Homeಮುಖಪುಟಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ₹90 ಕೋಟಿಗೂ ಹೆಚ್ಚಿನ ಇಪಿಎಫ್‌ ಹಣ ಪಾವತಿಸುವಂತೆ ಪಾಲಿಕೆ ಆಡಳಿತಕ್ಕೆ ರಾಜ್ಯ ಹೈಕೋರ್ಟ್‌ ಇಂದು ಆದೇಶ ನೀಡಿದೆ.

ಪೌರಕಾರ್ಮಿಕರಿಗೆ ಕೊಡಬೇಕಾಗಿದ್ದ ಬಾಕಿ ಹಣವಾದ ₹90,18,89,719 (ತೊಂಬತ್ತು ಕೋಟಿ ಹದಿನೆಂಟು ಲಕ್ಷ ಎಂಬತ್ತೊಂಬತ್ತು ಸಾವಿರದ ಏಳುನೂರ ಹತ್ತೊಂಬತ್ತು) ಅನ್ನು ಪಾವತಿಸುವಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶ ನೀಡಿ, ಪೌರಕಾರ್ಮಿಕರ ಸೇವೆಯ ಮಹತ್ವ ಮತ್ತು ಕೆಲಸದ ದುಸ್ಥಿತಿಗಳನ್ನು ಕುರಿತು ಆದೇಶದಲ್ಲಿ ಒತ್ತಿ ಹೇಳಿದೆ.

ಬಿಬಿಎಂಪಿ ಬಾಕಿ ಉಳಿಸಿಕೊಂಡಿದ್ದ ಬಾಕಿ ಪಿಎಫ್‌ ಹಣಕ್ಕೆ ವಾರ್ಷಿಕ 12% ಬಡ್ಡಿಯೊಂದಿಗೆ ಆದೇಶದ ದಿನಾಂಕದಿಂದ ಎಂಟು ವಾರಗಳಲ್ಲಿ ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾಮಾಡಬೇಕೆಂದು ಆದೇಶ ನೀಡಿದೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ (ಎಐಸಿಸಿಟಿಯುನೊಂದಿಗೆ ಸಂಯೋಜಿತವಾಗಿದೆ) ಬಿಬಿಎಂಪಿಯಲ್ಲಿ ಉದ್ಯೋಗದಲ್ಲಿರುವ ಪೌರಕಾರ್ಮಿಕರಿಗೆ ಜನವರಿ 2011 ಮತ್ತು ಜುಲೈ 2017 ರ ನಡುವಿನ ಅವಧಿಗೆ ಬಾಕಿ ಉಳಿಸಿಕೊಂಡಿದ್ದ ಪಿಎಫ್ ವಂತಿಗೆಯನ್ನು ಕೋರಿ ದೂರುಗಳನ್ನು ಸಲ್ಲಿಸಿತ್ತು. ಅದರ ಮೇಲೆ ಇಪಿಎಫ್ ಪ್ರಾಧಿಕಾರವು 26.10.2017 ರಂದು ಬಿಬಿಎಂಪಿಗೆ ರೂ. 90,18,89,719/- ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾಮಾಡುವಂತೆ ಆದೇಶ ಹೊರಡಿಸಿತ್ತು. ಇಪಿಎಫ್ ಪ್ರಾಧಿಕಾರದ ಆದೇಶವನ್ನು ಅನುಸರಿಸಲು ವಿಫಲವಾದ ಕಾರಣ, ಆದೇಶವನ್ನು ಪಾಲಿಸುವಂತೆ ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಕೋರಿ ಕಾರ್ಮಿಕ ಸಂಘಟನೆಯು ಉಚ್ಛ ನ್ಯಾಯಾಲಯದ ಮೊರೆ ಹೋಗಿತ್ತು.

ಉಚ್ಚ ನ್ಯಾಯಾಲಯವು ಪೌರಕಾರ್ಮಿಕರ ಸೇವೆಯ ಮಹತ್ವ ಮತ್ತು ಅವರ ಕೆಲಸದಲ್ಲಿನ ದುಸ್ಥಿತಿಗಳನ್ನು ಗುರುತಿಸಿದೆ. “ಈ ಕಾರ್ಮಿಕರು (ಪೌರಕಾರ್ಮಿಕರು) ಸಮಾಜಕ್ಕೆ ಉತ್ತಮ ಸೇವೆಯನ್ನು ಮಾಡುತ್ತಿದ್ದಾರೆ ಮತ್ತು ಎಲ್ಲಾ ಕಾರ್ಮಿಕರು ಸರಿಯಾದ ವೇತನವನ್ನು ಸಕಾಲಕ್ಕೆ ಪಡೆಯುವುದನ್ನು ಒಳಗೊಂಡಂತೆ ತಮ್ಮ ಬಾಕಿ ಮೊತ್ತಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾರ್ಮಿಕ ಸಂಘಟನೆಯು ಹಲವಾರು ವರ್ಷಗಳಿಂದ ಕೆಲಸ ಮಾಡಿದೆ. ಪೌರಕಾರ್ಮಿಕರು ದಲಿತ ಸಮುದಾಯವರಾಗಿದ್ದು, ಅದರಲ್ಲೂ ಪ್ರಧಾನವಾಗಿ ಮಹಿಳೆಯರೇ ಇದ್ದಾರೆ. ಸಾಪ್ತಾಹಿಕ ಅಥವಾ ರಾಷ್ಟ್ರೀಯ ರಜಾದಿನಗಳು ಅಥವಾ ಯಾವುದೇ ವಿರಾಮಗಳಿಲ್ಲದೆಯೇ, ಅವರು ವೈಜ್ಞಾನಿಕ ತಂತ್ರಜ್ಞಾನವಿಲ್ಲದ ಅಮಾನವೀಯ ಮತ್ತು ಹಳೆಯ ಮಾದರಿಯಲ್ಲೆ ಕಸ-ಸಂಗ್ರಹಣೆ ಮಾಡಿ, ರಸ್ತೆ ಗುಡಿಸುವಲ್ಲಿ ವರ್ಷವಿಡೀ ಕೆಲಸ ಮಾಡುತ್ತಾರೆ. ಅವರು ತಮ್ಮ ಸ್ವಂತ ಆರೋಗ್ಯವನ್ನು ಲೆಕ್ಕಿಸದೇ ನಿರಂತರವಾಗಿ ಸಾರ್ವಜನಿಕರ ಆರೋಗ್ಯವನ್ನು ರಕ್ಷಿಸಿದ್ದಾರೆ. ಪ್ರತಿ ದಿನವೂ ಅದನ್ನು ಮುಂದುವರೆಸಿದ್ದಾರೆ. ಇದರಿಂದಾಗಿ ಅವರು ಗಂಭೀರ ಮತ್ತು ಜೀವನಾವಧಿಯನ್ನು ಕಡಿಮೆಗೊಳಿಸುವ ಉಸಿರಾಟದ ಕಾಯಿಲೆಗಳು, ಹೃದಯದ ತೊಂದರೆಗಳು, ಬೆನ್ನು ಮತ್ತು ಮೊಣಕಾಲಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ’ ಎಂದು ತನ್ನ ಆದೇಶದಲ್ಲಿ ಹೇಳಿದೆ.

ಪೌರಕಾರ್ಮಿಕರಿಗೆ ಆಗಿರುವ ಅನ್ಯಾಯದ ಬಗ್ಗೆಯೂ ಗಮನಿಸಿದ ನ್ಯಾಯಲಯ, ‘ಪ್ರತಿವಾದಿ ಬಿಬಿಎಂಪಿಯ ಕೃತ್ಯಗಳು ಅತ್ಯಂತ ಬಡ ಮತ್ತು ಹಿಂದುಳಿದ ಹಿನ್ನೆಲೆಯಿಂದ ಬಂದ ಕಾರ್ಮಿಕರಿಗೆ ಆರ್ಥಿಕ ಮತ್ತು ಮಾನಸಿಕ ನೋವನ್ನುಂಟುಮಾಡಿದೆ. 26.10.2017ರ ಆದೇಶವನ್ನು ಪಾಲಿಸಲು ಮತ್ತು ಅನುಷ್ಠಾನಗೊಳಿಸಲು ಪಾಲಿಕೆ ವಿಫಲವಾಗಿದ್ದು, ಇದು ಕಾನೂನುಬಾಹಿರ ನಡೆಯಾಗಿದೆ. ಇದು ಸಾರ್ವಜನಿಕ ನೀತಿಯ ಉಲ್ಲಂಘನೆಯಾಗಿದ್ದು, ಪೌರಕಾರ್ಮಿಕರ ಮೂಲಭೂತ ಮತ್ತು ಶಾಸನಬದ್ಧ ಜೀವನಕ್ಕೆ ವಿರುದ್ಧವಾಗಿದೆ’ ಎಂದು ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

‘ಬಿಬಿಎಂಪಿ ಪೌರಕಾರ್ಮಿಕರ ಸಂಘವು ಪೌರಕಾರ್ಮಿಕರ ಹಕ್ಕು ಮತ್ತು ಘನತೆಗಾಗಿ ಅಚಲ ಹೋರಾಟ ನಡೆಸುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸಲಿದೆ’ ಎಂದು ಪೌರಕಾರ್ಮಿಕರ ಸಮಘದ ಅಧ್ಯಕ್ಷರಾದ ನಿರ್ಮಲಾ ಎಂ ತಿಳಿಸಿದ್ದಾರೆ.

ಇದನ್ನೂ ಓದಿ; ‘ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ’ ಎಂಬ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...