Homeಕರ್ನಾಟಕಟ್ರಾನ್ಸ್‌ಜೆಂಡರ್ ಸಮೀಕ್ಷೆ: 'ಸ್ಟ್ರಿಪ್ ಆ್ಯಂಡ್ ಸರ್ಚ್ʼ ವಿಧಾನಕ್ಕೆ ಹೈಕೋರ್ಟ್ ತಡೆ

ಟ್ರಾನ್ಸ್‌ಜೆಂಡರ್ ಸಮೀಕ್ಷೆ: ‘ಸ್ಟ್ರಿಪ್ ಆ್ಯಂಡ್ ಸರ್ಚ್ʼ ವಿಧಾನಕ್ಕೆ ಹೈಕೋರ್ಟ್ ತಡೆ

- Advertisement -
- Advertisement -

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯದಲ್ಲಿ ಹಮ್ಮಿಕೊಂಡಿರುವ ಟ್ರಾನ್ಸ್‌ಜೆಂಡರ್ ಸಮೀಕ್ಷೆಯಯಲ್ಲಿ ʼಸ್ಟ್ರಿಪ್ ಆ್ಯಂಡ್ ಸರ್ಚ್ʼ (ಬಟ್ಟೆ ತೆಗೆಸಿ ಶೋಧಿಸುವ) ವಿಧಾನಕ್ಕೆ ಹೈಕೋರ್ಟ್ ಬುಧವಾರ (ಅ.15) ತಡೆ ನೀಡಿದೆ.

ಸೆಪ್ಟೆಂಬರ್ 15ರಂದು ಪ್ರಾರಂಭವಾದ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಬೇಕು, ಎಲ್ಲೂ ಬಹಿರಂಗಪಡಿಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರ ವಿಭಾಗೀಯ ಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ.

‘ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ’ನಡೆಸಲು ರಾಜ್ಯ ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸುವಂತೆ ಕೋರಿ ಅನಿತಾ ಹ್ಯುಮಾನಿಟೇರಿಯನ್ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಸರ್ಕಾರದ ಸಮೀಕ್ಷೆ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ 2019 ಹಾಗೂ ಸಂವಿಧಾನದ 14 ಮತ್ತು 21ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

“ಆಸ್ಪತ್ರೆಗಳಲ್ಲಿ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳನ್ನು ವಿವಸ್ತ್ರಗೊಳಿಸಿ ಪರಿಶೀಲನೆ ಮಾಡಲಾಗುತ್ತಿದೆ. ಇದನ್ನು ಮಾಡುವವರು ಟ್ರಾನ್ಸ್‌ಜೆಂಡರ್ ಆದರೂ, ಅವರು ಲಿಂಗ ಗುರುತು ಸರಿಯಾಗಿ ಹೇಳಿಕೊಳ್ಳದವರು ಆಗಿರಬಹುದು. ಇದು ಟ್ರಾನ್ಸ್‌ಜೆಂಡರ್ ಜನರಿಗೆ ಅಪಮಾನ ಮತ್ತು ಖಾಸಗಿ ಭಾವನೆಗೆ ಧಕ್ಕೆ ತರುತ್ತದೆ. ಟ್ರಾನ್ಸ್‌ಜೆಂಡರ್‌ಗಳಿಗೆ ಸರ್ಕಾರ ಈಗಾಗಲೇ ಗುರುತಿನ ಚೀಟಿಗಳನ್ನು ನೀಡಿದೆ. ಇದರಿಂದ ಅವರ ಗುರುತು ಸುಲಭವಾಗಿ ಪತ್ತೆ ಮಾಡಬಹುದು. ಆದ್ದರಿಂದ, ಹೊಸ ಸಮೀಕ್ಷೆಗೆ ಮತ್ತೆ ಇಂತಹ ತಪಾಸಣೆ ಮಾಡುವ ಅಗತ್ಯವೇ ಇಲ್ಲ” ಎಂದು ಅನಿತಾ ಫೌಂಡೇಶನ್ ಪರ ವಕೀಲರು ವಾದಿಸಿದ್ದರು.

ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡಿರುವ ಪೀಠ, ಮುಂದಿನ ವಿಚಾರಣೆಯ ದಿನಾಂಕವಾದ ಡಿಸೆಂಬರ್ 5ರೊಳಗೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸಮೀಕ್ಷೆಯ ಸಮಯದಲ್ಲಿ ಸಂಗ್ರಹಿಸಿದ ಮಾಹಿತಿಯ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ವಿಧಾನವನ್ನು ಸ್ಪಷ್ಟವಾಗಿ ವಿವರಿಸುವ ಅಫಿಡವಿಟ್ ಅನ್ನು 3 ದಿನಗಳಲ್ಲಿ ಸಲ್ಲಿಸುವಂತೆ ನ್ಯಾಯಾಲಯವು ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಿದೆ.

“ಟ್ರಾನ್ಸ್‌ಜೆಂಡರ್ ಮತ್ತು ಲಿಂಗ ವೈವಿಧ್ಯ ಹೊಂದಿರುವ (ಜೆಂಡರ್ ಡೈವರ್ಸ್) ಎಲ್ಲ ವ್ಯಕ್ತಿಗಳಿಗೆ ಪರಿಹಾರ ಮತ್ತು ಪುನರ್ವಸತಿ ನಿಧಿ (ಕಾಂಪೆನ್ಸೇಶನ್ ಮತ್ತು ರಿಹ್ಯಾಬಿಲಿಟೇಶನ್ ಫಂಡ್) ಸ್ಥಾಪಿಸುವಂತೆ ಹಾಗೂ, ಈ ನಿಧಿಯನ್ನು ಸಮೀಕ್ಷೆ ವೇಳೆ ಬಲವಂತದ ಗುರುತು ಪರಿಶೀಲನೆ/ಸ್ಟ್ರಿಪ್ ಚೆಕಿಂಗ್ (ಬಲಪೂರ್ವಕ ದೇಹ ಪರಿಶೀಲನೆ) ಅಥವಾ ಇತರ ಅಪಮಾನದ ರೂಪಗಳಿಗೆ ಒಳಗಾದವರಿಗೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

“ಕಾನೂನುಬಾಹಿರ, ಆಕ್ರಮಣಕಾರಿ ಮತ್ತು ಅಸಂವಿಧಾನಿಕ ಸಮೀಕ್ಷೆ ಪ್ರಕ್ರಿಯೆ”ಯನ್ನು ಕೈಗೊಂಡಿದ್ದಕ್ಕಾಗಿ ರಾಜ್ಯ ಸರ್ಕಾರ ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ಅಂತಹ ಕ್ರಮಗಳು ಪುನರಾವರ್ತನೆಯಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅಲ್ಲದೆ, ಆಕ್ಷೇಪಾರ್ಹ ಸಮೀಕ್ಷೆಯನ್ನು ರೂಪಿಸಿದ ಮತ್ತು ಕಾರ್ಯಗತಗೊಳಿಸಿದ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹೊಣೆಗಾರಿಯನ್ನು ಹೊರಿಸುವಂತೆ ಕೋರಲಾಗಿದೆ.

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಕಲ್ಯಾಣಕ್ಕಾಗಿ ಭವಿಷ್ಯದಲ್ಲಿ ಯಾವುದೇ ನೀತಿ ಅಥವಾ ಯೋಜನೆಯನ್ನು ರೂಪಿಸುವುದು ಮತ್ತು ಜಾರಿಗೊಳಿಸುವುದಕ್ಕೆ ಮುನ್ನ ಟ್ರಾನ್ಸ್‌ಜೆಂಡರ್ ಮತ್ತು LGBTQIA ಸಮುದಾಯದ ಪ್ರತಿನಿಧಿಗಳೊಂದಿಗೆ ಸರಿಯಾದ ಸಮಾಲೋಚನೆ ನಡೆಸಬೇಕು ಮತ್ತು ಆ ನೀತಿ, ಯೋಜನೆಗಳು ಸುಪ್ರೀಂ ಕೋರ್ಟ್‌ನ NALSA v. Union of India ತೀರ್ಪು ಮತ್ತು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ 2019ರ ಸೆಕ್ಷನ್ 4ಕ್ಕೆ ಸಮ್ಮತವಾಗಿರಬೇಕು ಎಂದು ಆದೇಶ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...