Homeಕರ್ನಾಟಕಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : 'ದುಡಿದು ಸಂಪಾದಿಸಿ' ಎಂದ ಹೈಕೋರ್ಟ್

ಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : ‘ದುಡಿದು ಸಂಪಾದಿಸಿ’ ಎಂದ ಹೈಕೋರ್ಟ್

- Advertisement -
- Advertisement -

ತನ್ನನ್ನು ತೊರೆದಿರುವ ಪತಿಯಿಂದ ಮಾಸಿಕ 6 ಲಕ್ಷ ರೂಪಾಯಿಗೂ ಅಧಿಕ ಜೀವನಾಂಶ ಕೋರಿದ ಮಹಿಳೆಯ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, “ಇಷ್ಟೊಂದು ಹಣವನ್ನು ಪ್ರತಿ ತಿಂಗಳೂ ಖರ್ಚು ಮಾಡುವ ಬಯಕೆಯಿದ್ದರೆ ನೀವೆ ದುಡಿಯಿರಿ”ಎಂದು ಕಿಡಿಕಾರಿದೆ.

ಕೌಟುಂಬಿಕ ನ್ಯಾಯಾಲಯ ನಿಗದಿಪಡಿಸಿರುವ ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮಹಿಳೆ ಪರ ವಾದ ಮಂಡಿಸಿದ ವಕೀಲ ಆಕರ್ಷ ಸುಧಾಕರ ಕಾನಡೆ, “ಮಹಿಳೆಗೆ ಪೌಷ್ಠಿಕಾಂಶಯುಕ್ತ ಆಹಾರ ಬೇಕಿದೆ. ಪತಿ ಅವರನ್ನು ತೊರೆದ ಬಳಿಕ ಅವರು ಹೊರಗಡೆ ಊಟ ಮಾಡುವಂತಾಗಿದೆ. ಊಟದ ಖರ್ಚೇ ಪ್ರತಿ ತಿಂಗಳಿಗೆ 40 ಸಾವಿರದಷ್ಟಿದೆ. ಅವರನ್ನು ತೊರೆದಿರುವ ಪತಿ ಪ್ರತಿ ದಿನ ಬ್ರಾಂಡೆಡ್ ಬಟ್ಟೆಗಳನ್ನೇ ಧರಿಸುತ್ತಾರೆ. ಅವರ ಒಂದು ಶರ್ಟ್‌ ಬೆಲೆಯೇ ರೂ. 10 ಸಾವಿರದಷ್ಟಿರುತ್ತದೆ. ಇವರು ಮಾತ್ರ ಹಳೆಯ ಬಟ್ಟೆ ಧರಿಸಬೇಕಿದೆ. ಇವರ ಬಟ್ಟೆ, ಸೌಂದರ್ಯ ವರ್ಧಕ, ಔಷಧಿ ವೆಚ್ಚ ಮತ್ತು ಇತರ ವಸ್ತುಗಳ ಖರೀದಿ ಸೇರಿ ಪ್ರತಿ ತಿಂಗಳು ಒಟ್ಟು 60 ಸಾವಿರ ರೂ. ಬೇಕಿದೆ” ಎಂದಿದ್ದಾರೆ.

ಇದನ್ನು ಆಲಿಸಿದ ನ್ಯಾ. ಕನ್ನೆಘಂಟಿ ಅವರು “ದಾವೆದಾರರು ಚೌಕಾಸಿ ನಡೆಸಲು ನ್ಯಾಯಾಲಯ ಮಾರುಕಟ್ಟೆಯಲ್ಲ. ನಿಮ್ಮ ಕಕ್ಷಿದಾರರಿಗೆ ಅರ್ಥವಾಗುತ್ತಿಲ್ಲ. ನೀವು ಅರ್ಥ ಮಾಡಿಕೊಂಡು ಆಕೆಗೆ ಸಲಹೆ ನೀಡಬೇಕು. ಆಕೆಯ ವಾಸ್ತವಿಕ ಖರ್ಚುವೆಚ್ಚಗಳನ್ನು ನ್ಯಾಯಾಲಯಕ್ಕೆ ತಿಳಿಸಬೇಕು. ನ್ಯಾಯಯುತವಾಗಿ ನಡೆದುಕೊಳ್ಳಲು ನಿಮಗೆ ಕೊನೆಯ ಅವಕಾಶ ನೀಡಲಾಗುತ್ತಿದೆ” ಎಂದು ಮಹಿಳೆಯರ ಪರ ವಕೀಲರಿಗೆ ಹೇಳಿದ್ದಾರೆ.

ಮುಂದುವರಿದು, “ಅರ್ಜಿದಾರೆಯು ಆಕೆಯ ಮಗುವಿನ ಖರ್ಚಿಗೆ ವೆಚ್ಚವಾಗುವುದನ್ನು ಏನೂ ಹೇಳಿಲ್ಲ. ತನ್ನ ವೈಯಕ್ತಿಕ ಖರ್ಚಿಗೆ ಮಾಸಿಕ 6,16,300 ರೂ. ಬೇಕು ಎಂದು ಹೇಳಿದ್ದಾರೆ. ಪತಿ ಎಷ್ಟು ಸಂಪಾದನೆ ಮಾಡುತ್ತಿದ್ದಾರೆ ಎಂಬುವುದನ್ನು ಆಧರಿಸಿ ಪತ್ನಿಗೆ ಜೀವನಾಂಶ ನೀಡಲಾಗದು? ಪತಿ ಮಾಸಿಕ 10 ಕೋಟಿ ರೂ. ಸಂಪಾದಿಸಬಹುದು, ಹಾಗೆಂದ ಮಾತ್ರಕ್ಕೆ ನ್ಯಾಯಾಲಯ ಆಕೆಗೆ 5 ಕೋಟಿ ರೂ. ಕೊಡಲು ಆದೇಶಿಸಲಾಗುತ್ತದೆಯೇ? ಒಬ್ಬ ಮಹಿಳೆ ತನಗಾಗಿ ತಿಂಗಳಿಗೆ ಇಷ್ಟು ಖರ್ಚು ಮಾಡುತ್ತಾರೆಯೇ? ಹಾಗಾದರೆ ಅವರು ಸಂಪಾದಿಸಲಿ” ಎಂದು ಖಾರವಾಗಿ ನುಡಿದಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಹಿಳೆ ಪರ ವಕೀಲ, ಜೀವನಾಂಶ ಕೋರಿಕೆಯು ಮಹಿಳೆಯ ವಾಸ್ತವಿಕ ಖರ್ಚು ವೆಚ್ಚವಲ್ಲ, ಅದು ನಿರೀಕ್ಷಾತ್ಮಕ ವೆಚ್ಚವಾಗಿದೆ ಎಂದಿದ್ದಾರೆ.

ಆಗ ಪೀಠವು, ನಿರೀಕ್ಷಾತ್ಮಕ ವೆಚ್ಚಗಳನ್ನು ಆಧರಿಸಿ ಜೀವನಾಂಶ ಕೋರಲು ಕಾನೂನಿನಲ್ಲಿ ಅವಕಾಶವಿಲ್ಲ. ಮಹಿಳೆ ತನ್ನ ಮಾಸಿಕ ಖರ್ಚು ವೆಚ್ಚ ಎಂದು ವೈಯಕ್ತಿಕ ಖರ್ಚಿನ ವಿವರ ನೀಡಿದ್ದಾರೆ. ಇದರಲ್ಲಿ ಮಕ್ಕಳು ಮತ್ತು ಇತರೆ ಹೊಣೆಗಾರಿಕೆ ವಿಚಾರ ಪ್ರಸ್ತಾಪಿಸಿಲ್ಲ. ವಾಸ್ತವಿಕ ವೆಚ್ಚಗಳನ್ನು ಒಳಗೊಂಡ ಅಫಿಡವಿಟ್‌ ಸಲ್ಲಿಸಲು ಆಕೆಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳಿದ್ದಾರೆ. ಮಹಿಳೆಯ ಪತಿ ಪರ ವಕೀಲ ಆದಿನಾಥ ನಾರದೆ ಹಾಜರಿದ್ದರು.

ಇದನ್ನೂ ಓದಿ : ಬಾಕಿ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ : ಸಚಿವ ಸಂಪುಟ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...