Homeಮುಖಪುಟಸರ್ಕಾರಿ ಸ್ಥಳ ಬಳಕೆಯ ಪೂರ್ವಾನುಮತಿ ಕಡ್ಡಾಯ ನಿರ್ದೇಶನಕ್ಕೆ ತಡೆ: ಹೊಸ ಪ್ರಶ್ನೆ ಹುಟ್ಟು ಹಾಕಿದ ಹೈಕೋರ್ಟ್...

ಸರ್ಕಾರಿ ಸ್ಥಳ ಬಳಕೆಯ ಪೂರ್ವಾನುಮತಿ ಕಡ್ಡಾಯ ನಿರ್ದೇಶನಕ್ಕೆ ತಡೆ: ಹೊಸ ಪ್ರಶ್ನೆ ಹುಟ್ಟು ಹಾಕಿದ ಹೈಕೋರ್ಟ್ ಮಧ್ಯಂತರ ಆದೇಶ

- Advertisement -
- Advertisement -

ಯಾವುದೇ ಖಾಸಗಿ ಸಂಘ, ಸಂಸ್ಥೆ ಅಥವಾ ವ್ಯಕ್ತಿಗಳ ಗುಂಪು ಸರ್ಕಾರಿ ಆಸ್ತಿ ಅಥವಾ ಆವರಣವನ್ನು ಬಳಸಲು ‘ಪೂರ್ವಾನುಮತಿ’ ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ಇತ್ತೀಚಿನ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್‌ನ ಧಾರವಾಡ ಪೀಠವು ಮಂಗಳವಾರ (ಅ.28) ಆದೇಶಿಸಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ, ಮುಂದಿನ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ.

ಅರ್ಜಿದಾರರ ಪರ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಈ ಆದೇಶವು ನಾಗರಿಕರ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧ ಹೇರುತ್ತದೆ ಎಂದು ವಾದಿಸಿದ್ದಾರೆ.

“ಹತ್ತಕ್ಕಿಂತ ಹೆಚ್ಚು ಜನರು ಸೇರುವ ಸಭೆಗಳಿಗೆ ಅನುಮತಿ ಪಡೆಯಬೇಕೆಂದು ಸರ್ಕಾರ ಆದೇಶಿಸಿದೆ. ಇದು ಸಂವಿಧಾನದಲ್ಲಿ ಒದಗಿಸಲಾದ ಮೂಲಭೂತ ಹಕ್ಕಿನ ಮೇಲಿನ ನಿರ್ಬಂಧವಾಗಿದೆ. ಉದ್ಯಾನವನದಲ್ಲಿ ಪಾರ್ಟಿ ನಡೆಸಿದರೂ, ಸರ್ಕಾರಿ ಆದೇಶದ ಪ್ರಕಾರ ಅದು ಕಾನೂನುಬಾಹಿರ ಸಭೆಯಾಗುತ್ತದೆ” ಎಂದು ವಕೀಲ ಹಾರನಹಳ್ಳಿ ವಿಚಾರಣೆಯ ಸಂದರ್ಭದಲ್ಲಿ ಹೇಳಿದ್ದಾರೆ.

ಆರ್‌ಎಸ್‌ಎಸ್ ಸಂಬಂಧಿತ ಚಟುವಟಿಕೆಗಳನ್ನು ನಿರ್ಬಂಧಿಸುವ ಗುರಿಯನ್ನು ಹೊಂದಿದೆ ಎಂದು ಹಲವರು ಭಾವಿಸಿದ್ದ ಈ ಆದೇಶವು ಮುಂದಿನ ವಿಚಾರಣೆಯವರೆಗೆ ತಡೆಹಿಡಿಯಲ್ಪಟ್ಟಿದೆ.

ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಪುನಃಶ್ಚೇತನ ಸೇವಾ ಸಂಸ್ಥೆ ಅಧ್ಯಕ್ಷ ವಿನಾಯಕ ಮತ್ತು ವಿ ಕೇರ್ ಫೌಂಡೇಶನ್ ಅಧ್ಯಕ್ಷ ಗಂಗಾಧರಯ್ಯ, ಧಾರವಾಡದ ರಾಜೀವ ಮಲ್ಹಾರ ಕುಲಕರ್ಣಿ ಹಾಗೂ ಬೆಳಗಾವಿಯ ಉಮಾ ಸತ್ಯಜಿತ್‌ ಚವಾಣ್ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಕ್ರಮವು ಖಾಸಗಿ ಸಂಸ್ಥೆಗಳು ಕಾನೂನುಬದ್ಧ ಚಟುವಟಿಕೆಗಳನ್ನು ನಡೆಸುವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದ್ದರು.

ಈ ತಿಂಗಳ ಆರಂಭದಲ್ಲಿ ಹೊರಡಿಸಲಾದ, ಈಗ ತಡೆಹಿಡಿಯಲಾದ ಸರ್ಕಾರಿ ಆದೇಶ (ಜಿಒ)ವು ಸಾರ್ವಜನಿಕ ಮತ್ತು ಸರ್ಕಾರಿ ಸ್ವಾಮ್ಯದ ಆಸ್ತಿಗಳನ್ನು ಹೇಗೆ ಬಳಸಬಹುದು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ರೂಪಿಸಿತ್ತು.

ಯಾವುದೇ ಖಾಸಗಿ ಅಥವಾ ಸಾಮಾಜಿಕ ಸಂಸ್ಥೆಗಳು ಸರ್ಕಾರಿ ಶಾಲೆಗಳು, ಕಾಲೇಜು ಮೈದಾನಗಳು ಅಥವಾ ಇತರ ಸರ್ಕಾರಿ ಸ್ಥಳಗಳಲ್ಲಿ ಆಯಾ ಇಲಾಖೆಗಳ ಮುಖ್ಯಸ್ಥರ ಲಿಖಿತ ಅನುಮತಿಯಿಲ್ಲದೆ ಕಾರ್ಯಕ್ರಮಗಳು, ಸಭೆಗಳು ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ಸರ್ಕಾರದ ಆದೇಶ ಹೇಳಿತ್ತು.

ಕರ್ನಾಟಕ ಭೂ ಕಂದಾಯ ಮತ್ತು ಶಿಕ್ಷಣ ಕಾಯ್ದೆಗಳ ಅಡಿಯಲ್ಲಿ ಯಾವುದೇ ಉಲ್ಲಂಘನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ಅನುಸರಣೆಯನ್ನು ಮೇಲ್ವಿಚಾರಣೆ ಮಾಡಲು ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿತ್ತು.

ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಸರ್ಕಾರದ ಈ ಕ್ರಮವು ಯಾವುದೇ ನಿರ್ದಿಷ್ಟ ಸಂಸ್ಥೆಯನ್ನು ಗುರಿಯಾಗಿರಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಸಿಎಂ ಸಿದ್ದರಾಮಯ್ಯ ಕೂಡ ಆರ್‌ಎಸ್‌ಎಸ್‌ ಅನ್ನು ಗುರಿಯಾಗಿಸಿ ಆದೇಶ ಹೊರಡಿಸಿಲ್ಲ ಎಂದು ಹೇಳಿದ್ದರು.

ಹೈಕೋರ್ಟ್ ಪೀಠದ ಇಂದಿನ ಆದೇಶದ ಬಗ್ಗೆ ಸಾರ್ವಜನಿಕರು ಗೊಂದಲ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿರುವ ಹಿನ್ನೆಲೆ, ಮುಂದಿನ ಆದೇಶದವರೆಗೆ ಖಾಸಗಿ ಸಂಘ, ಸಂಸ್ಥೆಗಳು ಸರ್ಕಾರಿ ಆಸ್ತಿ ಅಥವಾ ಆವರಣವನ್ನು ತಮ್ಮ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದೇ? ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.  

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಡಾ. ಶ್ರೀಧರ್; ಯಶಸ್ವಿನಿ ಟ್ರಸ್ಟ್‌ನಿಂದ ಹೆಸರು ಕೈಬಿಟ್ಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...