Homeಮುಖಪುಟಹಿಜಾಬ್‌ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ಹಿಜಾಬ್‌ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

- Advertisement -
- Advertisement -

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ಬಗ್ಗೆ ರಾಜ್ಯ ಹೈಕೋರ್ಟ್‌ ನೀಡಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಅಸಾದುದ್ದೀನ್ ಓವೈಸಿ, ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದ್ದು, ಧಾರ್ಮಿಕ ಆಚರಣೆಯನ್ನು ನಿಷೇಧಿಸಲಾಗಿದೆ. ಆರ್ಟಿಕಲ್ 15 ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಇದು ಅದರ ಉಲ್ಲಂಘನೆಯಲ್ಲವೇ? ಎಂದು ಮಂಗಳವಾರ ಪ್ರಶ್ನಿಸಿದ್ದಾರೆ.

ಹೈಕೋರ್ಟ್‌‌ನ ಮೌಖಿಕ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ನಾನು ಒಪ್ಪುವುದಿಲ್ಲ. ತೀರ್ಪನ್ನು ಒಪ್ಪದಿರುವುದು ನನ್ನ ಹಕ್ಕಾಗಿದ್ದು, ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್‌ ಮುಂದೆ ಮೇಲ್ಮನವಿ ಸಲ್ಲಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

“ತೀರ್ಪು ಧರ್ಮ, ಸಂಸ್ಕೃತಿ, ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿರುವುದರಿಂದ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ಮತ್ತು ಇತರ ಧಾರ್ಮಿಕ ಗುಂಪುಗಳ ಸಂಘಟನೆಗಳು ಕೂಡಾ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುತ್ತವೆ ಎಂದು ನಾನು ಭಾವಿಸುತ್ತೇನೆ” ಎಂದು ಓವೈಸಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ರಾಜಕಾರಣ; ಹಿಜಾಬಿನ ಅಪರಾಧೀಕರಣ

“ಸಂವಿಧಾನದ ಪೀಠಿಕೆಯು ಒಬ್ಬನಿಗೆ ಆಲೋಚನೆ, ಅಭಿವ್ಯಕ್ತಿ, ಧಾರ್ಮಿಕ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವಿದೆ ಎಂದು ಹೇಳುತ್ತದೆ. ನನ್ನ ತಲೆಯನ್ನು ಮುಚ್ಚಿಕೊಳ್ಳುವುದು ಅತ್ಯಗತ್ಯ ಎಂಬುದು ನನ್ನ ಧಾರ್ಮಿಕ ನಂಬಿಕೆಯಾಗಿದ್ದರೆ, ನಾನು ಸೂಕ್ತವೆಂದು ಭಾವಿಸಿದಂತೆ ಅದನ್ನು ವ್ಯಕ್ತಪಡಿಸಲು ನನಗೆ ಹಕ್ಕಿದೆ. ಧರ್ಮನಿಷ್ಠ ಮುಸಲ್ಮಾನರಿಗೆ ಹಿಜಾಬ್ ಕೂಡ ಒಂದು ಆರಾಧನೆಯ ಕ್ರಿಯೆಯಾಗಿದೆ” ಎಂದು ಅವರು ಹೇಳಿದ್ದಾರೆ.

“ಇದು ಅಗತ್ಯ ಧಾರ್ಮಿಕ ಆಚರಣೆ ಪರೀಕ್ಷೆಯನ್ನು ಪರಿಶೀಲಿಸುವ ಸಮಯ. ಒಬ್ಬ ಧರ್ಮನಿಷ್ಠ ವ್ಯಕ್ತಿಗೆ, ಎಲ್ಲವೂ ಅತ್ಯಗತ್ಯ. ನಾಸ್ತಿಕನಿಗೆ ಯಾವುದೂ ಅತ್ಯಗತ್ಯವಲ್ಲ. ಶ್ರದ್ಧಾವಂತ ಹಿಂದೂ ಬ್ರಾಹ್ಮಣರಿಗೆ, ಜನಿವಾರ ಅತ್ಯಗತ್ಯ ಆದರೆ ಬ್ರಾಹ್ಮಣೇತರರಿಗೆ ಅದು ಇಲ್ಲದಿರಬಹುದು. ನ್ಯಾಯಾಧೀಶರು ಅತ್ಯಗತ್ಯ ಆಚರಣೆಯನ್ನು ನಿರ್ಧರಿಸಬಹುದು ಎಂಬುದು ಅಸಂಬದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

“ಒಬ್ಬ ವ್ಯಕ್ತಿ ಒಂದು ಧರ್ಮವನ್ನು ಆಚರಿಸುತ್ತಿದ್ದರೆ, ಅದೇ ಧರ್ಮವನ್ನು ಆಚರಿಸುವ ಇನ್ನೊಬ್ಬ ವ್ಯಕ್ತಿಯ ಅತ್ಯಗತ್ಯ ಧಾರ್ಮಿಕ ಆಚರಣೆಯ ಬಗ್ಗೆ ನಿರ್ಧರಿಸುವ ಹಕ್ಕಿಲ್ಲ. ಆಚರಣೆಗಳು ವ್ಯಕ್ತಿ ಮತ್ತು ದೇವರ ನಡುವೆ ಇರುವಂತಹದ್ದು. ಆಚರಣೆಗಳು ಇತರರಿಗೆ ಹಾನಿಯಾದರೆ ಮಾತ್ರ ಧಾರ್ಮಿಕ ಹಕ್ಕುಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಅವಕಾಶ ನೀಡಬೇಕು. ತಲೆಗೆ ಹಿಜಾಬ್‌ ಧರಿಸುವುದು ಯಾರಿಗೂ ಹಾನಿ ಮಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಸ್ಕಾರ್ಫ್‌ ನಿಷೇಧಿಸುವುದರಿಂದ ಧರ್ಮನಿಷ್ಠ ಮುಸ್ಲಿಂ ಮಹಿಳೆಯರು ಮತ್ತು ಅವರ ಕುಟುಂಬಗಳಿಗೆ ಖಂಡಿತವಾಗಿಯೂ ಹಾನಿ ಮಾಡುತ್ತದೆ. ಯಾಕೆಂದರೆ ಇದು ಅವರು ಶಿಕ್ಷಣವನ್ನು ಪಡೆಯುವುದನ್ನು ತಡೆಯುತ್ತದೆ” ಎಂದು ಓವೈಸಿ ಹೇಳಿದ್ದಾರೆ.

“ಸಮವಸ್ತ್ರವು ಏಕರೂಪತೆಯನ್ನು ಖಚಿತಪಡಿಸುತ್ತದೆ ಎಂಬುದು ಹೇಗೆ? ಶ್ರೀಮಂತ ಹಾಗೂ ಬಡ ಕುಟುಂಬದಿಂದ ಬಂದವರು ಯಾರೆಂದು ಮಕ್ಕಳಿಗೆ ತಿಳಿಯುವುದಿಲ್ಲವೇ? ಜಾತಿಯ ಹೆಸರುಗಳು ಅವರ ಹಿನ್ನೆಲೆಯನ್ನು ಸೂಚಿಸುವುದಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್: ನ್ಯಾಯ ವ್ಯವಸ್ಥೆಯ ಬಗ್ಗೆ ವಿಶ್ವಾಸವಿದೆ, ಆದರೆ ಸರಕಾರ, ಶಿಕ್ಷಣ ಸಂಸ್ಥೆಗಳ ಮೇಲಿಲ್ಲ – ರಾಜೇಂದ್ರ ಚೆನ್ನಿ

“ಶಿಕ್ಷಕರು ತಾರತಮ್ಯ ಮಾಡುವುದನ್ನು ತಡೆಯಲು ಸಮವಸ್ತ್ರದ ಕೊಡುಗೆ ಏನು? ವೈವಿಧ್ಯತೆಯನ್ನು ಪ್ರತಿಬಿಂಬಿಸಲು ಶಾಲೆ, ಪೊಲೀಸ್ ಮತ್ತು ಸೇನೆಯ ಸಮವಸ್ತ್ರಗಳಲ್ಲಿ ಸಮಂಜಸವಾದ ಅವಕಾಶಗಳನ್ನು ಜಾಗತಿಕವಾಗಿ ನೀಡಲಾಗಿದೆ. ಹಿಜಾಬ್ ಮತ್ತು ಸಿಖ್ ಪೇಟವನ್ನು ಅನುಮತಿಸಲು ಬೇಕಾಗಿ ಐರ್ಲೆಂಡ್ ಸರ್ಕಾರವು ಪೊಲೀಸ್ ಸಮವಸ್ತ್ರದ ನಿಯಮಗಳನ್ನು ಬದಲಾಯಿಸಿದಾಗ, ಮೋದಿ ಸರ್ಕಾರ ಅದನ್ನು ಸ್ವಾಗತಿಸಿತು. ಹಾಗಾದರೆ ನಮ್ಮ ದೇಶದಲ್ಲಿ ಮತ್ತು ವಿದೇಶದಲ್ಲಿ ಎರಡು ಮಾನದಂಡಗಳು ಯಾಕೆ? ಸಮವಸ್ತ್ರದ್ದೇ ಬಣ್ಣಗಳ ಹಿಜಾಬ್ ಮತ್ತು ಪೇಟಗಳನ್ನು ಧರಿಸಲು ಅನುಮತಿಸಬಹುದಲ್ಲವೆ” ಎಂದು ಓವೈಸಿ ಬಿಜೆಪಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

“ಇದೆಲ್ಲದರ ಪರಿಣಾಮ ಏನಾಗಲಿದೆ? ಮೊದಲನೆಯದಾಗಿ, ಸರ್ಕಾರವು ಅಸ್ತಿತ್ವದಲ್ಲಿಲ್ಲದ ಸಮಸ್ಯೆಯನ್ನು ಸೃಷ್ಟಿಸಿತು. ಈ ಹಿಂದೆ ಮಕ್ಕಳು ಹಿಜಾಬ್, ಬಳೆ ಇತ್ಯಾದಿ ಧರಿಸಿ ಶಾಲೆಗೆ ಹೋಗುತ್ತಿದ್ದರು. ಎರಡನೆಯದಾಗಿ, ಹಿಂಸಾಚಾರವನ್ನು ಪ್ರಚೋದಿಸಿ, ಕೇಸರಿ ಪೇಟಗಳೊಂದಿಗೆ ಹಿಜಾಬ್‌ ವಿರುದ್ದ ಪ್ರತಿಭಟನೆಗಳನ್ನು ನಡೆಸಲಾಯಿತು. ಕೇಸರಿ ಪೇಟಗಳು ‘ಅಗತ್ಯ’ವೇ? ಅಥವಾ ಹಿಜಾಬ್‌ಗೆ ‘ಪ್ರತಿಕ್ರಿಯೆ’ಯಾಗಿ ಮಾತ್ರವೆ ಧರಿಸಲಾಯಿತೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮೂರನೆಯದಾಗಿ, ಸರ್ಕಾರಿ ಆದೇಶ ಮತ್ತು ಹೈಕೋರ್ಟ್ ಆದೇಶವು ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದೆ. ಮಾಧ್ಯಮಗಳು, ಪೊಲೀಸರು ಮತ್ತು ಆಡಳಿತ ಮಂಡಳಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕಿರುಕುಳ ನೀಡುವುದನ್ನು ನಾವು ನೋಡಿದ್ದೇವೆ. ಮಕ್ಕಳು ಪರೀಕ್ಷೆ ಬರೆಯುವುದನ್ನು ಸಹ ನಿಷೇಧಿಸಲಾಗಿದೆ. ಇದು ನಾಗರಿಕ ಹಕ್ಕುಗಳ ಸಾಮೂಹಿಕ ಉಲ್ಲಂಘನೆಯಾಗಿದೆ” ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

“ಕೊನೆಯದಾಗಿ, ಇದರರ್ಥ ಒಂದು ಧರ್ಮವನ್ನು ಗುರಿಯಾಗಿಸಲಾಗಿದ್ದು, ಧಾರ್ಮಿಕ ಆಚರಣೆಯನ್ನು ನಿಷೇಧಿಸಲಾಗಿದೆ. ಆರ್ಟಿಕಲ್ 15 ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಇದು ಅದುವೆ ಉಲ್ಲಂಘನೆಯಲ್ಲವೇ? ಸಂಕ್ಷಿಪ್ತವಾಗಿ ಹೈಕೋರ್ಟ್‌ ಆದೇಶವು ಮಕ್ಕಳನ್ನು ಶಿಕ್ಷಣ ಮತ್ತು ಅಲ್ಲಾಹನ ಆಜ್ಞೆಗಳ ನಡುವೆ ಆಯ್ಕೆ ಮಾಡುವಂತೆ ಒತ್ತಾಯಿಸಿದೆ” ಎಂದು ಅವರು ಹೇಳಿದ್ದಾರೆ.

“ನಮಾಜ್‌, ಹಿಜಾಬ್, ರೋಜಾ ಇತ್ಯಾದಿ ಕಟ್ಟುಪಾಡುಗಳ ಜೊತೆಗೆ ಶಿಕ್ಷಣ ಪಡೆಯಬೇಕು ಎಂಬುವುದು ಮುಸ್ಲಿಮರಿಗೆ ಅಲ್ಲಾಹನ ಆಜ್ಞೆಯಾಗಿದೆ. ಈಗ ಸರ್ಕಾರ ಮುಸ್ಲಿಂ ಹುಡುಗಿಯರಿಗೆ ಅವುಗಳ ನಡುವೆ ಆಯ್ಕೆ ಮಾಡಲು ಒತ್ತಾಯಿಸುತ್ತಿದೆ. ಇಲ್ಲಿಯವರೆಗೆ ನ್ಯಾಯಾಂಗವು ಮಸೀದಿ ಮತ್ತು ಗಡ್ಡವನ್ನು ಇಟ್ಟುಕೊಳ್ಳುವುದು ಅತ್ಯಗತ್ಯವಲ್ಲ ಎಂದು ತೀರ್ಪು ನೀಡಿದೆ. ಈಗ ಹಿಜಾಬ್ ಅನಿವಾರ್ಯವಲ್ಲ ಎಂದು ತೀರ್ಪು ನೀಡಿದೆ. ನಂಬಿಕೆಗಳನ್ನು ಮುಕ್ತವಾಗಿ ಆಚರಿಸುವುದರಲ್ಲಿ ಇನ್ನು ಯಾವುದು ಉಳಿದಿದೆ? ಹಿಜಾಬ್ ಧರಿಸುವ ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಕಾನೂನುಬದ್ಧಗೊಳಿಸಲು ಈ ತೀರ್ಪು ಬಳಸಲ್ಪಡುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿಷೇಧ ಎತ್ತಿ ಹಿಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....