Homeಕರ್ನಾಟಕಸೌಜನ್ಯ ಪ್ರಕರಣ | ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

ಸೌಜನ್ಯ ಪ್ರಕರಣ | ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

- Advertisement -
- Advertisement -

ಸೌಜನ್ಯ ಅತ್ಯಾಚಾರ, ಕೊಲೆ ಖಂಡಿಸಿ ಏಪ್ರಿಲ್ 6ರಂದು ಧರ್ಮಸ್ಥಳದಲ್ಲಿ ನಡೆಸಲು ಉದ್ದೇಶಿಸಿ ಪ್ರತಿಭಟನೆಗೆ ಹೈಕೋರ್ಟ್ ಶುಕ್ರವಾರ (ಏ.4) ತಾತ್ಕಾಲಿಕ ತಡೆ ನೀಡಿದೆ.

ಪ್ರತಿಭಟನೆಗೆ ತಡೆ ನೀಡಬೇಕು ಎಂದು ಕೋರಿ ಧನಕೀರ್ತಿ ಆರಿಗ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಮುಂದಿನ ವಿಚಾರಣೆಯವರೆಗೂ ಪ್ರತಿಭಟನೆ ನಡೆಸದಂತೆ ತಾತ್ಕಾಲಿಕ ತಡೆ ನೀಡಿ ಆದೇಶಿಸಿದೆ ಎಂದು barandbench.com ವರದಿ ಮಾಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರತಿಭಟನೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಚರ್ಚೆ ನಡೆಸಿರುವ ಕುರಿತಂತೆ ಸಂದೇಶಗಳನ್ನು ಪೀಠಕ್ಕೆ ಗಮನಕ್ಕೆ ತಂದಿದ್ದಾರೆ. ನ್ಯಾಯಾಲಯ ಈ ಹಿಂದೆ ಧರ್ಮಸ್ಥಳ ದೇವಾಲಯ ಹಾಗೂ ಧರ್ಮಾಧಿಕಾರಿಗಳ ಪರವಾಗಿ ಹೊರಡಿಸಿದ್ದ ಆದೇಶಗಳನ್ನು ಉಲ್ಲಂಘಿಸುವ ಸಾಧ್ಯತೆಯಿದೆ. ಅಲ್ಲದೆ, ಬಲವಂತವಾಗಿ ದೇವಸ್ಥಾನ ಪ್ರವೇಶಿಸುವ ಯತ್ನಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಪೀಠಕ್ಕೆ ತಿಳಿಸಿದ್ದಾರೆ.

ಈ ಅಂಶ ದಾಖಲಿಸಿಕೊಂಡ ಪೀಠ, ಪ್ರತಿಭಟನೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಅಲ್ಲದೇ, ಪ್ರತಿಭಟನೆಯ ಆಯೋಜಕರಿಗೆ ತುರ್ತು ನೋಟಿಸ್​ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ ಎಂದು ವರದಿ ವಿವರಿಸಿದೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ವ್ಯಕ್ತಿಯನ್ನು ನ್ಯಾಯಾಲಯ ನಿರಪರಾಧಿ ಎಂದು ಘೋಷಣೆ ಮಾಡಿದೆ. ಹಾಗಾಗಿ, ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು ಎಂದು ಆಗ್ರಹಿಸಿ ಏಪ್ರಿಲ್​ 6ರಂದು ಧರ್ಮಸ್ಥಳದಲ್ಲಿ ಪ್ರತಿಭಟನೆ ನಡೆಸುವುದಕ್ಕೆ ವಿವಿಧ ಸಂಘಟನೆಗಳು ಮುಂದಾಗಿದ್ದವು ಎಂದು ತಿಳಿದು ಬಂದಿದೆ.

ಕಳೆದ ತಿಂಗಳು ಬೆಂಗಳೂರಿನಲ್ಲಿ ಸೌಜನ್ಯ ಪರ ಹೋರಾಟದ ಸಮಾಲೋಚನಾ ಸಭೆಗೆ ಅನುಮತಿ ನಿರಾಕರಿಸಿದ ಪೊಲೀಸರ​ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಾಂತಿಯುತ ಪ್ರತಿಭಟನೆಗೆ ಅವಕಾಶ ನಿರಾಕರಿಸಲಾಗದು ಎಂದು ಆದೇಶಿಸಿತ್ತು.

ಮಹಿಳೆಯರಿಗೆ 1,000 ತ್ರಿಶೂಲ ವಿತರಣೆ: ಪ್ರಮೋದ್ ಮುತಾಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...