Homeಮುಖಪುಟವೇದ್ಯಕೀಯ ಸೀಟುಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ಮೀಸಲಾತಿ: ತಮಿಳುನಾಡು ಸರ್ಕಾರದ ಕಾನೂನು ಎತ್ತಿ...

ವೇದ್ಯಕೀಯ ಸೀಟುಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ಮೀಸಲಾತಿ: ತಮಿಳುನಾಡು ಸರ್ಕಾರದ ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಸಾಮಾಜಿಕ ನ್ಯಾಯದ ಪಯಣದಲ್ಲಿ ನಮ್ಮ ಪ್ರತಿ ಹೆಜ್ಜೆಯೂ ಗಟ್ಟಿಯಾಗಿದೆ ಎಂಬುದನ್ನು ಹೈಕೋರ್ಟ್ ತೀರ್ಪು ತೋರಿಸುತ್ತದೆ - ತಮಿಳುನಾಡು ಸಿಎಂ ಸ್ಟಾಲಿನ್

- Advertisement -
- Advertisement -

ವೈದ್ಯಕೀಯ ಕಾಲೇಜು ಪ್ರವೇಶದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೇ 7.5ರಷ್ಟು ಸೀಟುಗಳನ್ನು ಮೀಸಲಿಡುವ ತಮಿಳುನಾಡು ಸರ್ಕಾರದ ಕಾನೂನನ್ನು ಮದ್ರಾಸ್ ಹೈಕೋರ್ಟ್ ಗುರುವಾರ ಎತ್ತಿಹಿಡಿದಿದೆ.

ಮೀಸಲಾತಿ ನೀಡುವ ಸರ್ಕಾರ ಕಾನೂನಿನ ಮಾನ್ಯತೆ ಪ್ರಶ್ನಿಸಿ ಹಲವಾರು ಜನ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಮುನೀಶ್ವರನಾಥ್ ಭಂಡಾರಿ ಮತ್ತು ಡಿ.ಭರತ ಚಕ್ರವರ್ತಿಯವರಿದ್ದ ಪೀಠವು ಈ ಕಾನೂನು ಮಾನ್ಯವಾಗಿದ್ದು, ಮೀಸಲಾತಿ ನೀಡುವ ಅಧಿಕಾರ ಸರಕಾರಕ್ಕಿದೆ ಎಂದು ಹೇಳಿದೆ.

ಅರ್ಜಿದಾರರು ಈಗಾಗಲೇ ತಮಿಳುನಾಡಿನಲ್ಲಿ ಶೇ. 69 ರಷ್ಟು ಮೀಸಲಾತಿ ಇದ್ದು ಜನರಲ್ ಕ್ಯಾಟಗರಿ ವಿದ್ಯಾರ್ತಿಗಳಿಗೆ ಕೇವಲ ಶೇ.31 ಮಾತ್ರ ಇದೆ. ಈಗ ಶೇ. 7.5 ಮೀಸಲಾತಿ ನೀಡಿದರೆ ಮತ್ತಷ್ಟು ತೊಂದರೆಯಾಗುತ್ತದೆ ಎಂದು ವಾದಿಸಿದ್ದರು.

ಕಾನೂನನ್ನು ಸಮರ್ಥಿಸಿಕೊಂಡಿದ್ದ ತಮಿಳುನಾಡು ಸರ್ಕಾರ, “ಇದು ಬಡವ-ಶ್ರೀಮಂತ ಹಾಗೂ ನಗರ-ಗ್ರಾಮೀಣ ವಿದ್ಯಾರ್ಥಿಗಳ ನಡುವಿನ ಅಂತರವನ್ನು ತಗ್ಗಿಸಲು ಈ ಮೀಸಲಾತಿಯು ಅಗತ್ಯವಾಗಿದೆ” ಎಂದಿತ್ತು. ಪ್ರಬಲ ಜಾತಿಗಳಿಗೆ ಸಾಮಾಜಿಕ ಬಂಡವಾಳವಿದೆ ಹಾಗಾಗಿ ತಳವರ್ಗದ ಜನರನ್ನು ಮೇಲೆತ್ತುವುದು ಸರ್ಕಾರದ ಜವಾಬ್ದಾರಿಯಾಗಿದ್ದು ಈ ರೀತಿಯ ಕಾನೂನುಗಳಿಗೆ ಸುಪ್ರೀಂ ಕೋರ್ಟ್‌ನ ಬೆಂಬಲವಿದೆ” ಎಂದು ವಾದಿಸಿತು.

ಸರ್ಕಾರದ ವಾದವನ್ನು ಪುರಸ್ಕರಿಸಿರುವ ನ್ಯಾಯಾಲಯಗಳನ್ನು ಅರ್ಜಿಗಳನ್ನು ವಜಾ ಮಾಡಿದೆ. ಅಲ್ಲದೆ ಐದು ವರ್ಷಗಳ ನಂತರ ಈ ಮೀಸಲಾತಿಯನ್ನು ಪರಿಶೀಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ತೀರ್ಪನ್ನು ಐತಿಹಾಸಿಕ ಎಂದು ಬಣ್ಣಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, “ಸಾಮಾಜಿಕ ನ್ಯಾಯದ ಪಯಣದಲ್ಲಿ ನಮ್ಮ ಪ್ರತಿ ಹೆಜ್ಜೆಯೂ ಗಟ್ಟಿಯಾಗಿದೆ ಎಂಬುದನ್ನು ಹೈಕೋರ್ಟ್ ತೀರ್ಪು ತೋರಿಸುತ್ತದೆ. ಕಳೆದ 10 ತಿಂಗಳ ಡಿಎಂಕೆ ಆಡಳಿತದ ಸರ್ಕಾರಕ್ಕೆ ಇದು ಮೂರನೇ ಗೆಲುವು. ಸರಿಯಾದ ಅಂಕಿಅಂಶಗಳು ಮತ್ತು ಚರ್ಚೆಗಳ ಆಧಾರದ ಮೇಲೆ ಈ ಕಾನೂನನ್ನು ತರಲಾಗಿದೆ” ಎಂದಿದ್ದಾರೆ.

ಕಾನೂನನ್ನು ಎಐಎಡಿಎಂಕೆ ಸರ್ಕಾರ ತಂದಿದ್ದರೂ, ವನ್ನಿಯಾರ್ ಮೀಸಲಾತಿ ಪ್ರಕರಣದಲ್ಲಿ ನಾವು ಪ್ರಬಲವಾಗಿ ವಾದಿಸಿದ್ದೇವೆ. ಆದರೆ, ತರಾತುರಿಯಲ್ಲಿ ಎಐಎಡಿಎಂಕೆ ಮಾಡಿದ ತಪ್ಪಿನಿಂದ ತೀರ್ಪು ಸಂಪೂರ್ಣವಾಗಿ ನಮ್ಮ ಪರವಾಗಿ ಬರಲಿಲ್ಲ. ಈಗ ಅದನ್ನು ಸಾಧಿಸಿದ್ದೇವೆ ಎಂದಿದ್ದಾರೆ.

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮೀಸಲಾತಿಯನ್ನು ಎಐಎಡಿಎಂಕೆ ಸರ್ಕಾರ ಘೋಷಿಸಿತ್ತು. ಆದರೆ ಕೆಲವು ದೋಷಗಳು ಎದುರಾದ್ದರಿಂದ ಜಾರಿಯಾಗಿರಲಿಲ್ಲ. ಪ್ರಸ್ತುತ ಡಿಎಂಕೆ ಸರ್ಕಾರವು ಕಾನೂನು ಆಗಿ ಜಾರಿಗೆ ತಂದಿದೆ.

ಡಿಎಂಕೆ ಸರ್ಕಾರವು ಇದೇ ರೀತಿಯಾಗಿ ಇಂಜಿನಿಯರಿಂಗ್/ಕೃಷಿ/ಮೀನುಗಾರಿಕೆ/ಪಶುವೈದ್ಯಕೀಯ ಕೋರ್ಸ್‌ಗಳಲ್ಲಿ ಸರ್ಕಾರಿ ಕಾಲೇಜುಗಳು, ವಿಶ್ವವಿದ್ಯಾನಿಲಯಗಳು ಮತ್ತು ಪ್ರಮುಖ ಸ್ವ-ಹಣಕಾಸು ಕಾಲೇಜುಗಳಲ್ಲಿ 7.5 ಪ್ರತಿಶತ ಮೀಸಲಾತಿಯನ್ನು ಒದಗಿಸಲು ಕಾನೂನನ್ನು ಅಂಗೀಕರಿಸಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...