Homeಮುಖಪುಟಗೌತಮ್ ನವಲಖ ಪ್ರಕರಣ: ಹೈಕೋರ್ಟ್ ಎದುರು ಸುಪ್ರೀಂಕೋರ್ಟ್ ಎತ್ತಿಕಟ್ಟುತ್ತಿರುವ ಸರ್ಕಾರ!

ಗೌತಮ್ ನವಲಖ ಪ್ರಕರಣ: ಹೈಕೋರ್ಟ್ ಎದುರು ಸುಪ್ರೀಂಕೋರ್ಟ್ ಎತ್ತಿಕಟ್ಟುತ್ತಿರುವ ಸರ್ಕಾರ!

- Advertisement -
- Advertisement -

60 ವರ್ಷ ಮೀರಿದವರಿಗೆ ಕೋವಿಡ್ ಅಪಾಯಕಾರಿಯಾಗಿದ್ದರೂ, 68 ವರ್ಷದ ನವಲಖ ಅವರನ್ನು ಅವರ ವೈದ್ಯಕೀಯ ಪರಿಸ್ಥಿತಿಯನ್ನು ಪರಿಗಣಿಸದೆಯೇ ತರಾತುರಿಯಲ್ಲಿ ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಮುಂಬಯಿಗೆ ರೈಲಿನಲ್ಲಿ ಸಾಗಿಸಿದುದು ಮತ್ತು ಸುಪ್ರೀಂಕೋರ್ಟ್ ಹೈಕೋರ್ಟಿನ ಆದೇಶವನ್ನು ಪರಿಗಣಿಸದೇ ಇರುವುದು ಆಕ್ಷೇಪಾರ್ಹ ಎಂಬುದು ನವಲಖ ಅವರ ವಕೀಲರುಗಳ ವಾದ.

ಕೃಪೆ: ದಿ ವೈರ್‌

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಗೌತಮ್ ನವಲಖರ “ಅವಸರದ ವರ್ಗಾವಣೆ”ಯ ವಿವರಗಳನ್ನು ದಿಲ್ಲಿ ಹೈಕೋರ್ಟಿಗೆ ನೀಡಲು ವಿಫಲವಾದ ಎಎನ್‌ಐಗೆ ಸುಪ್ರೀಂಕೋರ್ಟ್‌ನಲ್ಲಿ ತಡೆಯಾಜ್ಞೆ!. ಹಿಂದೆಯೇ ಈ ವಿಷಯದ ಕಾರ್ಯವ್ಯಾಪ್ತಿಯ ಪ್ರಶ್ನೆಯನ್ನು ಎತ್ತಲು ವಿಫಲವಾಗಿ, ನಂತರ ತಾನು ಈ ವಿಷಯವನ್ನು ನಿಭಾಯಿಸಿದ ಕುರಿತು ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದ್ದ ಸರಕಾರವೀಗ ದಿಲ್ಲಿ ಹೈಕೋರ್ಟಿನ ಏಕ ಸದಸ್ಯ ಪೀಠಕ್ಕೆ ಎನ್ಐಎ ಕಾಯಿದೆಯನ್ವಯ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಲು ಕಾರ್ಯವ್ಯಾಪ್ತಿಯಿಲ್ಲವೆಂದು ವಾದಿಸುತ್ತಿದೆ.

ಒಂದು ಸಾಂವಿಧಾನಿಕ ನ್ಯಾಯಾಲಯವನ್ನು ಇನ್ನೊಂದು ಸಾಂವಿಧಾನಿಕ ನ್ಯಾಯಾಲಯದ ಎದುರು ಎತ್ತಿಕಟ್ಟುವ ಕ್ರಮವೊಂದರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಿಲ್ಲಿ ಹೈಕೋರ್ಟಿನ ನ್ಯಾಯಮೂರ್ತಿ ಅನೂಪ್ ಭಂಭಾನಿ ಅವರ ಏಕಸದಸ್ಯ ಪೀಠದ ನಿರ್ದೇಶನವನ್ನು ಪಾಲಿಸುವುದಕ್ಕೆ ಬದಲಾಗಿ ಅವಸರವಸರದಲ್ಲಿ ತಡೆಯಾಜ್ಞೆ ಕೋರಿ ಸುಪ್ರೀಂಕೋರ್ಟಿನ ಮೊರೆಹೋಗಲು ನಿರ್ಧರಿಸಿತು. ಗೌತಮ್ ನವಲಖ ಅವರನ್ನು ತರಾತುರಿಯಲ್ಲಿ ಮುಂಬಯಿಗೆ ವರ್ಗಾಯಿಸಿದ ಪ್ರಕ್ರಿಯೆಯ ಸಂಪೂರ್ಣ ವಿವರಗಳನ್ನು ನೀಡುವಂತೆ ಈ ಪೀಠ ಎನ್‌ಐಎಗೆ ನಿರ್ದೇಶನ ನೀಡಿತ್ತು.

ಪ್ರಸಿದ್ಧ ನಾಗರಿಕ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖ ಅವರನ್ನು ಅವರ ಮಧ್ಯಂತರ ಜಾಮೀನು ಅರ್ಜಿ ಇನ್ನೂ ದಿಲ್ಲಿ ಹೈಕೋರ್ಟಿನಲ್ಲಿ ವಿಚಾರಣೆಗೆ ಬಾಕಿ ಇರುವಾಗಲೇ ಮೇ 25ರಂದು ಕೇವಲ ಐದು ನಿಮಿಷಗಳ ಅವಧಿಯಲ್ಲಿ ಮುಂಬಯಿಗೆ ಹೋಗುವ ರೈಲಿನಲ್ಲಿ ಕುಳ್ಳಿರಿಸಲಾಗಿತ್ತು.

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠವು ಜೂನ್ 2ರಂದು ಆರೋಪಿಯ ಅನುಪಸ್ಥಿತಿಯಲ್ಲಿ ನಡೆಸಿದ ವಿಚಾರಣೆಯಲ್ಲಿ- ದಿಲ್ಲಿ ಹೈಕೋರ್ಟಿಗೆ ಈ ವಿಷಯದಲ್ಲಿ ಕಾರ್ಯವ್ಯಾಪ್ತಿಯಿಲ್ಲವೆಂಬ ಎನ್ಐಎಯ ವಾದವನ್ನು ಜೂನ್ ಮಧ್ಯ ಭಾಗದಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿದೆ.

ವಿಶೇಷವೆಂದರೆ ಸುಪ್ರೀಂಕೋರ್ಟ್ ದಾಖಲೆ ಪುಸ್ತಕದಲ್ಲಿ ದಾಖಲೆ ಅವಧಿಯಲ್ಲಿ ನಮೂದಾಗಿದ್ದರೂ ಎನ್‌ಐಎಯ ವಿಶೇಷ ತೆರವು ಅರ್ಜಿಯ ಪ್ರತಿಯನ್ನು ನವಲಖ ಅವರ ವಕೀಲರಿಗೆ ನೀಡಲಾಗಿಲ್ಲ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ನವಲಖ ಭಾಗಿಯಾಗಿದ್ದಾರೆ ಎಂದು ಆರೋಪಿಸಿ, ಎಪ್ರಿಲ್ 14ರಂದು ಎನ್‌ಐಎಯು ಕರಾಳ ಕಾನೂನುಬಾಹಿರ ಕೃತ್ಯ (ತಡೆ) ಕಾಯಿದೆಯನ್ವಯ ದಿಲ್ಲಿಯಲ್ಲಿ ಅವರನ್ನು ವಶಕ್ಕೆ ತೆಗೆದುಕೊಂಡಿತ್ತು.

ಎನ್‌ಐಎಯ ಮುಂಬಯಿ ಕಚೇರಿಯು ಈ ಪ್ರಕರಣದ ತನಿಖೆ ನಡೆಸುತ್ತಿರುವುದರಿಂದ ಕೋವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ಅವರನ್ನು ಅಲ್ಲಿಗೆ ಸಾಗಿಸುವ ಬದಲು ದಿಲ್ಲಿಯ ತಿಹಾರ್ ಜೈಲಿನಲ್ಲಿ ತಾತ್ಕಾಲಿಕವಾಗಿ, ಆದರೆ ಅನಿರ್ದಿಷ್ಟಾವಧಿಗೆ ಇರಿಸಲಾಗಿತ್ತು.

ಮುಂಬಯಿಯಲ್ಲಿ ಕೊರೋನ ಪ್ರಕರಣಗಳು ವ್ಯಾಪಕವಾಗಿ ಹಬ್ಬಿರುವ ಮತ್ತು ಅಲ್ಲಿನ ಜೈಲುಗಳಲ್ಲಿಯೂ ಸೋಂಕಿತರು ಇರುವ ಕಾರಣದಿಂದ 68 ವರ್ಷ ಪ್ರಾಯದ ನವಲಖ ಅವರ ವೈದ್ಯಕೀಯ ಪರಿಸ್ಥಿತಿ ಮತ್ತು ಅವರು ಎದುರಿಸಬೇಕಾಗಿ ಬರಬಹುದಾದ ಸಂಕೀರ್ಣತೆಗಳ ಹಿನ್ನೆಲೆಯಲ್ಲಿ ಅವರ ವಕೀಲರು ಮಧ್ಯಂತರ ಜಾಮೀನು ಕೋರಿ ದಿಲ್ಲಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.

ಯುಎಪಿಎ ಮತ್ತು ಎನ್‌ಐಎ ಕಾಯಿದೆ ಪ್ರಕಾರ ಸಾಮಾನ್ಯವಾಗಿ ಜಾಮೀನು ಅರ್ಜಿಯ ವಿಚಾರಣೆಯನ್ನು ನಿಯೋಜಿತ ವಿಶೇಷ ನ್ಯಾಯಾಲಯ ನಡೆಸಬೇಕಾಗಿದ್ದರೂ, ದಿಲ್ಲಿಯಲ್ಲಿ ಯಾವುದೇ ಎನ್ಐಎ ವಿಶೇಷ ನ್ಯಾಯಾಲಯ ಕಾರ್ಯಾಚರಿಸದೇ ಇರುವುದರಿಂದ ಮತ್ತು ನವಲಖ ಅವರ ರಿಮಾಂಡ್ ವಿಷಯವನ್ನು ಕೂಡಾ ಸಾಮಾನ್ಯ ನ್ಯಾಯಾಲಯವೇ ನಡೆಸಿರುವುದರಿಂದ ಹೈಕೋರ್ಟ್ ಮಾತ್ರ ಅವರಿಗೆ ಉಳಿದಿರುವ ಏಕೈಕ ದಾರಿಯಾಗಿತ್ತು.

ಹೈಕೋರ್ಟ್ ವ್ಯಾಪ್ತಿಯನ್ನು ಎನ್‌ಐಎ ಒಪ್ಪಿತ್ತು

ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ಮೇ 22ರಂದು ನಡೆದಾಗ ಎನ್‌ಐಎಯು ಯಾವುದೇ ಆಕ್ಷೇಪ ವ್ಯಕ್ತಪಡಿಸಿರಲ್ಲ ಮತ್ತು ಉತ್ತರ ನೀಡಲು ಸಮಯಾವಕಾಶ ಕೇಳಿತ್ತು. ಅದರಂತೆ ಮುಂದಿನ ವಿಚಾರಣೆ ನಡೆಯುವ ಮೇ 27ರ ತನಕ ಸಮಯಾವಕಾಶ ನೀಡಲಾಗಿತ್ತು. ವಿಮಾನಯಾನ ಆರಂಭವಾಗುವ ಹಿನ್ನೆಲೆಯಲ್ಲಿ ಎನ್‌ಐಎಯು ನವಲಖ ಅವರನ್ನು ಮುಂಬಯಿಗೆ ವರ್ಗಾಯಿಸುವ ಉದ್ದೇಶ ಹೊಂದಿದೆ ಎಂದು ಮನಗಂಡ ಹೈಕೋರ್ಟ್, ಸೂಕ್ತ ನ್ಯಾಯಾಲಯದಿಂದ ಆದೇಶ ಪಡೆದ ಮೇಲೆಯೇ ಹಾಗೆ ಮಾಡಬೇಕೆಂದು ನಿರ್ದೇಶಿಸಿತ್ತು.

ಆದರೂ ಮೇ 25ರಂದು ಎನ್‌ಐಎಯು ಅವರನ್ನು ರೈಲಿನಲ್ಲಿ ಮುಂಬಯಿಗೆ ಕೊಂಡೊಯ್ದು, ಮರುದಿನ ಅಲ್ಲಿನ ಎನ್‌ಐಎ ನ್ಯಾಯಾಲಯದಿಂದ ನ್ಯಾಯಾಂಗ ವಶದ ಆದೇಶ ಪಡೆಯಿತು. ಅಂದಿನಿಂದ ಅವರು ಮುಂಬಯಿಯ ಪೂರ್ವ ಭಾಗದಲ್ಲಿರುವ ತಲೋಜ ಜೈಲಿನಲ್ಲಿ ಇದ್ದಾರೆ.

ನವಲಖ ಅವರನ್ನು ಮುಂಬಯಿಗೆ ಕೊಂಡೊಯ್ದ ತರಾತುರಿಯ ಕ್ರಮದಿಂದ ಕಿರಿಕಿರಿಗೆ ಒಳಗಾದ ದಿಲ್ಲಿ ಹೈಕೋರ್ಟ್, ವರ್ಗಾವಣೆಯ ಸಂಪೂರ್ಣ ದಾಖಲೆ ಮತ್ತು ಮುಂಬಯಿಯ ಎನ್‌ಐಎ ನ್ಯಾಯಾಲಯ ನೀಡಿದ ವಾರಂಟ್ ಮಾತ್ರವಲ್ಲ, ದಿಲ್ಲಿಯ ಎನ್ಐಎ ನ್ಯಾಯಾಲಯ ನೀಡಿದ ವರ್ಗಾವಣೆ ಆದೇಶ ಮತ್ತು ಈ ನ್ಯಾಯಾಲಯಗಳಿಗೆ ಅವರ ವೈದ್ಯಕೀಯ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಾಗಿದೆಯೇ ಎಂಬ ಮಾಹಿತಿ ಸಲ್ಲಿಸುವಂತೆ ಆದೇಶಿಸಿತ್ತು.

ಇದಕ್ಕೆ ಜೂನ್ 3ರ ದಿನವನ್ನು ಹೈಕೋರ್ಟ್ ನಿಗದಿಪಡಿಸಿತ್ತು. ಆದರೆ, ಎನ್‌ಐಎಯು ಜೂನ್ 2ರಂದೇ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮೂಲಕ ದಿಲ್ಲಿ ಹೈಕೋರ್ಟಿನ ಪೀಠದ ವಿಚಾರಣೆಗೆ ತಡೆಯಾಜ್ಞೆ ಪಡೆಯಿತು. ಸುಪ್ರೀಂಕೋರ್ಟಿನ ಈ ತಡೆಯಾಜ್ಞೆಯು ದಿಲ್ಲಿ ಹೈಕೋರ್ಟ್ ತನ್ನ ಕಾರ್ಯವ್ಯಾಪ್ತಿಯ ಅಧೀನ ನ್ಯಾಯಾಲಯಗಳ ಮೇಲೆ ಹೊಂದಿರುವ ಅಧಿಕಾರವನ್ನೇ ಪ್ರಶ್ನಿಸಿರುವುದರಿಂದ ಕಾನೂನು ವಲಯದಲ್ಲಿ ಅನೇಕರ ಹುಬ್ಬುಗಳನ್ನು ಮೇಲೇರಿಸಿದೆ!

“ಭಾರತೀಯ ಸಂವಿಧಾನದ ಪ್ರಕಾರ ಹೈಕೋರ್ಟ್‌ಗಳೂ ಸಾಂವಿಧಾನಿಕ ನ್ಯಾಯಾಲಯಗಳಾಗಿದ್ದು, ಅವುಗಳ ಆಜ್ಞೆಗಳನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸುವಾಗ ಎರಡೂ ಕೋರ್ಟ್‌ಗಳು ಒಂದು ಸ್ಥಾನಮಾನ ಹೊಂದಿರುತ್ತವೆ ಮತ್ತು ಯಾವುದೇ ರೀತಿಯಲ್ಲಿ ಹೈಕೋರ್ಟ್‌ಗಳು ಸುಪ್ರೀಂಕೋರ್ಟ್‌ಗಿಂತ ಕೆಳಗೆ ಇಲ್ಲ. ತನ್ನ ಅಧೀನ ನ್ಯಾಯಾಲಯವು ಕಾನೂನು ನಿಯಮಗಳನ್ನು ಪಾಲಿಸಿದೆಯೇ, ಇಲ್ಲವೇ ಎಂದು ವಿಚಾರಿಸುವುದರಿಂದ ಹೈಕೋರ್ಟನ್ನು ತಡೆಯುವಂತಿಲ್ಲ” ಎಂದು ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಹಿರಿಯ ವಕೀಲರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

60 ವರ್ಷ ಮೀರಿದವರಿಗೆ ಕೋವಿಡ್ ಅಪಾಯಕಾರಿಯಾಗಿದ್ದರೂ, 68 ವರ್ಷದ ನವಲಖ ಅವರನ್ನು ಅವರ ವೈದ್ಯಕೀಯ ಪರಿಸ್ಥಿತಿಯನ್ನು ಪರಿಗಣಿಸದೆಯೇ ತರಾತುರಿಯಲ್ಲಿ ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಮುಂಬಯಿಗೆ ರೈಲಿನಲ್ಲಿ ಸಾಗಿಸಿದುದು ಮತ್ತು ಸುಪ್ರೀಂಕೋರ್ಟ್ ಹೈಕೋರ್ಟಿನ ಆದೇಶವನ್ನು ಪರಿಗಣಿಸದೇ ಇರುವುದು ಆಕ್ಷೇಪಾರ್ಹ ಎಂಬುದು ನವಲಖ ಅವರ ವಕೀಲರುಗಳ ವಾದ.


ಓದಿ: ರಾಷ್ಟ್ರೀಯ ತನಿಖಾ ಸಂಸ್ಥೆಯ ಮುಂದೆ ಶರಣಾದ ಹೋರಾಟಗಾರರಾದ ತೇಲ್ತುಂಬ್ಡೆ ಹಾಗೂ ನವಲಖ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...