Homeಮುಖಪುಟವೇದ್ಯಕೀಯ ಸೀಟುಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ಮೀಸಲಾತಿ: ತಮಿಳುನಾಡು ಸರ್ಕಾರದ ಕಾನೂನು ಎತ್ತಿ...

ವೇದ್ಯಕೀಯ ಸೀಟುಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ಮೀಸಲಾತಿ: ತಮಿಳುನಾಡು ಸರ್ಕಾರದ ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಸಾಮಾಜಿಕ ನ್ಯಾಯದ ಪಯಣದಲ್ಲಿ ನಮ್ಮ ಪ್ರತಿ ಹೆಜ್ಜೆಯೂ ಗಟ್ಟಿಯಾಗಿದೆ ಎಂಬುದನ್ನು ಹೈಕೋರ್ಟ್ ತೀರ್ಪು ತೋರಿಸುತ್ತದೆ - ತಮಿಳುನಾಡು ಸಿಎಂ ಸ್ಟಾಲಿನ್

- Advertisement -
- Advertisement -

ವೈದ್ಯಕೀಯ ಕಾಲೇಜು ಪ್ರವೇಶದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೇ 7.5ರಷ್ಟು ಸೀಟುಗಳನ್ನು ಮೀಸಲಿಡುವ ತಮಿಳುನಾಡು ಸರ್ಕಾರದ ಕಾನೂನನ್ನು ಮದ್ರಾಸ್ ಹೈಕೋರ್ಟ್ ಗುರುವಾರ ಎತ್ತಿಹಿಡಿದಿದೆ.

ಮೀಸಲಾತಿ ನೀಡುವ ಸರ್ಕಾರ ಕಾನೂನಿನ ಮಾನ್ಯತೆ ಪ್ರಶ್ನಿಸಿ ಹಲವಾರು ಜನ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಮುನೀಶ್ವರನಾಥ್ ಭಂಡಾರಿ ಮತ್ತು ಡಿ.ಭರತ ಚಕ್ರವರ್ತಿಯವರಿದ್ದ ಪೀಠವು ಈ ಕಾನೂನು ಮಾನ್ಯವಾಗಿದ್ದು, ಮೀಸಲಾತಿ ನೀಡುವ ಅಧಿಕಾರ ಸರಕಾರಕ್ಕಿದೆ ಎಂದು ಹೇಳಿದೆ.

ಅರ್ಜಿದಾರರು ಈಗಾಗಲೇ ತಮಿಳುನಾಡಿನಲ್ಲಿ ಶೇ. 69 ರಷ್ಟು ಮೀಸಲಾತಿ ಇದ್ದು ಜನರಲ್ ಕ್ಯಾಟಗರಿ ವಿದ್ಯಾರ್ತಿಗಳಿಗೆ ಕೇವಲ ಶೇ.31 ಮಾತ್ರ ಇದೆ. ಈಗ ಶೇ. 7.5 ಮೀಸಲಾತಿ ನೀಡಿದರೆ ಮತ್ತಷ್ಟು ತೊಂದರೆಯಾಗುತ್ತದೆ ಎಂದು ವಾದಿಸಿದ್ದರು.

ಕಾನೂನನ್ನು ಸಮರ್ಥಿಸಿಕೊಂಡಿದ್ದ ತಮಿಳುನಾಡು ಸರ್ಕಾರ, “ಇದು ಬಡವ-ಶ್ರೀಮಂತ ಹಾಗೂ ನಗರ-ಗ್ರಾಮೀಣ ವಿದ್ಯಾರ್ಥಿಗಳ ನಡುವಿನ ಅಂತರವನ್ನು ತಗ್ಗಿಸಲು ಈ ಮೀಸಲಾತಿಯು ಅಗತ್ಯವಾಗಿದೆ” ಎಂದಿತ್ತು. ಪ್ರಬಲ ಜಾತಿಗಳಿಗೆ ಸಾಮಾಜಿಕ ಬಂಡವಾಳವಿದೆ ಹಾಗಾಗಿ ತಳವರ್ಗದ ಜನರನ್ನು ಮೇಲೆತ್ತುವುದು ಸರ್ಕಾರದ ಜವಾಬ್ದಾರಿಯಾಗಿದ್ದು ಈ ರೀತಿಯ ಕಾನೂನುಗಳಿಗೆ ಸುಪ್ರೀಂ ಕೋರ್ಟ್‌ನ ಬೆಂಬಲವಿದೆ” ಎಂದು ವಾದಿಸಿತು.

ಸರ್ಕಾರದ ವಾದವನ್ನು ಪುರಸ್ಕರಿಸಿರುವ ನ್ಯಾಯಾಲಯಗಳನ್ನು ಅರ್ಜಿಗಳನ್ನು ವಜಾ ಮಾಡಿದೆ. ಅಲ್ಲದೆ ಐದು ವರ್ಷಗಳ ನಂತರ ಈ ಮೀಸಲಾತಿಯನ್ನು ಪರಿಶೀಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ತೀರ್ಪನ್ನು ಐತಿಹಾಸಿಕ ಎಂದು ಬಣ್ಣಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, “ಸಾಮಾಜಿಕ ನ್ಯಾಯದ ಪಯಣದಲ್ಲಿ ನಮ್ಮ ಪ್ರತಿ ಹೆಜ್ಜೆಯೂ ಗಟ್ಟಿಯಾಗಿದೆ ಎಂಬುದನ್ನು ಹೈಕೋರ್ಟ್ ತೀರ್ಪು ತೋರಿಸುತ್ತದೆ. ಕಳೆದ 10 ತಿಂಗಳ ಡಿಎಂಕೆ ಆಡಳಿತದ ಸರ್ಕಾರಕ್ಕೆ ಇದು ಮೂರನೇ ಗೆಲುವು. ಸರಿಯಾದ ಅಂಕಿಅಂಶಗಳು ಮತ್ತು ಚರ್ಚೆಗಳ ಆಧಾರದ ಮೇಲೆ ಈ ಕಾನೂನನ್ನು ತರಲಾಗಿದೆ” ಎಂದಿದ್ದಾರೆ.

ಕಾನೂನನ್ನು ಎಐಎಡಿಎಂಕೆ ಸರ್ಕಾರ ತಂದಿದ್ದರೂ, ವನ್ನಿಯಾರ್ ಮೀಸಲಾತಿ ಪ್ರಕರಣದಲ್ಲಿ ನಾವು ಪ್ರಬಲವಾಗಿ ವಾದಿಸಿದ್ದೇವೆ. ಆದರೆ, ತರಾತುರಿಯಲ್ಲಿ ಎಐಎಡಿಎಂಕೆ ಮಾಡಿದ ತಪ್ಪಿನಿಂದ ತೀರ್ಪು ಸಂಪೂರ್ಣವಾಗಿ ನಮ್ಮ ಪರವಾಗಿ ಬರಲಿಲ್ಲ. ಈಗ ಅದನ್ನು ಸಾಧಿಸಿದ್ದೇವೆ ಎಂದಿದ್ದಾರೆ.

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮೀಸಲಾತಿಯನ್ನು ಎಐಎಡಿಎಂಕೆ ಸರ್ಕಾರ ಘೋಷಿಸಿತ್ತು. ಆದರೆ ಕೆಲವು ದೋಷಗಳು ಎದುರಾದ್ದರಿಂದ ಜಾರಿಯಾಗಿರಲಿಲ್ಲ. ಪ್ರಸ್ತುತ ಡಿಎಂಕೆ ಸರ್ಕಾರವು ಕಾನೂನು ಆಗಿ ಜಾರಿಗೆ ತಂದಿದೆ.

ಡಿಎಂಕೆ ಸರ್ಕಾರವು ಇದೇ ರೀತಿಯಾಗಿ ಇಂಜಿನಿಯರಿಂಗ್/ಕೃಷಿ/ಮೀನುಗಾರಿಕೆ/ಪಶುವೈದ್ಯಕೀಯ ಕೋರ್ಸ್‌ಗಳಲ್ಲಿ ಸರ್ಕಾರಿ ಕಾಲೇಜುಗಳು, ವಿಶ್ವವಿದ್ಯಾನಿಲಯಗಳು ಮತ್ತು ಪ್ರಮುಖ ಸ್ವ-ಹಣಕಾಸು ಕಾಲೇಜುಗಳಲ್ಲಿ 7.5 ಪ್ರತಿಶತ ಮೀಸಲಾತಿಯನ್ನು ಒದಗಿಸಲು ಕಾನೂನನ್ನು ಅಂಗೀಕರಿಸಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....