Homeಕರ್ನಾಟಕಟ್ರಾನ್ಸ್‌ಜೆಂಡರ್ ಸಮೀಕ್ಷೆ: 'ಸ್ಟ್ರಿಪ್ ಆ್ಯಂಡ್ ಸರ್ಚ್ʼ ವಿಧಾನಕ್ಕೆ ಹೈಕೋರ್ಟ್ ತಡೆ

ಟ್ರಾನ್ಸ್‌ಜೆಂಡರ್ ಸಮೀಕ್ಷೆ: ‘ಸ್ಟ್ರಿಪ್ ಆ್ಯಂಡ್ ಸರ್ಚ್ʼ ವಿಧಾನಕ್ಕೆ ಹೈಕೋರ್ಟ್ ತಡೆ

- Advertisement -
- Advertisement -

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯದಲ್ಲಿ ಹಮ್ಮಿಕೊಂಡಿರುವ ಟ್ರಾನ್ಸ್‌ಜೆಂಡರ್ ಸಮೀಕ್ಷೆಯಯಲ್ಲಿ ʼಸ್ಟ್ರಿಪ್ ಆ್ಯಂಡ್ ಸರ್ಚ್ʼ (ಬಟ್ಟೆ ತೆಗೆಸಿ ಶೋಧಿಸುವ) ವಿಧಾನಕ್ಕೆ ಹೈಕೋರ್ಟ್ ಬುಧವಾರ (ಅ.15) ತಡೆ ನೀಡಿದೆ.

ಸೆಪ್ಟೆಂಬರ್ 15ರಂದು ಪ್ರಾರಂಭವಾದ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಬೇಕು, ಎಲ್ಲೂ ಬಹಿರಂಗಪಡಿಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರ ವಿಭಾಗೀಯ ಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ.

‘ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ’ನಡೆಸಲು ರಾಜ್ಯ ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸುವಂತೆ ಕೋರಿ ಅನಿತಾ ಹ್ಯುಮಾನಿಟೇರಿಯನ್ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಸರ್ಕಾರದ ಸಮೀಕ್ಷೆ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ 2019 ಹಾಗೂ ಸಂವಿಧಾನದ 14 ಮತ್ತು 21ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

“ಆಸ್ಪತ್ರೆಗಳಲ್ಲಿ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳನ್ನು ವಿವಸ್ತ್ರಗೊಳಿಸಿ ಪರಿಶೀಲನೆ ಮಾಡಲಾಗುತ್ತಿದೆ. ಇದನ್ನು ಮಾಡುವವರು ಟ್ರಾನ್ಸ್‌ಜೆಂಡರ್ ಆದರೂ, ಅವರು ಲಿಂಗ ಗುರುತು ಸರಿಯಾಗಿ ಹೇಳಿಕೊಳ್ಳದವರು ಆಗಿರಬಹುದು. ಇದು ಟ್ರಾನ್ಸ್‌ಜೆಂಡರ್ ಜನರಿಗೆ ಅಪಮಾನ ಮತ್ತು ಖಾಸಗಿ ಭಾವನೆಗೆ ಧಕ್ಕೆ ತರುತ್ತದೆ. ಟ್ರಾನ್ಸ್‌ಜೆಂಡರ್‌ಗಳಿಗೆ ಸರ್ಕಾರ ಈಗಾಗಲೇ ಗುರುತಿನ ಚೀಟಿಗಳನ್ನು ನೀಡಿದೆ. ಇದರಿಂದ ಅವರ ಗುರುತು ಸುಲಭವಾಗಿ ಪತ್ತೆ ಮಾಡಬಹುದು. ಆದ್ದರಿಂದ, ಹೊಸ ಸಮೀಕ್ಷೆಗೆ ಮತ್ತೆ ಇಂತಹ ತಪಾಸಣೆ ಮಾಡುವ ಅಗತ್ಯವೇ ಇಲ್ಲ” ಎಂದು ಅನಿತಾ ಫೌಂಡೇಶನ್ ಪರ ವಕೀಲರು ವಾದಿಸಿದ್ದರು.

ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡಿರುವ ಪೀಠ, ಮುಂದಿನ ವಿಚಾರಣೆಯ ದಿನಾಂಕವಾದ ಡಿಸೆಂಬರ್ 5ರೊಳಗೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸಮೀಕ್ಷೆಯ ಸಮಯದಲ್ಲಿ ಸಂಗ್ರಹಿಸಿದ ಮಾಹಿತಿಯ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ವಿಧಾನವನ್ನು ಸ್ಪಷ್ಟವಾಗಿ ವಿವರಿಸುವ ಅಫಿಡವಿಟ್ ಅನ್ನು 3 ದಿನಗಳಲ್ಲಿ ಸಲ್ಲಿಸುವಂತೆ ನ್ಯಾಯಾಲಯವು ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಿದೆ.

“ಟ್ರಾನ್ಸ್‌ಜೆಂಡರ್ ಮತ್ತು ಲಿಂಗ ವೈವಿಧ್ಯ ಹೊಂದಿರುವ (ಜೆಂಡರ್ ಡೈವರ್ಸ್) ಎಲ್ಲ ವ್ಯಕ್ತಿಗಳಿಗೆ ಪರಿಹಾರ ಮತ್ತು ಪುನರ್ವಸತಿ ನಿಧಿ (ಕಾಂಪೆನ್ಸೇಶನ್ ಮತ್ತು ರಿಹ್ಯಾಬಿಲಿಟೇಶನ್ ಫಂಡ್) ಸ್ಥಾಪಿಸುವಂತೆ ಹಾಗೂ, ಈ ನಿಧಿಯನ್ನು ಸಮೀಕ್ಷೆ ವೇಳೆ ಬಲವಂತದ ಗುರುತು ಪರಿಶೀಲನೆ/ಸ್ಟ್ರಿಪ್ ಚೆಕಿಂಗ್ (ಬಲಪೂರ್ವಕ ದೇಹ ಪರಿಶೀಲನೆ) ಅಥವಾ ಇತರ ಅಪಮಾನದ ರೂಪಗಳಿಗೆ ಒಳಗಾದವರಿಗೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

“ಕಾನೂನುಬಾಹಿರ, ಆಕ್ರಮಣಕಾರಿ ಮತ್ತು ಅಸಂವಿಧಾನಿಕ ಸಮೀಕ್ಷೆ ಪ್ರಕ್ರಿಯೆ”ಯನ್ನು ಕೈಗೊಂಡಿದ್ದಕ್ಕಾಗಿ ರಾಜ್ಯ ಸರ್ಕಾರ ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ಅಂತಹ ಕ್ರಮಗಳು ಪುನರಾವರ್ತನೆಯಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅಲ್ಲದೆ, ಆಕ್ಷೇಪಾರ್ಹ ಸಮೀಕ್ಷೆಯನ್ನು ರೂಪಿಸಿದ ಮತ್ತು ಕಾರ್ಯಗತಗೊಳಿಸಿದ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹೊಣೆಗಾರಿಯನ್ನು ಹೊರಿಸುವಂತೆ ಕೋರಲಾಗಿದೆ.

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಕಲ್ಯಾಣಕ್ಕಾಗಿ ಭವಿಷ್ಯದಲ್ಲಿ ಯಾವುದೇ ನೀತಿ ಅಥವಾ ಯೋಜನೆಯನ್ನು ರೂಪಿಸುವುದು ಮತ್ತು ಜಾರಿಗೊಳಿಸುವುದಕ್ಕೆ ಮುನ್ನ ಟ್ರಾನ್ಸ್‌ಜೆಂಡರ್ ಮತ್ತು LGBTQIA ಸಮುದಾಯದ ಪ್ರತಿನಿಧಿಗಳೊಂದಿಗೆ ಸರಿಯಾದ ಸಮಾಲೋಚನೆ ನಡೆಸಬೇಕು ಮತ್ತು ಆ ನೀತಿ, ಯೋಜನೆಗಳು ಸುಪ್ರೀಂ ಕೋರ್ಟ್‌ನ NALSA v. Union of India ತೀರ್ಪು ಮತ್ತು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ 2019ರ ಸೆಕ್ಷನ್ 4ಕ್ಕೆ ಸಮ್ಮತವಾಗಿರಬೇಕು ಎಂದು ಆದೇಶ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...