Homeಕರ್ನಾಟಕಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : 'ದುಡಿದು ಸಂಪಾದಿಸಿ' ಎಂದ ಹೈಕೋರ್ಟ್

ಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : ‘ದುಡಿದು ಸಂಪಾದಿಸಿ’ ಎಂದ ಹೈಕೋರ್ಟ್

- Advertisement -
- Advertisement -

ತನ್ನನ್ನು ತೊರೆದಿರುವ ಪತಿಯಿಂದ ಮಾಸಿಕ 6 ಲಕ್ಷ ರೂಪಾಯಿಗೂ ಅಧಿಕ ಜೀವನಾಂಶ ಕೋರಿದ ಮಹಿಳೆಯ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, “ಇಷ್ಟೊಂದು ಹಣವನ್ನು ಪ್ರತಿ ತಿಂಗಳೂ ಖರ್ಚು ಮಾಡುವ ಬಯಕೆಯಿದ್ದರೆ ನೀವೆ ದುಡಿಯಿರಿ”ಎಂದು ಕಿಡಿಕಾರಿದೆ.

ಕೌಟುಂಬಿಕ ನ್ಯಾಯಾಲಯ ನಿಗದಿಪಡಿಸಿರುವ ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮಹಿಳೆ ಪರ ವಾದ ಮಂಡಿಸಿದ ವಕೀಲ ಆಕರ್ಷ ಸುಧಾಕರ ಕಾನಡೆ, “ಮಹಿಳೆಗೆ ಪೌಷ್ಠಿಕಾಂಶಯುಕ್ತ ಆಹಾರ ಬೇಕಿದೆ. ಪತಿ ಅವರನ್ನು ತೊರೆದ ಬಳಿಕ ಅವರು ಹೊರಗಡೆ ಊಟ ಮಾಡುವಂತಾಗಿದೆ. ಊಟದ ಖರ್ಚೇ ಪ್ರತಿ ತಿಂಗಳಿಗೆ 40 ಸಾವಿರದಷ್ಟಿದೆ. ಅವರನ್ನು ತೊರೆದಿರುವ ಪತಿ ಪ್ರತಿ ದಿನ ಬ್ರಾಂಡೆಡ್ ಬಟ್ಟೆಗಳನ್ನೇ ಧರಿಸುತ್ತಾರೆ. ಅವರ ಒಂದು ಶರ್ಟ್‌ ಬೆಲೆಯೇ ರೂ. 10 ಸಾವಿರದಷ್ಟಿರುತ್ತದೆ. ಇವರು ಮಾತ್ರ ಹಳೆಯ ಬಟ್ಟೆ ಧರಿಸಬೇಕಿದೆ. ಇವರ ಬಟ್ಟೆ, ಸೌಂದರ್ಯ ವರ್ಧಕ, ಔಷಧಿ ವೆಚ್ಚ ಮತ್ತು ಇತರ ವಸ್ತುಗಳ ಖರೀದಿ ಸೇರಿ ಪ್ರತಿ ತಿಂಗಳು ಒಟ್ಟು 60 ಸಾವಿರ ರೂ. ಬೇಕಿದೆ” ಎಂದಿದ್ದಾರೆ.

ಇದನ್ನು ಆಲಿಸಿದ ನ್ಯಾ. ಕನ್ನೆಘಂಟಿ ಅವರು “ದಾವೆದಾರರು ಚೌಕಾಸಿ ನಡೆಸಲು ನ್ಯಾಯಾಲಯ ಮಾರುಕಟ್ಟೆಯಲ್ಲ. ನಿಮ್ಮ ಕಕ್ಷಿದಾರರಿಗೆ ಅರ್ಥವಾಗುತ್ತಿಲ್ಲ. ನೀವು ಅರ್ಥ ಮಾಡಿಕೊಂಡು ಆಕೆಗೆ ಸಲಹೆ ನೀಡಬೇಕು. ಆಕೆಯ ವಾಸ್ತವಿಕ ಖರ್ಚುವೆಚ್ಚಗಳನ್ನು ನ್ಯಾಯಾಲಯಕ್ಕೆ ತಿಳಿಸಬೇಕು. ನ್ಯಾಯಯುತವಾಗಿ ನಡೆದುಕೊಳ್ಳಲು ನಿಮಗೆ ಕೊನೆಯ ಅವಕಾಶ ನೀಡಲಾಗುತ್ತಿದೆ” ಎಂದು ಮಹಿಳೆಯರ ಪರ ವಕೀಲರಿಗೆ ಹೇಳಿದ್ದಾರೆ.

ಮುಂದುವರಿದು, “ಅರ್ಜಿದಾರೆಯು ಆಕೆಯ ಮಗುವಿನ ಖರ್ಚಿಗೆ ವೆಚ್ಚವಾಗುವುದನ್ನು ಏನೂ ಹೇಳಿಲ್ಲ. ತನ್ನ ವೈಯಕ್ತಿಕ ಖರ್ಚಿಗೆ ಮಾಸಿಕ 6,16,300 ರೂ. ಬೇಕು ಎಂದು ಹೇಳಿದ್ದಾರೆ. ಪತಿ ಎಷ್ಟು ಸಂಪಾದನೆ ಮಾಡುತ್ತಿದ್ದಾರೆ ಎಂಬುವುದನ್ನು ಆಧರಿಸಿ ಪತ್ನಿಗೆ ಜೀವನಾಂಶ ನೀಡಲಾಗದು? ಪತಿ ಮಾಸಿಕ 10 ಕೋಟಿ ರೂ. ಸಂಪಾದಿಸಬಹುದು, ಹಾಗೆಂದ ಮಾತ್ರಕ್ಕೆ ನ್ಯಾಯಾಲಯ ಆಕೆಗೆ 5 ಕೋಟಿ ರೂ. ಕೊಡಲು ಆದೇಶಿಸಲಾಗುತ್ತದೆಯೇ? ಒಬ್ಬ ಮಹಿಳೆ ತನಗಾಗಿ ತಿಂಗಳಿಗೆ ಇಷ್ಟು ಖರ್ಚು ಮಾಡುತ್ತಾರೆಯೇ? ಹಾಗಾದರೆ ಅವರು ಸಂಪಾದಿಸಲಿ” ಎಂದು ಖಾರವಾಗಿ ನುಡಿದಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಹಿಳೆ ಪರ ವಕೀಲ, ಜೀವನಾಂಶ ಕೋರಿಕೆಯು ಮಹಿಳೆಯ ವಾಸ್ತವಿಕ ಖರ್ಚು ವೆಚ್ಚವಲ್ಲ, ಅದು ನಿರೀಕ್ಷಾತ್ಮಕ ವೆಚ್ಚವಾಗಿದೆ ಎಂದಿದ್ದಾರೆ.

ಆಗ ಪೀಠವು, ನಿರೀಕ್ಷಾತ್ಮಕ ವೆಚ್ಚಗಳನ್ನು ಆಧರಿಸಿ ಜೀವನಾಂಶ ಕೋರಲು ಕಾನೂನಿನಲ್ಲಿ ಅವಕಾಶವಿಲ್ಲ. ಮಹಿಳೆ ತನ್ನ ಮಾಸಿಕ ಖರ್ಚು ವೆಚ್ಚ ಎಂದು ವೈಯಕ್ತಿಕ ಖರ್ಚಿನ ವಿವರ ನೀಡಿದ್ದಾರೆ. ಇದರಲ್ಲಿ ಮಕ್ಕಳು ಮತ್ತು ಇತರೆ ಹೊಣೆಗಾರಿಕೆ ವಿಚಾರ ಪ್ರಸ್ತಾಪಿಸಿಲ್ಲ. ವಾಸ್ತವಿಕ ವೆಚ್ಚಗಳನ್ನು ಒಳಗೊಂಡ ಅಫಿಡವಿಟ್‌ ಸಲ್ಲಿಸಲು ಆಕೆಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳಿದ್ದಾರೆ. ಮಹಿಳೆಯ ಪತಿ ಪರ ವಕೀಲ ಆದಿನಾಥ ನಾರದೆ ಹಾಜರಿದ್ದರು.

ಇದನ್ನೂ ಓದಿ : ಬಾಕಿ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ : ಸಚಿವ ಸಂಪುಟ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...