Homeಮುಖಪುಟಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ₹90 ಕೋಟಿಗೂ ಹೆಚ್ಚಿನ ಇಪಿಎಫ್‌ ಹಣ ಪಾವತಿಸುವಂತೆ ಪಾಲಿಕೆ ಆಡಳಿತಕ್ಕೆ ರಾಜ್ಯ ಹೈಕೋರ್ಟ್‌ ಇಂದು ಆದೇಶ ನೀಡಿದೆ.

ಪೌರಕಾರ್ಮಿಕರಿಗೆ ಕೊಡಬೇಕಾಗಿದ್ದ ಬಾಕಿ ಹಣವಾದ ₹90,18,89,719 (ತೊಂಬತ್ತು ಕೋಟಿ ಹದಿನೆಂಟು ಲಕ್ಷ ಎಂಬತ್ತೊಂಬತ್ತು ಸಾವಿರದ ಏಳುನೂರ ಹತ್ತೊಂಬತ್ತು) ಅನ್ನು ಪಾವತಿಸುವಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶ ನೀಡಿ, ಪೌರಕಾರ್ಮಿಕರ ಸೇವೆಯ ಮಹತ್ವ ಮತ್ತು ಕೆಲಸದ ದುಸ್ಥಿತಿಗಳನ್ನು ಕುರಿತು ಆದೇಶದಲ್ಲಿ ಒತ್ತಿ ಹೇಳಿದೆ.

ಬಿಬಿಎಂಪಿ ಬಾಕಿ ಉಳಿಸಿಕೊಂಡಿದ್ದ ಬಾಕಿ ಪಿಎಫ್‌ ಹಣಕ್ಕೆ ವಾರ್ಷಿಕ 12% ಬಡ್ಡಿಯೊಂದಿಗೆ ಆದೇಶದ ದಿನಾಂಕದಿಂದ ಎಂಟು ವಾರಗಳಲ್ಲಿ ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾಮಾಡಬೇಕೆಂದು ಆದೇಶ ನೀಡಿದೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ (ಎಐಸಿಸಿಟಿಯುನೊಂದಿಗೆ ಸಂಯೋಜಿತವಾಗಿದೆ) ಬಿಬಿಎಂಪಿಯಲ್ಲಿ ಉದ್ಯೋಗದಲ್ಲಿರುವ ಪೌರಕಾರ್ಮಿಕರಿಗೆ ಜನವರಿ 2011 ಮತ್ತು ಜುಲೈ 2017 ರ ನಡುವಿನ ಅವಧಿಗೆ ಬಾಕಿ ಉಳಿಸಿಕೊಂಡಿದ್ದ ಪಿಎಫ್ ವಂತಿಗೆಯನ್ನು ಕೋರಿ ದೂರುಗಳನ್ನು ಸಲ್ಲಿಸಿತ್ತು. ಅದರ ಮೇಲೆ ಇಪಿಎಫ್ ಪ್ರಾಧಿಕಾರವು 26.10.2017 ರಂದು ಬಿಬಿಎಂಪಿಗೆ ರೂ. 90,18,89,719/- ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾಮಾಡುವಂತೆ ಆದೇಶ ಹೊರಡಿಸಿತ್ತು. ಇಪಿಎಫ್ ಪ್ರಾಧಿಕಾರದ ಆದೇಶವನ್ನು ಅನುಸರಿಸಲು ವಿಫಲವಾದ ಕಾರಣ, ಆದೇಶವನ್ನು ಪಾಲಿಸುವಂತೆ ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಕೋರಿ ಕಾರ್ಮಿಕ ಸಂಘಟನೆಯು ಉಚ್ಛ ನ್ಯಾಯಾಲಯದ ಮೊರೆ ಹೋಗಿತ್ತು.

ಉಚ್ಚ ನ್ಯಾಯಾಲಯವು ಪೌರಕಾರ್ಮಿಕರ ಸೇವೆಯ ಮಹತ್ವ ಮತ್ತು ಅವರ ಕೆಲಸದಲ್ಲಿನ ದುಸ್ಥಿತಿಗಳನ್ನು ಗುರುತಿಸಿದೆ. “ಈ ಕಾರ್ಮಿಕರು (ಪೌರಕಾರ್ಮಿಕರು) ಸಮಾಜಕ್ಕೆ ಉತ್ತಮ ಸೇವೆಯನ್ನು ಮಾಡುತ್ತಿದ್ದಾರೆ ಮತ್ತು ಎಲ್ಲಾ ಕಾರ್ಮಿಕರು ಸರಿಯಾದ ವೇತನವನ್ನು ಸಕಾಲಕ್ಕೆ ಪಡೆಯುವುದನ್ನು ಒಳಗೊಂಡಂತೆ ತಮ್ಮ ಬಾಕಿ ಮೊತ್ತಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾರ್ಮಿಕ ಸಂಘಟನೆಯು ಹಲವಾರು ವರ್ಷಗಳಿಂದ ಕೆಲಸ ಮಾಡಿದೆ. ಪೌರಕಾರ್ಮಿಕರು ದಲಿತ ಸಮುದಾಯವರಾಗಿದ್ದು, ಅದರಲ್ಲೂ ಪ್ರಧಾನವಾಗಿ ಮಹಿಳೆಯರೇ ಇದ್ದಾರೆ. ಸಾಪ್ತಾಹಿಕ ಅಥವಾ ರಾಷ್ಟ್ರೀಯ ರಜಾದಿನಗಳು ಅಥವಾ ಯಾವುದೇ ವಿರಾಮಗಳಿಲ್ಲದೆಯೇ, ಅವರು ವೈಜ್ಞಾನಿಕ ತಂತ್ರಜ್ಞಾನವಿಲ್ಲದ ಅಮಾನವೀಯ ಮತ್ತು ಹಳೆಯ ಮಾದರಿಯಲ್ಲೆ ಕಸ-ಸಂಗ್ರಹಣೆ ಮಾಡಿ, ರಸ್ತೆ ಗುಡಿಸುವಲ್ಲಿ ವರ್ಷವಿಡೀ ಕೆಲಸ ಮಾಡುತ್ತಾರೆ. ಅವರು ತಮ್ಮ ಸ್ವಂತ ಆರೋಗ್ಯವನ್ನು ಲೆಕ್ಕಿಸದೇ ನಿರಂತರವಾಗಿ ಸಾರ್ವಜನಿಕರ ಆರೋಗ್ಯವನ್ನು ರಕ್ಷಿಸಿದ್ದಾರೆ. ಪ್ರತಿ ದಿನವೂ ಅದನ್ನು ಮುಂದುವರೆಸಿದ್ದಾರೆ. ಇದರಿಂದಾಗಿ ಅವರು ಗಂಭೀರ ಮತ್ತು ಜೀವನಾವಧಿಯನ್ನು ಕಡಿಮೆಗೊಳಿಸುವ ಉಸಿರಾಟದ ಕಾಯಿಲೆಗಳು, ಹೃದಯದ ತೊಂದರೆಗಳು, ಬೆನ್ನು ಮತ್ತು ಮೊಣಕಾಲಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ’ ಎಂದು ತನ್ನ ಆದೇಶದಲ್ಲಿ ಹೇಳಿದೆ.

ಪೌರಕಾರ್ಮಿಕರಿಗೆ ಆಗಿರುವ ಅನ್ಯಾಯದ ಬಗ್ಗೆಯೂ ಗಮನಿಸಿದ ನ್ಯಾಯಲಯ, ‘ಪ್ರತಿವಾದಿ ಬಿಬಿಎಂಪಿಯ ಕೃತ್ಯಗಳು ಅತ್ಯಂತ ಬಡ ಮತ್ತು ಹಿಂದುಳಿದ ಹಿನ್ನೆಲೆಯಿಂದ ಬಂದ ಕಾರ್ಮಿಕರಿಗೆ ಆರ್ಥಿಕ ಮತ್ತು ಮಾನಸಿಕ ನೋವನ್ನುಂಟುಮಾಡಿದೆ. 26.10.2017ರ ಆದೇಶವನ್ನು ಪಾಲಿಸಲು ಮತ್ತು ಅನುಷ್ಠಾನಗೊಳಿಸಲು ಪಾಲಿಕೆ ವಿಫಲವಾಗಿದ್ದು, ಇದು ಕಾನೂನುಬಾಹಿರ ನಡೆಯಾಗಿದೆ. ಇದು ಸಾರ್ವಜನಿಕ ನೀತಿಯ ಉಲ್ಲಂಘನೆಯಾಗಿದ್ದು, ಪೌರಕಾರ್ಮಿಕರ ಮೂಲಭೂತ ಮತ್ತು ಶಾಸನಬದ್ಧ ಜೀವನಕ್ಕೆ ವಿರುದ್ಧವಾಗಿದೆ’ ಎಂದು ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

‘ಬಿಬಿಎಂಪಿ ಪೌರಕಾರ್ಮಿಕರ ಸಂಘವು ಪೌರಕಾರ್ಮಿಕರ ಹಕ್ಕು ಮತ್ತು ಘನತೆಗಾಗಿ ಅಚಲ ಹೋರಾಟ ನಡೆಸುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸಲಿದೆ’ ಎಂದು ಪೌರಕಾರ್ಮಿಕರ ಸಮಘದ ಅಧ್ಯಕ್ಷರಾದ ನಿರ್ಮಲಾ ಎಂ ತಿಳಿಸಿದ್ದಾರೆ.

ಇದನ್ನೂ ಓದಿ; ‘ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ’ ಎಂಬ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...