Homeಕರ್ನಾಟಕಟಿಪ್ಪು ಜಯಂತಿ ಕುರಿತ ಟ್ವೀಟ್: ಅನಂತ್ ಕುಮಾರ್ ಹೆಗಡೆ, ಸಿ.ಟಿ.ರವಿ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್...

ಟಿಪ್ಪು ಜಯಂತಿ ಕುರಿತ ಟ್ವೀಟ್: ಅನಂತ್ ಕುಮಾರ್ ಹೆಗಡೆ, ಸಿ.ಟಿ.ರವಿ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್ ಸೂಚನೆ

- Advertisement -
- Advertisement -

ಟಿಪ್ಪು ಸುಲ್ತಾನ್ ಜಯಂತಿ ಕುರಿತು ವಿವಾದಾತ್ಮಕ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಬಿಜೆ‍ಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧದ ದೂರನ್ನು ಹೊಸದಾಗಿ ಪರಿಗಣಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

2017ರಲ್ಲಿ ರಾಜ್ಯ ಸರ್ಕಾರ ಆಯೋಜಿಸಿದ್ದ ಟಿಪ್ಪು ಜಯಂತಿ ಸಂದರ್ಭದಲ್ಲಿ ಆಚರಣೆಯನ್ನು ಬಹಿಷ್ಕರಿಸುವ ವಿವಾದಾತ್ಮಕ ಟ್ವೀಟ್‌ಗಳನ್ನು ಮಾಡಿದ್ದರು. ಜೊತೆಗೆ 18 ನೇ ಶತಮಾನದ ಮೈಸೂರು ರಾಜ ಟಿಪ್ಪು ಸುಲ್ತಾನ್ ವಿರುದ್ಧ ಮಾಡಿದ ಆರೋಪಗಳಿಗೆ ಸಂಬಂಧಿಸಿದ್ದ ದೂರನ್ನು ಕೆಳ ನ್ಯಾಯಾಲಯವು ಈ ಹಿಂದೆ ವಜಾಗೊಳಿಸಿತ್ತು.

ಈ ಸಂಬಂಧ ಆರ್‌ಟಿಐ ಕಾರ್ಯಕರ್ತ ಎ.ಆಲಂ ಪಾಷಾ, ಶಾಸಕರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ದೂರಗೆ ಸಾಕ್ಷಿಯಾಗಿ ನವೆಂಬರ್ 10, 2017 ರಂದು ನಿಗದಿಯಾಗಿದ್ದ ಟಿಪ್ಪು ಜಯಂತಿ ಆಚರಣೆ ಬಗ್ಗೆ ಅಕ್ಟೋಬರ್ 22, 2017 ರಂದು ಹೆಗಡೆ ಮತ್ತು ಸಿ.ಟಿ ರವಿ ಅವರ ವಿವಾದಾತ್ಮಕ ಟ್ವೀಟ್‌ಗಳನ್ನು ಒಳಗೊಂಡಿರುವ ಸುದ್ದಿ ವರದಿಯನ್ನು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಟಿಪ್ಪು ಸುಲ್ತಾನರ ಬಲವಂತದ ಮತಾಂತರ ಚರ್ಚೆಯೊಳಗಿನ ವಾಸ್ತವಗಳು!

ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಈ ಹೇಳಿಕೆಗಳು ಭಾರತೀಯ ದಂಡ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಅಪರಾಧಗಳಾಗಿವೆ ಎಂದು ಪಾಷಾ ತನಿಖೆಗೆ ಕೋರಿದ್ದರು. ಆದರೆ, 10 ನೇ ಎಸಿಎಂ ನ್ಯಾಯಾಲಯ ನವೆಂಬರ್ 4, 2017 ರಂದು ದೂರನ್ನು ತಳ್ಳಿಹಾಕಿತ್ತು.

ಆ ಸಮಯದಲ್ಲಿ ಹೆಗಡೆ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಪಿಸಿಆರ್ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್, ಅರ್ಜಿದಾರರು ದೂರು ದಾಖಲಿಸುವ ಮುನ್ನ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಹೀಗಾಗಿ, ದೂರು ವಿಚಾರಣೆಗೆ ಅರ್ಹವಲ್ಲ ಎಂದು ಅರ್ಜಿ ತಿರಸ್ಕರಿಸಿತ್ತು.

‘ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 156 (ಸಿ) ಪ್ರಕಾರ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವ ಅಗತ್ಯವಿಲ್ಲ. ಈ ವಿಷಯವನ್ನು ಸಂಬಂಧಿಸಿದ ನ್ಯಾಯಾಲಯಕ್ಕೆ ರವಾನಿಸಲಾಗಿದೆ. ಕಾನೂನಿನ ಪ್ರಕಾರ ಹೊಸ ದೂರನ್ನು ಪರಿಗಣಿಸುವಂತೆ ತಿಳಿಸಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರ ಪೀಠ ತಿಳಿಸಿದೆ.


ಇದನ್ನೂ ಓದಿ: ವೀರ ಹೋರಾಟಗಾರ ’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನೆಲದ ಮಗ: ವಿಧಾನ ಪರಿಷತ್‌ ಬಿಜೆಪಿ ಸದಸ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸದ್ಯಕ್ಕೆ ಇದೊಂದು ಆಶಾದಾಯಕ ಬೆಳೆವಣಿಗೆ. ಇತಿಹಾಸ ಪುರುಷರನ್ನು ಅವಹೇಳನ ಮಾಡುವುದು ಇನ್ನಾದರೂ ನಿಲ್ಲಲಿ.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...