Homeಮುಖಪುಟಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ₹90 ಕೋಟಿಗೂ ಹೆಚ್ಚಿನ ಇಪಿಎಫ್‌ ಹಣ ಪಾವತಿಸುವಂತೆ ಪಾಲಿಕೆ ಆಡಳಿತಕ್ಕೆ ರಾಜ್ಯ ಹೈಕೋರ್ಟ್‌ ಇಂದು ಆದೇಶ ನೀಡಿದೆ.

ಪೌರಕಾರ್ಮಿಕರಿಗೆ ಕೊಡಬೇಕಾಗಿದ್ದ ಬಾಕಿ ಹಣವಾದ ₹90,18,89,719 (ತೊಂಬತ್ತು ಕೋಟಿ ಹದಿನೆಂಟು ಲಕ್ಷ ಎಂಬತ್ತೊಂಬತ್ತು ಸಾವಿರದ ಏಳುನೂರ ಹತ್ತೊಂಬತ್ತು) ಅನ್ನು ಪಾವತಿಸುವಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶ ನೀಡಿ, ಪೌರಕಾರ್ಮಿಕರ ಸೇವೆಯ ಮಹತ್ವ ಮತ್ತು ಕೆಲಸದ ದುಸ್ಥಿತಿಗಳನ್ನು ಕುರಿತು ಆದೇಶದಲ್ಲಿ ಒತ್ತಿ ಹೇಳಿದೆ.

ಬಿಬಿಎಂಪಿ ಬಾಕಿ ಉಳಿಸಿಕೊಂಡಿದ್ದ ಬಾಕಿ ಪಿಎಫ್‌ ಹಣಕ್ಕೆ ವಾರ್ಷಿಕ 12% ಬಡ್ಡಿಯೊಂದಿಗೆ ಆದೇಶದ ದಿನಾಂಕದಿಂದ ಎಂಟು ವಾರಗಳಲ್ಲಿ ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾಮಾಡಬೇಕೆಂದು ಆದೇಶ ನೀಡಿದೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ (ಎಐಸಿಸಿಟಿಯುನೊಂದಿಗೆ ಸಂಯೋಜಿತವಾಗಿದೆ) ಬಿಬಿಎಂಪಿಯಲ್ಲಿ ಉದ್ಯೋಗದಲ್ಲಿರುವ ಪೌರಕಾರ್ಮಿಕರಿಗೆ ಜನವರಿ 2011 ಮತ್ತು ಜುಲೈ 2017 ರ ನಡುವಿನ ಅವಧಿಗೆ ಬಾಕಿ ಉಳಿಸಿಕೊಂಡಿದ್ದ ಪಿಎಫ್ ವಂತಿಗೆಯನ್ನು ಕೋರಿ ದೂರುಗಳನ್ನು ಸಲ್ಲಿಸಿತ್ತು. ಅದರ ಮೇಲೆ ಇಪಿಎಫ್ ಪ್ರಾಧಿಕಾರವು 26.10.2017 ರಂದು ಬಿಬಿಎಂಪಿಗೆ ರೂ. 90,18,89,719/- ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾಮಾಡುವಂತೆ ಆದೇಶ ಹೊರಡಿಸಿತ್ತು. ಇಪಿಎಫ್ ಪ್ರಾಧಿಕಾರದ ಆದೇಶವನ್ನು ಅನುಸರಿಸಲು ವಿಫಲವಾದ ಕಾರಣ, ಆದೇಶವನ್ನು ಪಾಲಿಸುವಂತೆ ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಕೋರಿ ಕಾರ್ಮಿಕ ಸಂಘಟನೆಯು ಉಚ್ಛ ನ್ಯಾಯಾಲಯದ ಮೊರೆ ಹೋಗಿತ್ತು.

ಉಚ್ಚ ನ್ಯಾಯಾಲಯವು ಪೌರಕಾರ್ಮಿಕರ ಸೇವೆಯ ಮಹತ್ವ ಮತ್ತು ಅವರ ಕೆಲಸದಲ್ಲಿನ ದುಸ್ಥಿತಿಗಳನ್ನು ಗುರುತಿಸಿದೆ. “ಈ ಕಾರ್ಮಿಕರು (ಪೌರಕಾರ್ಮಿಕರು) ಸಮಾಜಕ್ಕೆ ಉತ್ತಮ ಸೇವೆಯನ್ನು ಮಾಡುತ್ತಿದ್ದಾರೆ ಮತ್ತು ಎಲ್ಲಾ ಕಾರ್ಮಿಕರು ಸರಿಯಾದ ವೇತನವನ್ನು ಸಕಾಲಕ್ಕೆ ಪಡೆಯುವುದನ್ನು ಒಳಗೊಂಡಂತೆ ತಮ್ಮ ಬಾಕಿ ಮೊತ್ತಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾರ್ಮಿಕ ಸಂಘಟನೆಯು ಹಲವಾರು ವರ್ಷಗಳಿಂದ ಕೆಲಸ ಮಾಡಿದೆ. ಪೌರಕಾರ್ಮಿಕರು ದಲಿತ ಸಮುದಾಯವರಾಗಿದ್ದು, ಅದರಲ್ಲೂ ಪ್ರಧಾನವಾಗಿ ಮಹಿಳೆಯರೇ ಇದ್ದಾರೆ. ಸಾಪ್ತಾಹಿಕ ಅಥವಾ ರಾಷ್ಟ್ರೀಯ ರಜಾದಿನಗಳು ಅಥವಾ ಯಾವುದೇ ವಿರಾಮಗಳಿಲ್ಲದೆಯೇ, ಅವರು ವೈಜ್ಞಾನಿಕ ತಂತ್ರಜ್ಞಾನವಿಲ್ಲದ ಅಮಾನವೀಯ ಮತ್ತು ಹಳೆಯ ಮಾದರಿಯಲ್ಲೆ ಕಸ-ಸಂಗ್ರಹಣೆ ಮಾಡಿ, ರಸ್ತೆ ಗುಡಿಸುವಲ್ಲಿ ವರ್ಷವಿಡೀ ಕೆಲಸ ಮಾಡುತ್ತಾರೆ. ಅವರು ತಮ್ಮ ಸ್ವಂತ ಆರೋಗ್ಯವನ್ನು ಲೆಕ್ಕಿಸದೇ ನಿರಂತರವಾಗಿ ಸಾರ್ವಜನಿಕರ ಆರೋಗ್ಯವನ್ನು ರಕ್ಷಿಸಿದ್ದಾರೆ. ಪ್ರತಿ ದಿನವೂ ಅದನ್ನು ಮುಂದುವರೆಸಿದ್ದಾರೆ. ಇದರಿಂದಾಗಿ ಅವರು ಗಂಭೀರ ಮತ್ತು ಜೀವನಾವಧಿಯನ್ನು ಕಡಿಮೆಗೊಳಿಸುವ ಉಸಿರಾಟದ ಕಾಯಿಲೆಗಳು, ಹೃದಯದ ತೊಂದರೆಗಳು, ಬೆನ್ನು ಮತ್ತು ಮೊಣಕಾಲಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ’ ಎಂದು ತನ್ನ ಆದೇಶದಲ್ಲಿ ಹೇಳಿದೆ.

ಪೌರಕಾರ್ಮಿಕರಿಗೆ ಆಗಿರುವ ಅನ್ಯಾಯದ ಬಗ್ಗೆಯೂ ಗಮನಿಸಿದ ನ್ಯಾಯಲಯ, ‘ಪ್ರತಿವಾದಿ ಬಿಬಿಎಂಪಿಯ ಕೃತ್ಯಗಳು ಅತ್ಯಂತ ಬಡ ಮತ್ತು ಹಿಂದುಳಿದ ಹಿನ್ನೆಲೆಯಿಂದ ಬಂದ ಕಾರ್ಮಿಕರಿಗೆ ಆರ್ಥಿಕ ಮತ್ತು ಮಾನಸಿಕ ನೋವನ್ನುಂಟುಮಾಡಿದೆ. 26.10.2017ರ ಆದೇಶವನ್ನು ಪಾಲಿಸಲು ಮತ್ತು ಅನುಷ್ಠಾನಗೊಳಿಸಲು ಪಾಲಿಕೆ ವಿಫಲವಾಗಿದ್ದು, ಇದು ಕಾನೂನುಬಾಹಿರ ನಡೆಯಾಗಿದೆ. ಇದು ಸಾರ್ವಜನಿಕ ನೀತಿಯ ಉಲ್ಲಂಘನೆಯಾಗಿದ್ದು, ಪೌರಕಾರ್ಮಿಕರ ಮೂಲಭೂತ ಮತ್ತು ಶಾಸನಬದ್ಧ ಜೀವನಕ್ಕೆ ವಿರುದ್ಧವಾಗಿದೆ’ ಎಂದು ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

‘ಬಿಬಿಎಂಪಿ ಪೌರಕಾರ್ಮಿಕರ ಸಂಘವು ಪೌರಕಾರ್ಮಿಕರ ಹಕ್ಕು ಮತ್ತು ಘನತೆಗಾಗಿ ಅಚಲ ಹೋರಾಟ ನಡೆಸುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸಲಿದೆ’ ಎಂದು ಪೌರಕಾರ್ಮಿಕರ ಸಮಘದ ಅಧ್ಯಕ್ಷರಾದ ನಿರ್ಮಲಾ ಎಂ ತಿಳಿಸಿದ್ದಾರೆ.

ಇದನ್ನೂ ಓದಿ; ‘ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ’ ಎಂಬ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...