Homeಕರ್ನಾಟಕಇನ್ಫೋಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ಜಾತಿ ನಿಂದನೆ ಪ್ರಕರಣ...

ಇನ್ಫೋಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ಜಾತಿ ನಿಂದನೆ ಪ್ರಕರಣ ರದ್ದು

- Advertisement -
- Advertisement -

ಇನ್ಫೋಸಿಸ್‌ ಸಹ ಸಂಸ್ಥಾಪಕ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆಡಳಿತ ಮಂಡಳಿ ಅಧ್ಯಕ್ಷ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್‌ ರಂಗರಾಜನ್‌ ಸೇರಿ 16 ಮಂದಿಯ ವಿರುದ್ಧ ಜಾತಿ ನಿಂದನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ ಎಂದು ವರದಿಯಾಗಿದೆ.

ವಿಶೇಷ ನ್ಯಾಯಾಲಯವು ಡಾ. ಡಿ ಸಣ್ಣ ದುರ್ಗಪ್ಪ ಅವರ ಖಾಸಗಿ ದೂರಿನ ಸಂಜ್ಞೇ ಪರಿಗಣಿಸಿರುವುದು ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಗೋವಿಂದನ್‌ ರಂಗರಾಜನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ್‌ ಅವರ ಏಕಸದಸ್ಯ ಪೀಠವು ಪುರಸ್ಕರಿಸಿದೆ ಎಂದು barandbench.com ವರದಿ ಮಾಡಿದೆ.

“ಸಿವಿಲ್‌ ಪ್ರಕರಣಕ್ಕೆ ಕ್ರಿಮಿನಲ್‌ ಬಣ್ಣ ನೀಡಲಾಗಿದೆ ಎಂಬುದನ್ನು ಆಧರಿಸಿ ಈ ಹಿಂದೆ ದೂರುದಾರರು ದಾಖಲಿಸಿದ್ದ ಎರಡು ಕ್ರಿಮಿನಲ್‌ ದೂರುಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಹಾಲಿ ಪ್ರಕರಣವು ಅಂಥವೇ ಆರೋಪಗಳನ್ನು ಒಳಗೊಂಡಿದೆ. ದೂರುದಾರ ದುರ್ಗಪ್ಪ ಅವರನ್ನು ಸೇವೆಯಿಂದ ವಜಾಗೊಳಿಸಿರುವುದರಿಂದ ಅವರು ರಾಜೀನಾಮೆ ನೀಡಿದ್ದರು. ಇದಕ್ಕೆ ಪ್ರತೀಕಾರವಾಗಿ ಮೂರನೇ ದೂರು ನೀಡಿದ್ದಾರೆ. ಪಕ್ಷಕಾರರ ನಡುವಿನ ವಿವಾದವು ಸಿವಿಲ್‌ ಸ್ವರೂಪದ್ದಾಗಿದ್ದು, ಅದಕ್ಕೆ ಕ್ರಿಮಿನಲ್‌ ಬಣ್ಣ ಹಚ್ಚಲಾಗಿದೆ” ಎಂದು ನ್ಯಾಯಾಲಯ ಹೇಳಿದ್ದು, ಹಾಲಿ ದೂರು ಕಾನೂನಿನ ದುರ್ಬಳಕೆ ಎಂದು ಪೀಠ ದಾಖಲಿಸಿದೆ ಎಂದು ವರದಿ ವಿವರಿಸಿದೆ.

“ಸಣ್ಣ ದುರ್ಗಪ್ಪ ಮತ್ತು ಐಐಎಸ್‌ಸಿ ಪ್ರತಿನಿಧಿಗಳು ರಾಜೀ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರನ್ನು ವಜಾಗೊಳಿಸಿದ್ದನ್ನು ರಾಜೀನಾಮೆಯನ್ನಾಗಿ ಪರಿವರ್ತಿಸಲಾಗಿತ್ತು. ವಿವಿಧ ಕಡೆ ಐಐಎಸ್‌ಸಿ ಪ್ರತಿನಿಧಿಗಳ ವಿರುದ್ಧ ದಾಖಲಿಸಿರುವ ದೂರುಗಳನ್ನು ಹಿಂಪಡೆಯಬೇಕು ಎಂಬುದು ಷರತ್ತುಗಳ ಪೈಕಿ ಒಂದಾಗಿತ್ತು. ರಾಜೀನಾಮೆ ಹಿನ್ನೆಲೆಯಲ್ಲಿ ಲಭ್ಯವಿರುವ ಸವಲತ್ತುಗಳನ್ನು ಪಡೆದ ಬಳಿಕವೂ ಸಣ್ಣ ದುರ್ಗಪ್ಪ ಅವರು ಐಐಎಸ್‌ಸಿ ಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ಮುಂದುವರಿಸಿದ್ದರು ಎಂಬುದನ್ನು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ. ಅಲ್ಲದೇ, ಸಣ್ಣ ದುರ್ಗಪ್ಪ ವಿರುದ್ಧ ಐಐಎಸ್‌ಸಿ ಪ್ರತಿನಿಧಿಗಳು ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಂದುವರಿಸಲು ಕ್ರಮಕೈಗೊಳ್ಳಬಹುದು” ಎಂದು ಆದೇಶಿಸಿದೆ ಎಂದು ತಿಳಿಸಿದೆ.

ದೂರಿನಲ್ಲಿ ಏನಿತ್ತು?: ಐಐಎಸ್‌ಸಿಯಲ್ಲಿ 2014ರಲ್ಲಿ ಹನಿಟ್ರ್ಯಾಪ್‌ ಮೂಲಕ ತನ್ನನ್ನು ಸೇವೆಯಿಂದ ವಜಾ ಮಾಡಿಸಲಾಗಿದೆ ಎಂದು ದುರ್ಗಪ್ಪ ದೂರಿದ್ದರು. ಅಲ್ಲದೇ, ಗೋಂವಿದನ್‌ ರಂಗರಾವ್‌, ಶ್ರೀಧರ್‌ ವಾರಿಯರ್‌, ಸೇನಾಪತಿ ಕ್ರಿಶ್‌ ಗೋಪಾಲಕೃಷ್ಣನ್‌, ಅನಿಲ್‌ ಕುಮಾರ್‌, ದೀಪ್ಸಿಕಾ ಚಕ್ರವರ್ತಿ, ನಮ್ರತಾ ಗುಂಡಯ್ಯ, ಡಾ. ನಿರ್ಮಲಾ, ಸಂಧ್ಯಾ ವಿಶ್ವೇಶ್ವರಯ್ಯ, ಕೆವಿಎಸ್‌ ಹರಿ, ದಾಸಪ್ಪ, ಪಿ ಬಾಲಚಂದ್ರ, ಪಿ ಬಲರಾಮ, ಅಂಜಲಿ ಕೆ ಕಾರಂಡೆ, ಹೇಮಲತಾ ಮ್ಹಿಷಿ, ಕೆ ಚಟ್ಟೋಪಾಧ್ಯಾಯ, ಪ್ರದೀಪ್‌ ಸಾವ್ಕಾರ್‌, ಅಭಿಲಾಷ್‌ ರಾಜು, ವಿಕ್ಟರ್‌ ಮನೋಹರನ್‌ ಅವರು 2008ರಿಂದ 2025ರವರೆಗೆ ತನ್ನ ಮೇಲೆ ಜಾತಿ ನಿಂದನೆ ಮಾಡಿ, ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು.

ಸೌಜನ್ಯ : barandbench.com

ಜಾತಿ ಗಣತಿ ವರದಿ ಪ್ರಶ್ನಿಸಿ ಅರ್ಜಿ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...