Homeಮುಖಪುಟಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

- Advertisement -
- Advertisement -

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಾಲಯದ ಆದೇಶಗಳ ವಿರುದ್ಧ ಮೇಲ್ಮನವಿ ಸಲ್ಲಿಸಬಹುದೇ ಹೊರತು, ನ್ಯಾಯಾಧೀಶರು ನೀಡಿದ ನಿರ್ದಿಷ್ಟ ಆದೇಶ ಸಮಾಜದ ಒಂದು ವರ್ಗಕ್ಕೆ ಇಷ್ಟವಾಗಿಲ್ಲ ಎಂಬ ಕಾರಣಕ್ಕೆ ಅವರಿಗೆ ಬೆದರಿಕೆ ಹಾಕಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ವಿವೇಕ್ ಅಗರ್ವಾಲ್ ಮತ್ತು ಅವನೀಂದ್ರ ಸಿಂಗ್ ಅವರ ಪೀಠ ಹೇಳಿದೆ.

ನ್ಯಾಯಾಧೀಶೆ ತಬಸ್ಸುಮ್ ಖಾನ್ ಅವರನ್ನು ಗುರಿಯಾಗಿಸಿರುವ ಇಂತಹ ಪ್ರಕರಣಗಳು “ನಮ್ಮ ನ್ಯಾಯಾಂಗ ಅಧಿಕಾರಿಗಳ ನಿರ್ಭೀತ ಕಾರ್ಯವೈಖರಿ ಮತ್ತು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ನೇರವಾಗಿ ಅಡ್ಡಿಪಡಿಸುತ್ತವೆ” ಎಂದು ಪೀಠ ಬುಧವಾರ (ಜುಲೈ 1) ಹೊರಡಿಸಿದ ತನ್ನ ಆದೇಶದಲ್ಲಿ ತಿಳಿಸಿದೆ.

ನ್ಯಾಯಾಧೀಶೆ ಖಾನ್ ಅವರಿಗೆ ಬೆದರಿಕೆ ಹಾಕಿದವರನ್ನು ಪತ್ತೆಹಚ್ಚಲು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮೂರು ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆ ನ್ಯಾಯಾಧೀಶರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಮತ್ತು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.

ಅಲ್ಲದೆ, ನ್ಯಾಯಾಧೀಶೆ ಖಾನ್ ಅವರಿಗೆ ನರ್ಮದಾಪುರಂ ಪೊಲೀಸ್ ವರಿಷ್ಠಾಧಿಕಾರಿಗಳಿಂದ ರಕ್ಷಣೆ ನೀಡುವಂತೆ ನ್ಯಾಯಾಧೀಶರು ನಿರ್ದೇಶಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರವು, ಜಿಲ್ಲಾ ನ್ಯಾಯಾಧೀಶರಿಗೆ ಈಗಾಗಲೇ ರಕ್ಷಣೆ ನೀಡಲಾಗಿದೆ ಎಂದು ಪೀಠಕ್ಕೆ ತಿಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐಆರ್) ದಾಖಲಿಸಲಾಗಿದೆ ಎಂದು ಉಪ ಅಡ್ವೊಕೇಟ್ ಜನರಲ್ ಅಭಿಜೀತ್ ಅವಸ್ತಿ ಅವರು ಮಾಹಿತಿ ನೀಡಿದ್ದಾರೆ.

2022ರಲ್ಲಿ ನರ್ಮದಾಪುರಂನಲ್ಲಿ ನಡೆದ ಜಾನುವಾರು ಸಾಗಣೆದಾರರೊಬ್ಬರ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೂನ್ 12ರಂದು ಏಳು ಮಂದಿ ಅಪರಾಧಿಗಳಿಗೆ ನ್ಯಾಯಾಧೀಶೆ ಖಾನ್ ಅವರು ಜೀವಾವಧಿ ಶಿಕ್ಷೆ ವಿಧಿಸಿದ್ದರು. ನಂತರ ಅವರಿಗೆ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಅಪರಾಧಿಗಳನ್ನು ಬಿಡುಗಡೆ ಮಾಡದಿದ್ದರೆ ‘ಮಾರಣಹೋಮ’ ನಡೆಸುವುದಾಗಿ ಒಬ್ಬ ವ್ಯಕ್ತಿ ವಿಡಿಯೋ ಪೋಸ್ಟ್ ಮಾಡಿದ್ದರೆ, ಮತ್ತೊಂದು ಖಾತೆಯು ನ್ಯಾಯಾಧೀಶೆಯನ್ನು ದೇಶದಿಂದ ಹೊರಹಾಕುವಂತೆ ಹಿಂದೂಗಳಿಗೆ ಕರೆ ನೀಡಿದೆ. ಇನ್ನು ಕೆಲವರು ಆಕೆಯ ಧರ್ಮದ ಕಾರಣಕ್ಕಾಗಿಯೇ ಈ ತೀರ್ಪು ಬಂದಿದೆ ಎಂದು ಬರೆದುಕೊಂಡಿದ್ದಾರೆ.

“ಕಾನೂನಿನ ಚೌಕಟ್ಟಿನಲ್ಲಿ ನೀಡಲಾದ ತೀರ್ಪಿಗೆ ನ್ಯಾಯಾಧೀಶರು ವೈಯಕ್ತಿಕ ಪರಿಣಾಮಗಳನ್ನು ಎದುರಿಸುವುದಾದರೆ, ಅದು ಭಾರತೀಯ ನ್ಯಾಯಾಂಗ ವ್ಯವಸ್ಥೆಯ ‘ಬೆನ್ನೆಲುಬು’ ಆಗಿರುವ ಜಿಲ್ಲಾ ನ್ಯಾಯಾಲಯಗಳ ಸ್ವಾತಂತ್ರ್ಯ ಮತ್ತು ಕಾರ್ಯವೈಖರಿಯ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಬೀರಬಹುದು” ಎಂದು ಸುಪ್ರೀಂ ಕೋರ್ಟ್ ಅಡ್ವೊಕೇಟ್ಸ್ ಆನ್ ರೆಕಾರ್ಡ್ ಅಸೋಸಿಯೇಷನ್ ಬುಧವಾರ ಹೇಳಿದೆ.

ಶುಕ್ರವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಯುನೈಟೆಡ್ ಕ್ರಿಶ್ಚಿಯನ್ ಫೋರಂ (ಯುಸಿಎಫ್) ಕೂಡ ನ್ಯಾಯಾಧೀಶರಾದ ಖಾನ್ ಅವರೊಂದಿಗೆ ತನ್ನ ಒಗ್ಗಟ್ಟನ್ನು ವ್ಯಕ್ತಪಡಿಸಿದೆ ಮತ್ತು ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ಅಭಿಯಾನವನ್ನು ಬಲವಾಗಿ ಖಂಡಿಸಿದೆ.

“ಈ ಉದ್ದೇಶಪೂರ್ವಕ ಹಗೆತನದ ವಿರುದ್ಧ ಯುಸಿಎಫ್ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರೊಂದಿಗೆ ದೃಢವಾಗಿ ನಿಲ್ಲುತ್ತದೆ; ದೇಶದ ಸ್ವತಂತ್ರ ನ್ಯಾಯಾಂಗದ ಮೇಲೆ ನಮಗೆ ಪೂರ್ಣ ನಂಬಿಕೆಯಿದೆ ಮತ್ತು ರಾಜ್ಯ ಸರ್ಕಾರವು ಅವರಿಗೆ ಶೀಘ್ರದಲ್ಲೇ ತಕ್ಷಣದ ಮತ್ತು ಸಮಗ್ರ ಭದ್ರತೆಯನ್ನು ಒದಗಿಸುವುದರ ಜೊತೆಗೆ, ಅವರ ವಿರುದ್ಧ ದ್ವೇಷದ ಅಭಿಯಾನವನ್ನು ಪ್ರಚೋದಿಸುತ್ತಿರುವ ವ್ಯಕ್ತಿಗಳನ್ನು ಕಾನೂನಿನ ಅಡಿಯಲ್ಲಿ ತ್ವರಿತವಾಗಿ ವಿಚಾರಣೆಗೆ ಒಳಪಡಿಸುತ್ತದೆ ಎಂದು ಆಶಿಸುತ್ತದೆ” ಎಂದು ಅದು ಹೇಳಿದೆ.

“ಅಂತಿಮವಾಗಿ, ಇದು ಕೇವಲ ಒಬ್ಬ ನ್ಯಾಯಾಧೀಶರ ಭದ್ರತೆಗೆ ಸಂಬಂಧಿಸಿದ ಪ್ರಶ್ನೆಯಲ್ಲ, ಬದಲಿಗೆ ಪ್ರಜಾಪ್ರಭುತ್ವದ ಅತ್ಯಂತ ಪ್ರಮುಖ ಸ್ತಂಭವನ್ನು ರಕ್ಷಿಸುವ ವಿಷಯವಾಗಿದೆ” ಎಂದು ಫೋರಂನ ರಾಷ್ಟ್ರೀಯ ಅಧ್ಯಕ್ಷ ಮೈಕೆಲ್ ವಿಲಿಯಮ್ಸ್ ಹೇಳಿದ್ದಾರೆ. “ನ್ಯಾಯಾಂಗದ ಸ್ವಾತಂತ್ರ್ಯದ ಮೇಲಿನ ವಿಶ್ವಸಂಸ್ಥೆಯ ಮೂಲಭೂತ ತತ್ವಗಳಂತಹ ಅಂತಾರಾಷ್ಟ್ರೀಯ ಚೌಕಟ್ಟುಗಳು, ನ್ಯಾಯಾಧೀಶರು ಯಾವುದೇ ಸೂಕ್ತವಲ್ಲದ ಪ್ರಭಾವಗಳು, ಪ್ರಲೋಭನೆಗಳು ಅಥವಾ ಬೆದರಿಕೆಗಳಿಂದ ಮುಕ್ತವಾಗಿ ವಿಷಯಗಳನ್ನು ನಿರ್ಧರಿಸುವುದನ್ನು ರಾಜ್ಯ ಸರ್ಕಾರವು ಖಾತರಿಪಡಿಸಬೇಕು ಎಂದು ಆದೇಶಿಸುತ್ತವೆ” ಎಂಬುದನ್ನು ಸಹ ಸಂಸ್ಥೆಯು ನೆನಪಿಸಿದೆ.








ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...