Homeಮುಖಪುಟಗೌತಮ್ ನವಲಖ ಪ್ರಕರಣ: ಹೈಕೋರ್ಟ್ ಎದುರು ಸುಪ್ರೀಂಕೋರ್ಟ್ ಎತ್ತಿಕಟ್ಟುತ್ತಿರುವ ಸರ್ಕಾರ!

ಗೌತಮ್ ನವಲಖ ಪ್ರಕರಣ: ಹೈಕೋರ್ಟ್ ಎದುರು ಸುಪ್ರೀಂಕೋರ್ಟ್ ಎತ್ತಿಕಟ್ಟುತ್ತಿರುವ ಸರ್ಕಾರ!

- Advertisement -
- Advertisement -

60 ವರ್ಷ ಮೀರಿದವರಿಗೆ ಕೋವಿಡ್ ಅಪಾಯಕಾರಿಯಾಗಿದ್ದರೂ, 68 ವರ್ಷದ ನವಲಖ ಅವರನ್ನು ಅವರ ವೈದ್ಯಕೀಯ ಪರಿಸ್ಥಿತಿಯನ್ನು ಪರಿಗಣಿಸದೆಯೇ ತರಾತುರಿಯಲ್ಲಿ ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಮುಂಬಯಿಗೆ ರೈಲಿನಲ್ಲಿ ಸಾಗಿಸಿದುದು ಮತ್ತು ಸುಪ್ರೀಂಕೋರ್ಟ್ ಹೈಕೋರ್ಟಿನ ಆದೇಶವನ್ನು ಪರಿಗಣಿಸದೇ ಇರುವುದು ಆಕ್ಷೇಪಾರ್ಹ ಎಂಬುದು ನವಲಖ ಅವರ ವಕೀಲರುಗಳ ವಾದ.

ಕೃಪೆ: ದಿ ವೈರ್‌

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಗೌತಮ್ ನವಲಖರ “ಅವಸರದ ವರ್ಗಾವಣೆ”ಯ ವಿವರಗಳನ್ನು ದಿಲ್ಲಿ ಹೈಕೋರ್ಟಿಗೆ ನೀಡಲು ವಿಫಲವಾದ ಎಎನ್‌ಐಗೆ ಸುಪ್ರೀಂಕೋರ್ಟ್‌ನಲ್ಲಿ ತಡೆಯಾಜ್ಞೆ!. ಹಿಂದೆಯೇ ಈ ವಿಷಯದ ಕಾರ್ಯವ್ಯಾಪ್ತಿಯ ಪ್ರಶ್ನೆಯನ್ನು ಎತ್ತಲು ವಿಫಲವಾಗಿ, ನಂತರ ತಾನು ಈ ವಿಷಯವನ್ನು ನಿಭಾಯಿಸಿದ ಕುರಿತು ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದ್ದ ಸರಕಾರವೀಗ ದಿಲ್ಲಿ ಹೈಕೋರ್ಟಿನ ಏಕ ಸದಸ್ಯ ಪೀಠಕ್ಕೆ ಎನ್ಐಎ ಕಾಯಿದೆಯನ್ವಯ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಲು ಕಾರ್ಯವ್ಯಾಪ್ತಿಯಿಲ್ಲವೆಂದು ವಾದಿಸುತ್ತಿದೆ.

ಒಂದು ಸಾಂವಿಧಾನಿಕ ನ್ಯಾಯಾಲಯವನ್ನು ಇನ್ನೊಂದು ಸಾಂವಿಧಾನಿಕ ನ್ಯಾಯಾಲಯದ ಎದುರು ಎತ್ತಿಕಟ್ಟುವ ಕ್ರಮವೊಂದರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಿಲ್ಲಿ ಹೈಕೋರ್ಟಿನ ನ್ಯಾಯಮೂರ್ತಿ ಅನೂಪ್ ಭಂಭಾನಿ ಅವರ ಏಕಸದಸ್ಯ ಪೀಠದ ನಿರ್ದೇಶನವನ್ನು ಪಾಲಿಸುವುದಕ್ಕೆ ಬದಲಾಗಿ ಅವಸರವಸರದಲ್ಲಿ ತಡೆಯಾಜ್ಞೆ ಕೋರಿ ಸುಪ್ರೀಂಕೋರ್ಟಿನ ಮೊರೆಹೋಗಲು ನಿರ್ಧರಿಸಿತು. ಗೌತಮ್ ನವಲಖ ಅವರನ್ನು ತರಾತುರಿಯಲ್ಲಿ ಮುಂಬಯಿಗೆ ವರ್ಗಾಯಿಸಿದ ಪ್ರಕ್ರಿಯೆಯ ಸಂಪೂರ್ಣ ವಿವರಗಳನ್ನು ನೀಡುವಂತೆ ಈ ಪೀಠ ಎನ್‌ಐಎಗೆ ನಿರ್ದೇಶನ ನೀಡಿತ್ತು.

ಪ್ರಸಿದ್ಧ ನಾಗರಿಕ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖ ಅವರನ್ನು ಅವರ ಮಧ್ಯಂತರ ಜಾಮೀನು ಅರ್ಜಿ ಇನ್ನೂ ದಿಲ್ಲಿ ಹೈಕೋರ್ಟಿನಲ್ಲಿ ವಿಚಾರಣೆಗೆ ಬಾಕಿ ಇರುವಾಗಲೇ ಮೇ 25ರಂದು ಕೇವಲ ಐದು ನಿಮಿಷಗಳ ಅವಧಿಯಲ್ಲಿ ಮುಂಬಯಿಗೆ ಹೋಗುವ ರೈಲಿನಲ್ಲಿ ಕುಳ್ಳಿರಿಸಲಾಗಿತ್ತು.

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠವು ಜೂನ್ 2ರಂದು ಆರೋಪಿಯ ಅನುಪಸ್ಥಿತಿಯಲ್ಲಿ ನಡೆಸಿದ ವಿಚಾರಣೆಯಲ್ಲಿ- ದಿಲ್ಲಿ ಹೈಕೋರ್ಟಿಗೆ ಈ ವಿಷಯದಲ್ಲಿ ಕಾರ್ಯವ್ಯಾಪ್ತಿಯಿಲ್ಲವೆಂಬ ಎನ್ಐಎಯ ವಾದವನ್ನು ಜೂನ್ ಮಧ್ಯ ಭಾಗದಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿದೆ.

ವಿಶೇಷವೆಂದರೆ ಸುಪ್ರೀಂಕೋರ್ಟ್ ದಾಖಲೆ ಪುಸ್ತಕದಲ್ಲಿ ದಾಖಲೆ ಅವಧಿಯಲ್ಲಿ ನಮೂದಾಗಿದ್ದರೂ ಎನ್‌ಐಎಯ ವಿಶೇಷ ತೆರವು ಅರ್ಜಿಯ ಪ್ರತಿಯನ್ನು ನವಲಖ ಅವರ ವಕೀಲರಿಗೆ ನೀಡಲಾಗಿಲ್ಲ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ನವಲಖ ಭಾಗಿಯಾಗಿದ್ದಾರೆ ಎಂದು ಆರೋಪಿಸಿ, ಎಪ್ರಿಲ್ 14ರಂದು ಎನ್‌ಐಎಯು ಕರಾಳ ಕಾನೂನುಬಾಹಿರ ಕೃತ್ಯ (ತಡೆ) ಕಾಯಿದೆಯನ್ವಯ ದಿಲ್ಲಿಯಲ್ಲಿ ಅವರನ್ನು ವಶಕ್ಕೆ ತೆಗೆದುಕೊಂಡಿತ್ತು.

ಎನ್‌ಐಎಯ ಮುಂಬಯಿ ಕಚೇರಿಯು ಈ ಪ್ರಕರಣದ ತನಿಖೆ ನಡೆಸುತ್ತಿರುವುದರಿಂದ ಕೋವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ಅವರನ್ನು ಅಲ್ಲಿಗೆ ಸಾಗಿಸುವ ಬದಲು ದಿಲ್ಲಿಯ ತಿಹಾರ್ ಜೈಲಿನಲ್ಲಿ ತಾತ್ಕಾಲಿಕವಾಗಿ, ಆದರೆ ಅನಿರ್ದಿಷ್ಟಾವಧಿಗೆ ಇರಿಸಲಾಗಿತ್ತು.

ಮುಂಬಯಿಯಲ್ಲಿ ಕೊರೋನ ಪ್ರಕರಣಗಳು ವ್ಯಾಪಕವಾಗಿ ಹಬ್ಬಿರುವ ಮತ್ತು ಅಲ್ಲಿನ ಜೈಲುಗಳಲ್ಲಿಯೂ ಸೋಂಕಿತರು ಇರುವ ಕಾರಣದಿಂದ 68 ವರ್ಷ ಪ್ರಾಯದ ನವಲಖ ಅವರ ವೈದ್ಯಕೀಯ ಪರಿಸ್ಥಿತಿ ಮತ್ತು ಅವರು ಎದುರಿಸಬೇಕಾಗಿ ಬರಬಹುದಾದ ಸಂಕೀರ್ಣತೆಗಳ ಹಿನ್ನೆಲೆಯಲ್ಲಿ ಅವರ ವಕೀಲರು ಮಧ್ಯಂತರ ಜಾಮೀನು ಕೋರಿ ದಿಲ್ಲಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.

ಯುಎಪಿಎ ಮತ್ತು ಎನ್‌ಐಎ ಕಾಯಿದೆ ಪ್ರಕಾರ ಸಾಮಾನ್ಯವಾಗಿ ಜಾಮೀನು ಅರ್ಜಿಯ ವಿಚಾರಣೆಯನ್ನು ನಿಯೋಜಿತ ವಿಶೇಷ ನ್ಯಾಯಾಲಯ ನಡೆಸಬೇಕಾಗಿದ್ದರೂ, ದಿಲ್ಲಿಯಲ್ಲಿ ಯಾವುದೇ ಎನ್ಐಎ ವಿಶೇಷ ನ್ಯಾಯಾಲಯ ಕಾರ್ಯಾಚರಿಸದೇ ಇರುವುದರಿಂದ ಮತ್ತು ನವಲಖ ಅವರ ರಿಮಾಂಡ್ ವಿಷಯವನ್ನು ಕೂಡಾ ಸಾಮಾನ್ಯ ನ್ಯಾಯಾಲಯವೇ ನಡೆಸಿರುವುದರಿಂದ ಹೈಕೋರ್ಟ್ ಮಾತ್ರ ಅವರಿಗೆ ಉಳಿದಿರುವ ಏಕೈಕ ದಾರಿಯಾಗಿತ್ತು.

ಹೈಕೋರ್ಟ್ ವ್ಯಾಪ್ತಿಯನ್ನು ಎನ್‌ಐಎ ಒಪ್ಪಿತ್ತು

ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ಮೇ 22ರಂದು ನಡೆದಾಗ ಎನ್‌ಐಎಯು ಯಾವುದೇ ಆಕ್ಷೇಪ ವ್ಯಕ್ತಪಡಿಸಿರಲ್ಲ ಮತ್ತು ಉತ್ತರ ನೀಡಲು ಸಮಯಾವಕಾಶ ಕೇಳಿತ್ತು. ಅದರಂತೆ ಮುಂದಿನ ವಿಚಾರಣೆ ನಡೆಯುವ ಮೇ 27ರ ತನಕ ಸಮಯಾವಕಾಶ ನೀಡಲಾಗಿತ್ತು. ವಿಮಾನಯಾನ ಆರಂಭವಾಗುವ ಹಿನ್ನೆಲೆಯಲ್ಲಿ ಎನ್‌ಐಎಯು ನವಲಖ ಅವರನ್ನು ಮುಂಬಯಿಗೆ ವರ್ಗಾಯಿಸುವ ಉದ್ದೇಶ ಹೊಂದಿದೆ ಎಂದು ಮನಗಂಡ ಹೈಕೋರ್ಟ್, ಸೂಕ್ತ ನ್ಯಾಯಾಲಯದಿಂದ ಆದೇಶ ಪಡೆದ ಮೇಲೆಯೇ ಹಾಗೆ ಮಾಡಬೇಕೆಂದು ನಿರ್ದೇಶಿಸಿತ್ತು.

ಆದರೂ ಮೇ 25ರಂದು ಎನ್‌ಐಎಯು ಅವರನ್ನು ರೈಲಿನಲ್ಲಿ ಮುಂಬಯಿಗೆ ಕೊಂಡೊಯ್ದು, ಮರುದಿನ ಅಲ್ಲಿನ ಎನ್‌ಐಎ ನ್ಯಾಯಾಲಯದಿಂದ ನ್ಯಾಯಾಂಗ ವಶದ ಆದೇಶ ಪಡೆಯಿತು. ಅಂದಿನಿಂದ ಅವರು ಮುಂಬಯಿಯ ಪೂರ್ವ ಭಾಗದಲ್ಲಿರುವ ತಲೋಜ ಜೈಲಿನಲ್ಲಿ ಇದ್ದಾರೆ.

ನವಲಖ ಅವರನ್ನು ಮುಂಬಯಿಗೆ ಕೊಂಡೊಯ್ದ ತರಾತುರಿಯ ಕ್ರಮದಿಂದ ಕಿರಿಕಿರಿಗೆ ಒಳಗಾದ ದಿಲ್ಲಿ ಹೈಕೋರ್ಟ್, ವರ್ಗಾವಣೆಯ ಸಂಪೂರ್ಣ ದಾಖಲೆ ಮತ್ತು ಮುಂಬಯಿಯ ಎನ್‌ಐಎ ನ್ಯಾಯಾಲಯ ನೀಡಿದ ವಾರಂಟ್ ಮಾತ್ರವಲ್ಲ, ದಿಲ್ಲಿಯ ಎನ್ಐಎ ನ್ಯಾಯಾಲಯ ನೀಡಿದ ವರ್ಗಾವಣೆ ಆದೇಶ ಮತ್ತು ಈ ನ್ಯಾಯಾಲಯಗಳಿಗೆ ಅವರ ವೈದ್ಯಕೀಯ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಾಗಿದೆಯೇ ಎಂಬ ಮಾಹಿತಿ ಸಲ್ಲಿಸುವಂತೆ ಆದೇಶಿಸಿತ್ತು.

ಇದಕ್ಕೆ ಜೂನ್ 3ರ ದಿನವನ್ನು ಹೈಕೋರ್ಟ್ ನಿಗದಿಪಡಿಸಿತ್ತು. ಆದರೆ, ಎನ್‌ಐಎಯು ಜೂನ್ 2ರಂದೇ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮೂಲಕ ದಿಲ್ಲಿ ಹೈಕೋರ್ಟಿನ ಪೀಠದ ವಿಚಾರಣೆಗೆ ತಡೆಯಾಜ್ಞೆ ಪಡೆಯಿತು. ಸುಪ್ರೀಂಕೋರ್ಟಿನ ಈ ತಡೆಯಾಜ್ಞೆಯು ದಿಲ್ಲಿ ಹೈಕೋರ್ಟ್ ತನ್ನ ಕಾರ್ಯವ್ಯಾಪ್ತಿಯ ಅಧೀನ ನ್ಯಾಯಾಲಯಗಳ ಮೇಲೆ ಹೊಂದಿರುವ ಅಧಿಕಾರವನ್ನೇ ಪ್ರಶ್ನಿಸಿರುವುದರಿಂದ ಕಾನೂನು ವಲಯದಲ್ಲಿ ಅನೇಕರ ಹುಬ್ಬುಗಳನ್ನು ಮೇಲೇರಿಸಿದೆ!

“ಭಾರತೀಯ ಸಂವಿಧಾನದ ಪ್ರಕಾರ ಹೈಕೋರ್ಟ್‌ಗಳೂ ಸಾಂವಿಧಾನಿಕ ನ್ಯಾಯಾಲಯಗಳಾಗಿದ್ದು, ಅವುಗಳ ಆಜ್ಞೆಗಳನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸುವಾಗ ಎರಡೂ ಕೋರ್ಟ್‌ಗಳು ಒಂದು ಸ್ಥಾನಮಾನ ಹೊಂದಿರುತ್ತವೆ ಮತ್ತು ಯಾವುದೇ ರೀತಿಯಲ್ಲಿ ಹೈಕೋರ್ಟ್‌ಗಳು ಸುಪ್ರೀಂಕೋರ್ಟ್‌ಗಿಂತ ಕೆಳಗೆ ಇಲ್ಲ. ತನ್ನ ಅಧೀನ ನ್ಯಾಯಾಲಯವು ಕಾನೂನು ನಿಯಮಗಳನ್ನು ಪಾಲಿಸಿದೆಯೇ, ಇಲ್ಲವೇ ಎಂದು ವಿಚಾರಿಸುವುದರಿಂದ ಹೈಕೋರ್ಟನ್ನು ತಡೆಯುವಂತಿಲ್ಲ” ಎಂದು ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಹಿರಿಯ ವಕೀಲರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

60 ವರ್ಷ ಮೀರಿದವರಿಗೆ ಕೋವಿಡ್ ಅಪಾಯಕಾರಿಯಾಗಿದ್ದರೂ, 68 ವರ್ಷದ ನವಲಖ ಅವರನ್ನು ಅವರ ವೈದ್ಯಕೀಯ ಪರಿಸ್ಥಿತಿಯನ್ನು ಪರಿಗಣಿಸದೆಯೇ ತರಾತುರಿಯಲ್ಲಿ ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಮುಂಬಯಿಗೆ ರೈಲಿನಲ್ಲಿ ಸಾಗಿಸಿದುದು ಮತ್ತು ಸುಪ್ರೀಂಕೋರ್ಟ್ ಹೈಕೋರ್ಟಿನ ಆದೇಶವನ್ನು ಪರಿಗಣಿಸದೇ ಇರುವುದು ಆಕ್ಷೇಪಾರ್ಹ ಎಂಬುದು ನವಲಖ ಅವರ ವಕೀಲರುಗಳ ವಾದ.


ಓದಿ: ರಾಷ್ಟ್ರೀಯ ತನಿಖಾ ಸಂಸ್ಥೆಯ ಮುಂದೆ ಶರಣಾದ ಹೋರಾಟಗಾರರಾದ ತೇಲ್ತುಂಬ್ಡೆ ಹಾಗೂ ನವಲಖ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...