Homeಮುಖಪುಟಗೌತಮ್ ನವಲಖ ಪ್ರಕರಣ: ಹೈಕೋರ್ಟ್ ಎದುರು ಸುಪ್ರೀಂಕೋರ್ಟ್ ಎತ್ತಿಕಟ್ಟುತ್ತಿರುವ ಸರ್ಕಾರ!

ಗೌತಮ್ ನವಲಖ ಪ್ರಕರಣ: ಹೈಕೋರ್ಟ್ ಎದುರು ಸುಪ್ರೀಂಕೋರ್ಟ್ ಎತ್ತಿಕಟ್ಟುತ್ತಿರುವ ಸರ್ಕಾರ!

- Advertisement -
- Advertisement -

60 ವರ್ಷ ಮೀರಿದವರಿಗೆ ಕೋವಿಡ್ ಅಪಾಯಕಾರಿಯಾಗಿದ್ದರೂ, 68 ವರ್ಷದ ನವಲಖ ಅವರನ್ನು ಅವರ ವೈದ್ಯಕೀಯ ಪರಿಸ್ಥಿತಿಯನ್ನು ಪರಿಗಣಿಸದೆಯೇ ತರಾತುರಿಯಲ್ಲಿ ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಮುಂಬಯಿಗೆ ರೈಲಿನಲ್ಲಿ ಸಾಗಿಸಿದುದು ಮತ್ತು ಸುಪ್ರೀಂಕೋರ್ಟ್ ಹೈಕೋರ್ಟಿನ ಆದೇಶವನ್ನು ಪರಿಗಣಿಸದೇ ಇರುವುದು ಆಕ್ಷೇಪಾರ್ಹ ಎಂಬುದು ನವಲಖ ಅವರ ವಕೀಲರುಗಳ ವಾದ.

ಕೃಪೆ: ದಿ ವೈರ್‌

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಗೌತಮ್ ನವಲಖರ “ಅವಸರದ ವರ್ಗಾವಣೆ”ಯ ವಿವರಗಳನ್ನು ದಿಲ್ಲಿ ಹೈಕೋರ್ಟಿಗೆ ನೀಡಲು ವಿಫಲವಾದ ಎಎನ್‌ಐಗೆ ಸುಪ್ರೀಂಕೋರ್ಟ್‌ನಲ್ಲಿ ತಡೆಯಾಜ್ಞೆ!. ಹಿಂದೆಯೇ ಈ ವಿಷಯದ ಕಾರ್ಯವ್ಯಾಪ್ತಿಯ ಪ್ರಶ್ನೆಯನ್ನು ಎತ್ತಲು ವಿಫಲವಾಗಿ, ನಂತರ ತಾನು ಈ ವಿಷಯವನ್ನು ನಿಭಾಯಿಸಿದ ಕುರಿತು ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದ್ದ ಸರಕಾರವೀಗ ದಿಲ್ಲಿ ಹೈಕೋರ್ಟಿನ ಏಕ ಸದಸ್ಯ ಪೀಠಕ್ಕೆ ಎನ್ಐಎ ಕಾಯಿದೆಯನ್ವಯ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಲು ಕಾರ್ಯವ್ಯಾಪ್ತಿಯಿಲ್ಲವೆಂದು ವಾದಿಸುತ್ತಿದೆ.

ಒಂದು ಸಾಂವಿಧಾನಿಕ ನ್ಯಾಯಾಲಯವನ್ನು ಇನ್ನೊಂದು ಸಾಂವಿಧಾನಿಕ ನ್ಯಾಯಾಲಯದ ಎದುರು ಎತ್ತಿಕಟ್ಟುವ ಕ್ರಮವೊಂದರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಿಲ್ಲಿ ಹೈಕೋರ್ಟಿನ ನ್ಯಾಯಮೂರ್ತಿ ಅನೂಪ್ ಭಂಭಾನಿ ಅವರ ಏಕಸದಸ್ಯ ಪೀಠದ ನಿರ್ದೇಶನವನ್ನು ಪಾಲಿಸುವುದಕ್ಕೆ ಬದಲಾಗಿ ಅವಸರವಸರದಲ್ಲಿ ತಡೆಯಾಜ್ಞೆ ಕೋರಿ ಸುಪ್ರೀಂಕೋರ್ಟಿನ ಮೊರೆಹೋಗಲು ನಿರ್ಧರಿಸಿತು. ಗೌತಮ್ ನವಲಖ ಅವರನ್ನು ತರಾತುರಿಯಲ್ಲಿ ಮುಂಬಯಿಗೆ ವರ್ಗಾಯಿಸಿದ ಪ್ರಕ್ರಿಯೆಯ ಸಂಪೂರ್ಣ ವಿವರಗಳನ್ನು ನೀಡುವಂತೆ ಈ ಪೀಠ ಎನ್‌ಐಎಗೆ ನಿರ್ದೇಶನ ನೀಡಿತ್ತು.

ಪ್ರಸಿದ್ಧ ನಾಗರಿಕ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖ ಅವರನ್ನು ಅವರ ಮಧ್ಯಂತರ ಜಾಮೀನು ಅರ್ಜಿ ಇನ್ನೂ ದಿಲ್ಲಿ ಹೈಕೋರ್ಟಿನಲ್ಲಿ ವಿಚಾರಣೆಗೆ ಬಾಕಿ ಇರುವಾಗಲೇ ಮೇ 25ರಂದು ಕೇವಲ ಐದು ನಿಮಿಷಗಳ ಅವಧಿಯಲ್ಲಿ ಮುಂಬಯಿಗೆ ಹೋಗುವ ರೈಲಿನಲ್ಲಿ ಕುಳ್ಳಿರಿಸಲಾಗಿತ್ತು.

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠವು ಜೂನ್ 2ರಂದು ಆರೋಪಿಯ ಅನುಪಸ್ಥಿತಿಯಲ್ಲಿ ನಡೆಸಿದ ವಿಚಾರಣೆಯಲ್ಲಿ- ದಿಲ್ಲಿ ಹೈಕೋರ್ಟಿಗೆ ಈ ವಿಷಯದಲ್ಲಿ ಕಾರ್ಯವ್ಯಾಪ್ತಿಯಿಲ್ಲವೆಂಬ ಎನ್ಐಎಯ ವಾದವನ್ನು ಜೂನ್ ಮಧ್ಯ ಭಾಗದಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿದೆ.

ವಿಶೇಷವೆಂದರೆ ಸುಪ್ರೀಂಕೋರ್ಟ್ ದಾಖಲೆ ಪುಸ್ತಕದಲ್ಲಿ ದಾಖಲೆ ಅವಧಿಯಲ್ಲಿ ನಮೂದಾಗಿದ್ದರೂ ಎನ್‌ಐಎಯ ವಿಶೇಷ ತೆರವು ಅರ್ಜಿಯ ಪ್ರತಿಯನ್ನು ನವಲಖ ಅವರ ವಕೀಲರಿಗೆ ನೀಡಲಾಗಿಲ್ಲ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ನವಲಖ ಭಾಗಿಯಾಗಿದ್ದಾರೆ ಎಂದು ಆರೋಪಿಸಿ, ಎಪ್ರಿಲ್ 14ರಂದು ಎನ್‌ಐಎಯು ಕರಾಳ ಕಾನೂನುಬಾಹಿರ ಕೃತ್ಯ (ತಡೆ) ಕಾಯಿದೆಯನ್ವಯ ದಿಲ್ಲಿಯಲ್ಲಿ ಅವರನ್ನು ವಶಕ್ಕೆ ತೆಗೆದುಕೊಂಡಿತ್ತು.

ಎನ್‌ಐಎಯ ಮುಂಬಯಿ ಕಚೇರಿಯು ಈ ಪ್ರಕರಣದ ತನಿಖೆ ನಡೆಸುತ್ತಿರುವುದರಿಂದ ಕೋವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ಅವರನ್ನು ಅಲ್ಲಿಗೆ ಸಾಗಿಸುವ ಬದಲು ದಿಲ್ಲಿಯ ತಿಹಾರ್ ಜೈಲಿನಲ್ಲಿ ತಾತ್ಕಾಲಿಕವಾಗಿ, ಆದರೆ ಅನಿರ್ದಿಷ್ಟಾವಧಿಗೆ ಇರಿಸಲಾಗಿತ್ತು.

ಮುಂಬಯಿಯಲ್ಲಿ ಕೊರೋನ ಪ್ರಕರಣಗಳು ವ್ಯಾಪಕವಾಗಿ ಹಬ್ಬಿರುವ ಮತ್ತು ಅಲ್ಲಿನ ಜೈಲುಗಳಲ್ಲಿಯೂ ಸೋಂಕಿತರು ಇರುವ ಕಾರಣದಿಂದ 68 ವರ್ಷ ಪ್ರಾಯದ ನವಲಖ ಅವರ ವೈದ್ಯಕೀಯ ಪರಿಸ್ಥಿತಿ ಮತ್ತು ಅವರು ಎದುರಿಸಬೇಕಾಗಿ ಬರಬಹುದಾದ ಸಂಕೀರ್ಣತೆಗಳ ಹಿನ್ನೆಲೆಯಲ್ಲಿ ಅವರ ವಕೀಲರು ಮಧ್ಯಂತರ ಜಾಮೀನು ಕೋರಿ ದಿಲ್ಲಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.

ಯುಎಪಿಎ ಮತ್ತು ಎನ್‌ಐಎ ಕಾಯಿದೆ ಪ್ರಕಾರ ಸಾಮಾನ್ಯವಾಗಿ ಜಾಮೀನು ಅರ್ಜಿಯ ವಿಚಾರಣೆಯನ್ನು ನಿಯೋಜಿತ ವಿಶೇಷ ನ್ಯಾಯಾಲಯ ನಡೆಸಬೇಕಾಗಿದ್ದರೂ, ದಿಲ್ಲಿಯಲ್ಲಿ ಯಾವುದೇ ಎನ್ಐಎ ವಿಶೇಷ ನ್ಯಾಯಾಲಯ ಕಾರ್ಯಾಚರಿಸದೇ ಇರುವುದರಿಂದ ಮತ್ತು ನವಲಖ ಅವರ ರಿಮಾಂಡ್ ವಿಷಯವನ್ನು ಕೂಡಾ ಸಾಮಾನ್ಯ ನ್ಯಾಯಾಲಯವೇ ನಡೆಸಿರುವುದರಿಂದ ಹೈಕೋರ್ಟ್ ಮಾತ್ರ ಅವರಿಗೆ ಉಳಿದಿರುವ ಏಕೈಕ ದಾರಿಯಾಗಿತ್ತು.

ಹೈಕೋರ್ಟ್ ವ್ಯಾಪ್ತಿಯನ್ನು ಎನ್‌ಐಎ ಒಪ್ಪಿತ್ತು

ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ಮೇ 22ರಂದು ನಡೆದಾಗ ಎನ್‌ಐಎಯು ಯಾವುದೇ ಆಕ್ಷೇಪ ವ್ಯಕ್ತಪಡಿಸಿರಲ್ಲ ಮತ್ತು ಉತ್ತರ ನೀಡಲು ಸಮಯಾವಕಾಶ ಕೇಳಿತ್ತು. ಅದರಂತೆ ಮುಂದಿನ ವಿಚಾರಣೆ ನಡೆಯುವ ಮೇ 27ರ ತನಕ ಸಮಯಾವಕಾಶ ನೀಡಲಾಗಿತ್ತು. ವಿಮಾನಯಾನ ಆರಂಭವಾಗುವ ಹಿನ್ನೆಲೆಯಲ್ಲಿ ಎನ್‌ಐಎಯು ನವಲಖ ಅವರನ್ನು ಮುಂಬಯಿಗೆ ವರ್ಗಾಯಿಸುವ ಉದ್ದೇಶ ಹೊಂದಿದೆ ಎಂದು ಮನಗಂಡ ಹೈಕೋರ್ಟ್, ಸೂಕ್ತ ನ್ಯಾಯಾಲಯದಿಂದ ಆದೇಶ ಪಡೆದ ಮೇಲೆಯೇ ಹಾಗೆ ಮಾಡಬೇಕೆಂದು ನಿರ್ದೇಶಿಸಿತ್ತು.

ಆದರೂ ಮೇ 25ರಂದು ಎನ್‌ಐಎಯು ಅವರನ್ನು ರೈಲಿನಲ್ಲಿ ಮುಂಬಯಿಗೆ ಕೊಂಡೊಯ್ದು, ಮರುದಿನ ಅಲ್ಲಿನ ಎನ್‌ಐಎ ನ್ಯಾಯಾಲಯದಿಂದ ನ್ಯಾಯಾಂಗ ವಶದ ಆದೇಶ ಪಡೆಯಿತು. ಅಂದಿನಿಂದ ಅವರು ಮುಂಬಯಿಯ ಪೂರ್ವ ಭಾಗದಲ್ಲಿರುವ ತಲೋಜ ಜೈಲಿನಲ್ಲಿ ಇದ್ದಾರೆ.

ನವಲಖ ಅವರನ್ನು ಮುಂಬಯಿಗೆ ಕೊಂಡೊಯ್ದ ತರಾತುರಿಯ ಕ್ರಮದಿಂದ ಕಿರಿಕಿರಿಗೆ ಒಳಗಾದ ದಿಲ್ಲಿ ಹೈಕೋರ್ಟ್, ವರ್ಗಾವಣೆಯ ಸಂಪೂರ್ಣ ದಾಖಲೆ ಮತ್ತು ಮುಂಬಯಿಯ ಎನ್‌ಐಎ ನ್ಯಾಯಾಲಯ ನೀಡಿದ ವಾರಂಟ್ ಮಾತ್ರವಲ್ಲ, ದಿಲ್ಲಿಯ ಎನ್ಐಎ ನ್ಯಾಯಾಲಯ ನೀಡಿದ ವರ್ಗಾವಣೆ ಆದೇಶ ಮತ್ತು ಈ ನ್ಯಾಯಾಲಯಗಳಿಗೆ ಅವರ ವೈದ್ಯಕೀಯ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಾಗಿದೆಯೇ ಎಂಬ ಮಾಹಿತಿ ಸಲ್ಲಿಸುವಂತೆ ಆದೇಶಿಸಿತ್ತು.

ಇದಕ್ಕೆ ಜೂನ್ 3ರ ದಿನವನ್ನು ಹೈಕೋರ್ಟ್ ನಿಗದಿಪಡಿಸಿತ್ತು. ಆದರೆ, ಎನ್‌ಐಎಯು ಜೂನ್ 2ರಂದೇ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮೂಲಕ ದಿಲ್ಲಿ ಹೈಕೋರ್ಟಿನ ಪೀಠದ ವಿಚಾರಣೆಗೆ ತಡೆಯಾಜ್ಞೆ ಪಡೆಯಿತು. ಸುಪ್ರೀಂಕೋರ್ಟಿನ ಈ ತಡೆಯಾಜ್ಞೆಯು ದಿಲ್ಲಿ ಹೈಕೋರ್ಟ್ ತನ್ನ ಕಾರ್ಯವ್ಯಾಪ್ತಿಯ ಅಧೀನ ನ್ಯಾಯಾಲಯಗಳ ಮೇಲೆ ಹೊಂದಿರುವ ಅಧಿಕಾರವನ್ನೇ ಪ್ರಶ್ನಿಸಿರುವುದರಿಂದ ಕಾನೂನು ವಲಯದಲ್ಲಿ ಅನೇಕರ ಹುಬ್ಬುಗಳನ್ನು ಮೇಲೇರಿಸಿದೆ!

“ಭಾರತೀಯ ಸಂವಿಧಾನದ ಪ್ರಕಾರ ಹೈಕೋರ್ಟ್‌ಗಳೂ ಸಾಂವಿಧಾನಿಕ ನ್ಯಾಯಾಲಯಗಳಾಗಿದ್ದು, ಅವುಗಳ ಆಜ್ಞೆಗಳನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸುವಾಗ ಎರಡೂ ಕೋರ್ಟ್‌ಗಳು ಒಂದು ಸ್ಥಾನಮಾನ ಹೊಂದಿರುತ್ತವೆ ಮತ್ತು ಯಾವುದೇ ರೀತಿಯಲ್ಲಿ ಹೈಕೋರ್ಟ್‌ಗಳು ಸುಪ್ರೀಂಕೋರ್ಟ್‌ಗಿಂತ ಕೆಳಗೆ ಇಲ್ಲ. ತನ್ನ ಅಧೀನ ನ್ಯಾಯಾಲಯವು ಕಾನೂನು ನಿಯಮಗಳನ್ನು ಪಾಲಿಸಿದೆಯೇ, ಇಲ್ಲವೇ ಎಂದು ವಿಚಾರಿಸುವುದರಿಂದ ಹೈಕೋರ್ಟನ್ನು ತಡೆಯುವಂತಿಲ್ಲ” ಎಂದು ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಹಿರಿಯ ವಕೀಲರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

60 ವರ್ಷ ಮೀರಿದವರಿಗೆ ಕೋವಿಡ್ ಅಪಾಯಕಾರಿಯಾಗಿದ್ದರೂ, 68 ವರ್ಷದ ನವಲಖ ಅವರನ್ನು ಅವರ ವೈದ್ಯಕೀಯ ಪರಿಸ್ಥಿತಿಯನ್ನು ಪರಿಗಣಿಸದೆಯೇ ತರಾತುರಿಯಲ್ಲಿ ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಮುಂಬಯಿಗೆ ರೈಲಿನಲ್ಲಿ ಸಾಗಿಸಿದುದು ಮತ್ತು ಸುಪ್ರೀಂಕೋರ್ಟ್ ಹೈಕೋರ್ಟಿನ ಆದೇಶವನ್ನು ಪರಿಗಣಿಸದೇ ಇರುವುದು ಆಕ್ಷೇಪಾರ್ಹ ಎಂಬುದು ನವಲಖ ಅವರ ವಕೀಲರುಗಳ ವಾದ.


ಓದಿ: ರಾಷ್ಟ್ರೀಯ ತನಿಖಾ ಸಂಸ್ಥೆಯ ಮುಂದೆ ಶರಣಾದ ಹೋರಾಟಗಾರರಾದ ತೇಲ್ತುಂಬ್ಡೆ ಹಾಗೂ ನವಲಖ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....