Homeಮುಖಪುಟಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ₹90 ಕೋಟಿಗೂ ಹೆಚ್ಚಿನ ಇಪಿಎಫ್‌ ಹಣ ಪಾವತಿಸುವಂತೆ ಪಾಲಿಕೆ ಆಡಳಿತಕ್ಕೆ ರಾಜ್ಯ ಹೈಕೋರ್ಟ್‌ ಇಂದು ಆದೇಶ ನೀಡಿದೆ.

ಪೌರಕಾರ್ಮಿಕರಿಗೆ ಕೊಡಬೇಕಾಗಿದ್ದ ಬಾಕಿ ಹಣವಾದ ₹90,18,89,719 (ತೊಂಬತ್ತು ಕೋಟಿ ಹದಿನೆಂಟು ಲಕ್ಷ ಎಂಬತ್ತೊಂಬತ್ತು ಸಾವಿರದ ಏಳುನೂರ ಹತ್ತೊಂಬತ್ತು) ಅನ್ನು ಪಾವತಿಸುವಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶ ನೀಡಿ, ಪೌರಕಾರ್ಮಿಕರ ಸೇವೆಯ ಮಹತ್ವ ಮತ್ತು ಕೆಲಸದ ದುಸ್ಥಿತಿಗಳನ್ನು ಕುರಿತು ಆದೇಶದಲ್ಲಿ ಒತ್ತಿ ಹೇಳಿದೆ.

ಬಿಬಿಎಂಪಿ ಬಾಕಿ ಉಳಿಸಿಕೊಂಡಿದ್ದ ಬಾಕಿ ಪಿಎಫ್‌ ಹಣಕ್ಕೆ ವಾರ್ಷಿಕ 12% ಬಡ್ಡಿಯೊಂದಿಗೆ ಆದೇಶದ ದಿನಾಂಕದಿಂದ ಎಂಟು ವಾರಗಳಲ್ಲಿ ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾಮಾಡಬೇಕೆಂದು ಆದೇಶ ನೀಡಿದೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ (ಎಐಸಿಸಿಟಿಯುನೊಂದಿಗೆ ಸಂಯೋಜಿತವಾಗಿದೆ) ಬಿಬಿಎಂಪಿಯಲ್ಲಿ ಉದ್ಯೋಗದಲ್ಲಿರುವ ಪೌರಕಾರ್ಮಿಕರಿಗೆ ಜನವರಿ 2011 ಮತ್ತು ಜುಲೈ 2017 ರ ನಡುವಿನ ಅವಧಿಗೆ ಬಾಕಿ ಉಳಿಸಿಕೊಂಡಿದ್ದ ಪಿಎಫ್ ವಂತಿಗೆಯನ್ನು ಕೋರಿ ದೂರುಗಳನ್ನು ಸಲ್ಲಿಸಿತ್ತು. ಅದರ ಮೇಲೆ ಇಪಿಎಫ್ ಪ್ರಾಧಿಕಾರವು 26.10.2017 ರಂದು ಬಿಬಿಎಂಪಿಗೆ ರೂ. 90,18,89,719/- ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾಮಾಡುವಂತೆ ಆದೇಶ ಹೊರಡಿಸಿತ್ತು. ಇಪಿಎಫ್ ಪ್ರಾಧಿಕಾರದ ಆದೇಶವನ್ನು ಅನುಸರಿಸಲು ವಿಫಲವಾದ ಕಾರಣ, ಆದೇಶವನ್ನು ಪಾಲಿಸುವಂತೆ ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಕೋರಿ ಕಾರ್ಮಿಕ ಸಂಘಟನೆಯು ಉಚ್ಛ ನ್ಯಾಯಾಲಯದ ಮೊರೆ ಹೋಗಿತ್ತು.

ಉಚ್ಚ ನ್ಯಾಯಾಲಯವು ಪೌರಕಾರ್ಮಿಕರ ಸೇವೆಯ ಮಹತ್ವ ಮತ್ತು ಅವರ ಕೆಲಸದಲ್ಲಿನ ದುಸ್ಥಿತಿಗಳನ್ನು ಗುರುತಿಸಿದೆ. “ಈ ಕಾರ್ಮಿಕರು (ಪೌರಕಾರ್ಮಿಕರು) ಸಮಾಜಕ್ಕೆ ಉತ್ತಮ ಸೇವೆಯನ್ನು ಮಾಡುತ್ತಿದ್ದಾರೆ ಮತ್ತು ಎಲ್ಲಾ ಕಾರ್ಮಿಕರು ಸರಿಯಾದ ವೇತನವನ್ನು ಸಕಾಲಕ್ಕೆ ಪಡೆಯುವುದನ್ನು ಒಳಗೊಂಡಂತೆ ತಮ್ಮ ಬಾಕಿ ಮೊತ್ತಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾರ್ಮಿಕ ಸಂಘಟನೆಯು ಹಲವಾರು ವರ್ಷಗಳಿಂದ ಕೆಲಸ ಮಾಡಿದೆ. ಪೌರಕಾರ್ಮಿಕರು ದಲಿತ ಸಮುದಾಯವರಾಗಿದ್ದು, ಅದರಲ್ಲೂ ಪ್ರಧಾನವಾಗಿ ಮಹಿಳೆಯರೇ ಇದ್ದಾರೆ. ಸಾಪ್ತಾಹಿಕ ಅಥವಾ ರಾಷ್ಟ್ರೀಯ ರಜಾದಿನಗಳು ಅಥವಾ ಯಾವುದೇ ವಿರಾಮಗಳಿಲ್ಲದೆಯೇ, ಅವರು ವೈಜ್ಞಾನಿಕ ತಂತ್ರಜ್ಞಾನವಿಲ್ಲದ ಅಮಾನವೀಯ ಮತ್ತು ಹಳೆಯ ಮಾದರಿಯಲ್ಲೆ ಕಸ-ಸಂಗ್ರಹಣೆ ಮಾಡಿ, ರಸ್ತೆ ಗುಡಿಸುವಲ್ಲಿ ವರ್ಷವಿಡೀ ಕೆಲಸ ಮಾಡುತ್ತಾರೆ. ಅವರು ತಮ್ಮ ಸ್ವಂತ ಆರೋಗ್ಯವನ್ನು ಲೆಕ್ಕಿಸದೇ ನಿರಂತರವಾಗಿ ಸಾರ್ವಜನಿಕರ ಆರೋಗ್ಯವನ್ನು ರಕ್ಷಿಸಿದ್ದಾರೆ. ಪ್ರತಿ ದಿನವೂ ಅದನ್ನು ಮುಂದುವರೆಸಿದ್ದಾರೆ. ಇದರಿಂದಾಗಿ ಅವರು ಗಂಭೀರ ಮತ್ತು ಜೀವನಾವಧಿಯನ್ನು ಕಡಿಮೆಗೊಳಿಸುವ ಉಸಿರಾಟದ ಕಾಯಿಲೆಗಳು, ಹೃದಯದ ತೊಂದರೆಗಳು, ಬೆನ್ನು ಮತ್ತು ಮೊಣಕಾಲಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ’ ಎಂದು ತನ್ನ ಆದೇಶದಲ್ಲಿ ಹೇಳಿದೆ.

ಪೌರಕಾರ್ಮಿಕರಿಗೆ ಆಗಿರುವ ಅನ್ಯಾಯದ ಬಗ್ಗೆಯೂ ಗಮನಿಸಿದ ನ್ಯಾಯಲಯ, ‘ಪ್ರತಿವಾದಿ ಬಿಬಿಎಂಪಿಯ ಕೃತ್ಯಗಳು ಅತ್ಯಂತ ಬಡ ಮತ್ತು ಹಿಂದುಳಿದ ಹಿನ್ನೆಲೆಯಿಂದ ಬಂದ ಕಾರ್ಮಿಕರಿಗೆ ಆರ್ಥಿಕ ಮತ್ತು ಮಾನಸಿಕ ನೋವನ್ನುಂಟುಮಾಡಿದೆ. 26.10.2017ರ ಆದೇಶವನ್ನು ಪಾಲಿಸಲು ಮತ್ತು ಅನುಷ್ಠಾನಗೊಳಿಸಲು ಪಾಲಿಕೆ ವಿಫಲವಾಗಿದ್ದು, ಇದು ಕಾನೂನುಬಾಹಿರ ನಡೆಯಾಗಿದೆ. ಇದು ಸಾರ್ವಜನಿಕ ನೀತಿಯ ಉಲ್ಲಂಘನೆಯಾಗಿದ್ದು, ಪೌರಕಾರ್ಮಿಕರ ಮೂಲಭೂತ ಮತ್ತು ಶಾಸನಬದ್ಧ ಜೀವನಕ್ಕೆ ವಿರುದ್ಧವಾಗಿದೆ’ ಎಂದು ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

‘ಬಿಬಿಎಂಪಿ ಪೌರಕಾರ್ಮಿಕರ ಸಂಘವು ಪೌರಕಾರ್ಮಿಕರ ಹಕ್ಕು ಮತ್ತು ಘನತೆಗಾಗಿ ಅಚಲ ಹೋರಾಟ ನಡೆಸುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸಲಿದೆ’ ಎಂದು ಪೌರಕಾರ್ಮಿಕರ ಸಮಘದ ಅಧ್ಯಕ್ಷರಾದ ನಿರ್ಮಲಾ ಎಂ ತಿಳಿಸಿದ್ದಾರೆ.

ಇದನ್ನೂ ಓದಿ; ‘ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ’ ಎಂಬ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...