Homeಮುಖಪುಟಹೈಕೋರ್ಟ್‌ ನೀಡಿದ್ದ ಶಿಕ್ಷೆ ಸುಪ್ರಿಂನಿಂದ ಅಮಾನತು; ಆದರೂ ಜೈಲಿನಲ್ಲೆ ಉಳಿಯಲಿರುವ ಹೋರಾಟಗಾರ ಸವುಕ್ಕು ಶಂಕರ್‌!

ಹೈಕೋರ್ಟ್‌ ನೀಡಿದ್ದ ಶಿಕ್ಷೆ ಸುಪ್ರಿಂನಿಂದ ಅಮಾನತು; ಆದರೂ ಜೈಲಿನಲ್ಲೆ ಉಳಿಯಲಿರುವ ಹೋರಾಟಗಾರ ಸವುಕ್ಕು ಶಂಕರ್‌!

- Advertisement -
- Advertisement -

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಮಿಳು ಭಾಷೆಯ ಖ್ಯಾತ ಯೂಟ್ಯೂಬರ್‌‌, ಹೋರಾಟಗಾರ ಸವುಕ್ಕು ಶಂಕರ್‌ಗೆ ಮದ್ರಾಸ್ ಹೈಕೋರ್ಟ್‌ ನೀಡಿದ್ದ ಜೈಲು ಶಿಕ್ಷೆಯನ್ನು ಶುಕ್ರವಾರ ಸುಪ್ರಿಂಕೋರ್ಟ್‌ ಅಮಾನತುಗೊಳಿದೆ. ಅದಾಗಿಯೂ, ಚೆನ್ನೈ ಕೇಂದ್ರ ಅಪರಾಧ ವಿಭಾಗದ ಸೈಬರ್ ಕ್ರೈಂ ವಿಭಾಗ 2020 ಮತ್ತು 2021 ರಲ್ಲಿ ದಾಖಲಾದ ಪ್ರಕರಣಗಳಿಗಾಗಿ ಅವರನ್ನು ಮತ್ತೆ ಬಂಧಿಸಿದೆ. ಗುರುವಾರ ಕಡಲೂರು ಕೇಂದ್ರ ಕಾರಾಗೃಹದಲ್ಲಿ ಸೈಬರ್ ಕ್ರೈಂ ವಿಭಾಗದ ಅಧಿಕಾರಿಗಳು ಶಂಕರ್ ಅವರಿಗೆ ಬಂಧನದ ಸೂಚನೆಯನ್ನು ನೀಡಿದ್ದರು.

ಚೆನ್ನೈ ಸೆಂಟ್ರಲ್ ಕ್ರೈಂ ಬ್ರಾಂಚ್‌ನ ಸೈಬರ್ ಕ್ರೈಂ ವಿಭಾಗವು ಶಂಕರ್ ವಿರುದ್ಧ ನಾಲ್ಕು ಹೊಸ ಪ್ರಕರಣಗಳನ್ನು ದಾಖಲಿಸಿದೆ ಎಂದು ನ್ಯೂಸ್ ಮಿನಿಟ್‌ ವರದಿ ಹೇಳಿದೆ. ನಾಲ್ಕರಲ್ಲಿ ಮೂರು ಪ್ರಕರಣಗಳು 2020 ರಲ್ಲಿ ದಾಖಲಾಗಿದ್ದು, ಒಂದು ಪ್ರಕರಣವು 2021 ರಲ್ಲಿ ದಾಖಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2020 ರಲ್ಲಿ ದಾಖಲಾದ ಒಂದು ಪ್ರಕರಣದಲ್ಲಿ, ಐಪಿಸಿ 504, 505 (1) (ಬಿ) ಮತ್ತು 505(2); ಮತ್ತು ಇತರ ಎರಡು ಪ್ರಕರಣಗಳನ್ನು IPC 153 ಮತ್ತು 505(1)(b) ಅಡಿಯಲ್ಲಿ ದಾಖಲಿಸಲಾಗಿದೆ. 2021 ರ ಪ್ರಕರಣವನ್ನು ಸರ್ಕಾರಿ ರಹಸ್ಯ ಕಾಯಿದೆಯ ಸೆಕ್ಷನ್ 5(1)(ಎ), 5(1)(ಡಿ) ಮತ್ತು 5(2) ಅಡಿಯಲ್ಲಿ ದಾಖಲಿಸಲಾಗಿದೆ.

ಇದನ್ನೂ ಓದಿ: ‘ನ್ಯಾಯಾಂಗ ನಿಂದನೆ’: ಹೋರಾಟಗಾರ ಸವುಕ್ಕು ಶಂಕರ್‌‌ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್‌

ಈ ನಾಲ್ಕು ಪ್ರಕರಣಗಳ ಅಡಿಯಲ್ಲಿ ಶಂಕರ್‌ ಅವರನ್ನು 10 ನಿಮಿಷಗಳ ಅವಧಿಯಲ್ಲಿ ಬಂಧಿಸಲಾಗಿದೆ. ಆ ವೇಳೆ ಅವರು ಇನ್ನೂ ಕಡಲೂರು ಕೇಂದ್ರ ಕಾರಾಗೃಹದಲ್ಲಿದ್ದರು. ಗುರುವಾರ ಸಂಜೆ 4.25 ರಿಂದ 4.35 ರ ಸುಮಾರಿಗೆ ಈ ಎಲ್ಲಾ ಪ್ರಕರಣಗಳಲ್ಲಿ ಅವರ ಬಂಧನ ನಡೆದಿರುವ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ.

ನ್ಯಾಯಂಗ ನಿಂದನೆ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ಶಂಕರ್ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ನಿಗದಿಪಡಿಸುವ ಒಂದು ದಿನದ ಮುನ್ನ ಈ ಬೆಳವಣಿಗೆ ನಡೆದಿದೆ. ಮದ್ರಾಸ್ ಹೈಕೋರ್ಟಿನ ಮಧುರೈ ಪೀಠವು ನ್ಯಾಯಾಂಗ ನಿಂದನೆಯ ಆರೋಪದಲ್ಲಿ ಶಂಕರ್ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ, ಶಂಕರ್ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು.

“ಇಡೀ ನ್ಯಾಯಾಂಗವು ಭ್ರಷ್ಟಾಚಾರದಿಂದ ಕೂಡಿದೆ” ಎಂದು ಶಂಕರ್‌ ಅವರು ಸಂದರ್ಶನವೊಂದರಲ್ಲಿ ಹೇಳಿದ್ದಕ್ಕಾಗಿ, ಅವರ ವಿರುದ್ಧ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರು ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದರು.

ಇದನ್ನೂ ಓದಿ: ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

ಕಳೆದ 13 ವರ್ಷಗಳಿಂದ ರಾಜ್ಯದಿಂದ ಭತ್ಯೆ ಪಡೆಯುತ್ತಿದ್ದರೂ ಶಂಕರ್ ಅವರು “ರಾಜ್ಯದ ಎಲ್ಲಾ ಮೂರು ಅಂಗಗಳ ಮೇಲೆ ಕೆಟ್ಟದಾಗಿ ದಾಳಿ ಮಾಡುತ್ತಿದ್ದಾರೆ” ಎಂದು ಹೈಕೋರ್ಟ್ ಹೇಳಿತ್ತು. ಅವರ ಆಕ್ಷೇಪಾರ್ಹ ಸಂದರ್ಶನಗಳು ಮತ್ತು ಲೇಖನಗಳನ್ನು ತೆಗೆದುಹಾಕಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಶಂಕರ್ ಅವರು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯದಲ್ಲಿ (ಡಿವಿಎಸಿ) ಕೆಳ ವಿಭಾಗದ ಗುಮಾಸ್ತರಾಗಿ ಸೇವೆಯಲ್ಲಿದ್ದರು. ಅದೇ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದ ಅವರ ತಂದೆ ನಿಧನರಾದ ನಂತರ ಮಾನವೀಯ ಆಧಾರದ ಮೇಲೆ ಅವರು ಅಲ್ಲಿ ಕೆಲಸ ಪಡೆದಿದ್ದರು.

2008 ರ ವೇಳೆಗೆ ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ಪ್ರಕರಣವನ್ನು ಬಹಿರಂಗಪಡಿಸಿದ ನಂತರ ಶಂಕರ್‌ ಅವರನ್ನು ಬಂಧಿಸಲಾಗಿತ್ತು. ಇದರ ನಂತರ ಇಲಾಖೆಯಿಂದ ಅವರನ್ನು ಅಮಾನತುಗೊಳಿಸಲಾಗಿತ್ತು.

ಇದನ್ನೂ ಓದಿ: ಕ್ರೈಸ್ತ- ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗದು: ಒಕ್ಕೂಟ ಸರ್ಕಾರ

ಬಂಧನದಿಂದ ಬಿಡುಗಡೆಯಾದ ನಂತರ ಅವರು 2009 ರಲ್ಲಿ ಸವುಕ್ಕು ಎಂಬ ವೆಬ್‌ಸೈಟ್ ಅನ್ನು ಪ್ರಾರಂಭಿಸಿ, ಅಲ್ಲಿ ಸರ್ಕಾರಿ ಅಧಿಕಾರಿಗಳು, ರಾಜಕಾರಣಿಗಳು, ಪತ್ರಕರ್ತರು, ವಕೀಲರು ಮತ್ತು ಹೈಕೋರ್ಟ್ ನ್ಯಾಯಾಧೀಶರ ಬಗ್ಗೆ ಬರೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....