Homeಕರ್ನಾಟಕರಾಜಕಾರಣಿಗಳು, ರೈತರು, ಹೋರಾಟಗಾರರ ವಿರುದ್ಧದ 43 ಪ್ರಕರಣ ಹಿಂತೆಗೆತ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ರಾಜಕಾರಣಿಗಳು, ರೈತರು, ಹೋರಾಟಗಾರರ ವಿರುದ್ಧದ 43 ಪ್ರಕರಣ ಹಿಂತೆಗೆತ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

- Advertisement -
- Advertisement -

ಹಾಲಿ ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಗುರುವಾರ (ಫೆ.27) ನೋಟಿಸ್‌ ಜಾರಿ ಮಾಡಿದೆ.

ಬೆಂಗಳೂರು ಮೂಲದ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯಿಸುವಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಪ್ರಾಸಿಕ್ಯೂಷನ್, ಕಾನೂನು ಮತ್ತು ಪೊಲೀಸ್ ಇಲಾಖೆಗಳಿಗೆ ನಿರ್ದೇಶನ ನೀಡಿ, ಮಾರ್ಚ್ 17ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 43 ಪ್ರಕರಣಗಳನ್ನು ಹಿಂಪಡೆಯಲು ಸಿಆರ್‌ಪಿಸಿಯ ಸೆಕ್ಷನ್ 321 ರ ಅಡಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಿಗೆ ನಿರ್ದೇಶನ ನೀಡಿ ರಾಜ್ಯ ಸರ್ಕಾರವು ಅಕ್ಟೋಬರ್ 15, 2024 ರಂದು ಹೊರಡಿಸಿದ ಅಧಿಸೂಚನೆಯನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.

ಅರ್ಜಿದಾರ ಪರ ವಕೀಲ ವೆಂಕಟೇಶ್‌ ದಳವಾಯಿ ಅವರು ವಾದ ಮಂಡಿಸಿ “ರಾಜ್ಯ ಸರ್ಕಾರವು ಸರ್ಕಾರಿ ಅಭಿಯೋಜಕರಿಗೆ ನಿರ್ದೇಶನ ನೀಡಲಾಗದು. ಸಿಆರ್‌ಪಿಸಿ ಸೆಕ್ಷನ್‌ 321ರ ಅಡಿ ಸರ್ಕಾರಿ ಅಭಿಯೋಜಕರಿಗೆ ಅಂತಿಮ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ. ಸರ್ಕಾರಿ ಅಭಿಯೋಜಕರ ಕಚೇರಿಯು ಅಂಚೆ ಕಚೇರಿಯ ರೀತಿ ನಡೆದುಕೊಳ್ಳಲಾಗದು ಎಂದು ಸುಪ್ರೀಂ ಕೋರ್ಟ್‌ ತೀರ್ಪೊಂದರಲ್ಲಿ ಹೇಳಿದೆ. ಪ್ರಕರಣ ಹಿಂಡೆಯುವಂತೆ ಅಭಿಯೋಜಕರಿಗೆ ಸರ್ಕಾರ ಒತ್ತಡ ಹಾಕಲಾಗದು. ಪ್ರಕರಣಗಳನ್ನು ಹಿಂಪಡೆಯಲು ಅರ್ಹವಾಗಿಲ್ಲ ಎಂದು ಕಾನೂನು ಮತ್ತು ಅಭಿಯೋಜನಾ ಇಲಾಖೆಯು ಟಿಪ್ಪಣಿಯಲ್ಲಿ ಹೇಳಿವೆ. ಅದಾಗ್ಯೂ, ಸರ್ಕಾರ ಆದೇಶ ಮಾಡಿದೆ” ಎಂದಿದ್ದಾರೆ.

“ಹಲವು ಆರೋಪಿಗಳ ಮೇಲೆ ದೊಂಬಿ, ಕೊಲೆ ಪ್ರಯತ್ನ, ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ಅತಿಕ್ರಮ ಪ್ರವೇಶದಂಥ ಗಂಭೀರ ಆರೋಪಗಳಿವೆ. ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್‌ಗೆ ಆಕ್ಷೇಪಿಸಿ ಹುಬ್ಬಳ್ಳಿಯಲ್ಲಿ ಒಂದು ಕೋಮಿನವರು ಹಳೇ ಹುಬ್ಬಳ್ಳಿ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದ ಸಂಬಂಧ ದಾಖಲಾಗಿರುವ ಪ್ರಕರಣವೂ ಇದರಲ್ಲಿ ಸೇರಿದೆ. ಹಾಗಾಗಿ, ಪ್ರಕರಣ ಹಿಂಪಡೆಯುವ ಸರ್ಕಾರದ ಆದೇಶವನ್ನು ಅಮಾನತುಗೊಳಿಸಬೇಕು” ಎಂದು ಕೋರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ “ವಿಚಾರಣಾಧೀನ ನ್ಯಾಯಾಲಯುವ ಇನ್ನಷ್ಟೇ ಸರ್ಕಾರಿ ಅಭಿಯೋಜಕರ ಅರ್ಜಿಯನ್ನು ಪರಿಶೀಲಿಸಬೇಕಿದೆ. ಇದಕ್ಕೂ ಮೊದಲೇ ನಾವು ನಿರ್ಧರಿಸಲಾಗದು. ಈ ಆದೇಶವನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ತೋರಿಸಿದರೆ ಪ್ರಕರಣ ಹಿಂಪಡೆಯಲು ಯಾವುದೇ ನ್ಯಾಯಾಲಯ ಅನುಮತಿಸುವುದಿಲ್ಲ. ಒಂದೊಮ್ಮೆ ಸಕ್ಷಮ ನ್ಯಾಯಾಲಯ ಅದಕ್ಕೆ ಅನುಮತಿಸಿದರೆ ಅಪಾಯ ತಂದುಕೊಳ್ಳಲಿದೆ” ಎಂದು ಮೌಖಿಕವಾಗಿ ಹೇಳಿದೆ.

ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಬಳಕೆ; ರಾಜ್ಯದ 52 ಹೋಟೆಲ್‌ಗಳ ವಿರುದ್ಧ ಕ್ರಮ – ದಿನೇಶ್ ಗುಂಡೂರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...