Homeಕರ್ನಾಟಕಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : 'ದುಡಿದು ಸಂಪಾದಿಸಿ' ಎಂದ ಹೈಕೋರ್ಟ್

ಮಾಸಿಕ ₹6 ಲಕ್ಷ ಜೀವನಾಂಶ ಕೋರಿದ ಮಹಿಳೆ : ‘ದುಡಿದು ಸಂಪಾದಿಸಿ’ ಎಂದ ಹೈಕೋರ್ಟ್

- Advertisement -
- Advertisement -

ತನ್ನನ್ನು ತೊರೆದಿರುವ ಪತಿಯಿಂದ ಮಾಸಿಕ 6 ಲಕ್ಷ ರೂಪಾಯಿಗೂ ಅಧಿಕ ಜೀವನಾಂಶ ಕೋರಿದ ಮಹಿಳೆಯ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, “ಇಷ್ಟೊಂದು ಹಣವನ್ನು ಪ್ರತಿ ತಿಂಗಳೂ ಖರ್ಚು ಮಾಡುವ ಬಯಕೆಯಿದ್ದರೆ ನೀವೆ ದುಡಿಯಿರಿ”ಎಂದು ಕಿಡಿಕಾರಿದೆ.

ಕೌಟುಂಬಿಕ ನ್ಯಾಯಾಲಯ ನಿಗದಿಪಡಿಸಿರುವ ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮಹಿಳೆ ಪರ ವಾದ ಮಂಡಿಸಿದ ವಕೀಲ ಆಕರ್ಷ ಸುಧಾಕರ ಕಾನಡೆ, “ಮಹಿಳೆಗೆ ಪೌಷ್ಠಿಕಾಂಶಯುಕ್ತ ಆಹಾರ ಬೇಕಿದೆ. ಪತಿ ಅವರನ್ನು ತೊರೆದ ಬಳಿಕ ಅವರು ಹೊರಗಡೆ ಊಟ ಮಾಡುವಂತಾಗಿದೆ. ಊಟದ ಖರ್ಚೇ ಪ್ರತಿ ತಿಂಗಳಿಗೆ 40 ಸಾವಿರದಷ್ಟಿದೆ. ಅವರನ್ನು ತೊರೆದಿರುವ ಪತಿ ಪ್ರತಿ ದಿನ ಬ್ರಾಂಡೆಡ್ ಬಟ್ಟೆಗಳನ್ನೇ ಧರಿಸುತ್ತಾರೆ. ಅವರ ಒಂದು ಶರ್ಟ್‌ ಬೆಲೆಯೇ ರೂ. 10 ಸಾವಿರದಷ್ಟಿರುತ್ತದೆ. ಇವರು ಮಾತ್ರ ಹಳೆಯ ಬಟ್ಟೆ ಧರಿಸಬೇಕಿದೆ. ಇವರ ಬಟ್ಟೆ, ಸೌಂದರ್ಯ ವರ್ಧಕ, ಔಷಧಿ ವೆಚ್ಚ ಮತ್ತು ಇತರ ವಸ್ತುಗಳ ಖರೀದಿ ಸೇರಿ ಪ್ರತಿ ತಿಂಗಳು ಒಟ್ಟು 60 ಸಾವಿರ ರೂ. ಬೇಕಿದೆ” ಎಂದಿದ್ದಾರೆ.

ಇದನ್ನು ಆಲಿಸಿದ ನ್ಯಾ. ಕನ್ನೆಘಂಟಿ ಅವರು “ದಾವೆದಾರರು ಚೌಕಾಸಿ ನಡೆಸಲು ನ್ಯಾಯಾಲಯ ಮಾರುಕಟ್ಟೆಯಲ್ಲ. ನಿಮ್ಮ ಕಕ್ಷಿದಾರರಿಗೆ ಅರ್ಥವಾಗುತ್ತಿಲ್ಲ. ನೀವು ಅರ್ಥ ಮಾಡಿಕೊಂಡು ಆಕೆಗೆ ಸಲಹೆ ನೀಡಬೇಕು. ಆಕೆಯ ವಾಸ್ತವಿಕ ಖರ್ಚುವೆಚ್ಚಗಳನ್ನು ನ್ಯಾಯಾಲಯಕ್ಕೆ ತಿಳಿಸಬೇಕು. ನ್ಯಾಯಯುತವಾಗಿ ನಡೆದುಕೊಳ್ಳಲು ನಿಮಗೆ ಕೊನೆಯ ಅವಕಾಶ ನೀಡಲಾಗುತ್ತಿದೆ” ಎಂದು ಮಹಿಳೆಯರ ಪರ ವಕೀಲರಿಗೆ ಹೇಳಿದ್ದಾರೆ.

ಮುಂದುವರಿದು, “ಅರ್ಜಿದಾರೆಯು ಆಕೆಯ ಮಗುವಿನ ಖರ್ಚಿಗೆ ವೆಚ್ಚವಾಗುವುದನ್ನು ಏನೂ ಹೇಳಿಲ್ಲ. ತನ್ನ ವೈಯಕ್ತಿಕ ಖರ್ಚಿಗೆ ಮಾಸಿಕ 6,16,300 ರೂ. ಬೇಕು ಎಂದು ಹೇಳಿದ್ದಾರೆ. ಪತಿ ಎಷ್ಟು ಸಂಪಾದನೆ ಮಾಡುತ್ತಿದ್ದಾರೆ ಎಂಬುವುದನ್ನು ಆಧರಿಸಿ ಪತ್ನಿಗೆ ಜೀವನಾಂಶ ನೀಡಲಾಗದು? ಪತಿ ಮಾಸಿಕ 10 ಕೋಟಿ ರೂ. ಸಂಪಾದಿಸಬಹುದು, ಹಾಗೆಂದ ಮಾತ್ರಕ್ಕೆ ನ್ಯಾಯಾಲಯ ಆಕೆಗೆ 5 ಕೋಟಿ ರೂ. ಕೊಡಲು ಆದೇಶಿಸಲಾಗುತ್ತದೆಯೇ? ಒಬ್ಬ ಮಹಿಳೆ ತನಗಾಗಿ ತಿಂಗಳಿಗೆ ಇಷ್ಟು ಖರ್ಚು ಮಾಡುತ್ತಾರೆಯೇ? ಹಾಗಾದರೆ ಅವರು ಸಂಪಾದಿಸಲಿ” ಎಂದು ಖಾರವಾಗಿ ನುಡಿದಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಹಿಳೆ ಪರ ವಕೀಲ, ಜೀವನಾಂಶ ಕೋರಿಕೆಯು ಮಹಿಳೆಯ ವಾಸ್ತವಿಕ ಖರ್ಚು ವೆಚ್ಚವಲ್ಲ, ಅದು ನಿರೀಕ್ಷಾತ್ಮಕ ವೆಚ್ಚವಾಗಿದೆ ಎಂದಿದ್ದಾರೆ.

ಆಗ ಪೀಠವು, ನಿರೀಕ್ಷಾತ್ಮಕ ವೆಚ್ಚಗಳನ್ನು ಆಧರಿಸಿ ಜೀವನಾಂಶ ಕೋರಲು ಕಾನೂನಿನಲ್ಲಿ ಅವಕಾಶವಿಲ್ಲ. ಮಹಿಳೆ ತನ್ನ ಮಾಸಿಕ ಖರ್ಚು ವೆಚ್ಚ ಎಂದು ವೈಯಕ್ತಿಕ ಖರ್ಚಿನ ವಿವರ ನೀಡಿದ್ದಾರೆ. ಇದರಲ್ಲಿ ಮಕ್ಕಳು ಮತ್ತು ಇತರೆ ಹೊಣೆಗಾರಿಕೆ ವಿಚಾರ ಪ್ರಸ್ತಾಪಿಸಿಲ್ಲ. ವಾಸ್ತವಿಕ ವೆಚ್ಚಗಳನ್ನು ಒಳಗೊಂಡ ಅಫಿಡವಿಟ್‌ ಸಲ್ಲಿಸಲು ಆಕೆಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳಿದ್ದಾರೆ. ಮಹಿಳೆಯ ಪತಿ ಪರ ವಕೀಲ ಆದಿನಾಥ ನಾರದೆ ಹಾಜರಿದ್ದರು.

ಇದನ್ನೂ ಓದಿ : ಬಾಕಿ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ : ಸಚಿವ ಸಂಪುಟ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...