Homeಮುಖಪುಟವೇದ್ಯಕೀಯ ಸೀಟುಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ಮೀಸಲಾತಿ: ತಮಿಳುನಾಡು ಸರ್ಕಾರದ ಕಾನೂನು ಎತ್ತಿ...

ವೇದ್ಯಕೀಯ ಸೀಟುಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ಮೀಸಲಾತಿ: ತಮಿಳುನಾಡು ಸರ್ಕಾರದ ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಸಾಮಾಜಿಕ ನ್ಯಾಯದ ಪಯಣದಲ್ಲಿ ನಮ್ಮ ಪ್ರತಿ ಹೆಜ್ಜೆಯೂ ಗಟ್ಟಿಯಾಗಿದೆ ಎಂಬುದನ್ನು ಹೈಕೋರ್ಟ್ ತೀರ್ಪು ತೋರಿಸುತ್ತದೆ - ತಮಿಳುನಾಡು ಸಿಎಂ ಸ್ಟಾಲಿನ್

- Advertisement -
- Advertisement -

ವೈದ್ಯಕೀಯ ಕಾಲೇಜು ಪ್ರವೇಶದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೇ 7.5ರಷ್ಟು ಸೀಟುಗಳನ್ನು ಮೀಸಲಿಡುವ ತಮಿಳುನಾಡು ಸರ್ಕಾರದ ಕಾನೂನನ್ನು ಮದ್ರಾಸ್ ಹೈಕೋರ್ಟ್ ಗುರುವಾರ ಎತ್ತಿಹಿಡಿದಿದೆ.

ಮೀಸಲಾತಿ ನೀಡುವ ಸರ್ಕಾರ ಕಾನೂನಿನ ಮಾನ್ಯತೆ ಪ್ರಶ್ನಿಸಿ ಹಲವಾರು ಜನ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಮುನೀಶ್ವರನಾಥ್ ಭಂಡಾರಿ ಮತ್ತು ಡಿ.ಭರತ ಚಕ್ರವರ್ತಿಯವರಿದ್ದ ಪೀಠವು ಈ ಕಾನೂನು ಮಾನ್ಯವಾಗಿದ್ದು, ಮೀಸಲಾತಿ ನೀಡುವ ಅಧಿಕಾರ ಸರಕಾರಕ್ಕಿದೆ ಎಂದು ಹೇಳಿದೆ.

ಅರ್ಜಿದಾರರು ಈಗಾಗಲೇ ತಮಿಳುನಾಡಿನಲ್ಲಿ ಶೇ. 69 ರಷ್ಟು ಮೀಸಲಾತಿ ಇದ್ದು ಜನರಲ್ ಕ್ಯಾಟಗರಿ ವಿದ್ಯಾರ್ತಿಗಳಿಗೆ ಕೇವಲ ಶೇ.31 ಮಾತ್ರ ಇದೆ. ಈಗ ಶೇ. 7.5 ಮೀಸಲಾತಿ ನೀಡಿದರೆ ಮತ್ತಷ್ಟು ತೊಂದರೆಯಾಗುತ್ತದೆ ಎಂದು ವಾದಿಸಿದ್ದರು.

ಕಾನೂನನ್ನು ಸಮರ್ಥಿಸಿಕೊಂಡಿದ್ದ ತಮಿಳುನಾಡು ಸರ್ಕಾರ, “ಇದು ಬಡವ-ಶ್ರೀಮಂತ ಹಾಗೂ ನಗರ-ಗ್ರಾಮೀಣ ವಿದ್ಯಾರ್ಥಿಗಳ ನಡುವಿನ ಅಂತರವನ್ನು ತಗ್ಗಿಸಲು ಈ ಮೀಸಲಾತಿಯು ಅಗತ್ಯವಾಗಿದೆ” ಎಂದಿತ್ತು. ಪ್ರಬಲ ಜಾತಿಗಳಿಗೆ ಸಾಮಾಜಿಕ ಬಂಡವಾಳವಿದೆ ಹಾಗಾಗಿ ತಳವರ್ಗದ ಜನರನ್ನು ಮೇಲೆತ್ತುವುದು ಸರ್ಕಾರದ ಜವಾಬ್ದಾರಿಯಾಗಿದ್ದು ಈ ರೀತಿಯ ಕಾನೂನುಗಳಿಗೆ ಸುಪ್ರೀಂ ಕೋರ್ಟ್‌ನ ಬೆಂಬಲವಿದೆ” ಎಂದು ವಾದಿಸಿತು.

ಸರ್ಕಾರದ ವಾದವನ್ನು ಪುರಸ್ಕರಿಸಿರುವ ನ್ಯಾಯಾಲಯಗಳನ್ನು ಅರ್ಜಿಗಳನ್ನು ವಜಾ ಮಾಡಿದೆ. ಅಲ್ಲದೆ ಐದು ವರ್ಷಗಳ ನಂತರ ಈ ಮೀಸಲಾತಿಯನ್ನು ಪರಿಶೀಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ತೀರ್ಪನ್ನು ಐತಿಹಾಸಿಕ ಎಂದು ಬಣ್ಣಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, “ಸಾಮಾಜಿಕ ನ್ಯಾಯದ ಪಯಣದಲ್ಲಿ ನಮ್ಮ ಪ್ರತಿ ಹೆಜ್ಜೆಯೂ ಗಟ್ಟಿಯಾಗಿದೆ ಎಂಬುದನ್ನು ಹೈಕೋರ್ಟ್ ತೀರ್ಪು ತೋರಿಸುತ್ತದೆ. ಕಳೆದ 10 ತಿಂಗಳ ಡಿಎಂಕೆ ಆಡಳಿತದ ಸರ್ಕಾರಕ್ಕೆ ಇದು ಮೂರನೇ ಗೆಲುವು. ಸರಿಯಾದ ಅಂಕಿಅಂಶಗಳು ಮತ್ತು ಚರ್ಚೆಗಳ ಆಧಾರದ ಮೇಲೆ ಈ ಕಾನೂನನ್ನು ತರಲಾಗಿದೆ” ಎಂದಿದ್ದಾರೆ.

ಕಾನೂನನ್ನು ಎಐಎಡಿಎಂಕೆ ಸರ್ಕಾರ ತಂದಿದ್ದರೂ, ವನ್ನಿಯಾರ್ ಮೀಸಲಾತಿ ಪ್ರಕರಣದಲ್ಲಿ ನಾವು ಪ್ರಬಲವಾಗಿ ವಾದಿಸಿದ್ದೇವೆ. ಆದರೆ, ತರಾತುರಿಯಲ್ಲಿ ಎಐಎಡಿಎಂಕೆ ಮಾಡಿದ ತಪ್ಪಿನಿಂದ ತೀರ್ಪು ಸಂಪೂರ್ಣವಾಗಿ ನಮ್ಮ ಪರವಾಗಿ ಬರಲಿಲ್ಲ. ಈಗ ಅದನ್ನು ಸಾಧಿಸಿದ್ದೇವೆ ಎಂದಿದ್ದಾರೆ.

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮೀಸಲಾತಿಯನ್ನು ಎಐಎಡಿಎಂಕೆ ಸರ್ಕಾರ ಘೋಷಿಸಿತ್ತು. ಆದರೆ ಕೆಲವು ದೋಷಗಳು ಎದುರಾದ್ದರಿಂದ ಜಾರಿಯಾಗಿರಲಿಲ್ಲ. ಪ್ರಸ್ತುತ ಡಿಎಂಕೆ ಸರ್ಕಾರವು ಕಾನೂನು ಆಗಿ ಜಾರಿಗೆ ತಂದಿದೆ.

ಡಿಎಂಕೆ ಸರ್ಕಾರವು ಇದೇ ರೀತಿಯಾಗಿ ಇಂಜಿನಿಯರಿಂಗ್/ಕೃಷಿ/ಮೀನುಗಾರಿಕೆ/ಪಶುವೈದ್ಯಕೀಯ ಕೋರ್ಸ್‌ಗಳಲ್ಲಿ ಸರ್ಕಾರಿ ಕಾಲೇಜುಗಳು, ವಿಶ್ವವಿದ್ಯಾನಿಲಯಗಳು ಮತ್ತು ಪ್ರಮುಖ ಸ್ವ-ಹಣಕಾಸು ಕಾಲೇಜುಗಳಲ್ಲಿ 7.5 ಪ್ರತಿಶತ ಮೀಸಲಾತಿಯನ್ನು ಒದಗಿಸಲು ಕಾನೂನನ್ನು ಅಂಗೀಕರಿಸಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...