Homeಕರ್ನಾಟಕಟ್ರಾನ್ಸ್‌ಜೆಂಡರ್ ಸಮೀಕ್ಷೆ: 'ಸ್ಟ್ರಿಪ್ ಆ್ಯಂಡ್ ಸರ್ಚ್ʼ ವಿಧಾನಕ್ಕೆ ಹೈಕೋರ್ಟ್ ತಡೆ

ಟ್ರಾನ್ಸ್‌ಜೆಂಡರ್ ಸಮೀಕ್ಷೆ: ‘ಸ್ಟ್ರಿಪ್ ಆ್ಯಂಡ್ ಸರ್ಚ್ʼ ವಿಧಾನಕ್ಕೆ ಹೈಕೋರ್ಟ್ ತಡೆ

- Advertisement -
- Advertisement -

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯದಲ್ಲಿ ಹಮ್ಮಿಕೊಂಡಿರುವ ಟ್ರಾನ್ಸ್‌ಜೆಂಡರ್ ಸಮೀಕ್ಷೆಯಯಲ್ಲಿ ʼಸ್ಟ್ರಿಪ್ ಆ್ಯಂಡ್ ಸರ್ಚ್ʼ (ಬಟ್ಟೆ ತೆಗೆಸಿ ಶೋಧಿಸುವ) ವಿಧಾನಕ್ಕೆ ಹೈಕೋರ್ಟ್ ಬುಧವಾರ (ಅ.15) ತಡೆ ನೀಡಿದೆ.

ಸೆಪ್ಟೆಂಬರ್ 15ರಂದು ಪ್ರಾರಂಭವಾದ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಬೇಕು, ಎಲ್ಲೂ ಬಹಿರಂಗಪಡಿಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರ ವಿಭಾಗೀಯ ಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ.

‘ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ’ನಡೆಸಲು ರಾಜ್ಯ ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸುವಂತೆ ಕೋರಿ ಅನಿತಾ ಹ್ಯುಮಾನಿಟೇರಿಯನ್ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಸರ್ಕಾರದ ಸಮೀಕ್ಷೆ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ 2019 ಹಾಗೂ ಸಂವಿಧಾನದ 14 ಮತ್ತು 21ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

“ಆಸ್ಪತ್ರೆಗಳಲ್ಲಿ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳನ್ನು ವಿವಸ್ತ್ರಗೊಳಿಸಿ ಪರಿಶೀಲನೆ ಮಾಡಲಾಗುತ್ತಿದೆ. ಇದನ್ನು ಮಾಡುವವರು ಟ್ರಾನ್ಸ್‌ಜೆಂಡರ್ ಆದರೂ, ಅವರು ಲಿಂಗ ಗುರುತು ಸರಿಯಾಗಿ ಹೇಳಿಕೊಳ್ಳದವರು ಆಗಿರಬಹುದು. ಇದು ಟ್ರಾನ್ಸ್‌ಜೆಂಡರ್ ಜನರಿಗೆ ಅಪಮಾನ ಮತ್ತು ಖಾಸಗಿ ಭಾವನೆಗೆ ಧಕ್ಕೆ ತರುತ್ತದೆ. ಟ್ರಾನ್ಸ್‌ಜೆಂಡರ್‌ಗಳಿಗೆ ಸರ್ಕಾರ ಈಗಾಗಲೇ ಗುರುತಿನ ಚೀಟಿಗಳನ್ನು ನೀಡಿದೆ. ಇದರಿಂದ ಅವರ ಗುರುತು ಸುಲಭವಾಗಿ ಪತ್ತೆ ಮಾಡಬಹುದು. ಆದ್ದರಿಂದ, ಹೊಸ ಸಮೀಕ್ಷೆಗೆ ಮತ್ತೆ ಇಂತಹ ತಪಾಸಣೆ ಮಾಡುವ ಅಗತ್ಯವೇ ಇಲ್ಲ” ಎಂದು ಅನಿತಾ ಫೌಂಡೇಶನ್ ಪರ ವಕೀಲರು ವಾದಿಸಿದ್ದರು.

ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡಿರುವ ಪೀಠ, ಮುಂದಿನ ವಿಚಾರಣೆಯ ದಿನಾಂಕವಾದ ಡಿಸೆಂಬರ್ 5ರೊಳಗೆ ತನ್ನ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸಮೀಕ್ಷೆಯ ಸಮಯದಲ್ಲಿ ಸಂಗ್ರಹಿಸಿದ ಮಾಹಿತಿಯ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ವಿಧಾನವನ್ನು ಸ್ಪಷ್ಟವಾಗಿ ವಿವರಿಸುವ ಅಫಿಡವಿಟ್ ಅನ್ನು 3 ದಿನಗಳಲ್ಲಿ ಸಲ್ಲಿಸುವಂತೆ ನ್ಯಾಯಾಲಯವು ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಿದೆ.

“ಟ್ರಾನ್ಸ್‌ಜೆಂಡರ್ ಮತ್ತು ಲಿಂಗ ವೈವಿಧ್ಯ ಹೊಂದಿರುವ (ಜೆಂಡರ್ ಡೈವರ್ಸ್) ಎಲ್ಲ ವ್ಯಕ್ತಿಗಳಿಗೆ ಪರಿಹಾರ ಮತ್ತು ಪುನರ್ವಸತಿ ನಿಧಿ (ಕಾಂಪೆನ್ಸೇಶನ್ ಮತ್ತು ರಿಹ್ಯಾಬಿಲಿಟೇಶನ್ ಫಂಡ್) ಸ್ಥಾಪಿಸುವಂತೆ ಹಾಗೂ, ಈ ನಿಧಿಯನ್ನು ಸಮೀಕ್ಷೆ ವೇಳೆ ಬಲವಂತದ ಗುರುತು ಪರಿಶೀಲನೆ/ಸ್ಟ್ರಿಪ್ ಚೆಕಿಂಗ್ (ಬಲಪೂರ್ವಕ ದೇಹ ಪರಿಶೀಲನೆ) ಅಥವಾ ಇತರ ಅಪಮಾನದ ರೂಪಗಳಿಗೆ ಒಳಗಾದವರಿಗೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

“ಕಾನೂನುಬಾಹಿರ, ಆಕ್ರಮಣಕಾರಿ ಮತ್ತು ಅಸಂವಿಧಾನಿಕ ಸಮೀಕ್ಷೆ ಪ್ರಕ್ರಿಯೆ”ಯನ್ನು ಕೈಗೊಂಡಿದ್ದಕ್ಕಾಗಿ ರಾಜ್ಯ ಸರ್ಕಾರ ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ಅಂತಹ ಕ್ರಮಗಳು ಪುನರಾವರ್ತನೆಯಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅಲ್ಲದೆ, ಆಕ್ಷೇಪಾರ್ಹ ಸಮೀಕ್ಷೆಯನ್ನು ರೂಪಿಸಿದ ಮತ್ತು ಕಾರ್ಯಗತಗೊಳಿಸಿದ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹೊಣೆಗಾರಿಯನ್ನು ಹೊರಿಸುವಂತೆ ಕೋರಲಾಗಿದೆ.

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಕಲ್ಯಾಣಕ್ಕಾಗಿ ಭವಿಷ್ಯದಲ್ಲಿ ಯಾವುದೇ ನೀತಿ ಅಥವಾ ಯೋಜನೆಯನ್ನು ರೂಪಿಸುವುದು ಮತ್ತು ಜಾರಿಗೊಳಿಸುವುದಕ್ಕೆ ಮುನ್ನ ಟ್ರಾನ್ಸ್‌ಜೆಂಡರ್ ಮತ್ತು LGBTQIA ಸಮುದಾಯದ ಪ್ರತಿನಿಧಿಗಳೊಂದಿಗೆ ಸರಿಯಾದ ಸಮಾಲೋಚನೆ ನಡೆಸಬೇಕು ಮತ್ತು ಆ ನೀತಿ, ಯೋಜನೆಗಳು ಸುಪ್ರೀಂ ಕೋರ್ಟ್‌ನ NALSA v. Union of India ತೀರ್ಪು ಮತ್ತು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ 2019ರ ಸೆಕ್ಷನ್ 4ಕ್ಕೆ ಸಮ್ಮತವಾಗಿರಬೇಕು ಎಂದು ಆದೇಶ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...