Homeಕರ್ನಾಟಕಇನ್ಫೋಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ಜಾತಿ ನಿಂದನೆ ಪ್ರಕರಣ...

ಇನ್ಫೋಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ಜಾತಿ ನಿಂದನೆ ಪ್ರಕರಣ ರದ್ದು

- Advertisement -
- Advertisement -

ಇನ್ಫೋಸಿಸ್‌ ಸಹ ಸಂಸ್ಥಾಪಕ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆಡಳಿತ ಮಂಡಳಿ ಅಧ್ಯಕ್ಷ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್‌ ರಂಗರಾಜನ್‌ ಸೇರಿ 16 ಮಂದಿಯ ವಿರುದ್ಧ ಜಾತಿ ನಿಂದನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ ಎಂದು ವರದಿಯಾಗಿದೆ.

ವಿಶೇಷ ನ್ಯಾಯಾಲಯವು ಡಾ. ಡಿ ಸಣ್ಣ ದುರ್ಗಪ್ಪ ಅವರ ಖಾಸಗಿ ದೂರಿನ ಸಂಜ್ಞೇ ಪರಿಗಣಿಸಿರುವುದು ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಗೋವಿಂದನ್‌ ರಂಗರಾಜನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ್‌ ಅವರ ಏಕಸದಸ್ಯ ಪೀಠವು ಪುರಸ್ಕರಿಸಿದೆ ಎಂದು barandbench.com ವರದಿ ಮಾಡಿದೆ.

“ಸಿವಿಲ್‌ ಪ್ರಕರಣಕ್ಕೆ ಕ್ರಿಮಿನಲ್‌ ಬಣ್ಣ ನೀಡಲಾಗಿದೆ ಎಂಬುದನ್ನು ಆಧರಿಸಿ ಈ ಹಿಂದೆ ದೂರುದಾರರು ದಾಖಲಿಸಿದ್ದ ಎರಡು ಕ್ರಿಮಿನಲ್‌ ದೂರುಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಹಾಲಿ ಪ್ರಕರಣವು ಅಂಥವೇ ಆರೋಪಗಳನ್ನು ಒಳಗೊಂಡಿದೆ. ದೂರುದಾರ ದುರ್ಗಪ್ಪ ಅವರನ್ನು ಸೇವೆಯಿಂದ ವಜಾಗೊಳಿಸಿರುವುದರಿಂದ ಅವರು ರಾಜೀನಾಮೆ ನೀಡಿದ್ದರು. ಇದಕ್ಕೆ ಪ್ರತೀಕಾರವಾಗಿ ಮೂರನೇ ದೂರು ನೀಡಿದ್ದಾರೆ. ಪಕ್ಷಕಾರರ ನಡುವಿನ ವಿವಾದವು ಸಿವಿಲ್‌ ಸ್ವರೂಪದ್ದಾಗಿದ್ದು, ಅದಕ್ಕೆ ಕ್ರಿಮಿನಲ್‌ ಬಣ್ಣ ಹಚ್ಚಲಾಗಿದೆ” ಎಂದು ನ್ಯಾಯಾಲಯ ಹೇಳಿದ್ದು, ಹಾಲಿ ದೂರು ಕಾನೂನಿನ ದುರ್ಬಳಕೆ ಎಂದು ಪೀಠ ದಾಖಲಿಸಿದೆ ಎಂದು ವರದಿ ವಿವರಿಸಿದೆ.

“ಸಣ್ಣ ದುರ್ಗಪ್ಪ ಮತ್ತು ಐಐಎಸ್‌ಸಿ ಪ್ರತಿನಿಧಿಗಳು ರಾಜೀ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರನ್ನು ವಜಾಗೊಳಿಸಿದ್ದನ್ನು ರಾಜೀನಾಮೆಯನ್ನಾಗಿ ಪರಿವರ್ತಿಸಲಾಗಿತ್ತು. ವಿವಿಧ ಕಡೆ ಐಐಎಸ್‌ಸಿ ಪ್ರತಿನಿಧಿಗಳ ವಿರುದ್ಧ ದಾಖಲಿಸಿರುವ ದೂರುಗಳನ್ನು ಹಿಂಪಡೆಯಬೇಕು ಎಂಬುದು ಷರತ್ತುಗಳ ಪೈಕಿ ಒಂದಾಗಿತ್ತು. ರಾಜೀನಾಮೆ ಹಿನ್ನೆಲೆಯಲ್ಲಿ ಲಭ್ಯವಿರುವ ಸವಲತ್ತುಗಳನ್ನು ಪಡೆದ ಬಳಿಕವೂ ಸಣ್ಣ ದುರ್ಗಪ್ಪ ಅವರು ಐಐಎಸ್‌ಸಿ ಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ಮುಂದುವರಿಸಿದ್ದರು ಎಂಬುದನ್ನು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ. ಅಲ್ಲದೇ, ಸಣ್ಣ ದುರ್ಗಪ್ಪ ವಿರುದ್ಧ ಐಐಎಸ್‌ಸಿ ಪ್ರತಿನಿಧಿಗಳು ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಂದುವರಿಸಲು ಕ್ರಮಕೈಗೊಳ್ಳಬಹುದು” ಎಂದು ಆದೇಶಿಸಿದೆ ಎಂದು ತಿಳಿಸಿದೆ.

ದೂರಿನಲ್ಲಿ ಏನಿತ್ತು?: ಐಐಎಸ್‌ಸಿಯಲ್ಲಿ 2014ರಲ್ಲಿ ಹನಿಟ್ರ್ಯಾಪ್‌ ಮೂಲಕ ತನ್ನನ್ನು ಸೇವೆಯಿಂದ ವಜಾ ಮಾಡಿಸಲಾಗಿದೆ ಎಂದು ದುರ್ಗಪ್ಪ ದೂರಿದ್ದರು. ಅಲ್ಲದೇ, ಗೋಂವಿದನ್‌ ರಂಗರಾವ್‌, ಶ್ರೀಧರ್‌ ವಾರಿಯರ್‌, ಸೇನಾಪತಿ ಕ್ರಿಶ್‌ ಗೋಪಾಲಕೃಷ್ಣನ್‌, ಅನಿಲ್‌ ಕುಮಾರ್‌, ದೀಪ್ಸಿಕಾ ಚಕ್ರವರ್ತಿ, ನಮ್ರತಾ ಗುಂಡಯ್ಯ, ಡಾ. ನಿರ್ಮಲಾ, ಸಂಧ್ಯಾ ವಿಶ್ವೇಶ್ವರಯ್ಯ, ಕೆವಿಎಸ್‌ ಹರಿ, ದಾಸಪ್ಪ, ಪಿ ಬಾಲಚಂದ್ರ, ಪಿ ಬಲರಾಮ, ಅಂಜಲಿ ಕೆ ಕಾರಂಡೆ, ಹೇಮಲತಾ ಮ್ಹಿಷಿ, ಕೆ ಚಟ್ಟೋಪಾಧ್ಯಾಯ, ಪ್ರದೀಪ್‌ ಸಾವ್ಕಾರ್‌, ಅಭಿಲಾಷ್‌ ರಾಜು, ವಿಕ್ಟರ್‌ ಮನೋಹರನ್‌ ಅವರು 2008ರಿಂದ 2025ರವರೆಗೆ ತನ್ನ ಮೇಲೆ ಜಾತಿ ನಿಂದನೆ ಮಾಡಿ, ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು.

ಸೌಜನ್ಯ : barandbench.com

ಜಾತಿ ಗಣತಿ ವರದಿ ಪ್ರಶ್ನಿಸಿ ಅರ್ಜಿ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...