Homeಮುಖಪುಟಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಪ್ರಯಾಗ್‌ರಾಜ್ ನದಿ ನೀರು ಸ್ನಾನಕ್ಕೆ ಯೋಗ್ಯವಲ್ಲ : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

- Advertisement -
- Advertisement -

ಪ್ರಯಾಗ್‌ರಾಜ್‌ ನದಿ ನೀರಿನಲ್ಲಿ ಮಾನವ ಹಾಗೂ ಪ್ರಾಣಿಗಳ ಮಲದಲ್ಲಿ ಸಾಮಾನ್ಯವಾಗಿ ಕಂಡು ಬರುವ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಮಟ್ಟ ಅಧಿಕವಾಗಿರುವುದರಿಂದ ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತಿಳಿಸಿದೆ.

ಸಿಪಿಸಿಬಿ ಜನವರಿ 12 ಮತ್ತು 13ರಂದು ಗಂಗಾ ನದಿಯ ನೀರಿನ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ನಡೆಸಿತ್ತು. ಅದು ತನ್ನ ವರದಿಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ (ಎನ್‌ಜಿಟಿ) ಸೋಮವಾರ (ಫೆ.17) ಸಲ್ಲಿಸಿದೆ.

ಪ್ರಯಾಗ್‌ರಾಜ್‌ನಲ್ಲಿ ಗಂಗಾ ಹಾಗೂ ಯಮುನಾ ನದಿಗಳಿಗೆ ಒಳ ಚರಂಡಿ ನೀರು ಬಿಡುವುದನ್ನು ತಡೆಯುವ ಕ್ರಮಗಳ ಕುರಿತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ (ಎನ್‌ಜಿಟಿ) ಅಧ್ಯಕ್ಷರಾಗಿರುವ ಪ್ರಕಾಶ್ ಶ್ರೀವಾತ್ಸವ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿದೆ. ನೀರಿನ ಗುಣಮಟ್ಟವನ್ನು ಕಾಪಾಡದೇ ಇರುವುದರ ಕುರಿತು ಸಿಪಿಸಿಬಿ ಫೆಬ್ರವರಿ 3ರಂದು ನೀಡಿದ ವರದಿಯಲ್ಲಿ ಉಲ್ಲೇಖಿಸಿರುವುದನ್ನು ಸಮಿತಿ ಗಮನಿಸಿದೆ. ಪರಿಶೀಲಿಸಲಾದ ಎಲ್ಲಾ ಸ್ಥಳಗಳು ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳಿಂದ ಕಲುಷಿತವಾಗಿರುವುದರಿಂದ ನದಿ ನೀರು ಸ್ನಾನ ಯೋಗ್ಯವಾಗಿಲ್ಲ ಎಂದು ಸಿಪಿಸಿಬಿ ವರದಿ ಹೇಳಿದೆ.

ಪುಣ್ಯ ಸ್ನಾನದ ದಿನಗಳು ಸೇರಿದಂತೆ ಮಹಾಕುಂಭ ಮೇಳದ ಸಂದರ್ಭ ದೊಡ್ಡ ಸಂಖ್ಯೆಯ ಜನರು ನದಿಯಲ್ಲಿ ಸ್ನಾನ ಮಾಡಿರುವುದು ನೀರಿನಲ್ಲಿ ಫೀಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳ ಸಂಖ್ಯೆಯಲ್ಲಿ ಏರಿಕೆಯಾಗಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ.

ಪ್ರಯಾಗ್‌ರಾಜ್‌ನಲ್ಲಿ ನೀರಿನ ಗುಣಮಟ್ಟ ಸುಧಾರಿಸಲು ‘ಕ್ರಮ ಕೈಗೊಂಡ ವರದಿ’ (ಎಟಿಆರ್‌) ಸಲ್ಲಿಸಲು ವಿಫಲವಾದ ಕಾರಣ ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ (ಯುಪಿಪಿಸಿಬಿ) ಅಧಿಕಾರಿಗಳಿಗೆ ವರ್ಚುವಲ್ ಆಗಿ ವಿಚಾರಣೆಗೆ ಹಾಜರಾಗುವಂತೆ ಎನ್‌ಜಿಟಿ ಸಮನ್ಸ್ ಜಾರಿ ಮಾಡಿದೆ.

ಎನ್‌ಜಿಟಿ ಪ್ರಧಾನ ಪೀಠವು ಡಿಸೆಂಬರ್ 24,2024 ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಮತ್ತು ಯುಪಿಪಿಸಿಬಿ ಎರಡಕ್ಕೂ ನೀರಿನ ಮಾದರಿಗಳನ್ನು ತೆಗೆದುಕೊಂಡು, ಫಲಿತಾಂಶವನ್ನು ತಮ್ಮ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲು ಮತ್ತು ಜನವರಿ 31 ಮತ್ತು ಫೆಬ್ರವರಿ 28ರಂದು ಎನ್‌ಜಿಟಿ ರಿಜಿಸ್ಟ್ರಾರ್ ಜನರಲ್‌ಗೆ ವರದಿಯನ್ನು ಕಳುಹಿಸಲು ನಿರ್ದೇಶಿಸಿತ್ತು.

“ಸಮಗ್ರ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದ ನ್ಯಾಯಮಂಡಳಿಯ ಆದೇಶವನ್ನು ಯುಪಿಪಿಸಿಬಿ ಪಾಲಿಸಿಲ್ಲ” ಎಂದು ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ, ನ್ಯಾಯಾಂಗ ಸದಸ್ಯ ನ್ಯಾಯಮೂರ್ತಿ ಸುಧೀರ್ ಅಗರ್ವಾಲ್ ಮತ್ತು ತಜ್ಞ ಸದಸ್ಯ ಎ ಸೆಂಥಿಲ್ ವೆಲ್ ಅವರನ್ನು ಒಳಗೊಂಡ ಎನ್‌ಜಿಟಿ ಪ್ರಧಾನ ಪೀಠದ ತಿಳಿಸಿದೆ.

“ಯುಪಿಪಿಸಿಬಿ ಸದಸ್ಯ ಕಾರ್ಯದರ್ಶಿ ಮತ್ತು ಪ್ರಯಾಗ್‌ರಾಜ್‌ನಲ್ಲಿ ಗಂಗಾ ನದಿಯಲ್ಲಿ ನೀರಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಹೊತ್ತಿರುವ ರಾಜ್ಯ ಪ್ರಾಧಿಕಾರಕ್ಕೆ ಫೆಬ್ರವರಿ 19 ರಂದು ಮುಂದಿನ ವಿಚಾರಣೆಯ ದಿನಾಂಕದಂದು ವರ್ಚುವಲ್ ಆಗಿ ಹಾಜರಾಗಲು ನಿರ್ದೇಶಿಸಲಾಗಿದೆ” ಎಂದು ಎನ್‌ಜಿಟಿ ಪ್ರಧಾನ ಪೀಠದ ಆದೇಶ ಹೇಳಿದೆ.

ಈ ಹಿಂದೆ ನಿರ್ದೇಶಿಸಿದಂತೆ ತೆಗೆದುಕೊಂಡ ಕ್ರಮಗಳ ಕುರಿತ ವಿಸ್ತೃತ ವರದಿ ಸಲ್ಲಿಸಲು ಯುಪಿಪಿಸಿಬಿ ವಿಫಲವಾಗಿರುವ ಕುರಿತು ಎನ್‌ಜಿಟಿ ಸಮಿತಿ ಗಮನಿಸಿದೆ. ವರದಿ ಬದಲು ಅದು ನೀರಿನ ಪರೀಕ್ಷೆಯ ಫಲಿತಾಂಶದೊಂದಿಗೆ ಪತ್ರವನ್ನು ಸಲ್ಲಿಸಿದೆ ಎಂದು ಎನ್‌ಜಿಟಿ ಸಮಿತಿ ಹೇಳಿದೆ.

ಸಿಪಿಸಿಬಿ ವರದಿಯ ಪ್ರಕಾರ, ಜನವರಿ 12, 13, 15, 19, 20 ಮತ್ತು 24 ರಂದು ಗಂಗಾ ಮತ್ತು ಯಮುನಾ ನದಿಯ ವಿವಿಧ ಸ್ಥಳಗಳಿಂದ ನೀರಿನ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅದರ ವರದಿಯು ಜಿಯೋಸಿಂಥೆಟಿಕ್ ಡೀವಾಟರಿಂಗ್ ಟ್ಯೂಬ್‌ಗಳಲ್ಲಿನ ಅನುಸರಣೆಯ ಕೊರತೆಯನ್ನು ಸಹ ಎತ್ತಿ ತೋರಿಸಿದೆ.

ಪ್ರಮುಖ ಚರಂಡಿಗಳ ಒಳಹರಿವು ಮತ್ತು ಹೊರಹರಿವು ಬಿಂದುಗಳಲ್ಲಿ ಹರಿವಿನ ಮೀಟರ್‌ಗಳು ಇಲ್ಲದಿರುವುದನ್ನು ವರದಿಯು ವಿವರಿಸಿದೆ. ಪ್ರಯಾಗ್‌ರಾಜ್‌ನಲ್ಲಿ ಒಟ್ಟು 340 ಎಂಎಲ್‌ಡಿ ಸಂಸ್ಕರಣಾ ಸಾಮರ್ಥ್ಯವಿರುವ 10 ಕಾರ್ಯಾಚರಣಾ ಎಸ್‌ಟಿಪಿಗಳಿವೆ ಎಂದು ವರದಿ ತಿಳಿಸಿದೆ. ಏಳು ಎಸ್‌ಟಿಪಿಗಳು ಸಂಸ್ಕರಿಸಿದ ತ್ಯಾಜ್ಯ ನೀರನ್ನು ಗಂಗಾ ನದಿಗೆ ಮತ್ತು ಮೂರು ಯಮುನಾ ನದಿಗೆ ಬಿಡುತ್ತಿವೆ ಎಂದಿದೆ.

ನದಿ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ ಎಂದು ವರದಿ ಬರುವ ಮುನ್ನವೇ ಲಕ್ಷಾಂತರ ಜನರು ಮಹಾಕುಂಭಮೇಳದ ಪ್ರಯುಕ್ತ ಪವಿತ್ರ ಸ್ನಾನ ಮಾಡಿದ್ದಾರೆ. ಕಲುಷಿತ ನೀರಿನಿಂದ ಅವರಿಗೆ ಚರ್ಮ ರೋಗ ಬರಬಹುದು ಎಂದು ತಜ್ಞರನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಕೊಳದ ಮೇಲೆ ಅಕ್ರಮ ಮದರಸಾ ನಿರ್ಮಾಣ ಆರೋಪ: ಭಾರೀ ಪೊಲೀಸ್ ಬಂದೋಬಸ್ತಿನೊಂದಿಗೆ ಸಂಪೂರ್ಣ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...