Homeಮುಖಪುಟಹಿಜಾಬ್‌ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ಹಿಜಾಬ್‌ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

- Advertisement -
- Advertisement -

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ಬಗ್ಗೆ ರಾಜ್ಯ ಹೈಕೋರ್ಟ್‌ ನೀಡಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಅಸಾದುದ್ದೀನ್ ಓವೈಸಿ, ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದ್ದು, ಧಾರ್ಮಿಕ ಆಚರಣೆಯನ್ನು ನಿಷೇಧಿಸಲಾಗಿದೆ. ಆರ್ಟಿಕಲ್ 15 ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಇದು ಅದರ ಉಲ್ಲಂಘನೆಯಲ್ಲವೇ? ಎಂದು ಮಂಗಳವಾರ ಪ್ರಶ್ನಿಸಿದ್ದಾರೆ.

ಹೈಕೋರ್ಟ್‌‌ನ ಮೌಖಿಕ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ನಾನು ಒಪ್ಪುವುದಿಲ್ಲ. ತೀರ್ಪನ್ನು ಒಪ್ಪದಿರುವುದು ನನ್ನ ಹಕ್ಕಾಗಿದ್ದು, ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್‌ ಮುಂದೆ ಮೇಲ್ಮನವಿ ಸಲ್ಲಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

“ತೀರ್ಪು ಧರ್ಮ, ಸಂಸ್ಕೃತಿ, ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿರುವುದರಿಂದ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ಮತ್ತು ಇತರ ಧಾರ್ಮಿಕ ಗುಂಪುಗಳ ಸಂಘಟನೆಗಳು ಕೂಡಾ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುತ್ತವೆ ಎಂದು ನಾನು ಭಾವಿಸುತ್ತೇನೆ” ಎಂದು ಓವೈಸಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ರಾಜಕಾರಣ; ಹಿಜಾಬಿನ ಅಪರಾಧೀಕರಣ

“ಸಂವಿಧಾನದ ಪೀಠಿಕೆಯು ಒಬ್ಬನಿಗೆ ಆಲೋಚನೆ, ಅಭಿವ್ಯಕ್ತಿ, ಧಾರ್ಮಿಕ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವಿದೆ ಎಂದು ಹೇಳುತ್ತದೆ. ನನ್ನ ತಲೆಯನ್ನು ಮುಚ್ಚಿಕೊಳ್ಳುವುದು ಅತ್ಯಗತ್ಯ ಎಂಬುದು ನನ್ನ ಧಾರ್ಮಿಕ ನಂಬಿಕೆಯಾಗಿದ್ದರೆ, ನಾನು ಸೂಕ್ತವೆಂದು ಭಾವಿಸಿದಂತೆ ಅದನ್ನು ವ್ಯಕ್ತಪಡಿಸಲು ನನಗೆ ಹಕ್ಕಿದೆ. ಧರ್ಮನಿಷ್ಠ ಮುಸಲ್ಮಾನರಿಗೆ ಹಿಜಾಬ್ ಕೂಡ ಒಂದು ಆರಾಧನೆಯ ಕ್ರಿಯೆಯಾಗಿದೆ” ಎಂದು ಅವರು ಹೇಳಿದ್ದಾರೆ.

“ಇದು ಅಗತ್ಯ ಧಾರ್ಮಿಕ ಆಚರಣೆ ಪರೀಕ್ಷೆಯನ್ನು ಪರಿಶೀಲಿಸುವ ಸಮಯ. ಒಬ್ಬ ಧರ್ಮನಿಷ್ಠ ವ್ಯಕ್ತಿಗೆ, ಎಲ್ಲವೂ ಅತ್ಯಗತ್ಯ. ನಾಸ್ತಿಕನಿಗೆ ಯಾವುದೂ ಅತ್ಯಗತ್ಯವಲ್ಲ. ಶ್ರದ್ಧಾವಂತ ಹಿಂದೂ ಬ್ರಾಹ್ಮಣರಿಗೆ, ಜನಿವಾರ ಅತ್ಯಗತ್ಯ ಆದರೆ ಬ್ರಾಹ್ಮಣೇತರರಿಗೆ ಅದು ಇಲ್ಲದಿರಬಹುದು. ನ್ಯಾಯಾಧೀಶರು ಅತ್ಯಗತ್ಯ ಆಚರಣೆಯನ್ನು ನಿರ್ಧರಿಸಬಹುದು ಎಂಬುದು ಅಸಂಬದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

“ಒಬ್ಬ ವ್ಯಕ್ತಿ ಒಂದು ಧರ್ಮವನ್ನು ಆಚರಿಸುತ್ತಿದ್ದರೆ, ಅದೇ ಧರ್ಮವನ್ನು ಆಚರಿಸುವ ಇನ್ನೊಬ್ಬ ವ್ಯಕ್ತಿಯ ಅತ್ಯಗತ್ಯ ಧಾರ್ಮಿಕ ಆಚರಣೆಯ ಬಗ್ಗೆ ನಿರ್ಧರಿಸುವ ಹಕ್ಕಿಲ್ಲ. ಆಚರಣೆಗಳು ವ್ಯಕ್ತಿ ಮತ್ತು ದೇವರ ನಡುವೆ ಇರುವಂತಹದ್ದು. ಆಚರಣೆಗಳು ಇತರರಿಗೆ ಹಾನಿಯಾದರೆ ಮಾತ್ರ ಧಾರ್ಮಿಕ ಹಕ್ಕುಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಅವಕಾಶ ನೀಡಬೇಕು. ತಲೆಗೆ ಹಿಜಾಬ್‌ ಧರಿಸುವುದು ಯಾರಿಗೂ ಹಾನಿ ಮಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಸ್ಕಾರ್ಫ್‌ ನಿಷೇಧಿಸುವುದರಿಂದ ಧರ್ಮನಿಷ್ಠ ಮುಸ್ಲಿಂ ಮಹಿಳೆಯರು ಮತ್ತು ಅವರ ಕುಟುಂಬಗಳಿಗೆ ಖಂಡಿತವಾಗಿಯೂ ಹಾನಿ ಮಾಡುತ್ತದೆ. ಯಾಕೆಂದರೆ ಇದು ಅವರು ಶಿಕ್ಷಣವನ್ನು ಪಡೆಯುವುದನ್ನು ತಡೆಯುತ್ತದೆ” ಎಂದು ಓವೈಸಿ ಹೇಳಿದ್ದಾರೆ.

“ಸಮವಸ್ತ್ರವು ಏಕರೂಪತೆಯನ್ನು ಖಚಿತಪಡಿಸುತ್ತದೆ ಎಂಬುದು ಹೇಗೆ? ಶ್ರೀಮಂತ ಹಾಗೂ ಬಡ ಕುಟುಂಬದಿಂದ ಬಂದವರು ಯಾರೆಂದು ಮಕ್ಕಳಿಗೆ ತಿಳಿಯುವುದಿಲ್ಲವೇ? ಜಾತಿಯ ಹೆಸರುಗಳು ಅವರ ಹಿನ್ನೆಲೆಯನ್ನು ಸೂಚಿಸುವುದಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್: ನ್ಯಾಯ ವ್ಯವಸ್ಥೆಯ ಬಗ್ಗೆ ವಿಶ್ವಾಸವಿದೆ, ಆದರೆ ಸರಕಾರ, ಶಿಕ್ಷಣ ಸಂಸ್ಥೆಗಳ ಮೇಲಿಲ್ಲ – ರಾಜೇಂದ್ರ ಚೆನ್ನಿ

“ಶಿಕ್ಷಕರು ತಾರತಮ್ಯ ಮಾಡುವುದನ್ನು ತಡೆಯಲು ಸಮವಸ್ತ್ರದ ಕೊಡುಗೆ ಏನು? ವೈವಿಧ್ಯತೆಯನ್ನು ಪ್ರತಿಬಿಂಬಿಸಲು ಶಾಲೆ, ಪೊಲೀಸ್ ಮತ್ತು ಸೇನೆಯ ಸಮವಸ್ತ್ರಗಳಲ್ಲಿ ಸಮಂಜಸವಾದ ಅವಕಾಶಗಳನ್ನು ಜಾಗತಿಕವಾಗಿ ನೀಡಲಾಗಿದೆ. ಹಿಜಾಬ್ ಮತ್ತು ಸಿಖ್ ಪೇಟವನ್ನು ಅನುಮತಿಸಲು ಬೇಕಾಗಿ ಐರ್ಲೆಂಡ್ ಸರ್ಕಾರವು ಪೊಲೀಸ್ ಸಮವಸ್ತ್ರದ ನಿಯಮಗಳನ್ನು ಬದಲಾಯಿಸಿದಾಗ, ಮೋದಿ ಸರ್ಕಾರ ಅದನ್ನು ಸ್ವಾಗತಿಸಿತು. ಹಾಗಾದರೆ ನಮ್ಮ ದೇಶದಲ್ಲಿ ಮತ್ತು ವಿದೇಶದಲ್ಲಿ ಎರಡು ಮಾನದಂಡಗಳು ಯಾಕೆ? ಸಮವಸ್ತ್ರದ್ದೇ ಬಣ್ಣಗಳ ಹಿಜಾಬ್ ಮತ್ತು ಪೇಟಗಳನ್ನು ಧರಿಸಲು ಅನುಮತಿಸಬಹುದಲ್ಲವೆ” ಎಂದು ಓವೈಸಿ ಬಿಜೆಪಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

“ಇದೆಲ್ಲದರ ಪರಿಣಾಮ ಏನಾಗಲಿದೆ? ಮೊದಲನೆಯದಾಗಿ, ಸರ್ಕಾರವು ಅಸ್ತಿತ್ವದಲ್ಲಿಲ್ಲದ ಸಮಸ್ಯೆಯನ್ನು ಸೃಷ್ಟಿಸಿತು. ಈ ಹಿಂದೆ ಮಕ್ಕಳು ಹಿಜಾಬ್, ಬಳೆ ಇತ್ಯಾದಿ ಧರಿಸಿ ಶಾಲೆಗೆ ಹೋಗುತ್ತಿದ್ದರು. ಎರಡನೆಯದಾಗಿ, ಹಿಂಸಾಚಾರವನ್ನು ಪ್ರಚೋದಿಸಿ, ಕೇಸರಿ ಪೇಟಗಳೊಂದಿಗೆ ಹಿಜಾಬ್‌ ವಿರುದ್ದ ಪ್ರತಿಭಟನೆಗಳನ್ನು ನಡೆಸಲಾಯಿತು. ಕೇಸರಿ ಪೇಟಗಳು ‘ಅಗತ್ಯ’ವೇ? ಅಥವಾ ಹಿಜಾಬ್‌ಗೆ ‘ಪ್ರತಿಕ್ರಿಯೆ’ಯಾಗಿ ಮಾತ್ರವೆ ಧರಿಸಲಾಯಿತೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮೂರನೆಯದಾಗಿ, ಸರ್ಕಾರಿ ಆದೇಶ ಮತ್ತು ಹೈಕೋರ್ಟ್ ಆದೇಶವು ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದೆ. ಮಾಧ್ಯಮಗಳು, ಪೊಲೀಸರು ಮತ್ತು ಆಡಳಿತ ಮಂಡಳಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕಿರುಕುಳ ನೀಡುವುದನ್ನು ನಾವು ನೋಡಿದ್ದೇವೆ. ಮಕ್ಕಳು ಪರೀಕ್ಷೆ ಬರೆಯುವುದನ್ನು ಸಹ ನಿಷೇಧಿಸಲಾಗಿದೆ. ಇದು ನಾಗರಿಕ ಹಕ್ಕುಗಳ ಸಾಮೂಹಿಕ ಉಲ್ಲಂಘನೆಯಾಗಿದೆ” ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

“ಕೊನೆಯದಾಗಿ, ಇದರರ್ಥ ಒಂದು ಧರ್ಮವನ್ನು ಗುರಿಯಾಗಿಸಲಾಗಿದ್ದು, ಧಾರ್ಮಿಕ ಆಚರಣೆಯನ್ನು ನಿಷೇಧಿಸಲಾಗಿದೆ. ಆರ್ಟಿಕಲ್ 15 ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಇದು ಅದುವೆ ಉಲ್ಲಂಘನೆಯಲ್ಲವೇ? ಸಂಕ್ಷಿಪ್ತವಾಗಿ ಹೈಕೋರ್ಟ್‌ ಆದೇಶವು ಮಕ್ಕಳನ್ನು ಶಿಕ್ಷಣ ಮತ್ತು ಅಲ್ಲಾಹನ ಆಜ್ಞೆಗಳ ನಡುವೆ ಆಯ್ಕೆ ಮಾಡುವಂತೆ ಒತ್ತಾಯಿಸಿದೆ” ಎಂದು ಅವರು ಹೇಳಿದ್ದಾರೆ.

“ನಮಾಜ್‌, ಹಿಜಾಬ್, ರೋಜಾ ಇತ್ಯಾದಿ ಕಟ್ಟುಪಾಡುಗಳ ಜೊತೆಗೆ ಶಿಕ್ಷಣ ಪಡೆಯಬೇಕು ಎಂಬುವುದು ಮುಸ್ಲಿಮರಿಗೆ ಅಲ್ಲಾಹನ ಆಜ್ಞೆಯಾಗಿದೆ. ಈಗ ಸರ್ಕಾರ ಮುಸ್ಲಿಂ ಹುಡುಗಿಯರಿಗೆ ಅವುಗಳ ನಡುವೆ ಆಯ್ಕೆ ಮಾಡಲು ಒತ್ತಾಯಿಸುತ್ತಿದೆ. ಇಲ್ಲಿಯವರೆಗೆ ನ್ಯಾಯಾಂಗವು ಮಸೀದಿ ಮತ್ತು ಗಡ್ಡವನ್ನು ಇಟ್ಟುಕೊಳ್ಳುವುದು ಅತ್ಯಗತ್ಯವಲ್ಲ ಎಂದು ತೀರ್ಪು ನೀಡಿದೆ. ಈಗ ಹಿಜಾಬ್ ಅನಿವಾರ್ಯವಲ್ಲ ಎಂದು ತೀರ್ಪು ನೀಡಿದೆ. ನಂಬಿಕೆಗಳನ್ನು ಮುಕ್ತವಾಗಿ ಆಚರಿಸುವುದರಲ್ಲಿ ಇನ್ನು ಯಾವುದು ಉಳಿದಿದೆ? ಹಿಜಾಬ್ ಧರಿಸುವ ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಕಾನೂನುಬದ್ಧಗೊಳಿಸಲು ಈ ತೀರ್ಪು ಬಳಸಲ್ಪಡುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿಷೇಧ ಎತ್ತಿ ಹಿಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...