Homeಮುಖಪುಟಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ ವಿಸ್ತೃತ ಪೀಠಕ್ಕೆ ಶಿಫಾರಸು

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್ ವಿಸ್ತೃತ ಪೀಠಕ್ಕೆ ಶಿಫಾರಸು

- Advertisement -
- Advertisement -

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕುರಿತಾದ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ಪ್ರಕರಣದ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ಕರ್ನಾಟಕ ಹೈಕೋರ್ಟ್‌ ಶಿಫಾರಸ್ಸು ಮಾಡಿದೆ.

ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಅರ್ಜಿ ಹಾಗೂ ರಾಜ್ಯ ಸರ್ಕಾರದ ಕ್ರಮ ಮತ್ತು ಲೋಕಾಯುಕ್ತ ತನಿಖೆಗೆ ಒಪ್ಪಿಸಿರುವುದಕ್ಕೆ ತಡೆ ಕೋರಿ ಸಿಬಿಐ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ವಿಚಾರಣೆ ನಡೆಸಿತು.

ಯತ್ನಾಳ್‌ ಪರ ವಕೀಲ ವೆಂಕಟೇಶ್‌ ದಳವಾಯಿ, ಸಿಬಿಐ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌ ಮತ್ತು ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟ ವಾದ ಮಂಡಿಸಿದರು. ಒಂದು ತಾಸಿಗೂ ಹೆಚ್ಚು ಕಾಲ ವಾದ ಆಲಿಸಿದ ಪೀಠ, ಕರ್ನಾಟಕ ಹೈಕೋರ್ಟ್‌ ಕಾಯಿದೆ ಸೆಕ್ಷನ್‌ 8ರ ಪ್ರಕಾರ ತಮ್ಮ ಇಚ್ಛೆಯ ಪೀಠ ರಚಿಸಲು ಪ್ರಕರಣದ ದಾಖಲೆಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಮಂಡಿಸಬೇಕು. ಇದರಿಂದ ಏಕಕಾಲಕ್ಕೆ ಪ್ರಕರಣವು ಇತ್ಯರ್ಥವಾಗಲಿದೆ. ಮುಖ್ಯನ್ಯಾಯಮೂರ್ತಿಗಳಿಂದ ರಚಿಸಲ್ಪಟ್ಟ ಪೀಠವು ಯುದ್ದೋಪಾದಿಯಲ್ಲಿ ಪ್ರಕರಣವನ್ನು ನಿರ್ಧರಿಸಬೇಕು ಎಂಬುವುದಕ್ಕೆ ಉಭಯ ಪಕ್ಷಕಾರರ ಸಹಮತ ಇದೆ. ನ್ಯಾಯಾ ಪೀಠವೂ ಅದೇ ಅಭಿಪ್ರಾಯವನ್ನು ಹೊಂದಿದೆ ಎಂದು ಆದೇಶಿಸಿದೆ.

ವಿಸ್ತೃತ ಪೀಠ ಪ್ರಕರಣ ತೀರ್ಮಾನಿಸುವವರೆಗೆ ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂಬ ಸಿಬಿಐ ವಕೀಲರ ಕೋರಿಕೆ ಮತ್ತು ಸಿಬಿಐ ಸಹ ಯಾವುದೇ ಕ್ರಮಕ್ಕೆ ಮುಂದಾಗುವಂತಿಲ್ಲ ಎಂಬ ಅಡ್ವೊಕೇಟ್‌ ಜನರಲ್‌ ಮನವಿಯನ್ನು ನ್ಯಾಯಾಲಯವು ಆದೇಶದಲ್ಲಿ ದಾಖಲಿಸಿದೆ.

ರಾಜ್ಯ ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಯತ್ನಾಳ್ ಮತ್ತು ಸಿಬಿಐ ಎರಡೂ ಕಡೆಯವರು ಸಲ್ಲಿಸಿದ್ದ ಅರ್ಜಿಗಳನ್ನು ವಿರೋಧಿಸಿದ್ದು, ಎರಡೂ ಅರ್ಜಿಗಳ ಅರ್ಜಿದಾರರಿಗೆ ಅರ್ಜಿ ಸಲ್ಲಿಸುವ ಅಧಿಕಾರ ಇಲ್ಲ. 2013ರ ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಮೂರನೇ ವ್ಯಕ್ತಿಯು ಕ್ರಿಮಿನಲ್‌ ಪ್ರಕ್ರಿಯೆಯಲ್ಲಿ ಮೂಗು ತೂರಿಸುವಂತಿಲ್ಲ” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್ ಪರ ವಕೀಲ ದಳವಾಯಿ ಮತ್ತು ಸಿಬಿಐ ಪರ ವಕೀಲ ಪ್ರಸನ್ನ ಕುಮಾರ್‌ ಅವರು “ದೆಹಲಿ ವಿಶೇಷ ಪೊಲೀಸ್‌ ಸ್ಥಾಪನಾ ಕಾಯಿದೆ (ಡಿಎಸ್‌ಪಿಇ) ಸೆಕ್ಷನ್‌ 6ರ ಅಡಿ ಒಮ್ಮೆ ರಾಜ್ಯ ಸರ್ಕಾರವು ಸಿಬಿಐ ತನಿಖೆಗೆ ಅನುಮತಿಸಿದ ಮೇಲೆ, ಅದನ್ನು ಹಿಂಪಡೆಯಲಾಗದು. ಯಾವುದೇ ಸಂದರ್ಭದಲ್ಲೂ ಪೂರ್ವಾನ್ವಯವಾಗುವಂತೆ ಆದೇಶ ಹಿಂಪಡೆಯಲಾಗದು. ಸಿಬಿಐ ತನಿಖೆ ಮುಂದುವರಿಸಲು, ಕಾನೂನಿನ ಪ್ರಕಾರ ಅಂತಿಮ ವರದಿ ಸಲ್ಲಿಸಲು ಅನುಮತಿಸಬೇಕು” ಎಂದು ಕೋರಿದರು.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಡಿಕೆ ಶಿವಕುಮಾರ್ ವಿರುದ್ದ ದಾಖಲಿಸಿದ್ದ ಪ್ರಕರಣದ ತನಿಖೆ ನಡೆಸಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಇದನ್ನು 2023ರ ನವೆಂಬರ್‌ 28ರಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಹಿಂಪಡೆದಿತ್ತು.

ಸರ್ಕಾರ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಬೆನ್ನಲ್ಲೇ ಡಿ ಕೆ ಶಿವಕುಮಾರ್‌ ಅವರು ಮೇಲ್ಮನವಿ ಹಿಂಪಡೆದಿದ್ದರು. ಈ ಮಧ್ಯೆ, ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರವು 2023ರ ಡಿಸೆಂಬರ್‌ 24 ಮತ್ತು 26ರ ತಿದ್ದುಪಡಿ ಆದೇಶ ಮೂಲಕ ಲೋಕಾಯುಕ್ತ ಪೊಲೀಸರಿಗೆ ವಹಿಸಿದೆ. ಇದನ್ನು ಸಿಬಿಐ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ಇದನ್ನೂ ಓದಿ : ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...