Homeಕರ್ನಾಟಕಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: FIR ರದ್ದತಿ ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ಪ್ರಧಾನಿ ಮೋದಿ ಅವರ ಭರವಸೆಯ 'ನಾ ಖೌಂಗಾ, ನಾ ಖಾನೆ ದುಂಗಾ (ನಾನು ಭ್ರಷ್ಟಾಚಾರದಲ್ಲಿ ಪಾಲ್ಗೊಳ್ಳುವುದಿಲ್ಲ, ಯಾರನ್ನೂ ಹಾಗೆ ಮಾಡಲು ನಾನು ಬಿಡುವುದಿಲ್ಲ) ಎಂಬ ಹೇಳಿಕೆಗೆ ಇದು ಪರೀಕ್ಷೆಯ ಕಾಲ'- ರಣದೀಪ್ ಸಿಂಗ್ ಸುರ್ಜೆವಾಲ

- Advertisement -
- Advertisement -

ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ, ತಮ್ಮ ವಿರುದ್ಧ ದಾಖಲಾಗಿರುವ ಭ್ರಷ್ಟಾರದ ಪ್ರಕರಣಗಳನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಮನವಿಯನ್ನು ಇಂದು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಬೆಂಗಳೂರಿನ ಬೆಳ್ಳಂದೂರು ಪ್ರದೇಶದಲ್ಲಿ ಅಕ್ರಮವಾಗಿ ಭೂಮಿಯ ಡಿ-ನೋಟಿಫೈ ಮಾಡಲಾಗಿದೆ ಎಂಬ ಆರೋಪದ ಮೇಲೆ ಯಡಿಯೂರಪ್ಪನವರ ವಿರುದ್ಧ ಪ್ರಕರಣ ದಾಖಲಾಗಿತ್ತು.

2013 ರಲ್ಲಿ ಆರ್‌ಟಿಐ ಕಾರ್ಯಕರ್ತರಾದ ವಾಸುದೇವ್ ರೆಡ್ಡಿ ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ 2015 ರ ಫೆಬ್ರವರಿಯಲ್ಲಿ ಪ್ರಕರಣ ದಾಖಲಾಗಿತ್ತು. 2019 ರಲ್ಲಿ ತಮ್ಮ ಮೇಲೆ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ’ದೆಹಲಿ ಕ್ರಿಕೆಟ್ ಮಂಡಳಿ’ಗೆ ರಾಜಿನಾಮೆ ನೀಡಿದ ಕ್ರಿಕೆಟ್ ದಂತಕತೆ ಬಿಷನ್ ಸಿಂಗ್ ಬೇಡಿ!

ಕರ್ನಾಟಕದ ಪ್ರಸ್ತುತ ಮುಖ್ಯಮಂತ್ರಿಯಾಗಿರುವ ಬಿ.ಎಸ್.ಯಡಿಯುರಪ್ಪ 2006 ರಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದರು. ಈ ಅಧಿಕಾರಾವಧಿಯಲ್ಲಿ ಅಕ್ರಮವಾಗಿ ಭೂಮಿಯ ಡಿ-ನೋಟಿಫೈ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಯಡಿಯುರಪ್ಪ ಅವರ ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ, “ಈ ಪ್ರಕರಣದಲ್ಲಿ ಅಪರಾಧ ನಡೆದಿರುವುದು ಮೇಲು ನೋಟಕ್ಕೆ ಕಂಡುಬರುತ್ತದೆ. ಹಾಗಾಗಿ ಇದನ್ನು ತನಿಖೆ ನಡೆಸಬೇಕಾಗಿದೆ” ಎಂದು ಹೇಳಿದ್ದಾರೆ.

ಹೈಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ಮೇಲೆ ವಾಗ್ದಾಳಿ ನಡೆಸಿ, “ಬಿಜೆಪಿಯ ಹೈಕಮಾಂಡ್ ಯಡಿಯೂರಪ್ಪನವರ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಂಗಾಳದ 9.5 ಲಕ್ಷ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ 10 ಸಾವಿರ ಜಮೆ- ಮಮತಾ ಬ್ಯಾನರ್ಜಿ

ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಮತ್ತು ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಟ್ವೀಟ್ ಮಾಡಿ, “ಇಂತಹ ದೊಡ್ಡ ದೋಷಾರೋಪಣೆಯ ನಂತರ ಅಧಿಕಾರದಲ್ಲಿ ಮುಂದುವರಿಯಲು ಸಿಎಂ ಯಡಿಯೂರಪ್ಪ ಅವರಿಗೆ ಯಾವ ಹಕ್ಕಿದೆ? ನ್ಯಾಯಯುತ ತನಿಖೆ ಮತ್ತು ತಾರ್ಕಿಕ ತೀರ್ಮಾನಕ್ಕಾಗಿ, ಸಿಎಂ ವಿಳಂಬವಿಲ್ಲದೆ ಹುದ್ದೆ ತ್ಯಜಿಸಬೇಕು. ಪ್ರಧಾನಿ ಮೋದಿ ಅವರ ಭರವಸೆಯ ‘ನಾ ಖೌಂಗಾ, ನಾ ಖಾನೆ ದುಂಗಾ (ನಾನು ಭ್ರಷ್ಟಾಚಾರದಲ್ಲಿ ಪಾಲ್ಗೊಳ್ಳುವುದಿಲ್ಲ, ಯಾರನ್ನೂ ಹಾಗೆ ಮಾಡಲು ನಾನು ಬಿಡುವುದಿಲ್ಲ) ಎಂಬ ಹೇಳಿಕೆಗೆ ಇದು ಪರೀಕ್ಷೆಯ ಕಾಲ” ಎಂದು ವಾಗ್ದಾಳಿ ನಡೆಸಿದ್ದಾರೆ.


ಇದನ್ನೂ ಓದಿ: ಆಕ್ಷೇಪಾರ್ಹ ಕಾರ್ಯಕ್ರಮ: ರಿಪಬ್ಲಿಕ್ ಟಿವಿಗೆ 20,000 ಪೌಂಡ್ ದಂಡ ವಿಧಿಸಿದ ಬ್ರಿಟನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...