Homeಮುಖಪುಟಗೌತಮ್ ನವಲಖ ಪ್ರಕರಣ: ಹೈಕೋರ್ಟ್ ಎದುರು ಸುಪ್ರೀಂಕೋರ್ಟ್ ಎತ್ತಿಕಟ್ಟುತ್ತಿರುವ ಸರ್ಕಾರ!

ಗೌತಮ್ ನವಲಖ ಪ್ರಕರಣ: ಹೈಕೋರ್ಟ್ ಎದುರು ಸುಪ್ರೀಂಕೋರ್ಟ್ ಎತ್ತಿಕಟ್ಟುತ್ತಿರುವ ಸರ್ಕಾರ!

- Advertisement -
- Advertisement -

60 ವರ್ಷ ಮೀರಿದವರಿಗೆ ಕೋವಿಡ್ ಅಪಾಯಕಾರಿಯಾಗಿದ್ದರೂ, 68 ವರ್ಷದ ನವಲಖ ಅವರನ್ನು ಅವರ ವೈದ್ಯಕೀಯ ಪರಿಸ್ಥಿತಿಯನ್ನು ಪರಿಗಣಿಸದೆಯೇ ತರಾತುರಿಯಲ್ಲಿ ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಮುಂಬಯಿಗೆ ರೈಲಿನಲ್ಲಿ ಸಾಗಿಸಿದುದು ಮತ್ತು ಸುಪ್ರೀಂಕೋರ್ಟ್ ಹೈಕೋರ್ಟಿನ ಆದೇಶವನ್ನು ಪರಿಗಣಿಸದೇ ಇರುವುದು ಆಕ್ಷೇಪಾರ್ಹ ಎಂಬುದು ನವಲಖ ಅವರ ವಕೀಲರುಗಳ ವಾದ.

ಕೃಪೆ: ದಿ ವೈರ್‌

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಗೌತಮ್ ನವಲಖರ “ಅವಸರದ ವರ್ಗಾವಣೆ”ಯ ವಿವರಗಳನ್ನು ದಿಲ್ಲಿ ಹೈಕೋರ್ಟಿಗೆ ನೀಡಲು ವಿಫಲವಾದ ಎಎನ್‌ಐಗೆ ಸುಪ್ರೀಂಕೋರ್ಟ್‌ನಲ್ಲಿ ತಡೆಯಾಜ್ಞೆ!. ಹಿಂದೆಯೇ ಈ ವಿಷಯದ ಕಾರ್ಯವ್ಯಾಪ್ತಿಯ ಪ್ರಶ್ನೆಯನ್ನು ಎತ್ತಲು ವಿಫಲವಾಗಿ, ನಂತರ ತಾನು ಈ ವಿಷಯವನ್ನು ನಿಭಾಯಿಸಿದ ಕುರಿತು ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದ್ದ ಸರಕಾರವೀಗ ದಿಲ್ಲಿ ಹೈಕೋರ್ಟಿನ ಏಕ ಸದಸ್ಯ ಪೀಠಕ್ಕೆ ಎನ್ಐಎ ಕಾಯಿದೆಯನ್ವಯ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಲು ಕಾರ್ಯವ್ಯಾಪ್ತಿಯಿಲ್ಲವೆಂದು ವಾದಿಸುತ್ತಿದೆ.

ಒಂದು ಸಾಂವಿಧಾನಿಕ ನ್ಯಾಯಾಲಯವನ್ನು ಇನ್ನೊಂದು ಸಾಂವಿಧಾನಿಕ ನ್ಯಾಯಾಲಯದ ಎದುರು ಎತ್ತಿಕಟ್ಟುವ ಕ್ರಮವೊಂದರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಿಲ್ಲಿ ಹೈಕೋರ್ಟಿನ ನ್ಯಾಯಮೂರ್ತಿ ಅನೂಪ್ ಭಂಭಾನಿ ಅವರ ಏಕಸದಸ್ಯ ಪೀಠದ ನಿರ್ದೇಶನವನ್ನು ಪಾಲಿಸುವುದಕ್ಕೆ ಬದಲಾಗಿ ಅವಸರವಸರದಲ್ಲಿ ತಡೆಯಾಜ್ಞೆ ಕೋರಿ ಸುಪ್ರೀಂಕೋರ್ಟಿನ ಮೊರೆಹೋಗಲು ನಿರ್ಧರಿಸಿತು. ಗೌತಮ್ ನವಲಖ ಅವರನ್ನು ತರಾತುರಿಯಲ್ಲಿ ಮುಂಬಯಿಗೆ ವರ್ಗಾಯಿಸಿದ ಪ್ರಕ್ರಿಯೆಯ ಸಂಪೂರ್ಣ ವಿವರಗಳನ್ನು ನೀಡುವಂತೆ ಈ ಪೀಠ ಎನ್‌ಐಎಗೆ ನಿರ್ದೇಶನ ನೀಡಿತ್ತು.

ಪ್ರಸಿದ್ಧ ನಾಗರಿಕ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖ ಅವರನ್ನು ಅವರ ಮಧ್ಯಂತರ ಜಾಮೀನು ಅರ್ಜಿ ಇನ್ನೂ ದಿಲ್ಲಿ ಹೈಕೋರ್ಟಿನಲ್ಲಿ ವಿಚಾರಣೆಗೆ ಬಾಕಿ ಇರುವಾಗಲೇ ಮೇ 25ರಂದು ಕೇವಲ ಐದು ನಿಮಿಷಗಳ ಅವಧಿಯಲ್ಲಿ ಮುಂಬಯಿಗೆ ಹೋಗುವ ರೈಲಿನಲ್ಲಿ ಕುಳ್ಳಿರಿಸಲಾಗಿತ್ತು.

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠವು ಜೂನ್ 2ರಂದು ಆರೋಪಿಯ ಅನುಪಸ್ಥಿತಿಯಲ್ಲಿ ನಡೆಸಿದ ವಿಚಾರಣೆಯಲ್ಲಿ- ದಿಲ್ಲಿ ಹೈಕೋರ್ಟಿಗೆ ಈ ವಿಷಯದಲ್ಲಿ ಕಾರ್ಯವ್ಯಾಪ್ತಿಯಿಲ್ಲವೆಂಬ ಎನ್ಐಎಯ ವಾದವನ್ನು ಜೂನ್ ಮಧ್ಯ ಭಾಗದಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿದೆ.

ವಿಶೇಷವೆಂದರೆ ಸುಪ್ರೀಂಕೋರ್ಟ್ ದಾಖಲೆ ಪುಸ್ತಕದಲ್ಲಿ ದಾಖಲೆ ಅವಧಿಯಲ್ಲಿ ನಮೂದಾಗಿದ್ದರೂ ಎನ್‌ಐಎಯ ವಿಶೇಷ ತೆರವು ಅರ್ಜಿಯ ಪ್ರತಿಯನ್ನು ನವಲಖ ಅವರ ವಕೀಲರಿಗೆ ನೀಡಲಾಗಿಲ್ಲ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ನವಲಖ ಭಾಗಿಯಾಗಿದ್ದಾರೆ ಎಂದು ಆರೋಪಿಸಿ, ಎಪ್ರಿಲ್ 14ರಂದು ಎನ್‌ಐಎಯು ಕರಾಳ ಕಾನೂನುಬಾಹಿರ ಕೃತ್ಯ (ತಡೆ) ಕಾಯಿದೆಯನ್ವಯ ದಿಲ್ಲಿಯಲ್ಲಿ ಅವರನ್ನು ವಶಕ್ಕೆ ತೆಗೆದುಕೊಂಡಿತ್ತು.

ಎನ್‌ಐಎಯ ಮುಂಬಯಿ ಕಚೇರಿಯು ಈ ಪ್ರಕರಣದ ತನಿಖೆ ನಡೆಸುತ್ತಿರುವುದರಿಂದ ಕೋವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ಅವರನ್ನು ಅಲ್ಲಿಗೆ ಸಾಗಿಸುವ ಬದಲು ದಿಲ್ಲಿಯ ತಿಹಾರ್ ಜೈಲಿನಲ್ಲಿ ತಾತ್ಕಾಲಿಕವಾಗಿ, ಆದರೆ ಅನಿರ್ದಿಷ್ಟಾವಧಿಗೆ ಇರಿಸಲಾಗಿತ್ತು.

ಮುಂಬಯಿಯಲ್ಲಿ ಕೊರೋನ ಪ್ರಕರಣಗಳು ವ್ಯಾಪಕವಾಗಿ ಹಬ್ಬಿರುವ ಮತ್ತು ಅಲ್ಲಿನ ಜೈಲುಗಳಲ್ಲಿಯೂ ಸೋಂಕಿತರು ಇರುವ ಕಾರಣದಿಂದ 68 ವರ್ಷ ಪ್ರಾಯದ ನವಲಖ ಅವರ ವೈದ್ಯಕೀಯ ಪರಿಸ್ಥಿತಿ ಮತ್ತು ಅವರು ಎದುರಿಸಬೇಕಾಗಿ ಬರಬಹುದಾದ ಸಂಕೀರ್ಣತೆಗಳ ಹಿನ್ನೆಲೆಯಲ್ಲಿ ಅವರ ವಕೀಲರು ಮಧ್ಯಂತರ ಜಾಮೀನು ಕೋರಿ ದಿಲ್ಲಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.

ಯುಎಪಿಎ ಮತ್ತು ಎನ್‌ಐಎ ಕಾಯಿದೆ ಪ್ರಕಾರ ಸಾಮಾನ್ಯವಾಗಿ ಜಾಮೀನು ಅರ್ಜಿಯ ವಿಚಾರಣೆಯನ್ನು ನಿಯೋಜಿತ ವಿಶೇಷ ನ್ಯಾಯಾಲಯ ನಡೆಸಬೇಕಾಗಿದ್ದರೂ, ದಿಲ್ಲಿಯಲ್ಲಿ ಯಾವುದೇ ಎನ್ಐಎ ವಿಶೇಷ ನ್ಯಾಯಾಲಯ ಕಾರ್ಯಾಚರಿಸದೇ ಇರುವುದರಿಂದ ಮತ್ತು ನವಲಖ ಅವರ ರಿಮಾಂಡ್ ವಿಷಯವನ್ನು ಕೂಡಾ ಸಾಮಾನ್ಯ ನ್ಯಾಯಾಲಯವೇ ನಡೆಸಿರುವುದರಿಂದ ಹೈಕೋರ್ಟ್ ಮಾತ್ರ ಅವರಿಗೆ ಉಳಿದಿರುವ ಏಕೈಕ ದಾರಿಯಾಗಿತ್ತು.

ಹೈಕೋರ್ಟ್ ವ್ಯಾಪ್ತಿಯನ್ನು ಎನ್‌ಐಎ ಒಪ್ಪಿತ್ತು

ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ಮೇ 22ರಂದು ನಡೆದಾಗ ಎನ್‌ಐಎಯು ಯಾವುದೇ ಆಕ್ಷೇಪ ವ್ಯಕ್ತಪಡಿಸಿರಲ್ಲ ಮತ್ತು ಉತ್ತರ ನೀಡಲು ಸಮಯಾವಕಾಶ ಕೇಳಿತ್ತು. ಅದರಂತೆ ಮುಂದಿನ ವಿಚಾರಣೆ ನಡೆಯುವ ಮೇ 27ರ ತನಕ ಸಮಯಾವಕಾಶ ನೀಡಲಾಗಿತ್ತು. ವಿಮಾನಯಾನ ಆರಂಭವಾಗುವ ಹಿನ್ನೆಲೆಯಲ್ಲಿ ಎನ್‌ಐಎಯು ನವಲಖ ಅವರನ್ನು ಮುಂಬಯಿಗೆ ವರ್ಗಾಯಿಸುವ ಉದ್ದೇಶ ಹೊಂದಿದೆ ಎಂದು ಮನಗಂಡ ಹೈಕೋರ್ಟ್, ಸೂಕ್ತ ನ್ಯಾಯಾಲಯದಿಂದ ಆದೇಶ ಪಡೆದ ಮೇಲೆಯೇ ಹಾಗೆ ಮಾಡಬೇಕೆಂದು ನಿರ್ದೇಶಿಸಿತ್ತು.

ಆದರೂ ಮೇ 25ರಂದು ಎನ್‌ಐಎಯು ಅವರನ್ನು ರೈಲಿನಲ್ಲಿ ಮುಂಬಯಿಗೆ ಕೊಂಡೊಯ್ದು, ಮರುದಿನ ಅಲ್ಲಿನ ಎನ್‌ಐಎ ನ್ಯಾಯಾಲಯದಿಂದ ನ್ಯಾಯಾಂಗ ವಶದ ಆದೇಶ ಪಡೆಯಿತು. ಅಂದಿನಿಂದ ಅವರು ಮುಂಬಯಿಯ ಪೂರ್ವ ಭಾಗದಲ್ಲಿರುವ ತಲೋಜ ಜೈಲಿನಲ್ಲಿ ಇದ್ದಾರೆ.

ನವಲಖ ಅವರನ್ನು ಮುಂಬಯಿಗೆ ಕೊಂಡೊಯ್ದ ತರಾತುರಿಯ ಕ್ರಮದಿಂದ ಕಿರಿಕಿರಿಗೆ ಒಳಗಾದ ದಿಲ್ಲಿ ಹೈಕೋರ್ಟ್, ವರ್ಗಾವಣೆಯ ಸಂಪೂರ್ಣ ದಾಖಲೆ ಮತ್ತು ಮುಂಬಯಿಯ ಎನ್‌ಐಎ ನ್ಯಾಯಾಲಯ ನೀಡಿದ ವಾರಂಟ್ ಮಾತ್ರವಲ್ಲ, ದಿಲ್ಲಿಯ ಎನ್ಐಎ ನ್ಯಾಯಾಲಯ ನೀಡಿದ ವರ್ಗಾವಣೆ ಆದೇಶ ಮತ್ತು ಈ ನ್ಯಾಯಾಲಯಗಳಿಗೆ ಅವರ ವೈದ್ಯಕೀಯ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಾಗಿದೆಯೇ ಎಂಬ ಮಾಹಿತಿ ಸಲ್ಲಿಸುವಂತೆ ಆದೇಶಿಸಿತ್ತು.

ಇದಕ್ಕೆ ಜೂನ್ 3ರ ದಿನವನ್ನು ಹೈಕೋರ್ಟ್ ನಿಗದಿಪಡಿಸಿತ್ತು. ಆದರೆ, ಎನ್‌ಐಎಯು ಜೂನ್ 2ರಂದೇ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮೂಲಕ ದಿಲ್ಲಿ ಹೈಕೋರ್ಟಿನ ಪೀಠದ ವಿಚಾರಣೆಗೆ ತಡೆಯಾಜ್ಞೆ ಪಡೆಯಿತು. ಸುಪ್ರೀಂಕೋರ್ಟಿನ ಈ ತಡೆಯಾಜ್ಞೆಯು ದಿಲ್ಲಿ ಹೈಕೋರ್ಟ್ ತನ್ನ ಕಾರ್ಯವ್ಯಾಪ್ತಿಯ ಅಧೀನ ನ್ಯಾಯಾಲಯಗಳ ಮೇಲೆ ಹೊಂದಿರುವ ಅಧಿಕಾರವನ್ನೇ ಪ್ರಶ್ನಿಸಿರುವುದರಿಂದ ಕಾನೂನು ವಲಯದಲ್ಲಿ ಅನೇಕರ ಹುಬ್ಬುಗಳನ್ನು ಮೇಲೇರಿಸಿದೆ!

“ಭಾರತೀಯ ಸಂವಿಧಾನದ ಪ್ರಕಾರ ಹೈಕೋರ್ಟ್‌ಗಳೂ ಸಾಂವಿಧಾನಿಕ ನ್ಯಾಯಾಲಯಗಳಾಗಿದ್ದು, ಅವುಗಳ ಆಜ್ಞೆಗಳನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸುವಾಗ ಎರಡೂ ಕೋರ್ಟ್‌ಗಳು ಒಂದು ಸ್ಥಾನಮಾನ ಹೊಂದಿರುತ್ತವೆ ಮತ್ತು ಯಾವುದೇ ರೀತಿಯಲ್ಲಿ ಹೈಕೋರ್ಟ್‌ಗಳು ಸುಪ್ರೀಂಕೋರ್ಟ್‌ಗಿಂತ ಕೆಳಗೆ ಇಲ್ಲ. ತನ್ನ ಅಧೀನ ನ್ಯಾಯಾಲಯವು ಕಾನೂನು ನಿಯಮಗಳನ್ನು ಪಾಲಿಸಿದೆಯೇ, ಇಲ್ಲವೇ ಎಂದು ವಿಚಾರಿಸುವುದರಿಂದ ಹೈಕೋರ್ಟನ್ನು ತಡೆಯುವಂತಿಲ್ಲ” ಎಂದು ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಹಿರಿಯ ವಕೀಲರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

60 ವರ್ಷ ಮೀರಿದವರಿಗೆ ಕೋವಿಡ್ ಅಪಾಯಕಾರಿಯಾಗಿದ್ದರೂ, 68 ವರ್ಷದ ನವಲಖ ಅವರನ್ನು ಅವರ ವೈದ್ಯಕೀಯ ಪರಿಸ್ಥಿತಿಯನ್ನು ಪರಿಗಣಿಸದೆಯೇ ತರಾತುರಿಯಲ್ಲಿ ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಮುಂಬಯಿಗೆ ರೈಲಿನಲ್ಲಿ ಸಾಗಿಸಿದುದು ಮತ್ತು ಸುಪ್ರೀಂಕೋರ್ಟ್ ಹೈಕೋರ್ಟಿನ ಆದೇಶವನ್ನು ಪರಿಗಣಿಸದೇ ಇರುವುದು ಆಕ್ಷೇಪಾರ್ಹ ಎಂಬುದು ನವಲಖ ಅವರ ವಕೀಲರುಗಳ ವಾದ.


ಓದಿ: ರಾಷ್ಟ್ರೀಯ ತನಿಖಾ ಸಂಸ್ಥೆಯ ಮುಂದೆ ಶರಣಾದ ಹೋರಾಟಗಾರರಾದ ತೇಲ್ತುಂಬ್ಡೆ ಹಾಗೂ ನವಲಖ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...