Homeಮುಖಪುಟಟ್ವಿಟರ್ ಅರ್ಜಿ ವಜಾಗೊಳಿಸಿ ಕೇಂದ್ರದ ಪರ ಹೈಕೋರ್ಟ್ ತೀರ್ಪು

ಟ್ವಿಟರ್ ಅರ್ಜಿ ವಜಾಗೊಳಿಸಿ ಕೇಂದ್ರದ ಪರ ಹೈಕೋರ್ಟ್ ತೀರ್ಪು

- Advertisement -
- Advertisement -

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿದ್ದ ಹಲವು ನಿರ್ಬಂಧಗಳು ಮತ್ತು ಟೇಕ್ ಡೌನ್ ಆದೇಶಗಳನ್ನು ಪ್ರಶ್ನಿಸಿ, “ಟ್ವಿಟರ್ ಸಂಸ್ಥೆ” ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅದರ ಜೊತೆಗೆ ಟ್ವಿಟರ್ ಸಂಸ್ಥೆಗೆ 50 ಲಕ್ಷ ರೂ. ದಂಡ ವಿಧಿಸಲಾಗಿದೆ.

ಫೆಬ್ರವರಿ 2021 ರಿಂದ ಫೆಬ್ರವರಿ 2022 ರ ನಡುವೆ ಕೇಂದ್ರ ಸರ್ಕಾರವು 39 ಟ್ವೀಟ್‌ಗಳು ಮತ್ತು ಖಾತೆಗಳನ್ನು ನಿರ್ಬಂಧಿಸುವ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಟ್ವಿಟರ್ ಮನವಿಯನ್ನು ಸಲ್ಲಿಸಿತ್ತು. ಟ್ವಿಟರ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಈ ಸಂಬಂಧದ ರಿಟ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಬೆಳಗ್ಗೆ ಪ್ರಕಟಿಸಿತು. ದಂಡದ ಮೊತ್ತವನ್ನು 45 ದಿನಗಳಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸುವಂತೆ ಆದೇಶಿಸಲಾಗಿದೆ. ಒಂದೊಮ್ಮೆ 45 ದಿನಗಳಲ್ಲಿ ದಂಡವನ್ನು ಪಾವತಿಸಲು ವಿಫಲವಾದರೆ ದಿನಕ್ಕೆ 5 ಸಾವಿರದಂತೆ ಹೆಚ್ಚುವರಿ ದಂಡ ವಿಧಿಸಲಾಗುವುದು” ಎಂದು ನ್ಯಾಯಪೀಠ ಹೇಳಿದೆ.

”ಸ್ವೀಟ್‌ಗಳನ್ನು ಮತ್ತು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರಕ್ಕೆ ಅಧಿಕಾರವಿದೆ ಎಂಬುದು ಕೇಂದ್ರ ಸರ್ಕಾರದ ಪರ ವಕೀಲರ ವಾದ ಸಮರ್ಥನೆಯಿಂದ ಪೀಠಕ್ಕೆ ಮನವರಿಕೆಯಾಗಿದೆ” ಎಂದು ತೀರ್ಪಿನಲ್ಲಿ ವಿವರಿಸಲಾಗಿದೆ.

“ನೀವು [ಟ್ವಿಟ್ಟರ್] ನಿಯಮಗಳನ್ನು ಜಾರಿಗೆ ತರಲು ಏಕೆ ವಿಳಂಬಗೊಳಿಸಿದ್ದೀರಿ, ಒಂದು ವರ್ಷಕ್ಕೂ ಹೆಚ್ಚು ವಿಳಂಬ ಮಾಡಿರುವುದಕ್ಕೆ ಯಾವುದೇ ಕಾರಣವನ್ನು ನೀಡಿಲ್ಲ… ನಂತರ ನೀವು ಇದ್ದಕ್ಕಿದ್ದಂತೆ ಪಾಲಿಸುತ್ತೀರಿ ಮತ್ತು ನ್ಯಾಯಾಲಯವನ್ನು ಸಂಪರ್ಕಿಸುತ್ತೀರಿ. ನೀವು ಕಾನೂನಿನ ಪರಿಚಯವಿಲ್ಲದ ರೈತರಲ್ಲ, ಆದರೆ ಬಿಲಿಯನ್ ಡಾಲರ್ ಕಂಪನಿಯವರು” ಎಂದು ನ್ಯಾಯಮೂರ್ತಿ ದೀಕ್ಷಿತ್ ಹೇಳಿದರು.

ಕೇಂದ್ರದ ವಾದವನ್ನು ತಮಗೆ ಮನವರಿಕೆಯಾಗಿದೆ ಎಂದ ನ್ಯಾಯಾಧೀಶರು, ಕೇಂದ್ರ ಸರ್ಕಾರವು ಟ್ವೀಟ್‌ಗಳನ್ನು ತೆಗೆದುಹಾಕಲು ಟ್ವಿಟರ್‌ಗೆ ಕೇಳುವ ಅಧಿಕಾರವನ್ನು ಹೊಂದಿದ್ದು ಮಾತ್ರವಲ್ಲದೆ ಖಾತೆಗಳನ್ನು ನಿರ್ಬಂಧಿಸಲು ಕಂಪನಿಯನ್ನು ಕೇಳಬಹುದು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ಏನಿದು ಪ್ರಕರಣ?

ಫೆಬ್ರವರಿ 2021ರಲ್ಲಿ, ನವೆಂಬರ್ 2022ರ ನಡುವೆ ನಡೆದ ದೊಡ್ಡ ಪ್ರಮಾಣದ ರೈತ ಪ್ರತಿಭಟನೆಗಳನ್ನು ನಿಭಾಯಿಸುವಲ್ಲಿ ಕೇಂದ್ರ ಸೋತಿದೆ, ಕೇಂದ್ರ ಸರ್ಕಾರ ರೈತ ವಿರೋಧ ಕಾನೂನು ತರುತ್ತಿದೆ ಎಂದು ಟೀಕಿಸಿದ ನೂರಾರು ಖಾತೆಗಳನ್ನು ತೆಗೆದುಹಾಕಲು ಸರ್ಕಾರವು ಟ್ವಿಟರ್ ಅನ್ನು ಕೇಳಿದೆ. ಮೊದಲು ಸರ್ಕಾರದ ಬೇಡಿಕೆಯನ್ನು ಟ್ವಿಟರ್ ಸಂಸ್ಥೆ ನಿರಾಕರಿಸಿತು, ಆಗ ತನ್ನ ಸ್ಥಳೀಯ ಉದ್ಯೋಗಿಗಳಿಗೆ ಜೈಲಿಗೆ ಹಾಕುವ ಬೆದರಿಕೆ ಹಾಕಲಾಯಿತು.

ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಜುಲೈನಲ್ಲಿ, ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಕೇಂದ್ರ ಸರ್ಕಾರ “ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಫೆಬ್ರವರಿ 2021 ಮತ್ತು ನವೆಂಬರ್ 2022ರ ನಡುವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 175 ಟ್ವೀಟ್‌ಗಳನ್ನು ಮತ್ತು 1,400ಕ್ಕೂ ಹೆಚ್ಚು ಖಾತೆಗಳನ್ನು ತೆಗೆದುಹಾಕಲು ಕೇಳಿಕೊಂಡಿದೆ ಎಂದು ಕಂಪನಿಯು ಹೈಕೋರ್ಟ್‌ಗೆ ತಿಳಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ”ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನ ಬಳಕೆದಾರರಿಗೆ ಅವರ ಖಾತೆಗಳನ್ನು ಯಾಕೆ ನಿರ್ಬಂಧಿಸಬೇಕು ಎನ್ನುವ ಬಗ್ಗೆ ಕಾರಣವನ್ನು ಸರ್ಕಾರ ನೀಡಬೇಕು” ಎಂದು ಟ್ವಿಟರ್ ವಾದಿಸಿತ್ತು.

”ನೋಟಿಸ್ ನೀಡದೆ ತಮ್ಮ ಖಾತೆಗಳನ್ನು ನಿರ್ಬಂಧಿಸಿದರೆ 19ನೇ ವಿಧಿಯ (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು) ಅಡಿಯಲ್ಲಿ ತನ್ನ ಬಳಕೆದಾರರ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತದೆ ಮತ್ತು ಖಾತೆಗಳನ್ನು ನಿರ್ಬಂಧಿಸಲು ಕಾರಣವನ್ನು ನಮೂದಿಸಬೇಕು” ಎಂದು ಅದು ನ್ಯಾಯಾಲಯಕ್ಕೆ ತಿಳಿಸಿತ್ತು.

ಇದಕ್ಕೆ ಉತ್ತರವಾಗಿ ಕೇಂದ್ರ ಸರ್ಕಾರವು, ”ಟ್ವಿಟರ್ ವಿದೇಶಿ ವ್ಯಾಪಾರ ಸಂಸ್ಥೆಯಾಗಿದ್ದು, ಸರ್ಕಾರದ ಆದೇಶದ ಮೇರೆಗೆ ಖಾತೆಗಳನ್ನು ನಿರ್ಬಂಧಿಸಿದವರ ಪರವಾಗಿ ಮಾತನಾಡುವ ಹಕ್ಕು ಇಲ್ಲ” ಎಂದು ದರ್ಪದ ಹೇಳಿಕೆ ನೀಡಿತ್ತು.

ಕಳೆದ ವರ್ಷ ಏಪ್ರಿಲ್‌ನಲ್ಲಿಯೂ ಸಹ, ಲಕ್ಷಗಟ್ಟಲೆ ಜನರು ಕೋವಿಡ್ ಎರಡನೇ ಅಲೆಗೆ ಸಾವಿಗೀಡಾದರು. ಈ ಸಮಯದಲ್ಲಿ ಸರ್ಕಾರವು ಕೋವಿಡ್ -19 ಅನ್ನು ನಿರ್ವಹಿಸುತ್ತಿರುವುದನ್ನು ಟೀಕಿಸಿದ ಖಾತೆಗಳನ್ನು ತೆಗೆದುಹಾಕಲು ಕೇಂದ್ರವು ಟ್ವಿಟರ್‌ಗೆ ಕೇಳಿಕೊಂಡಿತ್ತು. ಆದರೆ ಟ್ವಿಟರ್ ಈ ಬಗ್ಗೆ ತಲೆಕೆಡಸಿಕೊಳ್ಳಲಿಲ್ಲ, ಆಗಲೂ  ಕೇಂದ್ರವು ಟ್ವಿಟರ್ ಮೇಲೆ ಮುಗಿಬಿದ್ದಿತ್ತು.

ಹೈಕೋರ್ಟ್‌ ತೀರ್ಪಿಗೆ ಪ್ರತಿಕ್ರಿಯೆ

ಈ ಬಗ್ಗೆ ಇಂಟರ್ನೆಟ್ ಫ್ರೀಡಂ ಫೌಂಡೇಶನ್‌ನ ರಾಧಿಕಾ ರಾಯ್ ಅವರು ಪ್ರತಿಕ್ರಿಯಿಸಿ, ”ಸರ್ಕಾರವು ಪಕ್ಷಪಾತದ ರೀತಿಯಲ್ಲಿ ಜಾರಿಗೆ ತಂದಿರುವ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ರೂಪಿಸಲಾದ ಕಾರ್ಯವಿಧಾನವನ್ನು ಮಾತ್ರ ನ್ಯಾಯಾಲಯ ಗಮನಿಸುತ್ತಿದೆ. ಏಕೆಂದರೆ ಕಾಯಿದೆಯ ಸೆಕ್ಷನ್ 69A, ಇಂಟರ್ನೆಟ್ ಸೇವಾ ಪೂರೈಕೆದಾರರು, ಟೆಲಿಕಾಂ ಸೇವಾ ಪೂರೈಕೆದಾರರು, ವೆಬ್ ಹೋಸ್ಟಿಂಗ್ ಸೇವೆಗಳು, ಸರ್ಚ್ ಇಂಜಿನ್‌ಗಳು ಮತ್ತು ಆನ್‌ಲೈನ್ ಮಾರುಕಟ್ಟೆ ಸ್ಥಳಗಳಂತಹ ಆನ್‌ಲೈನ್ ಮಧ್ಯವರ್ತಿಗಳಿಗೆ ವಿಷಯವನ್ನು ನಿರ್ಬಂಧಿಸುವ ಆದೇಶಗಳನ್ನು ನೀಡಲು ಸರ್ಕಾರಕ್ಕೆ ಅವಕಾಶ ನೀಡುತ್ತದೆ” ಎಂದು ಹೇಳಿದರು.

ವಿಷಯವನ್ನು ಬರೆದವರ ಗಮನಕ್ಕೆ ತರದೇ ಅದನ್ನು ತೆಗೆದುಹಾಕುವಿಕೆ ಮತ್ತು ಸರ್ಕಾರದ ಸೂಚನೆಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ. ಇದು ನೈಸರ್ಗಿಕ ನ್ಯಾಯದ ತತ್ವಗಳನ್ನು ನಿರಾಶೆಗೊಳಿಸುತ್ತದೆ. ಏಕೆಂದರೆ ಇದು ಸಂತ್ರಸ್ತರು, ಪೀಡಿತರು ವಾಪಸ್ ಸಮರ್ಪಕವಾಗಿ ಸವಾಲು ಹಾಕಲು ಅನುಮತಿಸುವುದಿಲ್ಲ. ಎಂದು ರಾಯ್ ಹೇಳಿದ್ದಾರೆ.

ಖಾತೆಗಳ ಹಲವಾರು ಪೋಸ್ಟ್‌ಗಳನ್ನು ಏಕಕಾಲಕ್ಕೆ ನಿರ್ಬಂಧಿಸುವಿಕೆಯನ್ನು ಅನುಮತಿಸುವ ನ್ಯಾಯಾಲಯದ ನಿರ್ಧಾರವು ಸಮಾನ ಆಯ್ಕೆಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ. “ಒಂದು ಖಾತೆಯು ತನ್ನ ನೀತಿಗಳನ್ನು ಪದೇ ಪದೇ ಉಲ್ಲಂಘಿಸಿದರೆ, ಅದನ್ನು ನಿಷೇಧಿಸಲಾಗುವುದು ಎಂದು ಟ್ವಿಟರ್ ಸ್ವತಃ ಹೇಳುತ್ತದೆ. ಹಾಗಿದ್ದರೂ ಸರ್ಕಾರವು ಕೇವಲ ಒಂದು ಟ್ವೀಟ್‌ನ ಆಧಾರದ ಮೇಲೆ ಅದನ್ನು ಮಾಡಿದಾಗ, ಅವರು ಬಳಕೆದಾರರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುತ್ತಾರೆ. ಅಲ್ಲದೆ, ಬಳಕೆದಾರರು ತಮ್ಮ ಖಾತೆಗಳನ್ನು ಸರ್ಕಾರ ತಡೆಹಿಡಿಯಲು ಕಾರಣವೇನೆಂದು ಸಹ ಹಲವಾರು ಬಾರಿ ತಿಳಿದುಕೊಳ್ಳಲು ಸಾಧ್ಯವಿಕಾರಣಗಳ ಬಗ್ಗೆ ಅಪರೂಪವಾಗಿ ತಿಳಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...