Homeಕರ್ನಾಟಕಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : 'ದುಡಿದು ಸಂಪಾದಿಸಿ' ಎಂದ ಹೈಕೋರ್ಟ್

ಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : ‘ದುಡಿದು ಸಂಪಾದಿಸಿ’ ಎಂದ ಹೈಕೋರ್ಟ್

- Advertisement -
- Advertisement -

ತನ್ನನ್ನು ತೊರೆದಿರುವ ಪತಿಯಿಂದ ಮಾಸಿಕ 6 ಲಕ್ಷ ರೂಪಾಯಿಗೂ ಅಧಿಕ ಜೀವನಾಂಶ ಕೋರಿದ ಮಹಿಳೆಯ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, “ಇಷ್ಟೊಂದು ಹಣವನ್ನು ಪ್ರತಿ ತಿಂಗಳೂ ಖರ್ಚು ಮಾಡುವ ಬಯಕೆಯಿದ್ದರೆ ನೀವೆ ದುಡಿಯಿರಿ”ಎಂದು ಕಿಡಿಕಾರಿದೆ.

ಕೌಟುಂಬಿಕ ನ್ಯಾಯಾಲಯ ನಿಗದಿಪಡಿಸಿರುವ ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮಹಿಳೆ ಪರ ವಾದ ಮಂಡಿಸಿದ ವಕೀಲ ಆಕರ್ಷ ಸುಧಾಕರ ಕಾನಡೆ, “ಮಹಿಳೆಗೆ ಪೌಷ್ಠಿಕಾಂಶಯುಕ್ತ ಆಹಾರ ಬೇಕಿದೆ. ಪತಿ ಅವರನ್ನು ತೊರೆದ ಬಳಿಕ ಅವರು ಹೊರಗಡೆ ಊಟ ಮಾಡುವಂತಾಗಿದೆ. ಊಟದ ಖರ್ಚೇ ಪ್ರತಿ ತಿಂಗಳಿಗೆ 40 ಸಾವಿರದಷ್ಟಿದೆ. ಅವರನ್ನು ತೊರೆದಿರುವ ಪತಿ ಪ್ರತಿ ದಿನ ಬ್ರಾಂಡೆಡ್ ಬಟ್ಟೆಗಳನ್ನೇ ಧರಿಸುತ್ತಾರೆ. ಅವರ ಒಂದು ಶರ್ಟ್‌ ಬೆಲೆಯೇ ರೂ. 10 ಸಾವಿರದಷ್ಟಿರುತ್ತದೆ. ಇವರು ಮಾತ್ರ ಹಳೆಯ ಬಟ್ಟೆ ಧರಿಸಬೇಕಿದೆ. ಇವರ ಬಟ್ಟೆ, ಸೌಂದರ್ಯ ವರ್ಧಕ, ಔಷಧಿ ವೆಚ್ಚ ಮತ್ತು ಇತರ ವಸ್ತುಗಳ ಖರೀದಿ ಸೇರಿ ಪ್ರತಿ ತಿಂಗಳು ಒಟ್ಟು 60 ಸಾವಿರ ರೂ. ಬೇಕಿದೆ” ಎಂದಿದ್ದಾರೆ.

ಇದನ್ನು ಆಲಿಸಿದ ನ್ಯಾ. ಕನ್ನೆಘಂಟಿ ಅವರು “ದಾವೆದಾರರು ಚೌಕಾಸಿ ನಡೆಸಲು ನ್ಯಾಯಾಲಯ ಮಾರುಕಟ್ಟೆಯಲ್ಲ. ನಿಮ್ಮ ಕಕ್ಷಿದಾರರಿಗೆ ಅರ್ಥವಾಗುತ್ತಿಲ್ಲ. ನೀವು ಅರ್ಥ ಮಾಡಿಕೊಂಡು ಆಕೆಗೆ ಸಲಹೆ ನೀಡಬೇಕು. ಆಕೆಯ ವಾಸ್ತವಿಕ ಖರ್ಚುವೆಚ್ಚಗಳನ್ನು ನ್ಯಾಯಾಲಯಕ್ಕೆ ತಿಳಿಸಬೇಕು. ನ್ಯಾಯಯುತವಾಗಿ ನಡೆದುಕೊಳ್ಳಲು ನಿಮಗೆ ಕೊನೆಯ ಅವಕಾಶ ನೀಡಲಾಗುತ್ತಿದೆ” ಎಂದು ಮಹಿಳೆಯರ ಪರ ವಕೀಲರಿಗೆ ಹೇಳಿದ್ದಾರೆ.

ಮುಂದುವರಿದು, “ಅರ್ಜಿದಾರೆಯು ಆಕೆಯ ಮಗುವಿನ ಖರ್ಚಿಗೆ ವೆಚ್ಚವಾಗುವುದನ್ನು ಏನೂ ಹೇಳಿಲ್ಲ. ತನ್ನ ವೈಯಕ್ತಿಕ ಖರ್ಚಿಗೆ ಮಾಸಿಕ 6,16,300 ರೂ. ಬೇಕು ಎಂದು ಹೇಳಿದ್ದಾರೆ. ಪತಿ ಎಷ್ಟು ಸಂಪಾದನೆ ಮಾಡುತ್ತಿದ್ದಾರೆ ಎಂಬುವುದನ್ನು ಆಧರಿಸಿ ಪತ್ನಿಗೆ ಜೀವನಾಂಶ ನೀಡಲಾಗದು? ಪತಿ ಮಾಸಿಕ 10 ಕೋಟಿ ರೂ. ಸಂಪಾದಿಸಬಹುದು, ಹಾಗೆಂದ ಮಾತ್ರಕ್ಕೆ ನ್ಯಾಯಾಲಯ ಆಕೆಗೆ 5 ಕೋಟಿ ರೂ. ಕೊಡಲು ಆದೇಶಿಸಲಾಗುತ್ತದೆಯೇ? ಒಬ್ಬ ಮಹಿಳೆ ತನಗಾಗಿ ತಿಂಗಳಿಗೆ ಇಷ್ಟು ಖರ್ಚು ಮಾಡುತ್ತಾರೆಯೇ? ಹಾಗಾದರೆ ಅವರು ಸಂಪಾದಿಸಲಿ” ಎಂದು ಖಾರವಾಗಿ ನುಡಿದಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಹಿಳೆ ಪರ ವಕೀಲ, ಜೀವನಾಂಶ ಕೋರಿಕೆಯು ಮಹಿಳೆಯ ವಾಸ್ತವಿಕ ಖರ್ಚು ವೆಚ್ಚವಲ್ಲ, ಅದು ನಿರೀಕ್ಷಾತ್ಮಕ ವೆಚ್ಚವಾಗಿದೆ ಎಂದಿದ್ದಾರೆ.

ಆಗ ಪೀಠವು, ನಿರೀಕ್ಷಾತ್ಮಕ ವೆಚ್ಚಗಳನ್ನು ಆಧರಿಸಿ ಜೀವನಾಂಶ ಕೋರಲು ಕಾನೂನಿನಲ್ಲಿ ಅವಕಾಶವಿಲ್ಲ. ಮಹಿಳೆ ತನ್ನ ಮಾಸಿಕ ಖರ್ಚು ವೆಚ್ಚ ಎಂದು ವೈಯಕ್ತಿಕ ಖರ್ಚಿನ ವಿವರ ನೀಡಿದ್ದಾರೆ. ಇದರಲ್ಲಿ ಮಕ್ಕಳು ಮತ್ತು ಇತರೆ ಹೊಣೆಗಾರಿಕೆ ವಿಚಾರ ಪ್ರಸ್ತಾಪಿಸಿಲ್ಲ. ವಾಸ್ತವಿಕ ವೆಚ್ಚಗಳನ್ನು ಒಳಗೊಂಡ ಅಫಿಡವಿಟ್‌ ಸಲ್ಲಿಸಲು ಆಕೆಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳಿದ್ದಾರೆ. ಮಹಿಳೆಯ ಪತಿ ಪರ ವಕೀಲ ಆದಿನಾಥ ನಾರದೆ ಹಾಜರಿದ್ದರು.

ಇದನ್ನೂ ಓದಿ : ಬಾಕಿ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ : ಸಚಿವ ಸಂಪುಟ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...