Homeಕರ್ನಾಟಕಮೃತ ಪೌರಕಾರ್ಮಿಕನ ಪತ್ನಿಗೆ ನೀಡಿದ್ದ ನಿವೇಶನ ಕಿತ್ತುಕೊಂಡ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಕಿಡಿ

ಮೃತ ಪೌರಕಾರ್ಮಿಕನ ಪತ್ನಿಗೆ ನೀಡಿದ್ದ ನಿವೇಶನ ಕಿತ್ತುಕೊಂಡ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಕಿಡಿ

- Advertisement -
- Advertisement -

2008ರಲ್ಲಿ ಯಲಹಂಕದಲ್ಲಿ ಮ್ಯಾನ್‌ಹೋಲ್‌ಗೆ ಇಳಿದು ಕೆಲಸ ಮಾಡುತ್ತಿದ್ದ ವೇಳೆ ಮೃತಪಟ್ಟ ಪೌರಕಾರ್ಮಿಕನ ಪತ್ನಿಗೆ ನೀಡಿದ್ದ ನಿವೇಶನವನ್ನು ಕಿತ್ತುಕೊಂಡಿದ್ದ ದೊಡ್ಡಬಳ್ಳಾಪುರ ತಾಲ್ಲೂಕು ಅಧಿಕಾರಿಗಳ ವಿರುದ್ಧ ಕರ್ನಾಟಕ ಹೈಕೋರ್ಟ್ ಕಿಡಿಕಾರಿದೆ.

ಅಧಿಕಾರಿಗಳು ಇಚ್ಛಾಶಕ್ತಿಯ ಕೊರತೆ ಮತ್ತು ಬಡ ನಾಗರಿಕರ ಬಗ್ಗೆ ನಿರಾಸಕ್ತಿ ಪ್ರದರ್ಶಿಸುತ್ತಿದ್ದಾರೆ ಎಂದು ಎಚ್ಚರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನರವರು, “ಉಳ್ಳವರು, ಅಧಿಕಾರದಲ್ಲಿರುವವರು ಇಲ್ಲದವರ ಹಕ್ಕುಗಳನ್ನು ಕಿತ್ತುಕೊಳ್ಳುವುದನ್ನು ನಿಲ್ಲಿಸಲು ಇದು ಸಕಾಲವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಕರಣದ ಹಿನ್ನೆಲೆ

2008ರಲ್ಲಿ  ಪೌರಕಾರ್ಮಿಕನೊಬ್ಬನನ್ನು ಬಲವಂತವಾಗಿ ಯಲಹಂಕ ಬಳಿಯ ಮ್ಯಾನ್‌ಹೋಲ್‌ಗೆ ಇಳಿಸಿ ಸ್ವಚ್ಛಗೊಳಿಸಲಾಗುತ್ತಿತ್ತು. ಆ ವೇಳೆ ಉಸಿರುಗಟ್ಟಿ ಅವರು ಮೃತಪಟ್ಟಿದ್ದರು. ಪರಿಹಾರಕ್ಕೆ ಆಗ್ರಹಿಸಿ ಅವರ ಪತ್ನಿ ನಾಗಮ್ಮ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ತದನಂತರ 2011-12 ರಲ್ಲಿ ಅವರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ನಿವೇ‍ಶನವೊಂದನ್ನು ಮಂಜೂರು ಮಾಡಲಾಗಿತ್ತು.

ಆದರೆ 9 ವರ್ಷಗಳ ನಂತರ ದೊಡ್ಡಬೆಳವಂಗಲ ಗ್ರಾಮ ಪಂಚಾಯ್ತಿಯು ಅದೇ ನಿವೇಶನದಲ್ಲಿ ನಾಡಕಚೇರಿ ಸ್ಥಾಪಿಸಲು ಮುಂದಾಗಿದೆ. ಅದನ್ನು ಪ್ರಶ್ನಿಸಿ ನಾಗಮ್ಮನವರು ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯು ತನ್ನ ಆಕ್ಷೇಪಣೆಗಳನ್ನು ಸಲ್ಲಿಸಿ, ಅರ್ಜಿದಾರರು ಷರತ್ತುಗಳನ್ನು “ಉಲ್ಲಂಘಿಸಿದ” ಕಾರಣ ಅವರಿಗೆ ನಿವೇಶನದ ಹಕ್ಕು ಇಲ್ಲ. 2011-12ರಲ್ಲಿ ನಿವೇಶನ ಹಂಚಿಕೆಯಾಗಿದ್ದರೂ ಅಲ್ಲಿ 2022ರ ಜೂನ್‌ವರೆಗೆ ಯಾವುದೇ ಕಟ್ಟಡ ನಿರ್ಮಾಣ ಮಾಡಿಲ್ಲ ಎಂದು ವಾದಿಸಿದ್ದರು.

ಆದರೆ ಅಧಿಕಾರಿಗಳನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ನಂತರ ಅಧಿಕಾರಿಗಳು ನಿವೇಶನವನ್ನು ನಾಗಮ್ಮನವರಿಗೆ ಮರಳಿಸಿದ್ದಾರೆ.

ಅರ್ಜಿದಾರರು ಕೋರ್ಟ್‌ಗೆ ಬರುವ ಮುನ್ನವೇ ಈ ಕ್ರಮ ಕೈಗೊಳ್ಳಬಹುದಿತ್ತಲ್ಲವೇ? ಇದು ಒಟ್ಟಾರೆ ಬಡವರ ಕುರಿತು ಅಧಿಕಾರದಲ್ಲಿರುವವರ ನಿರ್ಲಕ್ಷ್ಯ ಧೋರಣೆಯಾಗಿದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನರವರು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಈ ಧೋರಣೆಗಾಗಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ಆಯುಕ್ತರು ಮತ್ತು ದೊಡ್ಡಬೆಳವಂಗಲ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಂಟಿಯಾಗಿ ಮತ್ತು 50,000 ರೂ ವೆಚ್ಚವನ್ನು ಪಾವತಿಸುವಂತೆ ಹಾಗೂ ಅರ್ಜಿದಾರರಿಗೆ ವ್ಯಾಜ್ಯ ವೆಚ್ಚವಾಗಿ 50,000 ರೂಗಳನ್ನು ಗ್ರಾಮ ಪಂಚಾಯ್ತಿ ಪಾವತಿಸುವಂತೆ ಸೂಚಿಸಿದ್ದಾರೆ.

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಕೆಲಸ ನಿಷೇಧ ಮತ್ತು ಅವರ ಪುನರ್ವಸತಿ ಕಾಯಿದೆ 2013ರ ಸೆಕ್ಷನ್ 13ರ ಪ್ರಕಾರ ಅವರಿಗೆ ಹಣಕಾಸು ಸೇರಿದಂತೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕೆಂದು ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ; ಸಂಸದರ ವಾಕ್ ಸ್ವಾತಂತ್ರ್ಯಕ್ಕೂ ಸೆನ್ಸಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...