Homeಕರ್ನಾಟಕರಾಜಕಾರಣಿಗಳು, ರೈತರು, ಹೋರಾಟಗಾರರ ವಿರುದ್ಧದ 43 ಪ್ರಕರಣ ಹಿಂತೆಗೆತ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ರಾಜಕಾರಣಿಗಳು, ರೈತರು, ಹೋರಾಟಗಾರರ ವಿರುದ್ಧದ 43 ಪ್ರಕರಣ ಹಿಂತೆಗೆತ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

- Advertisement -
- Advertisement -

ಹಾಲಿ ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಗುರುವಾರ (ಫೆ.27) ನೋಟಿಸ್‌ ಜಾರಿ ಮಾಡಿದೆ.

ಬೆಂಗಳೂರು ಮೂಲದ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯಿಸುವಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಪ್ರಾಸಿಕ್ಯೂಷನ್, ಕಾನೂನು ಮತ್ತು ಪೊಲೀಸ್ ಇಲಾಖೆಗಳಿಗೆ ನಿರ್ದೇಶನ ನೀಡಿ, ಮಾರ್ಚ್ 17ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 43 ಪ್ರಕರಣಗಳನ್ನು ಹಿಂಪಡೆಯಲು ಸಿಆರ್‌ಪಿಸಿಯ ಸೆಕ್ಷನ್ 321 ರ ಅಡಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಿಗೆ ನಿರ್ದೇಶನ ನೀಡಿ ರಾಜ್ಯ ಸರ್ಕಾರವು ಅಕ್ಟೋಬರ್ 15, 2024 ರಂದು ಹೊರಡಿಸಿದ ಅಧಿಸೂಚನೆಯನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.

ಅರ್ಜಿದಾರ ಪರ ವಕೀಲ ವೆಂಕಟೇಶ್‌ ದಳವಾಯಿ ಅವರು ವಾದ ಮಂಡಿಸಿ “ರಾಜ್ಯ ಸರ್ಕಾರವು ಸರ್ಕಾರಿ ಅಭಿಯೋಜಕರಿಗೆ ನಿರ್ದೇಶನ ನೀಡಲಾಗದು. ಸಿಆರ್‌ಪಿಸಿ ಸೆಕ್ಷನ್‌ 321ರ ಅಡಿ ಸರ್ಕಾರಿ ಅಭಿಯೋಜಕರಿಗೆ ಅಂತಿಮ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ. ಸರ್ಕಾರಿ ಅಭಿಯೋಜಕರ ಕಚೇರಿಯು ಅಂಚೆ ಕಚೇರಿಯ ರೀತಿ ನಡೆದುಕೊಳ್ಳಲಾಗದು ಎಂದು ಸುಪ್ರೀಂ ಕೋರ್ಟ್‌ ತೀರ್ಪೊಂದರಲ್ಲಿ ಹೇಳಿದೆ. ಪ್ರಕರಣ ಹಿಂಡೆಯುವಂತೆ ಅಭಿಯೋಜಕರಿಗೆ ಸರ್ಕಾರ ಒತ್ತಡ ಹಾಕಲಾಗದು. ಪ್ರಕರಣಗಳನ್ನು ಹಿಂಪಡೆಯಲು ಅರ್ಹವಾಗಿಲ್ಲ ಎಂದು ಕಾನೂನು ಮತ್ತು ಅಭಿಯೋಜನಾ ಇಲಾಖೆಯು ಟಿಪ್ಪಣಿಯಲ್ಲಿ ಹೇಳಿವೆ. ಅದಾಗ್ಯೂ, ಸರ್ಕಾರ ಆದೇಶ ಮಾಡಿದೆ” ಎಂದಿದ್ದಾರೆ.

“ಹಲವು ಆರೋಪಿಗಳ ಮೇಲೆ ದೊಂಬಿ, ಕೊಲೆ ಪ್ರಯತ್ನ, ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ಅತಿಕ್ರಮ ಪ್ರವೇಶದಂಥ ಗಂಭೀರ ಆರೋಪಗಳಿವೆ. ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್‌ಗೆ ಆಕ್ಷೇಪಿಸಿ ಹುಬ್ಬಳ್ಳಿಯಲ್ಲಿ ಒಂದು ಕೋಮಿನವರು ಹಳೇ ಹುಬ್ಬಳ್ಳಿ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದ ಸಂಬಂಧ ದಾಖಲಾಗಿರುವ ಪ್ರಕರಣವೂ ಇದರಲ್ಲಿ ಸೇರಿದೆ. ಹಾಗಾಗಿ, ಪ್ರಕರಣ ಹಿಂಪಡೆಯುವ ಸರ್ಕಾರದ ಆದೇಶವನ್ನು ಅಮಾನತುಗೊಳಿಸಬೇಕು” ಎಂದು ಕೋರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ “ವಿಚಾರಣಾಧೀನ ನ್ಯಾಯಾಲಯುವ ಇನ್ನಷ್ಟೇ ಸರ್ಕಾರಿ ಅಭಿಯೋಜಕರ ಅರ್ಜಿಯನ್ನು ಪರಿಶೀಲಿಸಬೇಕಿದೆ. ಇದಕ್ಕೂ ಮೊದಲೇ ನಾವು ನಿರ್ಧರಿಸಲಾಗದು. ಈ ಆದೇಶವನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ತೋರಿಸಿದರೆ ಪ್ರಕರಣ ಹಿಂಪಡೆಯಲು ಯಾವುದೇ ನ್ಯಾಯಾಲಯ ಅನುಮತಿಸುವುದಿಲ್ಲ. ಒಂದೊಮ್ಮೆ ಸಕ್ಷಮ ನ್ಯಾಯಾಲಯ ಅದಕ್ಕೆ ಅನುಮತಿಸಿದರೆ ಅಪಾಯ ತಂದುಕೊಳ್ಳಲಿದೆ” ಎಂದು ಮೌಖಿಕವಾಗಿ ಹೇಳಿದೆ.

ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಬಳಕೆ; ರಾಜ್ಯದ 52 ಹೋಟೆಲ್‌ಗಳ ವಿರುದ್ಧ ಕ್ರಮ – ದಿನೇಶ್ ಗುಂಡೂರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...