Homeಮುಖಪುಟಟ್ವಿಟರ್ ಅರ್ಜಿ ವಜಾಗೊಳಿಸಿ ಕೇಂದ್ರದ ಪರ ಹೈಕೋರ್ಟ್ ತೀರ್ಪು

ಟ್ವಿಟರ್ ಅರ್ಜಿ ವಜಾಗೊಳಿಸಿ ಕೇಂದ್ರದ ಪರ ಹೈಕೋರ್ಟ್ ತೀರ್ಪು

- Advertisement -
- Advertisement -

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊರಡಿಸಿದ್ದ ಹಲವು ನಿರ್ಬಂಧಗಳು ಮತ್ತು ಟೇಕ್ ಡೌನ್ ಆದೇಶಗಳನ್ನು ಪ್ರಶ್ನಿಸಿ, “ಟ್ವಿಟರ್ ಸಂಸ್ಥೆ” ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅದರ ಜೊತೆಗೆ ಟ್ವಿಟರ್ ಸಂಸ್ಥೆಗೆ 50 ಲಕ್ಷ ರೂ. ದಂಡ ವಿಧಿಸಲಾಗಿದೆ.

ಫೆಬ್ರವರಿ 2021 ರಿಂದ ಫೆಬ್ರವರಿ 2022 ರ ನಡುವೆ ಕೇಂದ್ರ ಸರ್ಕಾರವು 39 ಟ್ವೀಟ್‌ಗಳು ಮತ್ತು ಖಾತೆಗಳನ್ನು ನಿರ್ಬಂಧಿಸುವ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಪ್ರಶ್ನಿಸಿ ಟ್ವಿಟರ್ ಮನವಿಯನ್ನು ಸಲ್ಲಿಸಿತ್ತು. ಟ್ವಿಟರ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಈ ಸಂಬಂಧದ ರಿಟ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಬೆಳಗ್ಗೆ ಪ್ರಕಟಿಸಿತು. ದಂಡದ ಮೊತ್ತವನ್ನು 45 ದಿನಗಳಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸುವಂತೆ ಆದೇಶಿಸಲಾಗಿದೆ. ಒಂದೊಮ್ಮೆ 45 ದಿನಗಳಲ್ಲಿ ದಂಡವನ್ನು ಪಾವತಿಸಲು ವಿಫಲವಾದರೆ ದಿನಕ್ಕೆ 5 ಸಾವಿರದಂತೆ ಹೆಚ್ಚುವರಿ ದಂಡ ವಿಧಿಸಲಾಗುವುದು” ಎಂದು ನ್ಯಾಯಪೀಠ ಹೇಳಿದೆ.

”ಸ್ವೀಟ್‌ಗಳನ್ನು ಮತ್ತು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರಕ್ಕೆ ಅಧಿಕಾರವಿದೆ ಎಂಬುದು ಕೇಂದ್ರ ಸರ್ಕಾರದ ಪರ ವಕೀಲರ ವಾದ ಸಮರ್ಥನೆಯಿಂದ ಪೀಠಕ್ಕೆ ಮನವರಿಕೆಯಾಗಿದೆ” ಎಂದು ತೀರ್ಪಿನಲ್ಲಿ ವಿವರಿಸಲಾಗಿದೆ.

“ನೀವು [ಟ್ವಿಟ್ಟರ್] ನಿಯಮಗಳನ್ನು ಜಾರಿಗೆ ತರಲು ಏಕೆ ವಿಳಂಬಗೊಳಿಸಿದ್ದೀರಿ, ಒಂದು ವರ್ಷಕ್ಕೂ ಹೆಚ್ಚು ವಿಳಂಬ ಮಾಡಿರುವುದಕ್ಕೆ ಯಾವುದೇ ಕಾರಣವನ್ನು ನೀಡಿಲ್ಲ… ನಂತರ ನೀವು ಇದ್ದಕ್ಕಿದ್ದಂತೆ ಪಾಲಿಸುತ್ತೀರಿ ಮತ್ತು ನ್ಯಾಯಾಲಯವನ್ನು ಸಂಪರ್ಕಿಸುತ್ತೀರಿ. ನೀವು ಕಾನೂನಿನ ಪರಿಚಯವಿಲ್ಲದ ರೈತರಲ್ಲ, ಆದರೆ ಬಿಲಿಯನ್ ಡಾಲರ್ ಕಂಪನಿಯವರು” ಎಂದು ನ್ಯಾಯಮೂರ್ತಿ ದೀಕ್ಷಿತ್ ಹೇಳಿದರು.

ಕೇಂದ್ರದ ವಾದವನ್ನು ತಮಗೆ ಮನವರಿಕೆಯಾಗಿದೆ ಎಂದ ನ್ಯಾಯಾಧೀಶರು, ಕೇಂದ್ರ ಸರ್ಕಾರವು ಟ್ವೀಟ್‌ಗಳನ್ನು ತೆಗೆದುಹಾಕಲು ಟ್ವಿಟರ್‌ಗೆ ಕೇಳುವ ಅಧಿಕಾರವನ್ನು ಹೊಂದಿದ್ದು ಮಾತ್ರವಲ್ಲದೆ ಖಾತೆಗಳನ್ನು ನಿರ್ಬಂಧಿಸಲು ಕಂಪನಿಯನ್ನು ಕೇಳಬಹುದು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ಏನಿದು ಪ್ರಕರಣ?

ಫೆಬ್ರವರಿ 2021ರಲ್ಲಿ, ನವೆಂಬರ್ 2022ರ ನಡುವೆ ನಡೆದ ದೊಡ್ಡ ಪ್ರಮಾಣದ ರೈತ ಪ್ರತಿಭಟನೆಗಳನ್ನು ನಿಭಾಯಿಸುವಲ್ಲಿ ಕೇಂದ್ರ ಸೋತಿದೆ, ಕೇಂದ್ರ ಸರ್ಕಾರ ರೈತ ವಿರೋಧ ಕಾನೂನು ತರುತ್ತಿದೆ ಎಂದು ಟೀಕಿಸಿದ ನೂರಾರು ಖಾತೆಗಳನ್ನು ತೆಗೆದುಹಾಕಲು ಸರ್ಕಾರವು ಟ್ವಿಟರ್ ಅನ್ನು ಕೇಳಿದೆ. ಮೊದಲು ಸರ್ಕಾರದ ಬೇಡಿಕೆಯನ್ನು ಟ್ವಿಟರ್ ಸಂಸ್ಥೆ ನಿರಾಕರಿಸಿತು, ಆಗ ತನ್ನ ಸ್ಥಳೀಯ ಉದ್ಯೋಗಿಗಳಿಗೆ ಜೈಲಿಗೆ ಹಾಕುವ ಬೆದರಿಕೆ ಹಾಕಲಾಯಿತು.

ಟ್ವಿಟರ್ ಖಾತೆಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಜುಲೈನಲ್ಲಿ, ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಕೇಂದ್ರ ಸರ್ಕಾರ “ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಫೆಬ್ರವರಿ 2021 ಮತ್ತು ನವೆಂಬರ್ 2022ರ ನಡುವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 175 ಟ್ವೀಟ್‌ಗಳನ್ನು ಮತ್ತು 1,400ಕ್ಕೂ ಹೆಚ್ಚು ಖಾತೆಗಳನ್ನು ತೆಗೆದುಹಾಕಲು ಕೇಳಿಕೊಂಡಿದೆ ಎಂದು ಕಂಪನಿಯು ಹೈಕೋರ್ಟ್‌ಗೆ ತಿಳಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ”ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನ ಬಳಕೆದಾರರಿಗೆ ಅವರ ಖಾತೆಗಳನ್ನು ಯಾಕೆ ನಿರ್ಬಂಧಿಸಬೇಕು ಎನ್ನುವ ಬಗ್ಗೆ ಕಾರಣವನ್ನು ಸರ್ಕಾರ ನೀಡಬೇಕು” ಎಂದು ಟ್ವಿಟರ್ ವಾದಿಸಿತ್ತು.

”ನೋಟಿಸ್ ನೀಡದೆ ತಮ್ಮ ಖಾತೆಗಳನ್ನು ನಿರ್ಬಂಧಿಸಿದರೆ 19ನೇ ವಿಧಿಯ (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು) ಅಡಿಯಲ್ಲಿ ತನ್ನ ಬಳಕೆದಾರರ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತದೆ ಮತ್ತು ಖಾತೆಗಳನ್ನು ನಿರ್ಬಂಧಿಸಲು ಕಾರಣವನ್ನು ನಮೂದಿಸಬೇಕು” ಎಂದು ಅದು ನ್ಯಾಯಾಲಯಕ್ಕೆ ತಿಳಿಸಿತ್ತು.

ಇದಕ್ಕೆ ಉತ್ತರವಾಗಿ ಕೇಂದ್ರ ಸರ್ಕಾರವು, ”ಟ್ವಿಟರ್ ವಿದೇಶಿ ವ್ಯಾಪಾರ ಸಂಸ್ಥೆಯಾಗಿದ್ದು, ಸರ್ಕಾರದ ಆದೇಶದ ಮೇರೆಗೆ ಖಾತೆಗಳನ್ನು ನಿರ್ಬಂಧಿಸಿದವರ ಪರವಾಗಿ ಮಾತನಾಡುವ ಹಕ್ಕು ಇಲ್ಲ” ಎಂದು ದರ್ಪದ ಹೇಳಿಕೆ ನೀಡಿತ್ತು.

ಕಳೆದ ವರ್ಷ ಏಪ್ರಿಲ್‌ನಲ್ಲಿಯೂ ಸಹ, ಲಕ್ಷಗಟ್ಟಲೆ ಜನರು ಕೋವಿಡ್ ಎರಡನೇ ಅಲೆಗೆ ಸಾವಿಗೀಡಾದರು. ಈ ಸಮಯದಲ್ಲಿ ಸರ್ಕಾರವು ಕೋವಿಡ್ -19 ಅನ್ನು ನಿರ್ವಹಿಸುತ್ತಿರುವುದನ್ನು ಟೀಕಿಸಿದ ಖಾತೆಗಳನ್ನು ತೆಗೆದುಹಾಕಲು ಕೇಂದ್ರವು ಟ್ವಿಟರ್‌ಗೆ ಕೇಳಿಕೊಂಡಿತ್ತು. ಆದರೆ ಟ್ವಿಟರ್ ಈ ಬಗ್ಗೆ ತಲೆಕೆಡಸಿಕೊಳ್ಳಲಿಲ್ಲ, ಆಗಲೂ  ಕೇಂದ್ರವು ಟ್ವಿಟರ್ ಮೇಲೆ ಮುಗಿಬಿದ್ದಿತ್ತು.

ಹೈಕೋರ್ಟ್‌ ತೀರ್ಪಿಗೆ ಪ್ರತಿಕ್ರಿಯೆ

ಈ ಬಗ್ಗೆ ಇಂಟರ್ನೆಟ್ ಫ್ರೀಡಂ ಫೌಂಡೇಶನ್‌ನ ರಾಧಿಕಾ ರಾಯ್ ಅವರು ಪ್ರತಿಕ್ರಿಯಿಸಿ, ”ಸರ್ಕಾರವು ಪಕ್ಷಪಾತದ ರೀತಿಯಲ್ಲಿ ಜಾರಿಗೆ ತಂದಿರುವ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ರೂಪಿಸಲಾದ ಕಾರ್ಯವಿಧಾನವನ್ನು ಮಾತ್ರ ನ್ಯಾಯಾಲಯ ಗಮನಿಸುತ್ತಿದೆ. ಏಕೆಂದರೆ ಕಾಯಿದೆಯ ಸೆಕ್ಷನ್ 69A, ಇಂಟರ್ನೆಟ್ ಸೇವಾ ಪೂರೈಕೆದಾರರು, ಟೆಲಿಕಾಂ ಸೇವಾ ಪೂರೈಕೆದಾರರು, ವೆಬ್ ಹೋಸ್ಟಿಂಗ್ ಸೇವೆಗಳು, ಸರ್ಚ್ ಇಂಜಿನ್‌ಗಳು ಮತ್ತು ಆನ್‌ಲೈನ್ ಮಾರುಕಟ್ಟೆ ಸ್ಥಳಗಳಂತಹ ಆನ್‌ಲೈನ್ ಮಧ್ಯವರ್ತಿಗಳಿಗೆ ವಿಷಯವನ್ನು ನಿರ್ಬಂಧಿಸುವ ಆದೇಶಗಳನ್ನು ನೀಡಲು ಸರ್ಕಾರಕ್ಕೆ ಅವಕಾಶ ನೀಡುತ್ತದೆ” ಎಂದು ಹೇಳಿದರು.

ವಿಷಯವನ್ನು ಬರೆದವರ ಗಮನಕ್ಕೆ ತರದೇ ಅದನ್ನು ತೆಗೆದುಹಾಕುವಿಕೆ ಮತ್ತು ಸರ್ಕಾರದ ಸೂಚನೆಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ. ಇದು ನೈಸರ್ಗಿಕ ನ್ಯಾಯದ ತತ್ವಗಳನ್ನು ನಿರಾಶೆಗೊಳಿಸುತ್ತದೆ. ಏಕೆಂದರೆ ಇದು ಸಂತ್ರಸ್ತರು, ಪೀಡಿತರು ವಾಪಸ್ ಸಮರ್ಪಕವಾಗಿ ಸವಾಲು ಹಾಕಲು ಅನುಮತಿಸುವುದಿಲ್ಲ. ಎಂದು ರಾಯ್ ಹೇಳಿದ್ದಾರೆ.

ಖಾತೆಗಳ ಹಲವಾರು ಪೋಸ್ಟ್‌ಗಳನ್ನು ಏಕಕಾಲಕ್ಕೆ ನಿರ್ಬಂಧಿಸುವಿಕೆಯನ್ನು ಅನುಮತಿಸುವ ನ್ಯಾಯಾಲಯದ ನಿರ್ಧಾರವು ಸಮಾನ ಆಯ್ಕೆಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ. “ಒಂದು ಖಾತೆಯು ತನ್ನ ನೀತಿಗಳನ್ನು ಪದೇ ಪದೇ ಉಲ್ಲಂಘಿಸಿದರೆ, ಅದನ್ನು ನಿಷೇಧಿಸಲಾಗುವುದು ಎಂದು ಟ್ವಿಟರ್ ಸ್ವತಃ ಹೇಳುತ್ತದೆ. ಹಾಗಿದ್ದರೂ ಸರ್ಕಾರವು ಕೇವಲ ಒಂದು ಟ್ವೀಟ್‌ನ ಆಧಾರದ ಮೇಲೆ ಅದನ್ನು ಮಾಡಿದಾಗ, ಅವರು ಬಳಕೆದಾರರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುತ್ತಾರೆ. ಅಲ್ಲದೆ, ಬಳಕೆದಾರರು ತಮ್ಮ ಖಾತೆಗಳನ್ನು ಸರ್ಕಾರ ತಡೆಹಿಡಿಯಲು ಕಾರಣವೇನೆಂದು ಸಹ ಹಲವಾರು ಬಾರಿ ತಿಳಿದುಕೊಳ್ಳಲು ಸಾಧ್ಯವಿಕಾರಣಗಳ ಬಗ್ಗೆ ಅಪರೂಪವಾಗಿ ತಿಳಿಸುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...