Homeಕರ್ನಾಟಕ'ಸೌಜನ್ಯ ಪರ ಹೋರಾಟಗಾರರ ಮೇಲೆ ದೌರ್ಜನ್ಯ ಮಾಡುವಂತಿಲ್ಲ..'; ಎಸ್‌ಐಟಿಗೆ ಹೈಕೋರ್ಟ್‌ ಸೂಚನೆ

‘ಸೌಜನ್ಯ ಪರ ಹೋರಾಟಗಾರರ ಮೇಲೆ ದೌರ್ಜನ್ಯ ಮಾಡುವಂತಿಲ್ಲ..’; ಎಸ್‌ಐಟಿಗೆ ಹೈಕೋರ್ಟ್‌ ಸೂಚನೆ

- Advertisement -
- Advertisement -

ತಮ್ಮ ವಿರುದ್ಧ ಎಸ್‌ಐಟಿ ದಾಖಲಿಸಿದ್ದ ಪ್ರಕರಣದ ರದ್ದು ಕೋರಿ ಸೌಜನ್ಯ ಪರ ಹೋರಾಟಗಾರರಾದ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ವಿಠಲಗೌಡ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ನಾಲ್ವರ ಮೇಲೆ ಎಸ್‌ಐಟಿ ದೌರ್ಜನ್ಯ ಮಾಡಬಾರದು ಎಂದು ಸೂಚಿಸಿ, ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ.

ಇದೇ ಪ್ರಕರಣದಲ್ಲಿ ಅಕ್ಟೋಬರ್ 27ರಂದು ವಿಚಾರಣೆಗೆ ಹಾಜರಾಗುವಂತೆ ನಾಲ್ವರಿಗೂ ಎಸ್‌ಐಟಿ ನೋಟಿಸ್‌ ನೀಡಿತ್ತು. ಆದರೆ, ಅಂದೇ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರಿಂದ, ಪ್ರತಿಭಟನೆಯಲ್ಲಿ ಭಾಗಿಯಾಗುವ ಸಲುವಾಗಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಬೆನ್ನಲ್ಲೇ, ನವೆಂಬರ್ 3ರಂದು ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಮತ್ತೊಂದು ನೋಟಿಸ್‌ ಜಾರಿ ಮಾಡಿದೆ.

ಇದೆಲ್ಲದರ ನಡುವೆ, ತಿಮರೋಡಿ, ಗಿರೀಶ್, ಜಯಂತ್, ವಿಠಲಗೌಡ ಅವರ ಮೇಲೆ ದೌರ್ಜನ್ಯ ಮಾಡದಂತೆ ಹೈಕೋರ್ಟ್‌ ಆದೇಶಿಸಿದೆ.

ಇನ್ನು, ಇನ್ನು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿರುವ ‘ಅಕ್ರಮವಾಗಿ ಮಾರಕಾಸ್ತ್ರ ಇಟ್ಟುಕೊಂಡಿದ್ದಾರೆ’ ಎಂಬ ಪ್ರಕರಣಕ್ಕೆ ಇತ್ತೀಚೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಹೈಕೋರ್ಟ್ ಕಲಾಪದ ಸಾರಾಂಶ

ಹಿರಿಯ ವಕೀಲ ಎಸ್ ಬಾಲನ್: ಚಿನ್ನಯ್ಯ ವಿರುದ್ದ ಪರ್ಜುರಿ ಕೇಸ್ ಹಾಕಿ ಅದರ ಆಧಾರದ ಮೇಲೆ ಹೋರಾಟಗಾರರಿಗೆ ನೋಟಿಸ್ ಕೊಡುವುದು ಬಿಎನ್‌ಎಸ್‌ಎಸ್‌ 215(1)(ಬಿ) ಪ್ರಕಾರ ಎಸ್ಐಟಿ ಪೊಲೀಸರು ಕಾನೂನು ಉಲ್ಲಂಘಿಸಿದ್ದಾರೆ.

ಸರ್ಕಾರದ ಪರ ವಕೀಲರು: ಗಿರೀಶ್ ಮಟ್ಟೆಣ್ಣನವರ್, ತಿಮರೋಡಿ, ಜಯಂತ್, ವಿಠಲಗೌಡ ರೇ ಈ ಪ್ರಕರಣದ ಆರೋಪಿಗಳು. ಹಾಗಾಗಿ ಅವರನ್ನು ತನಿಖೆ ಮಾಡಬೇಕಿದೆ.

ಹೈಕೋರ್ಟ್: ಅವರು ಆರೋಪಿಗಳಾಗಿದ್ದರೆ ಪ್ರತ್ಯೇಕ ಎಫ್ಐಆರ್ ಮಾಡಬೇಕಿತ್ತು. ಅದರ ಬದಲು ಕಾನೂನು ಉಲ್ಲಂಘಿಸಿ ಯಾಕೆ ಎಫ್ಐಆರ್ ಮಾಡಬೇಕು?

ಹಿರಿಯ ವಕೀಲ ಬಾಲನ್: ನಾಲ್ವರು ಹೋರಾಟಗಾರರ ಹೆಸರು ಎಫ್ಐಆರ್ ನಲ್ಲಿ ಇಲ್ಲ. ಎಲ್ಲಾ ನೋಟಿಸ್ ಗೆ ಹಾಜರಾಗಿದ್ದಾರೆ. 9 ನೋಟಿಸ್ ಪೈಕಿ 9 ನೋಟಿಸ್ ಗೆ ಹಾಜರಾಗಿದ್ದಾರೆ. ಸುಮಾರು 100 ಗಂಟೆ ವಿಚಾರಣೆ ಎದುರಿಸಿದ್ದಾರೆ. ಆದರೂ ಹೋರಾಟಗಾರರನ್ನು ಆರೋಪಿ ಮಾಡಿದ್ರೆ ಹೇಗೆ ?

ಹೈಕೋರ್ಟ್: ನಾಲ್ವರು ಆರೋಪಿಗಳು ಅನ್ನೋದನ್ನು ರೆಕಾರ್ಡ್ ಮಾಡಿಕೊಳ್ಳೋದಾ?  (ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ)

ಸರ್ಕಾರದ ಪರ ವಕೀಲರು: ಎಸ್. ಈ ನಾಲ್ವರು (ಮಟ್ಟೆಣ್ಣನನವರ್, ತಿಮರೋಡಿ, ಜಯಂತ್, ವಿಠಲ ಗೌಡ) ಆರೋಪಿಗಳು. ಅವರು ಜಾಮೀನು ತಗೊಳ್ಳಲಿ

ಹೈಕೋರ್ಟ್: ನಾಲ್ವರ ಮೇಲೆ ಯಾವುದೇ ದೌರ್ಜನ್ಯ ಮಾಡಬಾರದು

ಹಿರಿಯ ವಕೀಲ ಎಸ್ ಬಾಲನ್: ಯಾಕೆ ಜಾಮೀನು ತಗೋಬೇಕು ? ಹೋರಾಟಗಾರರನ್ನು, ದೂರುದಾರರನ್ನೇ ಕಾನೂನು ಉಲ್ಲಂಘಿಸಿ ಎಫ್ಐಆರ್ ಮಾಡಿದ್ರೆ ಅದನ್ಜು ಒಪ್ಪಬೇಕಾ ? ಬಿಎನ್‌ಎಸ್‌ಎಸ್‌ 215(1)(ಬಿ) ಪ್ರಕಾರ ಇದು ಕಾನೂನು ಬಾಹಿರ

ಹೈಕೋರ್ಟ್: ಪೂರ್ತಿ ಪ್ರಕರಣಕ್ಕೆ ತಡೆಯಾಜ್ಞೆ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...