Homeಮುಖಪುಟಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

- Advertisement -
- Advertisement -

ಪ್ರಯಾಗ್‌ರಾಜ್‌ ನದಿ ನೀರಿನಲ್ಲಿ ಮಾನವ ಹಾಗೂ ಪ್ರಾಣಿಗಳ ಮಲದಲ್ಲಿ ಸಾಮಾನ್ಯವಾಗಿ ಕಂಡು ಬರುವ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಮಟ್ಟ ಅಧಿಕವಾಗಿರುವುದರಿಂದ ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತಿಳಿಸಿದೆ.

ಸಿಪಿಸಿಬಿ ಜನವರಿ 12 ಮತ್ತು 13ರಂದು ಗಂಗಾ ನದಿಯ ನೀರಿನ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ನಡೆಸಿತ್ತು. ಅದು ತನ್ನ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ (ಎನ್‌ಜಿಟಿ) ಸೋಮವಾರ (ಫೆ.17) ಸಲ್ಲಿಸಿದೆ.

ಪ್ರಯಾಗ್‌ರಾಜ್‌ನಲ್ಲಿ ಗಂಗಾ ಹಾಗೂ ಯಮುನಾ ನದಿಗಳಿಗೆ ಒಳ ಚರಂಡಿ ನೀರು ಬಿಡುವುದನ್ನು ತಡೆಯುವ ಕ್ರಮಗಳ ಕುರಿತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ (ಎನ್‌ಜಿಟಿ) ಅಧ್ಯಕ್ಷರಾಗಿರುವ ಪ್ರಕಾಶ್ ಶ್ರೀವಾತ್ಸವ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿದೆ. ನೀರಿನ ಗುಣಮಟ್ಟವನ್ನು ಕಾಪಾಡದೇ ಇರುವುದರ ಕುರಿತು ಸಿಪಿಸಿಬಿ ಫೆಬ್ರವರಿ 3ರಂದು ನೀಡಿದ ವರದಿಯಲ್ಲಿ ಉಲ್ಲೇಖಿಸಿರುವುದನ್ನು ಸಮಿತಿ ಗಮನಿಸಿದೆ. ಪರಿಶೀಲಿಸಲಾದ ಎಲ್ಲಾ ಸ್ಥಳಗಳು ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳಿಂದ ಕಲುಷಿತವಾಗಿರುವುದರಿಂದ ನದಿ ನೀರು ಸ್ನಾನ ಯೋಗ್ಯವಾಗಿಲ್ಲ ಎಂದು ಸಿಪಿಸಿಬಿ ವರದಿ ಹೇಳಿದೆ.

ಪುಣ್ಯ ಸ್ನಾನದ ದಿನಗಳು ಸೇರಿದಂತೆ ಮಹಾಕುಂಭ ಮೇಳದ ಸಂದರ್ಭ ದೊಡ್ಡ ಸಂಖ್ಯೆಯ ಜನರು ನದಿಯಲ್ಲಿ ಸ್ನಾನ ಮಾಡಿರುವುದು ನೀರಿನಲ್ಲಿ ಫೀಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಸಂಖ್ಯೆಯಲ್ಲಿ ಏರಿಕೆಯಾಗಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ.

ಪ್ರಯಾಗ್‌ರಾಜ್‌ನಲ್ಲಿ ನೀರಿನ ಗುಣಮಟ್ಟ ಸುಧಾರಿಸಲು ‘ಕ್ರಮ ಕೈಗೊಂಡ ವರದಿ’ (ಎಟಿಆರ್‌) ಸಲ್ಲಿಸಲು ವಿಫಲವಾದ ಕಾರಣ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ (ಯುಪಿಪಿಸಿಬಿ) ಅಧಿಕಾರಿಗಳಿಗೆ ವರ್ಚುವಲ್ ಆಗಿ ವಿಚಾರಣೆಗೆ ಹಾಜರಾಗುವಂತೆ ಎನ್‌ಜಿಟಿ ಸಮನ್ಸ್ ಜಾರಿ ಮಾಡಿದೆ.

ಎನ್‌ಜಿಟಿ ಪ್ರಧಾನ ಪೀಠವು ಡಿಸೆಂಬರ್ 24,2024 ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಮತ್ತು ಯುಪಿಪಿಸಿಬಿ ಎರಡಕ್ಕೂ ನೀರಿನ ಮಾದರಿಗಳನ್ನು ತೆಗೆದುಕೊಂಡು, ಫಲಿತಾಂಶವನ್ನು ತಮ್ಮ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲು ಮತ್ತು ಜನವರಿ 31 ಮತ್ತು ಫೆಬ್ರವರಿ 28ರಂದು ಎನ್‌ಜಿಟಿ ರಿಜಿಸ್ಟ್ರಾರ್ ಜನರಲ್‌ಗೆ ವರದಿಯನ್ನು ಕಳುಹಿಸಲು ನಿರ್ದೇಶಿಸಿತ್ತು.

“ಸಮಗ್ರ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದ ನ್ಯಾಯಮಂಡಳಿಯ ಆದೇಶವನ್ನು ಯುಪಿಪಿಸಿಬಿ ಪಾಲಿಸಿಲ್ಲ” ಎಂದು ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ, ನ್ಯಾಯಾಂಗ ಸದಸ್ಯ ನ್ಯಾಯಮೂರ್ತಿ ಸುಧೀರ್ ಅಗರ್ವಾಲ್ ಮತ್ತು ತಜ್ಞ ಸದಸ್ಯ ಎ ಸೆಂಥಿಲ್ ವೆಲ್ ಅವರನ್ನು ಒಳಗೊಂಡ ಎನ್‌ಜಿಟಿ ಪ್ರಧಾನ ಪೀಠದ ತಿಳಿಸಿದೆ.

“ಯುಪಿಪಿಸಿಬಿ ಸದಸ್ಯ ಕಾರ್ಯದರ್ಶಿ ಮತ್ತು ಪ್ರಯಾಗ್‌ರಾಜ್‌ನಲ್ಲಿ ಗಂಗಾ ನದಿಯಲ್ಲಿ ನೀರಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಹೊತ್ತಿರುವ ರಾಜ್ಯ ಪ್ರಾಧಿಕಾರಕ್ಕೆ ಫೆಬ್ರವರಿ 19 ರಂದು ಮುಂದಿನ ವಿಚಾರಣೆಯ ದಿನಾಂಕದಂದು ವರ್ಚುವಲ್ ಆಗಿ ಹಾಜರಾಗಲು ನಿರ್ದೇಶಿಸಲಾಗಿದೆ” ಎಂದು ಎನ್‌ಜಿಟಿ ಪ್ರಧಾನ ಪೀಠದ ಆದೇಶ ಹೇಳಿದೆ.

ಈ ಹಿಂದೆ ನಿರ್ದೇಶಿಸಿದಂತೆ ತೆಗೆದುಕೊಂಡ ಕ್ರಮಗಳ ಕುರಿತ ವಿಸ್ತೃತ ವರದಿ ಸಲ್ಲಿಸಲು ಯುಪಿಪಿಸಿಬಿ ವಿಫಲವಾಗಿರುವ ಕುರಿತು ಎನ್‌ಜಿಟಿ ಸಮಿತಿ ಗಮನಿಸಿದೆ. ವರದಿ ಬದಲು ಅದು ನೀರಿನ ಪರೀಕ್ಷೆಯ ಫಲಿತಾಂಶದೊಂದಿಗೆ ಪತ್ರವನ್ನು ಸಲ್ಲಿಸಿದೆ ಎಂದು ಎನ್‌ಜಿಟಿ ಸಮಿತಿ ಹೇಳಿದೆ.

ಸಿಪಿಸಿಬಿ ವರದಿಯ ಪ್ರಕಾರ, ಜನವರಿ 12, 13, 15, 19, 20 ಮತ್ತು 24 ರಂದು ಗಂಗಾ ಮತ್ತು ಯಮುನಾ ನದಿಯ ವಿವಿಧ ಸ್ಥಳಗಳಿಂದ ನೀರಿನ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅದರ ವರದಿಯು ಜಿಯೋಸಿಂಥೆಟಿಕ್ ಡೀವಾಟರಿಂಗ್ ಟ್ಯೂಬ್‌ಗಳಲ್ಲಿನ ಅನುಸರಣೆಯ ಕೊರತೆಯನ್ನು ಸಹ ಎತ್ತಿ ತೋರಿಸಿದೆ.

ಪ್ರಮುಖ ಚರಂಡಿಗಳ ಒಳಹರಿವು ಮತ್ತು ಹೊರಹರಿವು ಬಿಂದುಗಳಲ್ಲಿ ಹರಿವಿನ ಮೀಟರ್‌ಗಳು ಇಲ್ಲದಿರುವುದನ್ನು ವರದಿಯು ವಿವರಿಸಿದೆ. ಪ್ರಯಾಗ್‌ರಾಜ್‌ನಲ್ಲಿ ಒಟ್ಟು 340 ಎಂಎಲ್‌ಡಿ ಸಂಸ್ಕರಣಾ ಸಾಮರ್ಥ್ಯವಿರುವ 10 ಕಾರ್ಯಾಚರಣಾ ಎಸ್‌ಟಿಪಿಗಳಿವೆ ಎಂದು ವರದಿ ತಿಳಿಸಿದೆ. ಏಳು ಎಸ್‌ಟಿಪಿಗಳು ಸಂಸ್ಕರಿಸಿದ ತ್ಯಾಜ್ಯ ನೀರನ್ನು ಗಂಗಾ ನದಿಗೆ ಮತ್ತು ಮೂರು ಯಮುನಾ ನದಿಗೆ ಬಿಡುತ್ತಿವೆ ಎಂದಿದೆ.

ನದಿ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ವರದಿ ಬರುವ ಮುನ್ನವೇ ಲಕ್ಷಾಂತರ ಜನರು ಮಹಾಕುಂಭಮೇಳದ ಪ್ರಯುಕ್ತ ಪವಿತ್ರ ಸ್ನಾನ ಮಾಡಿದ್ದಾರೆ. ಕಲುಷಿತ ನೀರಿನಿಂದ ಅವರಿಗೆ ಚರ್ಮ ರೋಗ ಬರಬಹುದು ಎಂದು ತಜ್ಞರನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಕೊಳದ ಮೇಲೆ ಅಕ್ರಮ ಮದರಸಾ ನಿರ್ಮಾಣ ಆರೋಪ: ಭಾರೀ ಪೊಲೀಸ್ ಬಂದೋಬಸ್ತಿನೊಂದಿಗೆ ಸಂಪೂರ್ಣ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...