Homeಕರ್ನಾಟಕಹಿಜಾಬ್‌ ತೀರ್ಪಿನಲ್ಲಿ ಅಗತ್ಯ ಸಂಗತಿಗಳನ್ನು ಬದಿಗಿಟ್ಟ ಹೈಕೋರ್ಟ್: ವಿದ್ಯಾರ್ಥಿ ಸಂಘಟನೆಗಳ ಆಕ್ಷೇಪ

ಹಿಜಾಬ್‌ ತೀರ್ಪಿನಲ್ಲಿ ಅಗತ್ಯ ಸಂಗತಿಗಳನ್ನು ಬದಿಗಿಟ್ಟ ಹೈಕೋರ್ಟ್: ವಿದ್ಯಾರ್ಥಿ ಸಂಘಟನೆಗಳ ಆಕ್ಷೇಪ

- Advertisement -
- Advertisement -

ಹಿಜಾಬ್‌ ಕುರಿತ ಕರ್ನಾಟಕ ಹೈಕೋರ್ಟ್‌ ತೀರ್ಪು ತನ್ನ ಮುಂದಿರುವ ಅಗತ್ಯ ಪ್ರಶ್ನೆಗಳನ್ನು ಬದಿಗಿಟ್ಟಿದೆ ಎಂದು ಬೆಂಗಳೂರಿನ ವಿದ್ಯಾರ್ಥಿ ಒಕ್ಕೂಟ ಆಕ್ಷೇಪ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿದೆ.

ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌), ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ (ಎಸ್‌ಐಒ), ಸ್ಟೂಡೆಂಟ್ಸ್ ಕಲೆಕ್ಟೀವ್ ಬೆಂಗಳೂರು, ದಲಿತ ವಿದ್ಯಾರ್ಥಿ ಪರಿಷತ್‌ (ಡಿವಿಪಿ), ಸ್ಟೂಡೆಂಟ್ಸ್ ಕ್ರಿಶ್ಚಿಯನ್ ಮೂವ್‌ಮೆಂಟ್‌ ಆಫ್ ಇಂಡಿಯಾ (ಎಸ್‌ಸಿಎಂಐ), ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ (ಜಿಐಒ) ಸಂಘಟನೆಗಳು ಈ ಒಕ್ಕೂಟದಲ್ಲಿದ್ದು, ಹೈಕೋರ್ಟ್ ತೀರ್ಪಿನ ಕುರಿತು ಆಕ್ಷೇಪಗಳನ್ನು ಎತ್ತಿ‌ವೆ.

ತೀರ್ಪು ತನ್ನ ಹೆಚ್ಚಿನ ಸಮಯ ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಅಭ್ಯಾಸವಲ್ಲ ಎಂದು ವಾದಿಸುತ್ತದೆ. ಆದರೆ ತೀರ್ಪು ಅದಕ್ಕಿಂತ ಅಗತ್ಯವಾದ ಪ್ರಶ್ನೆಗಳಿಗೆ ತೃಪ್ತಿಕರವಾಗಿ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಒಕ್ಕೂಟ ತಿಳಿಸಿದೆ.

ಒಂದು ವೇಳೆ ಮುಸ್ಲಿಂ ಬಾಲಕಿ ಅಥವಾ ಮಹಿಳೆ ಹಿಜಾಬ್ ಧರಿಸಿದ ಕಾರಣಕ್ಕಾಗಿ ಒತ್ತಾಯಪೂರ್ವಕವಾಗಿ ಶಿಕ್ಷಣದ ಪ್ರವೇಶವನ್ನು ಕಳೆದುಕೊಳ್ಳುವಂತಾದರೆ ಇದು ಅಸಾಂವಿಧಾನಿಕ ಮತ್ತು ತಾರತಮ್ಯವಲ್ಲವೇ? ಎಂದು ಒಕ್ಕೂಟ ಕೇಳಿದೆ.

ನಮ್ಮದು ಬಹುಧರ್ಮೀಯ, ಬಹುಸಂಸ್ಕೃತಿ ಮತ್ತು ಬಹುಭಾಷೆಯ ಸಮಾಜ. ನಮ್ಮ ಶಿಕ್ಷಣ ಸಂಸ್ಥೆಗಳು ಮತ್ತು ತರಗತಿ ಕೊಠಡಿಗಳು ಈ ವಾಸ್ತವಿಕತೆಯನ್ನು ಪ್ರತಿಬಿಂಬಿಸಬೇಕು. ವಿದ್ಯಾರ್ಥಿಗಳಲ್ಲಿ ಪರಸ್ಪರ ನಂಬಿಕೆ ಮತ್ತು ಪರಸ್ಪರ ಗೌರವವನ್ನು ಕಲಿಯುವ ಸ್ಥಳಗಳಾಗಿರಬೇಕು ಎಂದು ಸಂಘಟನೆಗಳು ಅಭಿಪ್ರಾಯಪಟ್ಟಿವೆ.

ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಸಹಿಷ್ಣುತೆ ಮತ್ತು ಸಾಮರಸ್ಯವು ಅಗತ್ಯ ಅಂಶಗಳನ್ನಾಗಿ ರೂಪಿಸಬೇಕು. ಕ್ಯಾಂಪಸ್‌ಗಳು ಸಂವಿಧಾನದ ಮೌಲ್ಯಗಳಾದ ಸಮಾನತೆ, ಭ್ರಾತೃತ್ವ ಮತ್ತು ಜಾತ್ಯತೀತತೆಯನ್ನು ಎತ್ತಿಹಿಡಿಯಬೇಕು. ಅಲ್ಲಿನ ವಿದ್ಯಾರ್ಥಿಗಳಿಗೆ ಏಕರೂಪತೆಯನ್ನು ಬೋಧಿಸುವುದು ಅಥವಾ ಅವರ ಮೇಲೆ ಹೇರುವುದು ಸರಿಯಲ್ಲ ಎಂದು ಒಕ್ಕೂಟ ಹೇಳಿದೆ.

ಇದನ್ನೂ ಓದಿರಿ: ಹಿಜಾಬ್ ರಾಜಕೀಯ: ಬಿಜೆಪಿ ಮೇಲೆ ತೆಲಂಗಾಣ ಸಿಎಂ ವಾಗ್ದಾಳಿ

ವಿವಿಧ ಆರ್ಥಿಕ ಹಿನ್ನೆಲೆಯುಳ್ಳ ವಿದ್ಯಾರ್ಥಿಗಳ ನಡುವೆ ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ಸಮವಸ್ತ್ರಗಳನ್ನು ಪರಿಚಯಿಸಲಾಯಿತು. ತರಗತಿಯ ಸ್ಥಳಗಳಲ್ಲಿ ಸಾಂಸ್ಕೃತಿಕ ವೈವಿಧ್ಯತೆಯನ್ನು ಅಳಿಸುವುದು ಸಮವಸ್ತ್ರದ ಉದ್ದೇಶವಾಗಿರಲಿಲ್ಲ ಎಂಬ ಅಂಶವನ್ನು ಒಕ್ಕೂಟ ಸ್ಮರಿಸಿದೆ.

ನ್ಯಾಯಾಲಯವು ಒದಗಿಸಿದ ನಿರೂಪಣೆಯು ಶಿಕ್ಷಣ ಲಭಿಸುವಿಕೆಯ ಪ್ರಮುಖ ಸಮಸ್ಯೆಗಳನ್ನು ಕಡೆಗಣಿಸಿದಂತೆ ತೋರುತ್ತದೆ. ಹೆಣ್ಣುಮಕ್ಕಳು ಮತ್ತು ಮಹಿಳೆಯರು ತಾವು ಧರಿಸುವ ಉಡುಗೆಯಿಂದಾಗಿ ಅವಮಾನ ಅಥವಾ ಶಿಕ್ಷೆಗೆ ಒಳಗಾಗದೆ ಶಿಕ್ಷಣವನ್ನು ಪಡೆಯಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಅವರ ಉಡುಪಿನ ಆಧಾರದ ಮೇಲೆ ತರಗತಿ ಪ್ರವೇಶಿಸಲು ಅನುಮತಿಸದ ಎಲ್ಲಾ ವಿದ್ಯಾರ್ಥಿಗಳೊಂದಿಗೆ ನಾವು ನಿಲ್ಲುತ್ತೇವೆ. ಇದು ಮಹಿಳಾ ಸ್ವಾಯತ್ತತೆಯ ಪ್ರಶ್ನೆಯಾಗಿದ್ದು, ಒಂದು ವೇಳೆ ಅವರು ಹಿಜಾಬ್ ಧರಿಸುತ್ತೇವೆ ಅಥವಾ ಧರಿಸುವುದಿಲ್ಲ ಎಂದರು ಕೂಡಾ ನಾವು ಮುಸ್ಲಿಂ ವಿದ್ಯಾರ್ಥಿನಿಯರ ಜೊತೆ ನಿಲ್ಲುತ್ತೇವೆ. ಅವರು ತಮ್ಮ ಸ್ವಂತ ವಿವೇಚನೆ ಮತ್ತು ಆತ್ಮಸಾಕ್ಷಿಯ ಆಧಾರದಲ್ಲಿ ನಿರ್ಧರಿಸಿ ಅದನ್ನು ಅನುಸರಿಸುತ್ತಿದ್ದು ಅವರ ಈ ಆಯ್ಕೆ ಸ್ವಾತಂತ್ರ್ಯವನ್ನು ನಾವು ಗೌರವಿಸಬೇಕು ಎಂದು ಒಕ್ಕೂಟ ಆಗ್ರಹಿಸಿದೆ.

ಈ ತೀರ್ಪು ಅಗತ್ಯ ಧಾರ್ಮಿಕ ಆಚರಣೆಗಳ ಸಿದ್ಧಾಂತದ ಮಿತಿಗಳನ್ನು ಎತ್ತಿ ತೋರಿಸುತ್ತದೆ. ಯಾವುದೇ ಧರ್ಮದ ಅಗತ್ಯ ಧಾರ್ಮಿಕ ಆಚರಣೆಯನ್ನು ಆ ಧರ್ಮವನ್ನು ನಂಬುವ ಅನುಯಾಯಿಗಳೆ ನಿರ್ಧರಿಸಬೇಕು. ಸಮವಸ್ತ್ರವು ಸಾಂಸ್ಕೃತಿಕ ಆಚರಣೆಗಳು ಮತ್ತು ಧಾರ್ಮಿಕ ನಂಬಿಕೆಗಳಿಗೆ ಸಂವೇದನಾಶೀಲವಾಗಿರಬೇಕು. ಎಲ್ಲರನ್ನೂ ಒಳಗೊಳ್ಳುವ ರೀತಿಯಲ್ಲಿ ಸಮವಸ್ತ್ರವನ್ನು ವಿನ್ಯಾಸಗೊಳಿಸಬೇಕೆ ಹೊರತು ಸಮಾಜದ ಕೆಲವು ವರ್ಗಗಳನ್ನು ಶಿಕ್ಷಣದಿಂದ ಹೊರಗಿಡಲು ಅವುಗಳನ್ನು ಬಳಸಬಾರದು ಎಂದಿದೆ.

ಇದೀಗ ಸಿಡಿಸಿಗಳ ಮೇಲೆ ಹೊಣೆಗಾರಿಕೆ ಇದೆ. ಸಿಡಿಸಿಗಳು ಇದನ್ನು ಪ್ರಮುಖವಾಗಿ ಪರಿಗಣಿಸುತ್ತವೆ ಮತ್ತು ಎಲ್ಲರಿಗೂ ಸ್ಥಳಾವಕಾಶವಿರುವ ಶಿಕ್ಷಣ ಸಂಸ್ಥೆಗಳಾಗಿ ಮಾಡಲು ಪ್ರಯತ್ನಿಸುತ್ತವೆ ಎಂದು ನಾವು ನಿರೀಕ್ಷಿಸುತ್ತೇವೆ.
ಇದು ಅನೇಕರಿಗೆ ಶಿಕ್ಷಣದ ಪ್ರವೇಶವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದೆ.

ಈಗಾಗಲೇ ಹಲವು ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸಮರ್ಪಕ ಶಿಕ್ಷಣದ ಕೊರತೆಯಿಂದ ಬಳಲುತ್ತಿದ್ದಾರೆ. ಈ ಬಿಕ್ಕಟ್ಟು ಅವರನ್ನು ಈಗಾಗಲೇ ಅನಿಶ್ಚಿತ ಶೈಕ್ಷಣಿಕ ಜೀವನವನ್ನು ಉಲ್ಬಣಗೊಳಿಸಿದೆ ಮತ್ತು ಅವರನ್ನು ಮತ್ತಷ್ಟು ಬಿಕ್ಕಟ್ಟಿಗೆ ತಳ್ಳಿದೆ. ಇದು ಮತ್ತಷ್ಟು ಉದ್ದೇಶಪೂರ್ವಕವಾಗಿ ಅಂಚಿನಲ್ಲಿರುವ ಸಮುದಾಯಗಳನ್ನು ಶಿಕ್ಷಣದಿಂದ ಕೈಗೆಟುಕುವ ದರದಲ್ಲಿ ಪ್ರವೇಶಿಸುವುದನ್ನು ಬಿಟ್ಟುಬಿಡುತ್ತದೆ ಎಂದು ಒಕ್ಕೂಟ ಎಚ್ಚರಿಸಿದೆ.

ಸೌಹಾರ್ದತೆ, ಸಹಿಷ್ಣುತೆ ಮತ್ತು ಸಹಬಾಳ್ವೆಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿ ಸಮುದಾಯಕ್ಕೆ ನಾವು ಕರೆ ನೀಡುತ್ತೇವೆ. ನಾವೆಲ್ಲರೂ ಸ್ನೇಹಿತರಾಗಿದ್ದೇವೆ ಮತ್ತು ನಾವು ಬಹುದಿನಗಳಿಂದ ನಮ್ಮ ತರಗತಿಗಳಲ್ಲಿ ಪರಸ್ಪರ ಬೆರೆತು ಕಲಿಯುತ್ತಿದ್ದೇವೆ. ಈ ಸ್ನೇಹದ ಬಂಧ ಮುರಿಯದಿರಲಿ ಎಂದು ಸಂಘಟನೆಗಳು ಆಶಿಸಿವೆ.


ಇದನ್ನೂ ಓದಿರಿ: ಹಿಜಾಬ್‌ ಕುರಿತು ತುರ್ತು ವಿಚಾರಣೆ ಇಲ್ಲ, ಹೋಳಿ ನಂತರ ಅರ್ಜಿ‌ ಆಲಿಸುವುದಾಗಿ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...