Homeಮುಖಪುಟಟ್ವಿಟರ್ ಅರ್ಜಿ ವಜಾಗೊಳಿಸಿ ಕೇಂದ್ರದ ಪರ ಹೈಕೋರ್ಟ್ ತೀರ್ಪು

ಟ್ವಿಟರ್ ಅರ್ಜಿ ವಜಾಗೊಳಿಸಿ ಕೇಂದ್ರದ ಪರ ಹೈಕೋರ್ಟ್ ತೀರ್ಪು

- Advertisement -
- Advertisement -

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿದ್ದ ಹಲವು ನಿರ್ಬಂಧಗಳು ಮತ್ತು ಟೇಕ್ ಡೌನ್ ಆದೇಶಗಳನ್ನು ಪ್ರಶ್ನಿಸಿ, “ಟ್ವಿಟರ್ ಸಂಸ್ಥೆ” ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅದರ ಜೊತೆಗೆ ಟ್ವಿಟರ್ ಸಂಸ್ಥೆಗೆ 50 ಲಕ್ಷ ರೂ. ದಂಡ ವಿಧಿಸಲಾಗಿದೆ.

ಫೆಬ್ರವರಿ 2021 ರಿಂದ ಫೆಬ್ರವರಿ 2022 ರ ನಡುವೆ ಕೇಂದ್ರ ಸರ್ಕಾರವು 39 ಟ್ವೀಟ್‌ಗಳು ಮತ್ತು ಖಾತೆಗಳನ್ನು ನಿರ್ಬಂಧಿಸುವ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಟ್ವಿಟರ್ ಮನವಿಯನ್ನು ಸಲ್ಲಿಸಿತ್ತು. ಟ್ವಿಟರ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಈ ಸಂಬಂಧದ ರಿಟ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಬೆಳಗ್ಗೆ ಪ್ರಕಟಿಸಿತು. ದಂಡದ ಮೊತ್ತವನ್ನು 45 ದಿನಗಳಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸುವಂತೆ ಆದೇಶಿಸಲಾಗಿದೆ. ಒಂದೊಮ್ಮೆ 45 ದಿನಗಳಲ್ಲಿ ದಂಡವನ್ನು ಪಾವತಿಸಲು ವಿಫಲವಾದರೆ ದಿನಕ್ಕೆ 5 ಸಾವಿರದಂತೆ ಹೆಚ್ಚುವರಿ ದಂಡ ವಿಧಿಸಲಾಗುವುದು” ಎಂದು ನ್ಯಾಯಪೀಠ ಹೇಳಿದೆ.

”ಸ್ವೀಟ್‌ಗಳನ್ನು ಮತ್ತು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರಕ್ಕೆ ಅಧಿಕಾರವಿದೆ ಎಂಬುದು ಕೇಂದ್ರ ಸರ್ಕಾರದ ಪರ ವಕೀಲರ ವಾದ ಸಮರ್ಥನೆಯಿಂದ ಪೀಠಕ್ಕೆ ಮನವರಿಕೆಯಾಗಿದೆ” ಎಂದು ತೀರ್ಪಿನಲ್ಲಿ ವಿವರಿಸಲಾಗಿದೆ.

“ನೀವು [ಟ್ವಿಟ್ಟರ್] ನಿಯಮಗಳನ್ನು ಜಾರಿಗೆ ತರಲು ಏಕೆ ವಿಳಂಬಗೊಳಿಸಿದ್ದೀರಿ, ಒಂದು ವರ್ಷಕ್ಕೂ ಹೆಚ್ಚು ವಿಳಂಬ ಮಾಡಿರುವುದಕ್ಕೆ ಯಾವುದೇ ಕಾರಣವನ್ನು ನೀಡಿಲ್ಲ… ನಂತರ ನೀವು ಇದ್ದಕ್ಕಿದ್ದಂತೆ ಪಾಲಿಸುತ್ತೀರಿ ಮತ್ತು ನ್ಯಾಯಾಲಯವನ್ನು ಸಂಪರ್ಕಿಸುತ್ತೀರಿ. ನೀವು ಕಾನೂನಿನ ಪರಿಚಯವಿಲ್ಲದ ರೈತರಲ್ಲ, ಆದರೆ ಬಿಲಿಯನ್ ಡಾಲರ್ ಕಂಪನಿಯವರು” ಎಂದು ನ್ಯಾಯಮೂರ್ತಿ ದೀಕ್ಷಿತ್ ಹೇಳಿದರು.

ಕೇಂದ್ರದ ವಾದವನ್ನು ತಮಗೆ ಮನವರಿಕೆಯಾಗಿದೆ ಎಂದ ನ್ಯಾಯಾಧೀಶರು, ಕೇಂದ್ರ ಸರ್ಕಾರವು ಟ್ವೀಟ್‌ಗಳನ್ನು ತೆಗೆದುಹಾಕಲು ಟ್ವಿಟರ್‌ಗೆ ಕೇಳುವ ಅಧಿಕಾರವನ್ನು ಹೊಂದಿದ್ದು ಮಾತ್ರವಲ್ಲದೆ ಖಾತೆಗಳನ್ನು ನಿರ್ಬಂಧಿಸಲು ಕಂಪನಿಯನ್ನು ಕೇಳಬಹುದು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ಏನಿದು ಪ್ರಕರಣ?

ಫೆಬ್ರವರಿ 2021ರಲ್ಲಿ, ನವೆಂಬರ್ 2022ರ ನಡುವೆ ನಡೆದ ದೊಡ್ಡ ಪ್ರಮಾಣದ ರೈತ ಪ್ರತಿಭಟನೆಗಳನ್ನು ನಿಭಾಯಿಸುವಲ್ಲಿ ಕೇಂದ್ರ ಸೋತಿದೆ, ಕೇಂದ್ರ ಸರ್ಕಾರ ರೈತ ವಿರೋಧ ಕಾನೂನು ತರುತ್ತಿದೆ ಎಂದು ಟೀಕಿಸಿದ ನೂರಾರು ಖಾತೆಗಳನ್ನು ತೆಗೆದುಹಾಕಲು ಸರ್ಕಾರವು ಟ್ವಿಟರ್ ಅನ್ನು ಕೇಳಿದೆ. ಮೊದಲು ಸರ್ಕಾರದ ಬೇಡಿಕೆಯನ್ನು ಟ್ವಿಟರ್ ಸಂಸ್ಥೆ ನಿರಾಕರಿಸಿತು, ಆಗ ತನ್ನ ಸ್ಥಳೀಯ ಉದ್ಯೋಗಿಗಳಿಗೆ ಜೈಲಿಗೆ ಹಾಕುವ ಬೆದರಿಕೆ ಹಾಕಲಾಯಿತು.

ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಜುಲೈನಲ್ಲಿ, ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಕೇಂದ್ರ ಸರ್ಕಾರ “ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಫೆಬ್ರವರಿ 2021 ಮತ್ತು ನವೆಂಬರ್ 2022ರ ನಡುವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 175 ಟ್ವೀಟ್‌ಗಳನ್ನು ಮತ್ತು 1,400ಕ್ಕೂ ಹೆಚ್ಚು ಖಾತೆಗಳನ್ನು ತೆಗೆದುಹಾಕಲು ಕೇಳಿಕೊಂಡಿದೆ ಎಂದು ಕಂಪನಿಯು ಹೈಕೋರ್ಟ್‌ಗೆ ತಿಳಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ”ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನ ಬಳಕೆದಾರರಿಗೆ ಅವರ ಖಾತೆಗಳನ್ನು ಯಾಕೆ ನಿರ್ಬಂಧಿಸಬೇಕು ಎನ್ನುವ ಬಗ್ಗೆ ಕಾರಣವನ್ನು ಸರ್ಕಾರ ನೀಡಬೇಕು” ಎಂದು ಟ್ವಿಟರ್ ವಾದಿಸಿತ್ತು.

”ನೋಟಿಸ್ ನೀಡದೆ ತಮ್ಮ ಖಾತೆಗಳನ್ನು ನಿರ್ಬಂಧಿಸಿದರೆ 19ನೇ ವಿಧಿಯ (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು) ಅಡಿಯಲ್ಲಿ ತನ್ನ ಬಳಕೆದಾರರ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತದೆ ಮತ್ತು ಖಾತೆಗಳನ್ನು ನಿರ್ಬಂಧಿಸಲು ಕಾರಣವನ್ನು ನಮೂದಿಸಬೇಕು” ಎಂದು ಅದು ನ್ಯಾಯಾಲಯಕ್ಕೆ ತಿಳಿಸಿತ್ತು.

ಇದಕ್ಕೆ ಉತ್ತರವಾಗಿ ಕೇಂದ್ರ ಸರ್ಕಾರವು, ”ಟ್ವಿಟರ್ ವಿದೇಶಿ ವ್ಯಾಪಾರ ಸಂಸ್ಥೆಯಾಗಿದ್ದು, ಸರ್ಕಾರದ ಆದೇಶದ ಮೇರೆಗೆ ಖಾತೆಗಳನ್ನು ನಿರ್ಬಂಧಿಸಿದವರ ಪರವಾಗಿ ಮಾತನಾಡುವ ಹಕ್ಕು ಇಲ್ಲ” ಎಂದು ದರ್ಪದ ಹೇಳಿಕೆ ನೀಡಿತ್ತು.

ಕಳೆದ ವರ್ಷ ಏಪ್ರಿಲ್‌ನಲ್ಲಿಯೂ ಸಹ, ಲಕ್ಷಗಟ್ಟಲೆ ಜನರು ಕೋವಿಡ್ ಎರಡನೇ ಅಲೆಗೆ ಸಾವಿಗೀಡಾದರು. ಈ ಸಮಯದಲ್ಲಿ ಸರ್ಕಾರವು ಕೋವಿಡ್ -19 ಅನ್ನು ನಿರ್ವಹಿಸುತ್ತಿರುವುದನ್ನು ಟೀಕಿಸಿದ ಖಾತೆಗಳನ್ನು ತೆಗೆದುಹಾಕಲು ಕೇಂದ್ರವು ಟ್ವಿಟರ್‌ಗೆ ಕೇಳಿಕೊಂಡಿತ್ತು. ಆದರೆ ಟ್ವಿಟರ್ ಈ ಬಗ್ಗೆ ತಲೆಕೆಡಸಿಕೊಳ್ಳಲಿಲ್ಲ, ಆಗಲೂ  ಕೇಂದ್ರವು ಟ್ವಿಟರ್ ಮೇಲೆ ಮುಗಿಬಿದ್ದಿತ್ತು.

ಹೈಕೋರ್ಟ್‌ ತೀರ್ಪಿಗೆ ಪ್ರತಿಕ್ರಿಯೆ

ಈ ಬಗ್ಗೆ ಇಂಟರ್ನೆಟ್ ಫ್ರೀಡಂ ಫೌಂಡೇಶನ್‌ನ ರಾಧಿಕಾ ರಾಯ್ ಅವರು ಪ್ರತಿಕ್ರಿಯಿಸಿ, ”ಸರ್ಕಾರವು ಪಕ್ಷಪಾತದ ರೀತಿಯಲ್ಲಿ ಜಾರಿಗೆ ತಂದಿರುವ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ರೂಪಿಸಲಾದ ಕಾರ್ಯವಿಧಾನವನ್ನು ಮಾತ್ರ ನ್ಯಾಯಾಲಯ ಗಮನಿಸುತ್ತಿದೆ. ಏಕೆಂದರೆ ಕಾಯಿದೆಯ ಸೆಕ್ಷನ್ 69A, ಇಂಟರ್ನೆಟ್ ಸೇವಾ ಪೂರೈಕೆದಾರರು, ಟೆಲಿಕಾಂ ಸೇವಾ ಪೂರೈಕೆದಾರರು, ವೆಬ್ ಹೋಸ್ಟಿಂಗ್ ಸೇವೆಗಳು, ಸರ್ಚ್ ಇಂಜಿನ್‌ಗಳು ಮತ್ತು ಆನ್‌ಲೈನ್ ಮಾರುಕಟ್ಟೆ ಸ್ಥಳಗಳಂತಹ ಆನ್‌ಲೈನ್ ಮಧ್ಯವರ್ತಿಗಳಿಗೆ ವಿಷಯವನ್ನು ನಿರ್ಬಂಧಿಸುವ ಆದೇಶಗಳನ್ನು ನೀಡಲು ಸರ್ಕಾರಕ್ಕೆ ಅವಕಾಶ ನೀಡುತ್ತದೆ” ಎಂದು ಹೇಳಿದರು.

ವಿಷಯವನ್ನು ಬರೆದವರ ಗಮನಕ್ಕೆ ತರದೇ ಅದನ್ನು ತೆಗೆದುಹಾಕುವಿಕೆ ಮತ್ತು ಸರ್ಕಾರದ ಸೂಚನೆಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ. ಇದು ನೈಸರ್ಗಿಕ ನ್ಯಾಯದ ತತ್ವಗಳನ್ನು ನಿರಾಶೆಗೊಳಿಸುತ್ತದೆ. ಏಕೆಂದರೆ ಇದು ಸಂತ್ರಸ್ತರು, ಪೀಡಿತರು ವಾಪಸ್ ಸಮರ್ಪಕವಾಗಿ ಸವಾಲು ಹಾಕಲು ಅನುಮತಿಸುವುದಿಲ್ಲ. ಎಂದು ರಾಯ್ ಹೇಳಿದ್ದಾರೆ.

ಖಾತೆಗಳ ಹಲವಾರು ಪೋಸ್ಟ್‌ಗಳನ್ನು ಏಕಕಾಲಕ್ಕೆ ನಿರ್ಬಂಧಿಸುವಿಕೆಯನ್ನು ಅನುಮತಿಸುವ ನ್ಯಾಯಾಲಯದ ನಿರ್ಧಾರವು ಸಮಾನ ಆಯ್ಕೆಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ. “ಒಂದು ಖಾತೆಯು ತನ್ನ ನೀತಿಗಳನ್ನು ಪದೇ ಪದೇ ಉಲ್ಲಂಘಿಸಿದರೆ, ಅದನ್ನು ನಿಷೇಧಿಸಲಾಗುವುದು ಎಂದು ಟ್ವಿಟರ್ ಸ್ವತಃ ಹೇಳುತ್ತದೆ. ಹಾಗಿದ್ದರೂ ಸರ್ಕಾರವು ಕೇವಲ ಒಂದು ಟ್ವೀಟ್‌ನ ಆಧಾರದ ಮೇಲೆ ಅದನ್ನು ಮಾಡಿದಾಗ, ಅವರು ಬಳಕೆದಾರರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುತ್ತಾರೆ. ಅಲ್ಲದೆ, ಬಳಕೆದಾರರು ತಮ್ಮ ಖಾತೆಗಳನ್ನು ಸರ್ಕಾರ ತಡೆಹಿಡಿಯಲು ಕಾರಣವೇನೆಂದು ಸಹ ಹಲವಾರು ಬಾರಿ ತಿಳಿದುಕೊಳ್ಳಲು ಸಾಧ್ಯವಿಕಾರಣಗಳ ಬಗ್ಗೆ ಅಪರೂಪವಾಗಿ ತಿಳಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...