Homeಕರ್ನಾಟಕಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : 'ದುಡಿದು ಸಂಪಾದಿಸಿ' ಎಂದ ಹೈಕೋರ್ಟ್

ಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : ‘ದುಡಿದು ಸಂಪಾದಿಸಿ’ ಎಂದ ಹೈಕೋರ್ಟ್

- Advertisement -
- Advertisement -

ತನ್ನನ್ನು ತೊರೆದಿರುವ ಪತಿಯಿಂದ ಮಾಸಿಕ 6 ಲಕ್ಷ ರೂಪಾಯಿಗೂ ಅಧಿಕ ಜೀವನಾಂಶ ಕೋರಿದ ಮಹಿಳೆಯ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, “ಇಷ್ಟೊಂದು ಹಣವನ್ನು ಪ್ರತಿ ತಿಂಗಳೂ ಖರ್ಚು ಮಾಡುವ ಬಯಕೆಯಿದ್ದರೆ ನೀವೆ ದುಡಿಯಿರಿ”ಎಂದು ಕಿಡಿಕಾರಿದೆ.

ಕೌಟುಂಬಿಕ ನ್ಯಾಯಾಲಯ ನಿಗದಿಪಡಿಸಿರುವ ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮಹಿಳೆ ಪರ ವಾದ ಮಂಡಿಸಿದ ವಕೀಲ ಆಕರ್ಷ ಸುಧಾಕರ ಕಾನಡೆ, “ಮಹಿಳೆಗೆ ಪೌಷ್ಠಿಕಾಂಶಯುಕ್ತ ಆಹಾರ ಬೇಕಿದೆ. ಪತಿ ಅವರನ್ನು ತೊರೆದ ಬಳಿಕ ಅವರು ಹೊರಗಡೆ ಊಟ ಮಾಡುವಂತಾಗಿದೆ. ಊಟದ ಖರ್ಚೇ ಪ್ರತಿ ತಿಂಗಳಿಗೆ 40 ಸಾವಿರದಷ್ಟಿದೆ. ಅವರನ್ನು ತೊರೆದಿರುವ ಪತಿ ಪ್ರತಿ ದಿನ ಬ್ರಾಂಡೆಡ್ ಬಟ್ಟೆಗಳನ್ನೇ ಧರಿಸುತ್ತಾರೆ. ಅವರ ಒಂದು ಶರ್ಟ್‌ ಬೆಲೆಯೇ ರೂ. 10 ಸಾವಿರದಷ್ಟಿರುತ್ತದೆ. ಇವರು ಮಾತ್ರ ಹಳೆಯ ಬಟ್ಟೆ ಧರಿಸಬೇಕಿದೆ. ಇವರ ಬಟ್ಟೆ, ಸೌಂದರ್ಯ ವರ್ಧಕ, ಔಷಧಿ ವೆಚ್ಚ ಮತ್ತು ಇತರ ವಸ್ತುಗಳ ಖರೀದಿ ಸೇರಿ ಪ್ರತಿ ತಿಂಗಳು ಒಟ್ಟು 60 ಸಾವಿರ ರೂ. ಬೇಕಿದೆ” ಎಂದಿದ್ದಾರೆ.

ಇದನ್ನು ಆಲಿಸಿದ ನ್ಯಾ. ಕನ್ನೆಘಂಟಿ ಅವರು “ದಾವೆದಾರರು ಚೌಕಾಸಿ ನಡೆಸಲು ನ್ಯಾಯಾಲಯ ಮಾರುಕಟ್ಟೆಯಲ್ಲ. ನಿಮ್ಮ ಕಕ್ಷಿದಾರರಿಗೆ ಅರ್ಥವಾಗುತ್ತಿಲ್ಲ. ನೀವು ಅರ್ಥ ಮಾಡಿಕೊಂಡು ಆಕೆಗೆ ಸಲಹೆ ನೀಡಬೇಕು. ಆಕೆಯ ವಾಸ್ತವಿಕ ಖರ್ಚುವೆಚ್ಚಗಳನ್ನು ನ್ಯಾಯಾಲಯಕ್ಕೆ ತಿಳಿಸಬೇಕು. ನ್ಯಾಯಯುತವಾಗಿ ನಡೆದುಕೊಳ್ಳಲು ನಿಮಗೆ ಕೊನೆಯ ಅವಕಾಶ ನೀಡಲಾಗುತ್ತಿದೆ” ಎಂದು ಮಹಿಳೆಯರ ಪರ ವಕೀಲರಿಗೆ ಹೇಳಿದ್ದಾರೆ.

ಮುಂದುವರಿದು, “ಅರ್ಜಿದಾರೆಯು ಆಕೆಯ ಮಗುವಿನ ಖರ್ಚಿಗೆ ವೆಚ್ಚವಾಗುವುದನ್ನು ಏನೂ ಹೇಳಿಲ್ಲ. ತನ್ನ ವೈಯಕ್ತಿಕ ಖರ್ಚಿಗೆ ಮಾಸಿಕ 6,16,300 ರೂ. ಬೇಕು ಎಂದು ಹೇಳಿದ್ದಾರೆ. ಪತಿ ಎಷ್ಟು ಸಂಪಾದನೆ ಮಾಡುತ್ತಿದ್ದಾರೆ ಎಂಬುವುದನ್ನು ಆಧರಿಸಿ ಪತ್ನಿಗೆ ಜೀವನಾಂಶ ನೀಡಲಾಗದು? ಪತಿ ಮಾಸಿಕ 10 ಕೋಟಿ ರೂ. ಸಂಪಾದಿಸಬಹುದು, ಹಾಗೆಂದ ಮಾತ್ರಕ್ಕೆ ನ್ಯಾಯಾಲಯ ಆಕೆಗೆ 5 ಕೋಟಿ ರೂ. ಕೊಡಲು ಆದೇಶಿಸಲಾಗುತ್ತದೆಯೇ? ಒಬ್ಬ ಮಹಿಳೆ ತನಗಾಗಿ ತಿಂಗಳಿಗೆ ಇಷ್ಟು ಖರ್ಚು ಮಾಡುತ್ತಾರೆಯೇ? ಹಾಗಾದರೆ ಅವರು ಸಂಪಾದಿಸಲಿ” ಎಂದು ಖಾರವಾಗಿ ನುಡಿದಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಹಿಳೆ ಪರ ವಕೀಲ, ಜೀವನಾಂಶ ಕೋರಿಕೆಯು ಮಹಿಳೆಯ ವಾಸ್ತವಿಕ ಖರ್ಚು ವೆಚ್ಚವಲ್ಲ, ಅದು ನಿರೀಕ್ಷಾತ್ಮಕ ವೆಚ್ಚವಾಗಿದೆ ಎಂದಿದ್ದಾರೆ.

ಆಗ ಪೀಠವು, ನಿರೀಕ್ಷಾತ್ಮಕ ವೆಚ್ಚಗಳನ್ನು ಆಧರಿಸಿ ಜೀವನಾಂಶ ಕೋರಲು ಕಾನೂನಿನಲ್ಲಿ ಅವಕಾಶವಿಲ್ಲ. ಮಹಿಳೆ ತನ್ನ ಮಾಸಿಕ ಖರ್ಚು ವೆಚ್ಚ ಎಂದು ವೈಯಕ್ತಿಕ ಖರ್ಚಿನ ವಿವರ ನೀಡಿದ್ದಾರೆ. ಇದರಲ್ಲಿ ಮಕ್ಕಳು ಮತ್ತು ಇತರೆ ಹೊಣೆಗಾರಿಕೆ ವಿಚಾರ ಪ್ರಸ್ತಾಪಿಸಿಲ್ಲ. ವಾಸ್ತವಿಕ ವೆಚ್ಚಗಳನ್ನು ಒಳಗೊಂಡ ಅಫಿಡವಿಟ್‌ ಸಲ್ಲಿಸಲು ಆಕೆಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳಿದ್ದಾರೆ. ಮಹಿಳೆಯ ಪತಿ ಪರ ವಕೀಲ ಆದಿನಾಥ ನಾರದೆ ಹಾಜರಿದ್ದರು.

ಇದನ್ನೂ ಓದಿ : ಬಾಕಿ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ : ಸಚಿವ ಸಂಪುಟ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...