Homeಮುಖಪುಟವೇದ್ಯಕೀಯ ಸೀಟುಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ಮೀಸಲಾತಿ: ತಮಿಳುನಾಡು ಸರ್ಕಾರದ ಕಾನೂನು ಎತ್ತಿ...

ವೇದ್ಯಕೀಯ ಸೀಟುಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ಮೀಸಲಾತಿ: ತಮಿಳುನಾಡು ಸರ್ಕಾರದ ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಸಾಮಾಜಿಕ ನ್ಯಾಯದ ಪಯಣದಲ್ಲಿ ನಮ್ಮ ಪ್ರತಿ ಹೆಜ್ಜೆಯೂ ಗಟ್ಟಿಯಾಗಿದೆ ಎಂಬುದನ್ನು ಹೈಕೋರ್ಟ್ ತೀರ್ಪು ತೋರಿಸುತ್ತದೆ - ತಮಿಳುನಾಡು ಸಿಎಂ ಸ್ಟಾಲಿನ್

- Advertisement -
- Advertisement -

ವೈದ್ಯಕೀಯ ಕಾಲೇಜು ಪ್ರವೇಶದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೇ 7.5ರಷ್ಟು ಸೀಟುಗಳನ್ನು ಮೀಸಲಿಡುವ ತಮಿಳುನಾಡು ಸರ್ಕಾರದ ಕಾನೂನನ್ನು ಮದ್ರಾಸ್ ಹೈಕೋರ್ಟ್ ಗುರುವಾರ ಎತ್ತಿಹಿಡಿದಿದೆ.

ಮೀಸಲಾತಿ ನೀಡುವ ಸರ್ಕಾರ ಕಾನೂನಿನ ಮಾನ್ಯತೆ ಪ್ರಶ್ನಿಸಿ ಹಲವಾರು ಜನ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಮುನೀಶ್ವರನಾಥ್ ಭಂಡಾರಿ ಮತ್ತು ಡಿ.ಭರತ ಚಕ್ರವರ್ತಿಯವರಿದ್ದ ಪೀಠವು ಈ ಕಾನೂನು ಮಾನ್ಯವಾಗಿದ್ದು, ಮೀಸಲಾತಿ ನೀಡುವ ಅಧಿಕಾರ ಸರಕಾರಕ್ಕಿದೆ ಎಂದು ಹೇಳಿದೆ.

ಅರ್ಜಿದಾರರು ಈಗಾಗಲೇ ತಮಿಳುನಾಡಿನಲ್ಲಿ ಶೇ. 69 ರಷ್ಟು ಮೀಸಲಾತಿ ಇದ್ದು ಜನರಲ್ ಕ್ಯಾಟಗರಿ ವಿದ್ಯಾರ್ತಿಗಳಿಗೆ ಕೇವಲ ಶೇ.31 ಮಾತ್ರ ಇದೆ. ಈಗ ಶೇ. 7.5 ಮೀಸಲಾತಿ ನೀಡಿದರೆ ಮತ್ತಷ್ಟು ತೊಂದರೆಯಾಗುತ್ತದೆ ಎಂದು ವಾದಿಸಿದ್ದರು.

ಕಾನೂನನ್ನು ಸಮರ್ಥಿಸಿಕೊಂಡಿದ್ದ ತಮಿಳುನಾಡು ಸರ್ಕಾರ, “ಇದು ಬಡವ-ಶ್ರೀಮಂತ ಹಾಗೂ ನಗರ-ಗ್ರಾಮೀಣ ವಿದ್ಯಾರ್ಥಿಗಳ ನಡುವಿನ ಅಂತರವನ್ನು ತಗ್ಗಿಸಲು ಈ ಮೀಸಲಾತಿಯು ಅಗತ್ಯವಾಗಿದೆ” ಎಂದಿತ್ತು. ಪ್ರಬಲ ಜಾತಿಗಳಿಗೆ ಸಾಮಾಜಿಕ ಬಂಡವಾಳವಿದೆ ಹಾಗಾಗಿ ತಳವರ್ಗದ ಜನರನ್ನು ಮೇಲೆತ್ತುವುದು ಸರ್ಕಾರದ ಜವಾಬ್ದಾರಿಯಾಗಿದ್ದು ಈ ರೀತಿಯ ಕಾನೂನುಗಳಿಗೆ ಸುಪ್ರೀಂ ಕೋರ್ಟ್‌ನ ಬೆಂಬಲವಿದೆ” ಎಂದು ವಾದಿಸಿತು.

ಸರ್ಕಾರದ ವಾದವನ್ನು ಪುರಸ್ಕರಿಸಿರುವ ನ್ಯಾಯಾಲಯಗಳನ್ನು ಅರ್ಜಿಗಳನ್ನು ವಜಾ ಮಾಡಿದೆ. ಅಲ್ಲದೆ ಐದು ವರ್ಷಗಳ ನಂತರ ಈ ಮೀಸಲಾತಿಯನ್ನು ಪರಿಶೀಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ತೀರ್ಪನ್ನು ಐತಿಹಾಸಿಕ ಎಂದು ಬಣ್ಣಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, “ಸಾಮಾಜಿಕ ನ್ಯಾಯದ ಪಯಣದಲ್ಲಿ ನಮ್ಮ ಪ್ರತಿ ಹೆಜ್ಜೆಯೂ ಗಟ್ಟಿಯಾಗಿದೆ ಎಂಬುದನ್ನು ಹೈಕೋರ್ಟ್ ತೀರ್ಪು ತೋರಿಸುತ್ತದೆ. ಕಳೆದ 10 ತಿಂಗಳ ಡಿಎಂಕೆ ಆಡಳಿತದ ಸರ್ಕಾರಕ್ಕೆ ಇದು ಮೂರನೇ ಗೆಲುವು. ಸರಿಯಾದ ಅಂಕಿಅಂಶಗಳು ಮತ್ತು ಚರ್ಚೆಗಳ ಆಧಾರದ ಮೇಲೆ ಈ ಕಾನೂನನ್ನು ತರಲಾಗಿದೆ” ಎಂದಿದ್ದಾರೆ.

ಕಾನೂನನ್ನು ಎಐಎಡಿಎಂಕೆ ಸರ್ಕಾರ ತಂದಿದ್ದರೂ, ವನ್ನಿಯಾರ್ ಮೀಸಲಾತಿ ಪ್ರಕರಣದಲ್ಲಿ ನಾವು ಪ್ರಬಲವಾಗಿ ವಾದಿಸಿದ್ದೇವೆ. ಆದರೆ, ತರಾತುರಿಯಲ್ಲಿ ಎಐಎಡಿಎಂಕೆ ಮಾಡಿದ ತಪ್ಪಿನಿಂದ ತೀರ್ಪು ಸಂಪೂರ್ಣವಾಗಿ ನಮ್ಮ ಪರವಾಗಿ ಬರಲಿಲ್ಲ. ಈಗ ಅದನ್ನು ಸಾಧಿಸಿದ್ದೇವೆ ಎಂದಿದ್ದಾರೆ.

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮೀಸಲಾತಿಯನ್ನು ಎಐಎಡಿಎಂಕೆ ಸರ್ಕಾರ ಘೋಷಿಸಿತ್ತು. ಆದರೆ ಕೆಲವು ದೋಷಗಳು ಎದುರಾದ್ದರಿಂದ ಜಾರಿಯಾಗಿರಲಿಲ್ಲ. ಪ್ರಸ್ತುತ ಡಿಎಂಕೆ ಸರ್ಕಾರವು ಕಾನೂನು ಆಗಿ ಜಾರಿಗೆ ತಂದಿದೆ.

ಡಿಎಂಕೆ ಸರ್ಕಾರವು ಇದೇ ರೀತಿಯಾಗಿ ಇಂಜಿನಿಯರಿಂಗ್/ಕೃಷಿ/ಮೀನುಗಾರಿಕೆ/ಪಶುವೈದ್ಯಕೀಯ ಕೋರ್ಸ್‌ಗಳಲ್ಲಿ ಸರ್ಕಾರಿ ಕಾಲೇಜುಗಳು, ವಿಶ್ವವಿದ್ಯಾನಿಲಯಗಳು ಮತ್ತು ಪ್ರಮುಖ ಸ್ವ-ಹಣಕಾಸು ಕಾಲೇಜುಗಳಲ್ಲಿ 7.5 ಪ್ರತಿಶತ ಮೀಸಲಾತಿಯನ್ನು ಒದಗಿಸಲು ಕಾನೂನನ್ನು ಅಂಗೀಕರಿಸಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...