Homeಕರ್ನಾಟಕಇನ್ಫೋಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ಜಾತಿ ನಿಂದನೆ ಪ್ರಕರಣ...

ಇನ್ಫೋಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ಜಾತಿ ನಿಂದನೆ ಪ್ರಕರಣ ರದ್ದು

- Advertisement -
- Advertisement -

ಇನ್ಫೋಸಿಸ್‌ ಸಹ ಸಂಸ್ಥಾಪಕ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆಡಳಿತ ಮಂಡಳಿ ಅಧ್ಯಕ್ಷ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್‌ ರಂಗರಾಜನ್‌ ಸೇರಿ 16 ಮಂದಿಯ ವಿರುದ್ಧ ಜಾತಿ ನಿಂದನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ ಎಂದು ವರದಿಯಾಗಿದೆ.

ವಿಶೇಷ ನ್ಯಾಯಾಲಯವು ಡಾ. ಡಿ ಸಣ್ಣ ದುರ್ಗಪ್ಪ ಅವರ ಖಾಸಗಿ ದೂರಿನ ಸಂಜ್ಞೇ ಪರಿಗಣಿಸಿರುವುದು ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಗೋವಿಂದನ್‌ ರಂಗರಾಜನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ್‌ ಅವರ ಏಕಸದಸ್ಯ ಪೀಠವು ಪುರಸ್ಕರಿಸಿದೆ ಎಂದು barandbench.com ವರದಿ ಮಾಡಿದೆ.

“ಸಿವಿಲ್‌ ಪ್ರಕರಣಕ್ಕೆ ಕ್ರಿಮಿನಲ್‌ ಬಣ್ಣ ನೀಡಲಾಗಿದೆ ಎಂಬುದನ್ನು ಆಧರಿಸಿ ಈ ಹಿಂದೆ ದೂರುದಾರರು ದಾಖಲಿಸಿದ್ದ ಎರಡು ಕ್ರಿಮಿನಲ್‌ ದೂರುಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಹಾಲಿ ಪ್ರಕರಣವು ಅಂಥವೇ ಆರೋಪಗಳನ್ನು ಒಳಗೊಂಡಿದೆ. ದೂರುದಾರ ದುರ್ಗಪ್ಪ ಅವರನ್ನು ಸೇವೆಯಿಂದ ವಜಾಗೊಳಿಸಿರುವುದರಿಂದ ಅವರು ರಾಜೀನಾಮೆ ನೀಡಿದ್ದರು. ಇದಕ್ಕೆ ಪ್ರತೀಕಾರವಾಗಿ ಮೂರನೇ ದೂರು ನೀಡಿದ್ದಾರೆ. ಪಕ್ಷಕಾರರ ನಡುವಿನ ವಿವಾದವು ಸಿವಿಲ್‌ ಸ್ವರೂಪದ್ದಾಗಿದ್ದು, ಅದಕ್ಕೆ ಕ್ರಿಮಿನಲ್‌ ಬಣ್ಣ ಹಚ್ಚಲಾಗಿದೆ” ಎಂದು ನ್ಯಾಯಾಲಯ ಹೇಳಿದ್ದು, ಹಾಲಿ ದೂರು ಕಾನೂನಿನ ದುರ್ಬಳಕೆ ಎಂದು ಪೀಠ ದಾಖಲಿಸಿದೆ ಎಂದು ವರದಿ ವಿವರಿಸಿದೆ.

“ಸಣ್ಣ ದುರ್ಗಪ್ಪ ಮತ್ತು ಐಐಎಸ್‌ಸಿ ಪ್ರತಿನಿಧಿಗಳು ರಾಜೀ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರನ್ನು ವಜಾಗೊಳಿಸಿದ್ದನ್ನು ರಾಜೀನಾಮೆಯನ್ನಾಗಿ ಪರಿವರ್ತಿಸಲಾಗಿತ್ತು. ವಿವಿಧ ಕಡೆ ಐಐಎಸ್‌ಸಿ ಪ್ರತಿನಿಧಿಗಳ ವಿರುದ್ಧ ದಾಖಲಿಸಿರುವ ದೂರುಗಳನ್ನು ಹಿಂಪಡೆಯಬೇಕು ಎಂಬುದು ಷರತ್ತುಗಳ ಪೈಕಿ ಒಂದಾಗಿತ್ತು. ರಾಜೀನಾಮೆ ಹಿನ್ನೆಲೆಯಲ್ಲಿ ಲಭ್ಯವಿರುವ ಸವಲತ್ತುಗಳನ್ನು ಪಡೆದ ಬಳಿಕವೂ ಸಣ್ಣ ದುರ್ಗಪ್ಪ ಅವರು ಐಐಎಸ್‌ಸಿ ಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ಮುಂದುವರಿಸಿದ್ದರು ಎಂಬುದನ್ನು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ. ಅಲ್ಲದೇ, ಸಣ್ಣ ದುರ್ಗಪ್ಪ ವಿರುದ್ಧ ಐಐಎಸ್‌ಸಿ ಪ್ರತಿನಿಧಿಗಳು ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಂದುವರಿಸಲು ಕ್ರಮಕೈಗೊಳ್ಳಬಹುದು” ಎಂದು ಆದೇಶಿಸಿದೆ ಎಂದು ತಿಳಿಸಿದೆ.

ದೂರಿನಲ್ಲಿ ಏನಿತ್ತು?: ಐಐಎಸ್‌ಸಿಯಲ್ಲಿ 2014ರಲ್ಲಿ ಹನಿಟ್ರ್ಯಾಪ್‌ ಮೂಲಕ ತನ್ನನ್ನು ಸೇವೆಯಿಂದ ವಜಾ ಮಾಡಿಸಲಾಗಿದೆ ಎಂದು ದುರ್ಗಪ್ಪ ದೂರಿದ್ದರು. ಅಲ್ಲದೇ, ಗೋಂವಿದನ್‌ ರಂಗರಾವ್‌, ಶ್ರೀಧರ್‌ ವಾರಿಯರ್‌, ಸೇನಾಪತಿ ಕ್ರಿಶ್‌ ಗೋಪಾಲಕೃಷ್ಣನ್‌, ಅನಿಲ್‌ ಕುಮಾರ್‌, ದೀಪ್ಸಿಕಾ ಚಕ್ರವರ್ತಿ, ನಮ್ರತಾ ಗುಂಡಯ್ಯ, ಡಾ. ನಿರ್ಮಲಾ, ಸಂಧ್ಯಾ ವಿಶ್ವೇಶ್ವರಯ್ಯ, ಕೆವಿಎಸ್‌ ಹರಿ, ದಾಸಪ್ಪ, ಪಿ ಬಾಲಚಂದ್ರ, ಪಿ ಬಲರಾಮ, ಅಂಜಲಿ ಕೆ ಕಾರಂಡೆ, ಹೇಮಲತಾ ಮ್ಹಿಷಿ, ಕೆ ಚಟ್ಟೋಪಾಧ್ಯಾಯ, ಪ್ರದೀಪ್‌ ಸಾವ್ಕಾರ್‌, ಅಭಿಲಾಷ್‌ ರಾಜು, ವಿಕ್ಟರ್‌ ಮನೋಹರನ್‌ ಅವರು 2008ರಿಂದ 2025ರವರೆಗೆ ತನ್ನ ಮೇಲೆ ಜಾತಿ ನಿಂದನೆ ಮಾಡಿ, ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು.

ಸೌಜನ್ಯ : barandbench.com

ಜಾತಿ ಗಣತಿ ವರದಿ ಪ್ರಶ್ನಿಸಿ ಅರ್ಜಿ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...