Homeಮುಖಪುಟಟ್ವಿಟರ್ ಅರ್ಜಿ ವಜಾಗೊಳಿಸಿ ಕೇಂದ್ರದ ಪರ ಹೈಕೋರ್ಟ್ ತೀರ್ಪು

ಟ್ವಿಟರ್ ಅರ್ಜಿ ವಜಾಗೊಳಿಸಿ ಕೇಂದ್ರದ ಪರ ಹೈಕೋರ್ಟ್ ತೀರ್ಪು

- Advertisement -
- Advertisement -

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿದ್ದ ಹಲವು ನಿರ್ಬಂಧಗಳು ಮತ್ತು ಟೇಕ್ ಡೌನ್ ಆದೇಶಗಳನ್ನು ಪ್ರಶ್ನಿಸಿ, “ಟ್ವಿಟರ್ ಸಂಸ್ಥೆ” ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅದರ ಜೊತೆಗೆ ಟ್ವಿಟರ್ ಸಂಸ್ಥೆಗೆ 50 ಲಕ್ಷ ರೂ. ದಂಡ ವಿಧಿಸಲಾಗಿದೆ.

ಫೆಬ್ರವರಿ 2021 ರಿಂದ ಫೆಬ್ರವರಿ 2022 ರ ನಡುವೆ ಕೇಂದ್ರ ಸರ್ಕಾರವು 39 ಟ್ವೀಟ್‌ಗಳು ಮತ್ತು ಖಾತೆಗಳನ್ನು ನಿರ್ಬಂಧಿಸುವ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಟ್ವಿಟರ್ ಮನವಿಯನ್ನು ಸಲ್ಲಿಸಿತ್ತು. ಟ್ವಿಟರ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಈ ಸಂಬಂಧದ ರಿಟ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಬೆಳಗ್ಗೆ ಪ್ರಕಟಿಸಿತು. ದಂಡದ ಮೊತ್ತವನ್ನು 45 ದಿನಗಳಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸುವಂತೆ ಆದೇಶಿಸಲಾಗಿದೆ. ಒಂದೊಮ್ಮೆ 45 ದಿನಗಳಲ್ಲಿ ದಂಡವನ್ನು ಪಾವತಿಸಲು ವಿಫಲವಾದರೆ ದಿನಕ್ಕೆ 5 ಸಾವಿರದಂತೆ ಹೆಚ್ಚುವರಿ ದಂಡ ವಿಧಿಸಲಾಗುವುದು” ಎಂದು ನ್ಯಾಯಪೀಠ ಹೇಳಿದೆ.

”ಸ್ವೀಟ್‌ಗಳನ್ನು ಮತ್ತು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರಕ್ಕೆ ಅಧಿಕಾರವಿದೆ ಎಂಬುದು ಕೇಂದ್ರ ಸರ್ಕಾರದ ಪರ ವಕೀಲರ ವಾದ ಸಮರ್ಥನೆಯಿಂದ ಪೀಠಕ್ಕೆ ಮನವರಿಕೆಯಾಗಿದೆ” ಎಂದು ತೀರ್ಪಿನಲ್ಲಿ ವಿವರಿಸಲಾಗಿದೆ.

“ನೀವು [ಟ್ವಿಟ್ಟರ್] ನಿಯಮಗಳನ್ನು ಜಾರಿಗೆ ತರಲು ಏಕೆ ವಿಳಂಬಗೊಳಿಸಿದ್ದೀರಿ, ಒಂದು ವರ್ಷಕ್ಕೂ ಹೆಚ್ಚು ವಿಳಂಬ ಮಾಡಿರುವುದಕ್ಕೆ ಯಾವುದೇ ಕಾರಣವನ್ನು ನೀಡಿಲ್ಲ… ನಂತರ ನೀವು ಇದ್ದಕ್ಕಿದ್ದಂತೆ ಪಾಲಿಸುತ್ತೀರಿ ಮತ್ತು ನ್ಯಾಯಾಲಯವನ್ನು ಸಂಪರ್ಕಿಸುತ್ತೀರಿ. ನೀವು ಕಾನೂನಿನ ಪರಿಚಯವಿಲ್ಲದ ರೈತರಲ್ಲ, ಆದರೆ ಬಿಲಿಯನ್ ಡಾಲರ್ ಕಂಪನಿಯವರು” ಎಂದು ನ್ಯಾಯಮೂರ್ತಿ ದೀಕ್ಷಿತ್ ಹೇಳಿದರು.

ಕೇಂದ್ರದ ವಾದವನ್ನು ತಮಗೆ ಮನವರಿಕೆಯಾಗಿದೆ ಎಂದ ನ್ಯಾಯಾಧೀಶರು, ಕೇಂದ್ರ ಸರ್ಕಾರವು ಟ್ವೀಟ್‌ಗಳನ್ನು ತೆಗೆದುಹಾಕಲು ಟ್ವಿಟರ್‌ಗೆ ಕೇಳುವ ಅಧಿಕಾರವನ್ನು ಹೊಂದಿದ್ದು ಮಾತ್ರವಲ್ಲದೆ ಖಾತೆಗಳನ್ನು ನಿರ್ಬಂಧಿಸಲು ಕಂಪನಿಯನ್ನು ಕೇಳಬಹುದು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ಏನಿದು ಪ್ರಕರಣ?

ಫೆಬ್ರವರಿ 2021ರಲ್ಲಿ, ನವೆಂಬರ್ 2022ರ ನಡುವೆ ನಡೆದ ದೊಡ್ಡ ಪ್ರಮಾಣದ ರೈತ ಪ್ರತಿಭಟನೆಗಳನ್ನು ನಿಭಾಯಿಸುವಲ್ಲಿ ಕೇಂದ್ರ ಸೋತಿದೆ, ಕೇಂದ್ರ ಸರ್ಕಾರ ರೈತ ವಿರೋಧ ಕಾನೂನು ತರುತ್ತಿದೆ ಎಂದು ಟೀಕಿಸಿದ ನೂರಾರು ಖಾತೆಗಳನ್ನು ತೆಗೆದುಹಾಕಲು ಸರ್ಕಾರವು ಟ್ವಿಟರ್ ಅನ್ನು ಕೇಳಿದೆ. ಮೊದಲು ಸರ್ಕಾರದ ಬೇಡಿಕೆಯನ್ನು ಟ್ವಿಟರ್ ಸಂಸ್ಥೆ ನಿರಾಕರಿಸಿತು, ಆಗ ತನ್ನ ಸ್ಥಳೀಯ ಉದ್ಯೋಗಿಗಳಿಗೆ ಜೈಲಿಗೆ ಹಾಕುವ ಬೆದರಿಕೆ ಹಾಕಲಾಯಿತು.

ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಜುಲೈನಲ್ಲಿ, ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಕೇಂದ್ರ ಸರ್ಕಾರ “ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಫೆಬ್ರವರಿ 2021 ಮತ್ತು ನವೆಂಬರ್ 2022ರ ನಡುವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 175 ಟ್ವೀಟ್‌ಗಳನ್ನು ಮತ್ತು 1,400ಕ್ಕೂ ಹೆಚ್ಚು ಖಾತೆಗಳನ್ನು ತೆಗೆದುಹಾಕಲು ಕೇಳಿಕೊಂಡಿದೆ ಎಂದು ಕಂಪನಿಯು ಹೈಕೋರ್ಟ್‌ಗೆ ತಿಳಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ”ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನ ಬಳಕೆದಾರರಿಗೆ ಅವರ ಖಾತೆಗಳನ್ನು ಯಾಕೆ ನಿರ್ಬಂಧಿಸಬೇಕು ಎನ್ನುವ ಬಗ್ಗೆ ಕಾರಣವನ್ನು ಸರ್ಕಾರ ನೀಡಬೇಕು” ಎಂದು ಟ್ವಿಟರ್ ವಾದಿಸಿತ್ತು.

”ನೋಟಿಸ್ ನೀಡದೆ ತಮ್ಮ ಖಾತೆಗಳನ್ನು ನಿರ್ಬಂಧಿಸಿದರೆ 19ನೇ ವಿಧಿಯ (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು) ಅಡಿಯಲ್ಲಿ ತನ್ನ ಬಳಕೆದಾರರ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತದೆ ಮತ್ತು ಖಾತೆಗಳನ್ನು ನಿರ್ಬಂಧಿಸಲು ಕಾರಣವನ್ನು ನಮೂದಿಸಬೇಕು” ಎಂದು ಅದು ನ್ಯಾಯಾಲಯಕ್ಕೆ ತಿಳಿಸಿತ್ತು.

ಇದಕ್ಕೆ ಉತ್ತರವಾಗಿ ಕೇಂದ್ರ ಸರ್ಕಾರವು, ”ಟ್ವಿಟರ್ ವಿದೇಶಿ ವ್ಯಾಪಾರ ಸಂಸ್ಥೆಯಾಗಿದ್ದು, ಸರ್ಕಾರದ ಆದೇಶದ ಮೇರೆಗೆ ಖಾತೆಗಳನ್ನು ನಿರ್ಬಂಧಿಸಿದವರ ಪರವಾಗಿ ಮಾತನಾಡುವ ಹಕ್ಕು ಇಲ್ಲ” ಎಂದು ದರ್ಪದ ಹೇಳಿಕೆ ನೀಡಿತ್ತು.

ಕಳೆದ ವರ್ಷ ಏಪ್ರಿಲ್‌ನಲ್ಲಿಯೂ ಸಹ, ಲಕ್ಷಗಟ್ಟಲೆ ಜನರು ಕೋವಿಡ್ ಎರಡನೇ ಅಲೆಗೆ ಸಾವಿಗೀಡಾದರು. ಈ ಸಮಯದಲ್ಲಿ ಸರ್ಕಾರವು ಕೋವಿಡ್ -19 ಅನ್ನು ನಿರ್ವಹಿಸುತ್ತಿರುವುದನ್ನು ಟೀಕಿಸಿದ ಖಾತೆಗಳನ್ನು ತೆಗೆದುಹಾಕಲು ಕೇಂದ್ರವು ಟ್ವಿಟರ್‌ಗೆ ಕೇಳಿಕೊಂಡಿತ್ತು. ಆದರೆ ಟ್ವಿಟರ್ ಈ ಬಗ್ಗೆ ತಲೆಕೆಡಸಿಕೊಳ್ಳಲಿಲ್ಲ, ಆಗಲೂ  ಕೇಂದ್ರವು ಟ್ವಿಟರ್ ಮೇಲೆ ಮುಗಿಬಿದ್ದಿತ್ತು.

ಹೈಕೋರ್ಟ್‌ ತೀರ್ಪಿಗೆ ಪ್ರತಿಕ್ರಿಯೆ

ಈ ಬಗ್ಗೆ ಇಂಟರ್ನೆಟ್ ಫ್ರೀಡಂ ಫೌಂಡೇಶನ್‌ನ ರಾಧಿಕಾ ರಾಯ್ ಅವರು ಪ್ರತಿಕ್ರಿಯಿಸಿ, ”ಸರ್ಕಾರವು ಪಕ್ಷಪಾತದ ರೀತಿಯಲ್ಲಿ ಜಾರಿಗೆ ತಂದಿರುವ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ರೂಪಿಸಲಾದ ಕಾರ್ಯವಿಧಾನವನ್ನು ಮಾತ್ರ ನ್ಯಾಯಾಲಯ ಗಮನಿಸುತ್ತಿದೆ. ಏಕೆಂದರೆ ಕಾಯಿದೆಯ ಸೆಕ್ಷನ್ 69A, ಇಂಟರ್ನೆಟ್ ಸೇವಾ ಪೂರೈಕೆದಾರರು, ಟೆಲಿಕಾಂ ಸೇವಾ ಪೂರೈಕೆದಾರರು, ವೆಬ್ ಹೋಸ್ಟಿಂಗ್ ಸೇವೆಗಳು, ಸರ್ಚ್ ಇಂಜಿನ್‌ಗಳು ಮತ್ತು ಆನ್‌ಲೈನ್ ಮಾರುಕಟ್ಟೆ ಸ್ಥಳಗಳಂತಹ ಆನ್‌ಲೈನ್ ಮಧ್ಯವರ್ತಿಗಳಿಗೆ ವಿಷಯವನ್ನು ನಿರ್ಬಂಧಿಸುವ ಆದೇಶಗಳನ್ನು ನೀಡಲು ಸರ್ಕಾರಕ್ಕೆ ಅವಕಾಶ ನೀಡುತ್ತದೆ” ಎಂದು ಹೇಳಿದರು.

ವಿಷಯವನ್ನು ಬರೆದವರ ಗಮನಕ್ಕೆ ತರದೇ ಅದನ್ನು ತೆಗೆದುಹಾಕುವಿಕೆ ಮತ್ತು ಸರ್ಕಾರದ ಸೂಚನೆಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ. ಇದು ನೈಸರ್ಗಿಕ ನ್ಯಾಯದ ತತ್ವಗಳನ್ನು ನಿರಾಶೆಗೊಳಿಸುತ್ತದೆ. ಏಕೆಂದರೆ ಇದು ಸಂತ್ರಸ್ತರು, ಪೀಡಿತರು ವಾಪಸ್ ಸಮರ್ಪಕವಾಗಿ ಸವಾಲು ಹಾಕಲು ಅನುಮತಿಸುವುದಿಲ್ಲ. ಎಂದು ರಾಯ್ ಹೇಳಿದ್ದಾರೆ.

ಖಾತೆಗಳ ಹಲವಾರು ಪೋಸ್ಟ್‌ಗಳನ್ನು ಏಕಕಾಲಕ್ಕೆ ನಿರ್ಬಂಧಿಸುವಿಕೆಯನ್ನು ಅನುಮತಿಸುವ ನ್ಯಾಯಾಲಯದ ನಿರ್ಧಾರವು ಸಮಾನ ಆಯ್ಕೆಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ. “ಒಂದು ಖಾತೆಯು ತನ್ನ ನೀತಿಗಳನ್ನು ಪದೇ ಪದೇ ಉಲ್ಲಂಘಿಸಿದರೆ, ಅದನ್ನು ನಿಷೇಧಿಸಲಾಗುವುದು ಎಂದು ಟ್ವಿಟರ್ ಸ್ವತಃ ಹೇಳುತ್ತದೆ. ಹಾಗಿದ್ದರೂ ಸರ್ಕಾರವು ಕೇವಲ ಒಂದು ಟ್ವೀಟ್‌ನ ಆಧಾರದ ಮೇಲೆ ಅದನ್ನು ಮಾಡಿದಾಗ, ಅವರು ಬಳಕೆದಾರರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುತ್ತಾರೆ. ಅಲ್ಲದೆ, ಬಳಕೆದಾರರು ತಮ್ಮ ಖಾತೆಗಳನ್ನು ಸರ್ಕಾರ ತಡೆಹಿಡಿಯಲು ಕಾರಣವೇನೆಂದು ಸಹ ಹಲವಾರು ಬಾರಿ ತಿಳಿದುಕೊಳ್ಳಲು ಸಾಧ್ಯವಿಕಾರಣಗಳ ಬಗ್ಗೆ ಅಪರೂಪವಾಗಿ ತಿಳಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...