Homeಮುಖಪುಟಆಲ್ಟ್‌ನ್ಯೂಸ್‌ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್

ಆಲ್ಟ್‌ನ್ಯೂಸ್‌ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ನಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಜುಬೇರ್‌ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದರು.

- Advertisement -
- Advertisement -

ಫ್ಯಾಕ್ಟ್‌ಚೆಕಿಂಗ್‌ ವೆಬ್‌ಸೈಟ್ ’ಆಲ್ಟ್‌ನ್ಯೂಸ್’ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ ವಿರುದ್ದ ದೆಹಲಿ ಮತ್ತು ರಾಯ್‌ಪುರದಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಎರಡು ಎಫ್‌ಐಆರ್‌ ದಾಖಲಿಸಲಾಗಿದ್ದು, ದೆಹಲಿ ಹೈಕೋರ್ಟ್ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಯೋಗೇಶ್ ಖನ್ನಾ ಅವರ ಏಕ ನ್ಯಾಯಪೀಠವು ದೆಹಲಿ ಸರ್ಕಾರ ಮತ್ತು ಪೊಲೀಸ್ ಉಪ ಆಯುಕ್ತ ಸೈಬರ್ ಸೆಲ್‌ಗೆ 8 ವಾರಗಳಲ್ಲಿ ಈ ಪ್ರಕರಣದಲ್ಲಿ ನಡೆಸಿದ ತನಿಖೆಯ ಬಗ್ಗೆ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಇದನ್ನೂ ಓದಿ: ಆಲ್ಟ್‌ನ್ಯೂಸ್‌‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ದ FIR

ಟ್ವಿಟರ್ ಬಳಕೆದಾರ ಜಗದೀಶ್ ಸಿಂಗ್ ಅವರು ತಮ್ಮ ವಿರುದ್ಧ ದಾಖಲಿಸಿದ್ದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ಮೊಹಮ್ಮದ್ ಜುಬೈರ್ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರ ಜುಬೇರ್‌ ಪರವಾಗಿ ಹಾಜರಾದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್, “ಅರ್ಜಿದಾರರು ಸಮರ್ಪಿತ ಪ್ರಜೆಯಾಗಿದ್ದು, ಆಲ್ಟ್‌‌ನ್ಯೂಸ್‌ನ ಸಹಸಂಸ್ಥಾಪಕರಾಗಿದ್ದಾರೆ. ಅವರು ತಮ್ಮ ಸುದ್ದಿವಾಹಿನಿಯ ಮೂಲಕ ಯಾವುದೇ ವ್ಯಕ್ತಿ ಹಾಗೂ ರಾಜಕೀಯ ಪಕ್ಷಗಳ ಪಕ್ಷಪಾತವಿಲ್ಲದೆ ತಪ್ಪು ಮಾಹಿತಿಯನ್ನು ಬಹಿರಂಗಪಡಿಸುತ್ತಾರೆ. ಇದಕ್ಕಾಗಿ ಅವರ ಮೇಲೆ ರಾಜಕೀಯ ವ್ಯಕ್ತಿ ಹಾಗೂ ಪಕ್ಷಗಳ ಅಂಧ ಅಭಿಮಾನಿಗಳು ನಿಂದನೆ, ಬೆದರಿಕೆ ಹಾಗೂ ಅವರೊಂದಿಗೆ ಹೀನಾಯವಾಗಿ ವರ್ತಿಸುತ್ತದೆ” ಎಂದು ವಾದಿಸಿದರು.

“ಪ್ರಸ್ತುತ ದೂರು ಸಲ್ಲಿಸಿದವರು ಗಂಭೀರ ಕಿರುಕುಳ ನೀಡುವವರಾಗಿದ್ದು, ಅವರು ಉದಾರವಾದಿ, ಪ್ರಗತಿಪರ ದೃಷ್ಟಿಕೋನಗಳಿರುವ ಹಾಗೂ ಸರ್ಕಾರದ ಅಭಿಪ್ರಾಯಗಳನ್ನು ಯಾರು ಒಪ್ಪುವುದಿಲ್ಲವೊ ಅವರ ವಿರುದ್ದ ದಾಳಿ ಮಾಡುತ್ತಾರೆ” ಎಂದು ಗೊನ್ಸಾಲ್ವೆಸ್ ವಾದಿಸಿದರು.

ಇದನ್ನೂ ಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ: ಫ್ಯಾಕ್ಟ್‌ಚೆಕ್

ಆಗಸ್ಟ್ 6 ರಂದು ಟ್ವಿಟರ್ ಬಳಕೆದಾರ ಜಗದೀಶ್ ಸಿಂಗ್ ಎಂಬವರ ನಿಂದನೀಯ ಸಂದೇಶವೊಂದಕ್ಕೆ ಪ್ರತಿಕ್ರಿಯಿಸಿದ್ದ ಜುಬೇರ್, “ಹಲೋ ಜಗದೀಶ್ ಸಿಂಗ್, ನಿಮ್ಮ ಮುದ್ದಾದ ಮೊಮ್ಮಗಳಿಗೆ ನೀವು ಸಾಮಾಜಿಕ ಜಾಲತಾಣದಲ್ಲಿ ಜನರನ್ನು ನಿಂದಿಸುವ ನಿಮ್ಮ ಅರೆಕಾಲಿಕ ಕೆಲಸದ ಬಗ್ಗೆ ತಿಳಿದಿದೆಯೆ? ನಾನು ನಿಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಲು ಸಲಹೆ ನೀಡುತ್ತೇನೆ” ಎಂದು ಜಗದೀಶ್‌ ಸಿಂಗ್ ಜೊತೆಗೆ ಬಾಲಕಿಯೊಬ್ಬರು ನಿಂತಿರುವ ಫೋಟೋವನ್ನು ಹಾಕಿದ್ದರು. ಜೊತೆಗೆ ಪೋಟೋದಲ್ಲಿರುವ ಬಾಲಕಿಯ ಮುಖವನ್ನು ಜುಬೇರ್ ಬ್ಲರ್‌ ಮಾಡಿದ್ದಾರೆ.

ಈಶಾನ್ಯ ಭಾರತದ ಫೋರಂ ಫಾರ್‌ ಇಂಡಿಜೀನಿಯಸ್‌ ರೈಟ್ಸ್ ನೀಡಿದ ದೂರಿನ ಮೇರೆಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಆಗಸ್ಟ್ 8 ರಂದು ಈ ವಿಷಯವನ್ನು ಗಮನಿಸಿ ದೆಹಲಿಯ ಉಪ ಪೊಲೀಸ್ ಆಯುಕ್ತ ಮತ್ತು ನೋಡಲ್ ಸೈಬರ್ ಸೆಲ್ ಅಧಿಕಾರಿಗೆ ಪತ್ರ ಬರೆದಿದ್ದು, ಜುಬೈರ್ ವಿರುದ್ಧ “ಅಪ್ರಾಪ್ತ ಬಾಲಕಿಯನ್ನು ಟ್ವಿಟ್ಟರ್‌ನಲ್ಲಿ ಉಲ್ಲೇಖಿಸಿದ್ದಕ್ಕಾಗಿ” ಕ್ರಮ ಕೈಗೊಳ್ಳಬೇಕೆಂದು ಕೋರಿತ್ತು.

ಅಪ್ರಾಪ್ತ ಬಾಲಕಿಗೆ “ಆನ್‌ಲೈನ್ ಕಿರುಕುಳ ಮತ್ತು ಚಿತ್ರಹಿಂಸೆ” ಆರೋಪದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ನಿಂದ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ರಾಣಾ
ಇದನ್ನೂ ಓದಿ: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...