Homeಮುಖಪುಟಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ₹90 ಕೋಟಿಗೂ ಹೆಚ್ಚಿನ ಇಪಿಎಫ್‌ ಹಣ ಪಾವತಿಸುವಂತೆ ಪಾಲಿಕೆ ಆಡಳಿತಕ್ಕೆ ರಾಜ್ಯ ಹೈಕೋರ್ಟ್‌ ಇಂದು ಆದೇಶ ನೀಡಿದೆ.

ಪೌರಕಾರ್ಮಿಕರಿಗೆ ಕೊಡಬೇಕಾಗಿದ್ದ ಬಾಕಿ ಹಣವಾದ ₹90,18,89,719 (ತೊಂಬತ್ತು ಕೋಟಿ ಹದಿನೆಂಟು ಲಕ್ಷ ಎಂಬತ್ತೊಂಬತ್ತು ಸಾವಿರದ ಏಳುನೂರ ಹತ್ತೊಂಬತ್ತು) ಅನ್ನು ಪಾವತಿಸುವಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶ ನೀಡಿ, ಪೌರಕಾರ್ಮಿಕರ ಸೇವೆಯ ಮಹತ್ವ ಮತ್ತು ಕೆಲಸದ ದುಸ್ಥಿತಿಗಳನ್ನು ಕುರಿತು ಆದೇಶದಲ್ಲಿ ಒತ್ತಿ ಹೇಳಿದೆ.

ಬಿಬಿಎಂಪಿ ಬಾಕಿ ಉಳಿಸಿಕೊಂಡಿದ್ದ ಬಾಕಿ ಪಿಎಫ್‌ ಹಣಕ್ಕೆ ವಾರ್ಷಿಕ 12% ಬಡ್ಡಿಯೊಂದಿಗೆ ಆದೇಶದ ದಿನಾಂಕದಿಂದ ಎಂಟು ವಾರಗಳಲ್ಲಿ ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾಮಾಡಬೇಕೆಂದು ಆದೇಶ ನೀಡಿದೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ (ಎಐಸಿಸಿಟಿಯುನೊಂದಿಗೆ ಸಂಯೋಜಿತವಾಗಿದೆ) ಬಿಬಿಎಂಪಿಯಲ್ಲಿ ಉದ್ಯೋಗದಲ್ಲಿರುವ ಪೌರಕಾರ್ಮಿಕರಿಗೆ ಜನವರಿ 2011 ಮತ್ತು ಜುಲೈ 2017 ರ ನಡುವಿನ ಅವಧಿಗೆ ಬಾಕಿ ಉಳಿಸಿಕೊಂಡಿದ್ದ ಪಿಎಫ್ ವಂತಿಗೆಯನ್ನು ಕೋರಿ ದೂರುಗಳನ್ನು ಸಲ್ಲಿಸಿತ್ತು. ಅದರ ಮೇಲೆ ಇಪಿಎಫ್ ಪ್ರಾಧಿಕಾರವು 26.10.2017 ರಂದು ಬಿಬಿಎಂಪಿಗೆ ರೂ. 90,18,89,719/- ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾಮಾಡುವಂತೆ ಆದೇಶ ಹೊರಡಿಸಿತ್ತು. ಇಪಿಎಫ್ ಪ್ರಾಧಿಕಾರದ ಆದೇಶವನ್ನು ಅನುಸರಿಸಲು ವಿಫಲವಾದ ಕಾರಣ, ಆದೇಶವನ್ನು ಪಾಲಿಸುವಂತೆ ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಕೋರಿ ಕಾರ್ಮಿಕ ಸಂಘಟನೆಯು ಉಚ್ಛ ನ್ಯಾಯಾಲಯದ ಮೊರೆ ಹೋಗಿತ್ತು.

ಉಚ್ಚ ನ್ಯಾಯಾಲಯವು ಪೌರಕಾರ್ಮಿಕರ ಸೇವೆಯ ಮಹತ್ವ ಮತ್ತು ಅವರ ಕೆಲಸದಲ್ಲಿನ ದುಸ್ಥಿತಿಗಳನ್ನು ಗುರುತಿಸಿದೆ. “ಈ ಕಾರ್ಮಿಕರು (ಪೌರಕಾರ್ಮಿಕರು) ಸಮಾಜಕ್ಕೆ ಉತ್ತಮ ಸೇವೆಯನ್ನು ಮಾಡುತ್ತಿದ್ದಾರೆ ಮತ್ತು ಎಲ್ಲಾ ಕಾರ್ಮಿಕರು ಸರಿಯಾದ ವೇತನವನ್ನು ಸಕಾಲಕ್ಕೆ ಪಡೆಯುವುದನ್ನು ಒಳಗೊಂಡಂತೆ ತಮ್ಮ ಬಾಕಿ ಮೊತ್ತಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾರ್ಮಿಕ ಸಂಘಟನೆಯು ಹಲವಾರು ವರ್ಷಗಳಿಂದ ಕೆಲಸ ಮಾಡಿದೆ. ಪೌರಕಾರ್ಮಿಕರು ದಲಿತ ಸಮುದಾಯವರಾಗಿದ್ದು, ಅದರಲ್ಲೂ ಪ್ರಧಾನವಾಗಿ ಮಹಿಳೆಯರೇ ಇದ್ದಾರೆ. ಸಾಪ್ತಾಹಿಕ ಅಥವಾ ರಾಷ್ಟ್ರೀಯ ರಜಾದಿನಗಳು ಅಥವಾ ಯಾವುದೇ ವಿರಾಮಗಳಿಲ್ಲದೆಯೇ, ಅವರು ವೈಜ್ಞಾನಿಕ ತಂತ್ರಜ್ಞಾನವಿಲ್ಲದ ಅಮಾನವೀಯ ಮತ್ತು ಹಳೆಯ ಮಾದರಿಯಲ್ಲೆ ಕಸ-ಸಂಗ್ರಹಣೆ ಮಾಡಿ, ರಸ್ತೆ ಗುಡಿಸುವಲ್ಲಿ ವರ್ಷವಿಡೀ ಕೆಲಸ ಮಾಡುತ್ತಾರೆ. ಅವರು ತಮ್ಮ ಸ್ವಂತ ಆರೋಗ್ಯವನ್ನು ಲೆಕ್ಕಿಸದೇ ನಿರಂತರವಾಗಿ ಸಾರ್ವಜನಿಕರ ಆರೋಗ್ಯವನ್ನು ರಕ್ಷಿಸಿದ್ದಾರೆ. ಪ್ರತಿ ದಿನವೂ ಅದನ್ನು ಮುಂದುವರೆಸಿದ್ದಾರೆ. ಇದರಿಂದಾಗಿ ಅವರು ಗಂಭೀರ ಮತ್ತು ಜೀವನಾವಧಿಯನ್ನು ಕಡಿಮೆಗೊಳಿಸುವ ಉಸಿರಾಟದ ಕಾಯಿಲೆಗಳು, ಹೃದಯದ ತೊಂದರೆಗಳು, ಬೆನ್ನು ಮತ್ತು ಮೊಣಕಾಲಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ’ ಎಂದು ತನ್ನ ಆದೇಶದಲ್ಲಿ ಹೇಳಿದೆ.

ಪೌರಕಾರ್ಮಿಕರಿಗೆ ಆಗಿರುವ ಅನ್ಯಾಯದ ಬಗ್ಗೆಯೂ ಗಮನಿಸಿದ ನ್ಯಾಯಲಯ, ‘ಪ್ರತಿವಾದಿ ಬಿಬಿಎಂಪಿಯ ಕೃತ್ಯಗಳು ಅತ್ಯಂತ ಬಡ ಮತ್ತು ಹಿಂದುಳಿದ ಹಿನ್ನೆಲೆಯಿಂದ ಬಂದ ಕಾರ್ಮಿಕರಿಗೆ ಆರ್ಥಿಕ ಮತ್ತು ಮಾನಸಿಕ ನೋವನ್ನುಂಟುಮಾಡಿದೆ. 26.10.2017ರ ಆದೇಶವನ್ನು ಪಾಲಿಸಲು ಮತ್ತು ಅನುಷ್ಠಾನಗೊಳಿಸಲು ಪಾಲಿಕೆ ವಿಫಲವಾಗಿದ್ದು, ಇದು ಕಾನೂನುಬಾಹಿರ ನಡೆಯಾಗಿದೆ. ಇದು ಸಾರ್ವಜನಿಕ ನೀತಿಯ ಉಲ್ಲಂಘನೆಯಾಗಿದ್ದು, ಪೌರಕಾರ್ಮಿಕರ ಮೂಲಭೂತ ಮತ್ತು ಶಾಸನಬದ್ಧ ಜೀವನಕ್ಕೆ ವಿರುದ್ಧವಾಗಿದೆ’ ಎಂದು ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

‘ಬಿಬಿಎಂಪಿ ಪೌರಕಾರ್ಮಿಕರ ಸಂಘವು ಪೌರಕಾರ್ಮಿಕರ ಹಕ್ಕು ಮತ್ತು ಘನತೆಗಾಗಿ ಅಚಲ ಹೋರಾಟ ನಡೆಸುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸಲಿದೆ’ ಎಂದು ಪೌರಕಾರ್ಮಿಕರ ಸಮಘದ ಅಧ್ಯಕ್ಷರಾದ ನಿರ್ಮಲಾ ಎಂ ತಿಳಿಸಿದ್ದಾರೆ.

ಇದನ್ನೂ ಓದಿ; ‘ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ’ ಎಂಬ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...