Homeಕರ್ನಾಟಕಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : 'ದುಡಿದು ಸಂಪಾದಿಸಿ' ಎಂದ ಹೈಕೋರ್ಟ್

ಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : ‘ದುಡಿದು ಸಂಪಾದಿಸಿ’ ಎಂದ ಹೈಕೋರ್ಟ್

- Advertisement -
- Advertisement -

ತನ್ನನ್ನು ತೊರೆದಿರುವ ಪತಿಯಿಂದ ಮಾಸಿಕ 6 ಲಕ್ಷ ರೂಪಾಯಿಗೂ ಅಧಿಕ ಜೀವನಾಂಶ ಕೋರಿದ ಮಹಿಳೆಯ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, “ಇಷ್ಟೊಂದು ಹಣವನ್ನು ಪ್ರತಿ ತಿಂಗಳೂ ಖರ್ಚು ಮಾಡುವ ಬಯಕೆಯಿದ್ದರೆ ನೀವೆ ದುಡಿಯಿರಿ”ಎಂದು ಕಿಡಿಕಾರಿದೆ.

ಕೌಟುಂಬಿಕ ನ್ಯಾಯಾಲಯ ನಿಗದಿಪಡಿಸಿರುವ ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮಹಿಳೆ ಪರ ವಾದ ಮಂಡಿಸಿದ ವಕೀಲ ಆಕರ್ಷ ಸುಧಾಕರ ಕಾನಡೆ, “ಮಹಿಳೆಗೆ ಪೌಷ್ಠಿಕಾಂಶಯುಕ್ತ ಆಹಾರ ಬೇಕಿದೆ. ಪತಿ ಅವರನ್ನು ತೊರೆದ ಬಳಿಕ ಅವರು ಹೊರಗಡೆ ಊಟ ಮಾಡುವಂತಾಗಿದೆ. ಊಟದ ಖರ್ಚೇ ಪ್ರತಿ ತಿಂಗಳಿಗೆ 40 ಸಾವಿರದಷ್ಟಿದೆ. ಅವರನ್ನು ತೊರೆದಿರುವ ಪತಿ ಪ್ರತಿ ದಿನ ಬ್ರಾಂಡೆಡ್ ಬಟ್ಟೆಗಳನ್ನೇ ಧರಿಸುತ್ತಾರೆ. ಅವರ ಒಂದು ಶರ್ಟ್‌ ಬೆಲೆಯೇ ರೂ. 10 ಸಾವಿರದಷ್ಟಿರುತ್ತದೆ. ಇವರು ಮಾತ್ರ ಹಳೆಯ ಬಟ್ಟೆ ಧರಿಸಬೇಕಿದೆ. ಇವರ ಬಟ್ಟೆ, ಸೌಂದರ್ಯ ವರ್ಧಕ, ಔಷಧಿ ವೆಚ್ಚ ಮತ್ತು ಇತರ ವಸ್ತುಗಳ ಖರೀದಿ ಸೇರಿ ಪ್ರತಿ ತಿಂಗಳು ಒಟ್ಟು 60 ಸಾವಿರ ರೂ. ಬೇಕಿದೆ” ಎಂದಿದ್ದಾರೆ.

ಇದನ್ನು ಆಲಿಸಿದ ನ್ಯಾ. ಕನ್ನೆಘಂಟಿ ಅವರು “ದಾವೆದಾರರು ಚೌಕಾಸಿ ನಡೆಸಲು ನ್ಯಾಯಾಲಯ ಮಾರುಕಟ್ಟೆಯಲ್ಲ. ನಿಮ್ಮ ಕಕ್ಷಿದಾರರಿಗೆ ಅರ್ಥವಾಗುತ್ತಿಲ್ಲ. ನೀವು ಅರ್ಥ ಮಾಡಿಕೊಂಡು ಆಕೆಗೆ ಸಲಹೆ ನೀಡಬೇಕು. ಆಕೆಯ ವಾಸ್ತವಿಕ ಖರ್ಚುವೆಚ್ಚಗಳನ್ನು ನ್ಯಾಯಾಲಯಕ್ಕೆ ತಿಳಿಸಬೇಕು. ನ್ಯಾಯಯುತವಾಗಿ ನಡೆದುಕೊಳ್ಳಲು ನಿಮಗೆ ಕೊನೆಯ ಅವಕಾಶ ನೀಡಲಾಗುತ್ತಿದೆ” ಎಂದು ಮಹಿಳೆಯರ ಪರ ವಕೀಲರಿಗೆ ಹೇಳಿದ್ದಾರೆ.

ಮುಂದುವರಿದು, “ಅರ್ಜಿದಾರೆಯು ಆಕೆಯ ಮಗುವಿನ ಖರ್ಚಿಗೆ ವೆಚ್ಚವಾಗುವುದನ್ನು ಏನೂ ಹೇಳಿಲ್ಲ. ತನ್ನ ವೈಯಕ್ತಿಕ ಖರ್ಚಿಗೆ ಮಾಸಿಕ 6,16,300 ರೂ. ಬೇಕು ಎಂದು ಹೇಳಿದ್ದಾರೆ. ಪತಿ ಎಷ್ಟು ಸಂಪಾದನೆ ಮಾಡುತ್ತಿದ್ದಾರೆ ಎಂಬುವುದನ್ನು ಆಧರಿಸಿ ಪತ್ನಿಗೆ ಜೀವನಾಂಶ ನೀಡಲಾಗದು? ಪತಿ ಮಾಸಿಕ 10 ಕೋಟಿ ರೂ. ಸಂಪಾದಿಸಬಹುದು, ಹಾಗೆಂದ ಮಾತ್ರಕ್ಕೆ ನ್ಯಾಯಾಲಯ ಆಕೆಗೆ 5 ಕೋಟಿ ರೂ. ಕೊಡಲು ಆದೇಶಿಸಲಾಗುತ್ತದೆಯೇ? ಒಬ್ಬ ಮಹಿಳೆ ತನಗಾಗಿ ತಿಂಗಳಿಗೆ ಇಷ್ಟು ಖರ್ಚು ಮಾಡುತ್ತಾರೆಯೇ? ಹಾಗಾದರೆ ಅವರು ಸಂಪಾದಿಸಲಿ” ಎಂದು ಖಾರವಾಗಿ ನುಡಿದಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಹಿಳೆ ಪರ ವಕೀಲ, ಜೀವನಾಂಶ ಕೋರಿಕೆಯು ಮಹಿಳೆಯ ವಾಸ್ತವಿಕ ಖರ್ಚು ವೆಚ್ಚವಲ್ಲ, ಅದು ನಿರೀಕ್ಷಾತ್ಮಕ ವೆಚ್ಚವಾಗಿದೆ ಎಂದಿದ್ದಾರೆ.

ಆಗ ಪೀಠವು, ನಿರೀಕ್ಷಾತ್ಮಕ ವೆಚ್ಚಗಳನ್ನು ಆಧರಿಸಿ ಜೀವನಾಂಶ ಕೋರಲು ಕಾನೂನಿನಲ್ಲಿ ಅವಕಾಶವಿಲ್ಲ. ಮಹಿಳೆ ತನ್ನ ಮಾಸಿಕ ಖರ್ಚು ವೆಚ್ಚ ಎಂದು ವೈಯಕ್ತಿಕ ಖರ್ಚಿನ ವಿವರ ನೀಡಿದ್ದಾರೆ. ಇದರಲ್ಲಿ ಮಕ್ಕಳು ಮತ್ತು ಇತರೆ ಹೊಣೆಗಾರಿಕೆ ವಿಚಾರ ಪ್ರಸ್ತಾಪಿಸಿಲ್ಲ. ವಾಸ್ತವಿಕ ವೆಚ್ಚಗಳನ್ನು ಒಳಗೊಂಡ ಅಫಿಡವಿಟ್‌ ಸಲ್ಲಿಸಲು ಆಕೆಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳಿದ್ದಾರೆ. ಮಹಿಳೆಯ ಪತಿ ಪರ ವಕೀಲ ಆದಿನಾಥ ನಾರದೆ ಹಾಜರಿದ್ದರು.

ಇದನ್ನೂ ಓದಿ : ಬಾಕಿ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ : ಸಚಿವ ಸಂಪುಟ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...