Homeಕರ್ನಾಟಕಇನ್ಫೋಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ಜಾತಿ ನಿಂದನೆ ಪ್ರಕರಣ...

ಇನ್ಫೋಸಿಸ್‌ ಸಹ ಸಂಸ್ಥಾಪಕ ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ಜಾತಿ ನಿಂದನೆ ಪ್ರಕರಣ ರದ್ದು

- Advertisement -
- Advertisement -

ಇನ್ಫೋಸಿಸ್‌ ಸಹ ಸಂಸ್ಥಾಪಕ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆಡಳಿತ ಮಂಡಳಿ ಅಧ್ಯಕ್ಷ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್‌ ರಂಗರಾಜನ್‌ ಸೇರಿ 16 ಮಂದಿಯ ವಿರುದ್ಧ ಜಾತಿ ನಿಂದನೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ ಎಂದು ವರದಿಯಾಗಿದೆ.

ವಿಶೇಷ ನ್ಯಾಯಾಲಯವು ಡಾ. ಡಿ ಸಣ್ಣ ದುರ್ಗಪ್ಪ ಅವರ ಖಾಸಗಿ ದೂರಿನ ಸಂಜ್ಞೇ ಪರಿಗಣಿಸಿರುವುದು ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸೇನಾಪತಿ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಗೋವಿಂದನ್‌ ರಂಗರಾಜನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್‌ ಚಂದನಗೌಡರ್‌ ಅವರ ಏಕಸದಸ್ಯ ಪೀಠವು ಪುರಸ್ಕರಿಸಿದೆ ಎಂದು barandbench.com ವರದಿ ಮಾಡಿದೆ.

“ಸಿವಿಲ್‌ ಪ್ರಕರಣಕ್ಕೆ ಕ್ರಿಮಿನಲ್‌ ಬಣ್ಣ ನೀಡಲಾಗಿದೆ ಎಂಬುದನ್ನು ಆಧರಿಸಿ ಈ ಹಿಂದೆ ದೂರುದಾರರು ದಾಖಲಿಸಿದ್ದ ಎರಡು ಕ್ರಿಮಿನಲ್‌ ದೂರುಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಹಾಲಿ ಪ್ರಕರಣವು ಅಂಥವೇ ಆರೋಪಗಳನ್ನು ಒಳಗೊಂಡಿದೆ. ದೂರುದಾರ ದುರ್ಗಪ್ಪ ಅವರನ್ನು ಸೇವೆಯಿಂದ ವಜಾಗೊಳಿಸಿರುವುದರಿಂದ ಅವರು ರಾಜೀನಾಮೆ ನೀಡಿದ್ದರು. ಇದಕ್ಕೆ ಪ್ರತೀಕಾರವಾಗಿ ಮೂರನೇ ದೂರು ನೀಡಿದ್ದಾರೆ. ಪಕ್ಷಕಾರರ ನಡುವಿನ ವಿವಾದವು ಸಿವಿಲ್‌ ಸ್ವರೂಪದ್ದಾಗಿದ್ದು, ಅದಕ್ಕೆ ಕ್ರಿಮಿನಲ್‌ ಬಣ್ಣ ಹಚ್ಚಲಾಗಿದೆ” ಎಂದು ನ್ಯಾಯಾಲಯ ಹೇಳಿದ್ದು, ಹಾಲಿ ದೂರು ಕಾನೂನಿನ ದುರ್ಬಳಕೆ ಎಂದು ಪೀಠ ದಾಖಲಿಸಿದೆ ಎಂದು ವರದಿ ವಿವರಿಸಿದೆ.

“ಸಣ್ಣ ದುರ್ಗಪ್ಪ ಮತ್ತು ಐಐಎಸ್‌ಸಿ ಪ್ರತಿನಿಧಿಗಳು ರಾಜೀ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರನ್ನು ವಜಾಗೊಳಿಸಿದ್ದನ್ನು ರಾಜೀನಾಮೆಯನ್ನಾಗಿ ಪರಿವರ್ತಿಸಲಾಗಿತ್ತು. ವಿವಿಧ ಕಡೆ ಐಐಎಸ್‌ಸಿ ಪ್ರತಿನಿಧಿಗಳ ವಿರುದ್ಧ ದಾಖಲಿಸಿರುವ ದೂರುಗಳನ್ನು ಹಿಂಪಡೆಯಬೇಕು ಎಂಬುದು ಷರತ್ತುಗಳ ಪೈಕಿ ಒಂದಾಗಿತ್ತು. ರಾಜೀನಾಮೆ ಹಿನ್ನೆಲೆಯಲ್ಲಿ ಲಭ್ಯವಿರುವ ಸವಲತ್ತುಗಳನ್ನು ಪಡೆದ ಬಳಿಕವೂ ಸಣ್ಣ ದುರ್ಗಪ್ಪ ಅವರು ಐಐಎಸ್‌ಸಿ ಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ಮುಂದುವರಿಸಿದ್ದರು ಎಂಬುದನ್ನು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ. ಅಲ್ಲದೇ, ಸಣ್ಣ ದುರ್ಗಪ್ಪ ವಿರುದ್ಧ ಐಐಎಸ್‌ಸಿ ಪ್ರತಿನಿಧಿಗಳು ಕ್ರಿಮಿನಲ್‌ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಮುಂದುವರಿಸಲು ಕ್ರಮಕೈಗೊಳ್ಳಬಹುದು” ಎಂದು ಆದೇಶಿಸಿದೆ ಎಂದು ತಿಳಿಸಿದೆ.

ದೂರಿನಲ್ಲಿ ಏನಿತ್ತು?: ಐಐಎಸ್‌ಸಿಯಲ್ಲಿ 2014ರಲ್ಲಿ ಹನಿಟ್ರ್ಯಾಪ್‌ ಮೂಲಕ ತನ್ನನ್ನು ಸೇವೆಯಿಂದ ವಜಾ ಮಾಡಿಸಲಾಗಿದೆ ಎಂದು ದುರ್ಗಪ್ಪ ದೂರಿದ್ದರು. ಅಲ್ಲದೇ, ಗೋಂವಿದನ್‌ ರಂಗರಾವ್‌, ಶ್ರೀಧರ್‌ ವಾರಿಯರ್‌, ಸೇನಾಪತಿ ಕ್ರಿಶ್‌ ಗೋಪಾಲಕೃಷ್ಣನ್‌, ಅನಿಲ್‌ ಕುಮಾರ್‌, ದೀಪ್ಸಿಕಾ ಚಕ್ರವರ್ತಿ, ನಮ್ರತಾ ಗುಂಡಯ್ಯ, ಡಾ. ನಿರ್ಮಲಾ, ಸಂಧ್ಯಾ ವಿಶ್ವೇಶ್ವರಯ್ಯ, ಕೆವಿಎಸ್‌ ಹರಿ, ದಾಸಪ್ಪ, ಪಿ ಬಾಲಚಂದ್ರ, ಪಿ ಬಲರಾಮ, ಅಂಜಲಿ ಕೆ ಕಾರಂಡೆ, ಹೇಮಲತಾ ಮ್ಹಿಷಿ, ಕೆ ಚಟ್ಟೋಪಾಧ್ಯಾಯ, ಪ್ರದೀಪ್‌ ಸಾವ್ಕಾರ್‌, ಅಭಿಲಾಷ್‌ ರಾಜು, ವಿಕ್ಟರ್‌ ಮನೋಹರನ್‌ ಅವರು 2008ರಿಂದ 2025ರವರೆಗೆ ತನ್ನ ಮೇಲೆ ಜಾತಿ ನಿಂದನೆ ಮಾಡಿ, ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು.

ಸೌಜನ್ಯ : barandbench.com

ಜಾತಿ ಗಣತಿ ವರದಿ ಪ್ರಶ್ನಿಸಿ ಅರ್ಜಿ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...