಗೂ ಪಕ್ಷಗಳ ಅಂಧ ಅಭಿಮಾನಿಗಳು ನಿಂದನೆ, ಬೆದರಿಕೆ ಹಾಗೂ ಅವರೊಂದಿಗೆ ಹೀನಾಯವಾಗಿ ವರ್ತಿಸುತ್ತದೆ” ಎಂದು ವಾದಿಸಿದರು.

“ಪ್ರಸ್ತುತ ದೂರು ಸಲ್ಲಿಸಿದವರು ಗಂಭೀರ ಕಿರುಕುಳ ನೀಡುವವರಾಗಿದ್ದು, ಅವರು ಉದಾರವಾದಿ, ಪ್ರಗತಿಪರ ದೃಷ್ಟಿಕೋನಗಳಿರುವ ಹಾಗೂ ಸರ್ಕಾರದ ಅಭಿಪ್ರಾಯಗಳನ್ನು ಯಾರು ಒಪ್ಪುವುದಿಲ್ಲವೊ ಅವರ ವಿರುದ್ದ ದಾಳಿ ಮಾಡುತ್ತಾರೆ” ಎಂದು ಗೊನ್ಸಾಲ್ವೆಸ್ ವಾದಿಸಿದರು.

ಇದನ್ನೂ ಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ: ಫ್ಯಾಕ್ಟ್‌ಚೆಕ್

ಆಗಸ್ಟ್ 6 ರಂದು ಟ್ವಿಟರ್ ಬಳಕೆದಾರ ಜಗದೀಶ್ ಸಿಂಗ್ ಎಂಬವರ ನಿಂದನೀಯ ಸಂದೇಶವೊಂದಕ್ಕೆ ಪ್ರತಿಕ್ರಿಯಿಸಿದ್ದ ಜುಬೇರ್, “ಹಲೋ ಜಗದೀಶ್ ಸಿಂಗ್, ನಿಮ್ಮ ಮುದ್ದಾದ ಮೊಮ್ಮಗಳಿಗೆ ನೀವು ಸಾಮಾಜಿಕ ಜಾಲತಾಣದಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಕೆಲಸದ ಬಗ್ಗೆ ತಿಳಿದಿದೆಯೆ? ನಾನು ನಿಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲು ಸಲಹೆ ನೀಡುತ್ತೇನೆ” ಎಂದು ಜಗದೀಶ್‌ ಸಿಂಗ್ ಜೊತೆಗೆ ಬಾಲಕಿಯೊಬ್ಬರು ನಿಂತಿರುವ ಫೋಟೋವನ್ನು ಹಾಕಿದ್ದರು. ಜೊತೆಗೆ ಪೋಟೋದಲ್ಲಿರುವ ಬಾಲಕಿಯ ಮುಖವನ್ನು ಜುಬೇರ್ ಬ್ಲರ್‌ ಮಾಡಿದ್ದಾರೆ.

ಈಶಾನ್ಯ ಭಾರತದ ಫೋರಂ ಫಾರ್‌ ಇಂಡಿಜೀನಿಯಸ್‌ ರೈಟ್ಸ್ ನೀಡಿದ ದೂರಿನ ಮೇರೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಆಗಸ್ಟ್ 8 ರಂದು ಈ ವಿಷಯವನ್ನು ಗಮನಿಸಿ ದೆಹಲಿಯ ಉಪ ಪೊಲೀಸ್ ಆಯುಕ್ತ ಮತ್ತು ನೋಡಲ್ ಸೈಬರ್ ಸೆಲ್ ಅಧಿಕಾರಿಗೆ ಪತ್ರ ಬರೆದಿದ್ದು, ಜುಬೈರ್ ವಿರುದ್ಧ “ಅಪ್ರಾಪ್ತ ಬಾಲಕಿಯನ್ನು ಟ್ವಿಟ್ಟರ್‌ನಲ್ಲಿ ಉಲ್ಲೇಖಿಸಿದ್ದಕ್ಕಾಗಿ” ಕ್ರಮ ಕೈಗೊಳ್ಳಬೇಕೆಂದು ಕೋರಿತ್ತು.

ಅಪ್ರಾಪ್ತ ಬಾಲಕಿಗೆ “ಆನ್‌ಲೈನ್ ಕಿರುಕುಳ ಮತ್ತು ಚಿತ್ರಹಿಂಸೆ” ಆರೋಪದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ನಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ರಾಣಾ
ಇದನ್ನೂ ಓದಿ: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...