Homeಕರ್ನಾಟಕಮೃತ ಪೌರಕಾರ್ಮಿಕನ ಪತ್ನಿಗೆ ನೀಡಿದ್ದ ನಿವೇಶನ ಕಿತ್ತುಕೊಂಡ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಕಿಡಿ

ಮೃತ ಪೌರಕಾರ್ಮಿಕನ ಪತ್ನಿಗೆ ನೀಡಿದ್ದ ನಿವೇಶನ ಕಿತ್ತುಕೊಂಡ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಕಿಡಿ

- Advertisement -
- Advertisement -

2008ರಲ್ಲಿ ಯಲಹಂಕದಲ್ಲಿ ಮ್ಯಾನ್‌ಹೋಲ್‌ಗೆ ಇಳಿದು ಕೆಲಸ ಮಾಡುತ್ತಿದ್ದ ವೇಳೆ ಮೃತಪಟ್ಟ ಪೌರಕಾರ್ಮಿಕನ ಪತ್ನಿಗೆ ನೀಡಿದ್ದ ನಿವೇಶನವನ್ನು ಕಿತ್ತುಕೊಂಡಿದ್ದ ದೊಡ್ಡಬಳ್ಳಾಪುರ ತಾಲ್ಲೂಕು ಅಧಿಕಾರಿಗಳ ವಿರುದ್ಧ ಕರ್ನಾಟಕ ಹೈಕೋರ್ಟ್ ಕಿಡಿಕಾರಿದೆ.

ಅಧಿಕಾರಿಗಳು ಇಚ್ಛಾಶಕ್ತಿಯ ಕೊರತೆ ಮತ್ತು ಬಡ ನಾಗರಿಕರ ಬಗ್ಗೆ ನಿರಾಸಕ್ತಿ ಪ್ರದರ್ಶಿಸುತ್ತಿದ್ದಾರೆ ಎಂದು ಎಚ್ಚರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನರವರು, “ಉಳ್ಳವರು, ಅಧಿಕಾರದಲ್ಲಿರುವವರು ಇಲ್ಲದವರ ಹಕ್ಕುಗಳನ್ನು ಕಿತ್ತುಕೊಳ್ಳುವುದನ್ನು ನಿಲ್ಲಿಸಲು ಇದು ಸಕಾಲವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಕರಣದ ಹಿನ್ನೆಲೆ

2008ರಲ್ಲಿ  ಪೌರಕಾರ್ಮಿಕನೊಬ್ಬನನ್ನು ಬಲವಂತವಾಗಿ ಯಲಹಂಕ ಬಳಿಯ ಮ್ಯಾನ್‌ಹೋಲ್‌ಗೆ ಇಳಿಸಿ ಸ್ವಚ್ಛಗೊಳಿಸಲಾಗುತ್ತಿತ್ತು. ಆ ವೇಳೆ ಉಸಿರುಗಟ್ಟಿ ಅವರು ಮೃತಪಟ್ಟಿದ್ದರು. ಪರಿಹಾರಕ್ಕೆ ಆಗ್ರಹಿಸಿ ಅವರ ಪತ್ನಿ ನಾಗಮ್ಮ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ತದನಂತರ 2011-12 ರಲ್ಲಿ ಅವರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ನಿವೇ‍ಶನವೊಂದನ್ನು ಮಂಜೂರು ಮಾಡಲಾಗಿತ್ತು.

ಆದರೆ 9 ವರ್ಷಗಳ ನಂತರ ದೊಡ್ಡಬೆಳವಂಗಲ ಗ್ರಾಮ ಪಂಚಾಯ್ತಿಯು ಅದೇ ನಿವೇಶನದಲ್ಲಿ ನಾಡಕಚೇರಿ ಸ್ಥಾಪಿಸಲು ಮುಂದಾಗಿದೆ. ಅದನ್ನು ಪ್ರಶ್ನಿಸಿ ನಾಗಮ್ಮನವರು ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯು ತನ್ನ ಆಕ್ಷೇಪಣೆಗಳನ್ನು ಸಲ್ಲಿಸಿ, ಅರ್ಜಿದಾರರು ಷರತ್ತುಗಳನ್ನು “ಉಲ್ಲಂಘಿಸಿದ” ಕಾರಣ ಅವರಿಗೆ ನಿವೇಶನದ ಹಕ್ಕು ಇಲ್ಲ. 2011-12ರಲ್ಲಿ ನಿವೇಶನ ಹಂಚಿಕೆಯಾಗಿದ್ದರೂ ಅಲ್ಲಿ 2022ರ ಜೂನ್‌ವರೆಗೆ ಯಾವುದೇ ಕಟ್ಟಡ ನಿರ್ಮಾಣ ಮಾಡಿಲ್ಲ ಎಂದು ವಾದಿಸಿದ್ದರು.

ಆದರೆ ಅಧಿಕಾರಿಗಳನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ನಂತರ ಅಧಿಕಾರಿಗಳು ನಿವೇಶನವನ್ನು ನಾಗಮ್ಮನವರಿಗೆ ಮರಳಿಸಿದ್ದಾರೆ.

ಅರ್ಜಿದಾರರು ಕೋರ್ಟ್‌ಗೆ ಬರುವ ಮುನ್ನವೇ ಈ ಕ್ರಮ ಕೈಗೊಳ್ಳಬಹುದಿತ್ತಲ್ಲವೇ? ಇದು ಒಟ್ಟಾರೆ ಬಡವರ ಕುರಿತು ಅಧಿಕಾರದಲ್ಲಿರುವವರ ನಿರ್ಲಕ್ಷ್ಯ ಧೋರಣೆಯಾಗಿದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನರವರು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಈ ಧೋರಣೆಗಾಗಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ಆಯುಕ್ತರು ಮತ್ತು ದೊಡ್ಡಬೆಳವಂಗಲ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಂಟಿಯಾಗಿ ಮತ್ತು 50,000 ರೂ ವೆಚ್ಚವನ್ನು ಪಾವತಿಸುವಂತೆ ಹಾಗೂ ಅರ್ಜಿದಾರರಿಗೆ ವ್ಯಾಜ್ಯ ವೆಚ್ಚವಾಗಿ 50,000 ರೂಗಳನ್ನು ಗ್ರಾಮ ಪಂಚಾಯ್ತಿ ಪಾವತಿಸುವಂತೆ ಸೂಚಿಸಿದ್ದಾರೆ.

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಕೆಲಸ ನಿಷೇಧ ಮತ್ತು ಅವರ ಪುನರ್ವಸತಿ ಕಾಯಿದೆ 2013ರ ಸೆಕ್ಷನ್ 13ರ ಪ್ರಕಾರ ಅವರಿಗೆ ಹಣಕಾಸು ಸೇರಿದಂತೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕೆಂದು ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ; ಸಂಸದರ ವಾಕ್ ಸ್ವಾತಂತ್ರ್ಯಕ್ಕೂ ಸೆನ್ಸಾರ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...